Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಗ್ನಿ ಅವಘಡ ಒಂದು ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಕಾಟನ್ ಮಿಲ್ ಒಂದು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ವೇಳೆ ಮಿಲ್ ನಲ್ಲಿ ಇದ್ದಂತಹ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ನಲ್ಲಿ ನಡೆದಿದೆ. ಶಹಾಪುರ ತಾಲೂಕಿನ ಹುಲಕಲ್ ನಲ್ಲಿ ಶ್ರೀ ಮಣಿಕಂಠ ಕಾಟನ್ ಜಿನ್ನಿಂಗ್ ಇಂಡಸ್ಟ್ರೀಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿದೆ. ಈ ಒಂದು ಕಾಟನ್ ಮಿಲ್ , ಗುರು ಮಣಿಕಂಠ ಎಂಬುವವರಿಗೆ ಸೇರಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಘಟನೆಯಲ್ಲಿ ಸುಮಾರು 15 ಕೋಟಿಗೂ ಹೆಚ್ಚು ಯಂತ್ರೋಪಕರಣಗಳು ಹಾಗೂ ಹತ್ತಿ ಸುಟ್ಟು ಕರಕಲಾಗಿದೆ, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…
BREAKING : ಪತಿ ಅತ್ತೆಯ ಕಿರುಕುಳಕ್ಕೆ ಬೇಸತ್ತ ಪತ್ನಿ : ವಿಡಿಯೋ ಮಾಡಿ ಮಗುವಿನ ಜೊತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ!
ಹಾಸನ : ಹಾಸನದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಪತಿ ಅತ್ತೆಯಿಂದ ಕಿರುಕುಳಕ್ಕೆ ಬೇಸತ್ತ ಪತ್ನಿ ಮಗು ಜೊತೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಒಂದುವರೆ ವರ್ಷದ ಹೆಣ್ಣು ಮಗು ಜೊತೆ ಮಹದೇವಿ (29) ಎನ್ನುವವರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಅತ್ತೆಯ ಕಿರುಕುಳದ ಬಗ್ಗೆ ವಿಡಿಯೋ ಮಾಡಿ ಮಹದೇವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಸೋಗಿ ಗ್ರಾಮದ ಬಳಿಯ ನದಿಯಲ್ಲಿ ಮಹದೇವಿ ಶವ ಪತ್ತೆಯಾಗಿದ್ದು ಇನ್ನೂ ಒಂದುವರೆ ವರ್ಷದ ಹೆಣ್ಣು ಮಗುವಿನ ಮೃತಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಟ್ಟಸೋಗೆ ಗ್ರಾಮದ ಮಹಾದೇವಿ ಸಿಬ್ಬಳ್ಳಿ ಗ್ರಾಮದ ಕುಮಾರ್ ಜೊತೆಗೆ ವಿವಾಹ ಆಗಿದ್ದರು. ಮದುವೆಯ ಆದಾಗಿನಿಂದಲೂ ಕೂಡ ಪತ್ನಿ ಮಹದೇವಿ ಮೇಲೆ ಪತಿ ಅನುಮಾನ ಪಡುತ್ತಿದ್ದ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ. ಕುಮಾರ್ ಕಿರುಕುಳ ತಾಳಲಾರದೆ ಮಹದೇವಿ ತವರು ಮನೆಗೆ ಸೇರಿದ್ದಳು 15 ದಿನಗಳ ಹಿಂದೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಜನರು ಎಲ್ಲೆಂದರಲ್ಲಿ ಕಸ ಬೀಸಾಡುತ್ತಿದ್ದರು. ಬಳಿಕ ಜಿಬಿಎ ಸಿಬ್ಬಂದಿ ಅವರ ಮನೆ ಮುಂದೆಯೇ ಕಸ ಹಾಕಿ ದಂಡ ಹಾಕಿದ್ದ ಘಟನೆ ನಡೆದಿತ್ತು. ಇದೀಗ ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ. ಹೌದು ಈ ಸಂಬಂಧ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಸಾರ್ವಜನಿಕರಿಗೆ ಕರೆ ನೀಡಿದ್ದು, ಕಸ ಸುಡುತ್ತಿರುವ ವಿಡಿಯೋ ಹಂಚಿಕೊಳ್ಳಲು ನಿರ್ಧರಿಸಿದೆ. ಕಸವನ್ನ ಸಂಸ್ಕರಣ ಘಟಕಕ್ಕೆ ಕಳುಹಿ, ವಿದ್ಯುತ್ ಉತ್ಪಾದಿಸಲಾಗುತ್ತದೆ. ಹೀಗಾಗಿ ಕಸ ಸುಡದಂತೆ ಎಚ್ಚರವಹಿಸಿ ನಿಯಮ ಉಲ್ಲಂಘಿಸಿದ್ರೆ ದಂಡ ವಿಧಿಸಲಾಗುವುದು ಎಂದು ಘನತ್ಯಾಜ್ಯ ನಿರ್ವಹಣಾ ಇಲಾಖೆ ತಿಳಿಸಿದೆ. ಈ ಮೊದಲು ಎಲ್ಲೆಂದರಲ್ಲಿ ಕಸ ಎಸೆದವರ ಮನೆ ಮುಂದೆಯೇ ಕಸ ಸುರಿದು ದಂಡ ವಿಧಿಸಿದ್ದರು. ಇದೀಗ ಪ್ರಕಾರ ಕಸ ಸುಟ್ಟರೆ ವಾಯುಮಾಲಿನ್ಯ ಆಗಲಿದೆ ಎಂದು ಎಂದು ಹೊಸ ನಿಯಮ ಜಾರಿ ಮಾಡಿದ್ದು,…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು ಸೋದರ ಮಾವನ ಜೊತೆ ಸೇರಿ ಗಂಡನನ್ನೇ ಪತ್ನಿ ಕೊಲೆ ಮಾಡಿದ್ದಾಳೆ. ಬೆಂಗಳೂರಿನ ಅಂದ್ರಹಳ್ಳಿಯ ಮಂಜುನಾಥ ಬಡಾವಣೆಯಲ್ಲಿ ಈ ಒಂದು ಕೊಲೆ ನಡೆದಿದೆ. ವೆಂಕಟೇಶ್ (65) ಕೊಲೆಯಾದ ಪತಿ ಎಂದು ತಿಳಿದು ಬಂದಿದೆ. ಸೋದರಮಾವ ರಂಗಸ್ವಾಮಿ ಹಾಗೂ ಮಗಳು ಪಾರ್ವತಿ ಈ ಒಂದು ಕೊಲೆ ಮಾಡಿದ್ದಾರೆ. 10 ವರ್ಷಗಳ ಹಿಂದೆ ವೆಂಕಟೇಶ್ ಮೊದಲ ಹೆಂಡತಿಯನ್ನು ಬಿಟ್ಟಿದ್ದ 6 ವರ್ಷಗಳ ಹಿಂದೆ ವೆಂಕಟೇಶ್ ಪಾರ್ವತಿಯನ್ನು ಮದುವೆಯಾಗಿದ್ದ. ಮನೆಯನ್ನ ತನ್ನ ಹೆಸರಿಗೆ ಬರೆಯುವಂತೆ ಪಾರ್ವತಿ ಗಲಾಟೆ ಮಾಡಿದ್ದಾಳೆ. ಮನೆ ಇಲ್ಲ ಅಂದರೆ ಆರು ಲಕ್ಷ ಹಣ ಕೊಡುವಂತೆ ಪಾರ್ವತಿ ಪಟ್ಟು ಹಿಡಿದಿದ್ದಾಳೆ. ಆಗ ವೆಂಕಟೇಶ್ 2:30 ಲಕ್ಷ ಕೊಡುತ್ತೇನೆ ಅಂತ ಹೇಳಿದ್ದಾನೆ. ಇದೇ ವಿಚಾರವಾಗಿ ಗಲಾಟೆ ಆಗಿ ಪತಿಯನ್ನು ಕೊಲೆ ಮಾಡಿದ್ದಾಳೆ.
ವಿಜಯಪುರ : ವಿಜಯಪುರದಲ್ಲಿ ಭೀಕರವಾದ ಕೊಲೆಯಾಗಿದ್ದು ಲಿವಿಂಗ್ ರಿಲೇಶನ್ ಶಿಪ್ ನಲ್ಲಿ ಇದ್ದಂತಹ ಮಹಿಳೆಯೊಬ್ಬಳು ತನ್ನ ಸಹೋದರನೊಂದಿಗೆ ಸೇರಿ ಪ್ರಿಯಕರನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಅಮ್ಮನ್ ಕಾಲೋನಿಯಲ್ಲಿ ಈ ಒಂದು ಕೊಲೆ ನಡೆದಿದೆ. ಸಮೀರ್ ಅಲಿಯಾಸ್ ಪಿಕೆ ಇನಾಮ್ದಾರ್ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ತಯ್ಯಬಾ ಭಾಗವಾನ್ ಅನ್ನೋ ಮಹಿಳೆಯಿಂದ ಈ ಒಂದು ಕೊಲೆ ನಡೆದಿದ್ದು, ತಯ್ಯಾಬಾ ಸಹೋದರ ಅಸ್ಲಾಂ ಭಾಗವಾನ್ ಕೂಡ ಕೊಲೆಗೆ ಸಹಕರಿಸಿದ್ದಾನೆ. ಸಮೀರ್ ಕಿರುಕುಳಕ್ಕೆ ಬೇಸತ್ತು ಕೊಲೆ ಮಾಡಿರುವ ಮಾಹಿತಿ ತಿಳಿದು ಬಂದಿದ್ದು ಸ್ಥಳಕ್ಕೆ ಗೋಲಗುಂಬಜ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಮೀರ್ ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು : ರಾಜು ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು ದೆಹಲಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆ ಕುರಿತು ಚರ್ಚಿಸಿದ್ದಾರೆ. ರಾಹುಲ್ ಗಾಂಧಿ ಸಂಪುಟ ಪುನಾರಚನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಬಳಿಕ ಇಂದು ಸಹ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಅಲ್ಲದೆ ಡಿಕೆ ಶಿವಕುಮಾರ್ ಸಹ ದೆಹಲಿಗೆ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ. ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಟ್ವೀಟ್ ಖಾತೆಯಲ್ಲಿ ಸಂದೇಶವನ್ನು ನೀಡಿದ್ದು, ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ. ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ನನ್ನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ಎಂದು ತಿಳಿಸಿದ್ದಾರೆ. https://twitter.com/DKShivakumar/status/1990337691029045421?t=REtX7NeQOfOApIXzD9qOtA&s=19
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಎನ್ನುವಂತೆ ಹೈಕೋರ್ಟ್, ಅವರ ವಿರುದ್ಧ ವಿಧಿಸಲಾಗಿದ್ದಂತ ಗಡಿಪಾರು ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಕೇಸ್ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ಪ್ರಕರಣದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ವಿಧಿಸಿದ್ದಂತ ಗಡಿಪಾರು ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ಅವರಿದ್ದಂತ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಅಲ್ಲದೇ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ ಆದೇಶ ಹೊರಡಿಸಲು ಹೈಕೋರ್ಟ್ ಸೂಚಿಸಿದೆ.
ಧಾರವಾಡ : 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟ ವೆಂದು ಪರಿಗಣಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ನಾಲ್ಕು ವಾರ ಕಾಲಾವಕಾಶ ಕೋರಿತು. ಮಧ್ಯಂತರ ಆದೇಶ ಅರ್ಜಿದಾರರಿಗೆ ಸೀಮಿತಗೊಳಿಸಲು ಎಜಿ ಮನವಿ ಮಾಡಿದರು. ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಆದೇಶ ನಾಗರೀಕರ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ. ಹೀಗಾಗಿ ಮಧ್ಯಂತರ ಆದೇಶ ಅರ್ಜಿದಾರರಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಕಾನೂನಿನಿಂದಲ್ಲದೆ ಸರ್ಕಾರಿ ಆದೇಶದಿಂದ ಮೂಲಭೂತ ಹಕ್ಕು ನಿರ್ಭಂಧಿಸುವಂತಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು.
ತುಮಕೂರು : ತುಮಕೂರು ಜನತೆಗೆ ಸಿಹಿ ಸುದ್ದಿಯೊಂದ್ ಇದ್ದು ತುಮಕೂರಿನವರೆಗೂ ಮೆಟ್ರೋ ವಿಸ್ತರಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಬಿಎಂಆರ್ಸಿಎಲ್ ಈಗಾಗಲೇ ಟೆಂಡರ್ ಕರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತಾಗಿ ರಾಜ್ಯ ಸರಕಾರ ಸಾಧಕ-ಬಾಧಕಗಳ ಚರ್ಚೆ ಮಾಡಿದೆ. ನಂತರ ಡಿಪಿಆರ್ ಮಾಡಲು ತೀರ್ಮಾನಿಸಲಾಗಿದೆ. ನಾಲ್ಕೈದು ತಿಂಗಳಲ್ಲಿ ಡಿಪಿಆರ್ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸ್ಫೋಟ ಕುರಿತು ಮಾಧ್ಯಮದವರ ಪ್ರಶ್ನೆಗೆ, ಕೇಂದ್ರದಲ್ಲಿ ವಿವಿಧ ಏಜೆನ್ಸಿಗಳಿವೆ. ಇವೆಲ್ಲವೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತವೆ. ಅನುಮಾನದ ಮೇಲೆ ಆರೋಪಿಗಳನ್ನು ಹಿಡಿದುಕೊಂಡು ಬರುತ್ತಾರೆ. ಸಾಕ್ಷಿ ಸಿಗದಿದ್ದರೆ ಬಿಟ್ಟು ಕಳುಹಿಸುತ್ತಾರೆ ಎಂದು ಉತ್ತರಿಸಿದರು
ಬಾಂಗ್ಲಾದೇಶ : 2024ರ ಬಾಂಗ್ಲಾ ಹಿಂಸಾಚಾರದ ಪ್ರಕರಣದಲ್ಲಿ ಮಾಜಿ ಅಧ್ಯಕ್ಷೆ ಶೇಖ್ ಹಸೀನಾ ತಪ್ಪಿತಸ್ಥೆ ಎಂಬುದಾಗಿ ಅಂತಾರಾಷ್ಟ್ರೀಯ ಅಪರಾಧಿತ ನ್ಯಾಯಮಂಡಳಿ( ICT) ಘೋಷಣೆ ಮಾಡಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಶಿಕ್ಷೆ ವಿಧಿಸಲಾಯಿತು. ಆಗಸ್ಟ್ 2024 ರಲ್ಲಿ ಅವರ ಸರ್ಕಾರವನ್ನು ಉರುಳಿಸಿದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳ ಮೇಲೆ ಮಾರಕ ಕ್ರಮ ಕೈಗೊಳ್ಳಲು ಆದೇಶಿಸುವಲ್ಲಿ ಅವರ ಪಾತ್ರಕ್ಕಾಗಿ. ಗೈರುಹಾಜರಿಯಲ್ಲಿ ನೀಡಲಾದ ತೀರ್ಪು, ಫೆಬ್ರವರಿ 2026 ರಲ್ಲಿ ನಡೆಯಲಿರುವ ರಾಷ್ಟ್ರೀಯ ಚುನಾವಣೆಗಳಿಗೆ ಮುಂಚಿತವಾಗಿ ದೇಶದ ರಾಜಕೀಯ ಪ್ರಕ್ಷುಬ್ಧತೆಯಲ್ಲಿ ನಾಟಕೀಯ ಏರಿಕೆಯನ್ನು ಸೂಚಿಸುತ್ತದೆ. ದಂಗೆಯ ಸಮಯದಲ್ಲಿ ಢಾಕಾದಿಂದ ಪಲಾಯನ ಮಾಡಿದ ನಂತರ 78 ವರ್ಷದ ಹಸೀನಾ ಭಾರತದಲ್ಲಿ ವಾಸಿಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗಲು ಮತ್ತೆ ಮತ್ತೆ ನ್ಯಾಯಾಲಯದ ಆದೇಶಗಳನ್ನು ಅವರು ಧಿಕ್ಕರಿಸಿದ್ದರು, ಇದನ್ನು ಅವರು “ನ್ಯಾಯಶಾಸ್ತ್ರೀಯ ತಮಾಷೆ” ಎಂದು ಕರೆದಿದ್ದಾರೆ. ಕೊಲೆಯನ್ನು ತಡೆಯುವಲ್ಲಿ ವಿಫಲತೆ ಸೇರಿದಂತೆ ಐದು ಆರೋಪಗಳನ್ನು ಪ್ರಾಸಿಕ್ಯೂಟರ್ಗಳು ಅವರ ವಿರುದ್ಧ ದಾಖಲಿಸಿದ್ದರು, ಪ್ರತಿಭಟನೆಗಳ…














