Author: kannadanewsnow05

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಹೇಳಿಕೆಗಳನ್ನು ನೀಡುತ್ತಿದ್ದು ಇದೀಗ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಇದು ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕ್ರಮವಾಗಿದ್ದು ಕಾಂಗ್ರೆಸ್ ವರಿಷ್ಠರ ನಿರ್ಧಾರ ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠರ ನಿರ್ಧಾರ ನಾನು ಸ್ವಾಗತಿಸುತ್ತೇನೆ. ಎಂದು ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.ಇದು ಬಿಜೆಪಿ ಮತ್ತು ಸಂಘದ ರಾಜಕೀಯ ಕಾರ್ಯಕ್ರಮ ರಾಜಕೀಯ ದುರುದ್ದೇಶ ಇಟ್ಟುಕೊಂಡು ಮಾಡುತ್ತಿರುವುದು ತಪ್ಪು ಎಂದು ತಿಳಿಸಿದರು. ಹಿಂದೂ ಧರ್ಮದ ಮುಖ್ಯಸ್ಥರು ಅಂದರೆ ಶಂಕರಾಚಾರ್ಯರು ಪ್ರಾಣ ಪ್ರತಿಷ್ಠಾಪನೆ ಶಂಕರಾಚಾರ್ಯರ ಪದ್ಧತಿ ಪ್ರಕಾರ ನಡೆಯಬೇಕು.ಅಥವಾ ಹಿಂದೂ ಧಾರ್ಮಿಕ ಪದಕ್ಕೆ ಪ್ರಕಾರ ನಡೆಸಬೇಕಿತ್ತು.ಆದರೆ ಈ ಕಾರ್ಯಕ್ರಮ ಮಾಡಿದರೆ ಆಮಂತ್ರಣ ಬೇಕಾಗಿಲ್ಲ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು. ಅಯೋಧ್ಯ ರಾಮಮಂದಿರ ಪ್ರಾಣತ್ ಪ್ರತಿಷ್ಠೆ ವಿಚಾರವಾಗಿ ನಾನು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮಹತ್ವದ ಪತ್ರ ಬರೆದಿದ್ದೆ. ಡಿಸೆಂಬರ್ 25ರಂದು ಖರ್ಗೆ ಅವರಿಗೆ ಪತ್ರ…

Read More

ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ದಾಳಿ ನಡೆಸಿದ ವೇಳೆ ಮತ್ತೊಂದು ಭಯಾನಕ ವಿಷಯ ಹೊರ ಬಿದ್ದಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆಯಿಂದ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಅಧಿಕಾರಿಗಳು ಸಿಸ್ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರಗಳಿಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿಗೊಳಿಸಿದೆ.ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಬೆಂಗಳೂರು ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟ ಹೊರ ಹಾಕಲು ಇಲಾಖೆ ಮುಂದಾಗಿತ್ತು.ಮೈಸೂರಿನ ಪ್ರಕರಣ ಬಯಲಾಗುತ್ತಿದ್ದಂತೆ ಅಧಿಕಾರಿಗಳು ರಾಜ್ಯಾದ್ಯಂತ ದಾಳಿಗೆ…

Read More

ಬೆಂಗಳೂರು : ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಧೈರು ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ನಲ್ಲಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ,,ಮೋದಿಗೆ ತಮ್ಮ ಸಾಧನೆಯನ್ನು ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸ ಇಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದ್ದರಿಂದ ಅಯೋಧ್ಯೆಯಲ್ಲಿ ಇದಕ್ಕಾಗಿ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರ ಉದ್ಘಾಟನೆ ಬಿಜೆಪಿ ನಾಯಕರು ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ ಬಿಜೆಪಿಯವರು ತಮ್ಮ ವೈಫಲ್ಯ ಮುಖ್ಯ ಹಾಕುವ ಪ್ರಯತ್ನವನ್ನು ನಡೆಸಿದ್ದಾರೆ ಕಳೆದ 30 35 ವರ್ಷದಿಂದ ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡಿಕೊಂಡು ಬಂದಿದೆ ಎಂಡಿದ್ದಾರೆ.ಈ ಬಾರಿ ಜನ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗಲ್ಲ ಈಗಾಗಲೇ ಜನ ಸಂಗ್ರಹಿಸಿರುವ ದೇಣಿಗೆಯ ಲೆಕ್ಕ ಕೇಳತೊಡಗಿದ್ದಾರೆ ನಾವು ಹಿಂದೂ ಧರ್ಮದ ವಿರೋಧಿಗಳಲ್ಲ ಧರ್ಮದ ಹೆಸರಲ್ಲಿ ನಡೆಸಲಾಗುವ ಅಸ್ಪೃಶ್ಯತೆ ಜಾತಿಯತೆ ಅಂದಶ್ರದ್ಧೆ ಕಂದಾಚಾರಗಳನ್ನು ವಿರೋಧಿಸುತ್ತೇವೆ ಎಂದು ತಿಳಿಸಿದರು. ಧರ್ಮವನ್ನು ರಾಜಕಾರಣಕ್ಕೆ ಬಳಸುವುದರ ಬಗ್ಗೆ ವಿರೋಧ ಇದೆ ಮಹಾತ್ಮ ಗಾಂಧೀಜಿ…

Read More

ಹಾವೇರಿ: ಹಾವೇರಿಯಲ್ಲಿ ನೈತಿಕ ಪೊಲೀಸ್ ಗಿರಿ ಕೇಸ್‌ಗೆ ಬಿಗ್‌ಟ್ವಿಸ್ಟ್ ಸಿಕ್ಕಿದ್ದು, ತನ್ನ ಮೇಲೆ ಗ್ಯಾಂಗ್‌ ರೇಪ್‌ ಮಾಡಿದ್ದಾರೆ ಅಂಥ ಆರೋಪಿಸಲಾಗಿದೆ. ಮುಸ್ಲಿಂ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಕಾರಣಕ್ಕೆ ಅನ್ಯಕೋಮಿನ ಯುವಕರ ಗುಂಪಿನಿಂದ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ತಮ್ಮ ಮೇಲೆ ಒಬ್ಬರ ನಂತರ ಒಬ್ಬರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಅಂತ ಮಹಿಳೆ ಆರೋಪಿಸಿದ್ದಾರೆ. ನಿನಗೆ ನಮ್ ಹುಡುಗಿನೇ ಬೇಕಾ ಎಂದು ಮಹಿಳೆ ಜೊತೆ ಇದ್ದ ವ್ಯಕ್ತಿಗೂ ಯುವಕರು ಹೊಡೆದಿದ್ದಾರೆ. ರೂಮಲ್ಲಿ ನೀರು ಬರ್ತಾ ಇದೆಯಾ ಚೆಕ್ ಮಾಡಬೇಕು ಬಾಗಿಲಿ ತೆಗೆಯಿರಿ ಎಂದು ಯುವಕರು ಹೇಳಿದ್ದಾರೆ. ಈ ವೇಳೆ ನೀರು ಬರ್ತಾ ಇದೆ ಏನೂ ಸಮಸ್ಯೆ ಇಲ್ಲ ಎಂದು ಮಹಿಳೆಯ ಜೊತೆಗಿದ್ದ ವ್ಯಕ್ತಿ ಒಳಗಡೆಯಿಂದಲೇ ಹೇಳಿದ್ದಾನೆ. ಕೊನೆಗೆ ಬಾಗಿಲು ಓಪನ್ ಮಾಡಿದ್ದೇ ತಡ ತಮ್ಮ ಕೋಮಿನ ಯುವತಿ ಮೇಲೆ ಯುವಕರು ಮೊದಲಿಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಕುರಿತಂತೆ ಮಹಿಳೆ 31 ಮೊಬೈಲ್ ನಲ್ಲಿ ವಿಡಿಯೋ ಮಾಡಿ ಆರೋಪಿಸಿದ್ದು, ಲಾಡ್ಜ್…

Read More

ಬೆಂಗಳೂರು : ಹಾವೇರಿ ಜಿಲ್ಲೆ, ಹಾನಗಲ್ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಐಜಿಪಿ ಅಲೋಕ್ ಮೋಹನ್ ಪ್ರತಿಕ್ರಿಯೆ ನೀಡಿದ್ದು ನೈತಿಕ ಪೊಲೀಸ್ ಗಿರಿ ಯಾರೆ ನಡೆಸಿದರು ಮುಲಾಜಿ ಇಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂತಹ ಘಟನೆ ಎಲ್ಲಿ ನಡೆದರೂ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದೇವೆ.ಸಮಾಜದಲ್ಲಿ ಎಲ್ಲರಿಗೂ ಕಾನೂನು ಒಂದೇ ಎಂದು ಬೆಂಗಳೂರು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ತಿಳಿಸಿದರು. ಘಟನೆ ಹಿನ್ನೆಲೆ ಹಾವೇರಿಯಲ್ಲಿ ನೈತಕ ಪೊಲೀಸ್ ಗಿರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜ.08ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿರುತ್ತಾರೆ. ಇದನ್ನು ಕಂಡ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂದಲೇ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗಾ ಈ ಘಟನೆಯ 2…

Read More

ಬೆಂಗಳೂರು : ಇದು ಒಬ್ಬ ಅಂತರಾಷ್ಟ್ರೀಯ ಟೆಕ್ಕಿಯೊಬ್ಬ ಪಿಂಪ್ ಆದ ಕಥೆಯಾಗಿದ್ದು ಇದ್ದ ಒಂದುವರೆ ಲಕ್ಷದ ಸಂಬಳ ಕೆಲಸವನ್ನ ಬಿಟ್ಟು ಅಡ್ಡದಾರಿ ಹಿಡಿದಿದ್ದಾನೆ.ಕಂಪನಿಯೊಂದರಲ್ಲಿ ವೈಶಾಕ್ ಎನ್ನುವ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದ.ಸ್ಟಾಕ್ ಮಾರ್ಕೆಟ್ ಹುಚ್ಚಿಗೆ ಬಿದ್ದು ಇದೀಗ ಲಕ್ಷ ಲಕ್ಷ ಹಣವನ್ನು ಕಳೆದುಕೊಂಡಿರುವ ಘಟನೆ ಬೆಂಗಳೂರು ಬೈಯಪ್ಪನ ಹಳ್ಳಿ ಪೊಲೀಸ್ ಅಣ್ಣ ವ್ಯಾಪ್ತಿಯಲ್ಲಿ ನಡೆದಿದೆ. ಟೆಕ್ಕಿಯಾಗಿದ್ದ ವೈಶಾಕ್ ಇದ್ದ ಕೆಲಸವನ್ನ ಬಿಟ್ಟು ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆಯನ್ನು ಮಾಡಿ ಲಕ್ಷಾಂತರ ರೂಪಾಯಿ ನಷ್ಟ ಮಾಡಿಕೊಂಡಿದ್ದಾನೆ.ಲಕ್ಷ ಸಾಲ ಮಾಡಿ ವೈಶಾಖ ಇದೀಗ ಕೆಲಸವನ್ನು ಬಿಟ್ಟಿದ್ದ ಎನ್ನಲಾಗುತ್ತಿದೆ.ನಂತರ ವೈಶಾಕ್ ಮ್ಯಾಟ್ರಿಮೋನಿ ರೀತಿಯಲ್ಲಿ ಆಪ್ ತಯಾರಿಸಿದ ಎನ್ನಲಾಗುತ್ತಿದೆ. ಈ ಒಂದು ಆಪ್ ಮೂಲಕ ಪರಸ್ಪರ ಸಂಪರ್ಕ ಮಾಡಿಸಲು ವೈಶಾಖ ಹಣ ಪಡೆಯುತ್ತಿದ್ದ ಎನ್ನಲಾಗುತ್ತಿದೆ.ಈ ಒಂದು ಕೆಲಸ ಚೆನ್ನಾಗಿ ಸಾಗುತ್ತಿದೆ ಎನ್ನುವಾಗಲೇ ಗೋವಿಂದರಾಜು ಎನ್ನುವ ವ್ಯಕ್ತಿ ಎಂಟ್ರಿ ಕೊಡುತ್ತಾನೆ. ಬಿ ಟೆಕ್ ಮುಗಿಸಿದ್ದ ಗೋವಿಂದರಾಜನಿಂದ ಹೊಸ ಆಪ್ ನ ಪ್ರೈವಸಿ ನೋಡಿ ಗೋವಿಂದರಾಜು ಶಾಕ್ ಆಗಿದ್ದ. ಮ್ಯಾಟ್ರಿಮೋನಿ…

Read More

ಮಂಗಳೂರು : ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಇದೆ 22 ರಂದು ಘಟನೆಗೊಳಲಿದ್ದು ಈ ಒಂದು ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ನಾವು ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಹೇಳಿಕೆಗೆ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು ಸಿಎಂ ರಾಮಮಂದಿರಕ್ಕೆ ಹೋಗಬಾರದೆಂಬ ಮಾನಸಿಕತೆಯಲ್ಲಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ,ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಮ ಕಾಲ್ಪನಿಕ ಎಂದು ಕೋರ್ಟಿಗೆ ಅಫಿಡೆವೆಟ್ ಸಲ್ಲಿಸಿದ್ದು ಕಾಂಗ್ರೆಸ್. ರಾಮಂದಿರ ಆಗಿರುವುದನ್ನು ಕಾಂಗ್ರೆಸ್ ನದ್ದು ಸಹಿಸದ ಮಾನಸಿಕತೆಯಾಗಿದೆ ಅಂದಿನಿಂದ ಇಂದಿನವರೆಗೆ ಕಾಂಗ್ರೆಸ್ ನವರ ಮಾನಸಿಕತೆ ಹಾಗೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ರಾಮಮಂದಿರಕ್ಕೆ ಹೋಗಬಾರದೆಂಬ ಮಾನಸಿಕತೆಯಲ್ಲಿ ಇದ್ದಾರೆ. ಕಾಂಗ್ರೆಸ್ನ ಕೇಳಸ್ಥರದ ಹಿಂದೂ ಕಾರ್ಯಕರ್ತರು ರಾಮ ಮಂದಿರ ಬಗ್ಗೆ ಸಂಭ್ರಮ ಪಡುತ್ತಿದ್ದಾರೆ. ಶ್ರೀರಾಮ ಭಕ್ತರಿಗೆ ಕಾಂಗ್ರೆಸ್ ಅಪಚಾರ ಮಾಡಿದೆ. ಅಲ್ಪಸಂಖ್ಯಾತರ ತುಷ್ಟಿಕರಣವೇ ಕಾಂಗ್ರೆಸ್ ನ ಈ ನಿರ್ಧಾರಕ್ಕೆ ಕಾರಣವಾಗಿದೆ.ನಮ್ಮ ಹೆಸರಲ್ಲಿ ರಾಮ ಇದ್ದಾರೆ ಎನ್ನುವ…

Read More

ಕಲಬುರಗಿ : ಕೂಲಿ ಕೆಲಸಕ್ಕೆ ಎಂದು ಪಿಕಪ್ ವಾಹನದಲ್ಲಿ ಸುಮಾರು 40 ಜನ ಮಹಿಳೆಯರು ತೇರುತ್ತಿದ್ದ ವೇಳೆ ಸ್ಪೋಟಗೊಂಡಿದೆ ಈ ವೇಳೆ ಸ್ಪೋಟಗೊಂಡ ತೀವ್ರತೆಗೆ ಪಿಕಪ್ ವಾಹನ ಪಾರ್ಟಿಯಾಗಿದ್ದು ವಾಹನದಲ್ಲಿದ್ದ ಸುಮಾರು 12 ಜನ ಮಹಿಳೆಯರಿಗೆ ಗಾಯವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ತಾಲೂಕಿನ ಮಹಾಶಾಳ ಗ್ರಾಮದ ಬಳಿ ನಡೆದಿದೆ. ಟೈರ್ ಸ್ಪೋಟಗೊಂಡು ಮಹೇಂದ್ರ ಪಿಕಪ್ ವಾಹನ ಪಲ್ಟಿಯಾಗಿದ್ದು, 12 ಮಹಿಳೆಯರಿಗೆ ಗಾಯವಾಗಿದೆ. ಕಲಬುರ್ಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನ ಮಾಷಾಳ ಗ್ರಾಮದ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಐವರು ಮಹಿಳೆಯರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ಘಟನೆಯಲ್ಲಿ ಏಳು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಾಹನದಲ್ಲಿ ಕೂಲಿ ಕೆಲಸಕ್ಕೆ 40 ಮಹಿಳೆಯರು ತೆರಳುತ್ತಿದ್ದರು. ಒಮ್ಮೆಲೇ ಪಿಕಪ್ ವಾಹನದ ಟೈರ್ ಸ್ಪೋಟಗೊಂಡು ಸ್ಫೋಟದ ತೀವ್ರತೆಗೆ ವಾಹನ ಪಲ್ಟಿಯಾಗಿದೆ. ಘಟನೆ ಕುರಿತಂತೆ ಅಫ್ಜಲ್ಪುರ ತಾಲೂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗದಗ : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನೆ ಹಾಗೂ ಬಾಲ ರಾಮನ ಪ್ರತಿಷ್ಠಾಪನ ಸಮಾರಂಭಕ್ಕೆ ಗದಗಿನ ಶಿವಾನಂದ ಮಠಕ್ಕೆ ಆಹ್ವಾನ ಬರೆದಿದ್ದು, ಈ ಕುರಿತಂತೆ ಮಠದ ಸ್ವಾಮೀಜಿಗಳಾದ ಸದಾಶಿವನಂದ ಭಾರತಿ ಸ್ವಾಮೀಜಿ ಅವರು ಮಾತನಾಡಿ ಅಯೋಧ್ಯಕ್ಕೂ ಶಿವಾನಂದ ಮಠಕ್ಕೂ ಬಹಳ ನಂಟಿದೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಾಲ ರಾಮನ ಮೂರ್ತಿ ಪ್ರತಿಷ್ಠಾಪನ ಸಮಾರಂಭಕ್ಕೆ ಅಹ್ವಾನ ಬಂದಿರುವುದು ಸಂತೋಷ ತಂದಿದೆ ಎಂದು ಗದಗ ಶಿವಾನಂದ ಮಠದ ಸದಾಶಿವಾನಂದ ಭಾರತಿ ಶ್ರೀ ಹೇಳಿಕೆ ನೀಡಿದ್ದಾರೆ.ಅಯೋಧ್ಯ ರಾಮ ಮಂದಿರಕ್ಕೂ ಗದಗ ಶಿವಾನಂದ ಮಠಕ್ಕೂ ನಂಟು ಇದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. ಮಠದ ಹಿರಿಯ ಸ್ವಾಮೀಜಿಗಳದ ನಂದೀಶ್ವರ ಶ್ರೀಗಳು ರಾಮಮಂದಿರ ಹೋರಾಟದಲ್ಲಿ ಸಕ್ರಿಯವಾಗಿದ್ದರು. 1992 ರಲ್ಲಿ ಶಿವಾನಂದ ಮಠದಿಂದಲೂ ರಾಮಮಂದಿರಕ್ಕೆ ಇಟ್ಟಿಗೆ ರವಾನೆಯಾಗಿದೆ.ಶಿವನಂದ ಶ್ರೀಗಳ ಗದ್ದುಗೆ ಬಳಿ ಇಟ್ಟಿಗೆ ಇಟ್ಟು ಪೂಜೆ ಮಾಡಿ ರವಾನಿಸಲಾಗಿತ್ತು ಈ ನಿಟ್ಟಿನಿಂದ ಪ್ರತಿಷ್ಠಾವನ ಸಮಾರಂಭಕ್ಕೆ ಆಹ್ವಾನ ಬಂದಿದೆ.…

Read More

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಆಡಳಿತಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಪಕ್ಷ ಜನರ ಸಮಸ್ಯೆಯನ್ನು ಆಲಿಸಲು ಜನಸ್ಪಂದನ ಕಾರ್ಯಕ್ರಮ ಆರಂಭಿಸಿತ್ತು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಒಂದು ದಿನ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎರಡನೇ ಹಂತದ ಜನಸ್ಪಂದನ ಕಾರ್ಯಕ್ರಮ ಇಂದು ನಡೆಸಲಿದ್ದಾರೆ. ಈಗಾಗಲೇ ಒಂದನೇ ಹಂತದಲ್ಲಿ ದಿನಸ್ಪಂದನ ಕಾರ್ಯಕ್ರಮ ನಡೆಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇಂದಿನಿಂದ ಎರಡನೇ ಹಂತದ ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ವಲಯವಾರು ಜನಸ್ಪಂದನಾ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗೆ ಶಿವಕುಮಾರ್ ನಡೆಸುತ್ತಿದ್ದಾರೆ. ಅದೇ ರೀತಿಯಾಗಿ ಇಂದು ಬೊಮ್ಮನಹಳ್ಳಿ ವಲಯದಲ್ಲಿ ಡಿಕೆ ಶಿವಕುಮಾರ್ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದಾರೆ. ಜರಗನಹಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಇಂದು ಬೆಳಿಗ್ಗೆ 9:30ಕ್ಕೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಆರಂಭವಾಗಲಿದೆ ಸ್ಥಳೀಯ ಜನರಿಂದ ಉಪಮುಖ್ಯಮಂತ್ರಿ ಎ ಡಿ ಕೆ ಶಿವಕುಮಾರ್ ಅ ಹವಾಲು ಸ್ವೀಕರಿಸಲಿದ್ದಾರೆ ಜನಸ್ಪಂದನ ಕಾರ್ಯಕ್ರಮದಲ್ಲಿ…

Read More