Author: kannadanewsnow05

ಬೆಂಗಳೂರು : ವಿಚ್ಚೆದಿತ ಪತಿ ಜೊತೆಗೆ ಮಗು ಸೇರಬಾರದು ಎಂಬು ಉದ್ದೇಶದಿಂದ 4 ವರ್ಷದ ಕಂದಮ್ಮನನ್ನೇ ತಾಯಿ ಸುಚನಾ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ಮಗು ಚಿನ್ಮಯ್ ಅಂತ್ಯಕ್ರಿಯೆಯನ್ನು ತಂದೆ ವೆಂಕಟರಮಣ ಸಕಲ ವಿಧಿ ವಿಧಾನಗಳಿಂದ ನೆರವೇರಿಸಿದ್ದಾರೆ. ನಿನ್ನೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನೆರವೇರಿಸಲಾಗಿದ್ದು ನಂತರ ಮಧ್ಯರಾತ್ರಿ ಒಂದು ಮೂವತ್ತಕ್ಕೆ ಆಂಬುಲೆನ್ಸ್ ಮುಖಾಂತರ ಯಶವಂತಪುರದ ಬ್ರಿಗೇಡ್ ಗೇಟ್ ಬಳಿ ಇರುವ ವೆಂಕಟರಮಣ ನಿವಾಸಕ್ಕೆ ಮಗುವಿನ ಮೃತದೇಹ ರವಾನಿಸಲಾಗಿತ್ತು ಈ ವೇಳೆ ಮಗುವಿನ ತಂದೆ ವೆಂಕಟರಮಣ ಅವರು ಕಾರಿನಲ್ಲಿ ಆಂಬುಲೆನ್ಸ್ ಅನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಇದೀಗ ನಿವಾಸದಿಂದ ಎಂಬುಲೆನ್ಸ್ ಮುಖಾಂತರ ಹರೀಶ್ ಚಂದ್ರಘಾಟಿಗೆ ಯಶವಂತಪುರ ಅಪಾರ್ಟ್ಮೆಂಟ್ ಇಂದ ಮೃತ ದೇಹ ಶಿಫ್ಟ್ ಆಗಿದ್ದು ಚಿನ್ಮಯ್ ತಂದೆ ವೆಂಕಟರಮಣ ಅವರು ಸಕಲ ವಿಧಿ ವಿಧಾನಗಳಿಂದ ಮಗು ಚಿನ್ಮಯ್ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ. ಈಗಾಗಲೇ ಆರು ದಿನಗಳವರೆಗೆ ಕೊಲೆ ಪಾತಕಿ ತಾಯಿ ಸುಚನಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಬೆಂಗಳೂರು : ವಿಚ್ಚೆದಿತ ಪತಿ ಜೊತೆಗೆ ಮಗು ಸೇರಬಾರದು ಎಂಬು ಉದ್ದೇಶದಿಂದ 4 ವರ್ಷದ ಕಂದಮ್ಮನನ್ನೇ ತಾಯಿಯೊಬ್ಬಳು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ಚಿನ್ಮಯ್ ಶವವನ್ನು ಅಂಬುಲೆನ್ಸ್ ನಲ್ಲಿ ಹರಿಶ್ಚಂದ್ರ ಘಾಟಿಗೆ ಯಶವಂತಪುರ ಅಪಾರ್ಟ್ಮೆಂಟ್ ಇಂದ ಶವ ಇದೀಗ ಶಿಫ್ಟ್ ಆಗಿದೆ. ನಿನ್ನೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನೆರವೇರಿಸಲಾಗಿದ್ದು ನಂತರ ಮಧ್ಯರಾತ್ರಿ ಒಂದು ಮೂವತ್ತಕ್ಕೆ ಆಂಬುಲೆನ್ಸ್ ಮುಖಾಂತರ ಯಶವಂತಪುರದ ಬ್ರಿಗೇಡ್ ಗೇಟ್ ಬಳಿ ಇರುವ ವೆಂಕಟರಮಣ ನಿವಾಸಕ್ಕೆ ಮಗುವಿನ ಮೃತದೇಹ ರವಾನಿಸಲಾಗಿತ್ತು ಈ ವೇಳೆ ಮಗುವಿನ ತಂದೆ ವೆಂಕಟರಮಣ ಅವರು ಕಾರಿನಲ್ಲಿ ಆಂಬುಲೆನ್ಸ್ ಅನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಇದೀಗ ನಿವಾಸದಿಂದ ಎಂಬುಲೆನ್ಸ್ ಮುಖಾಂತರ ಹರೀಶ್ ಚಂದ್ರಘಾಟಿಗೆ ಯಶವಂತಪುರ ಅಪಾರ್ಟ್ಮೆಂಟ್ ಇಂದ ಮೃತ ದೇಹ ಶಿಫ್ಟ್ ಆಗಿದ್ದು ಕೆಲವೇ ಹೊತ್ತಿನಲ್ಲಿ ಬಾಲಕ ಚಿನ್ಮಯ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಆರು ದಿನಗಳವರೆಗೆ ಕೊಲೆ ಪಾತಗಿ ತಾಯಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಯಲಹಂಕದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಬೆಂಗಳೂರಿನಲ್ಲಿ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹಿಸುತ್ತಿದ್ದೂ, ಯಲಹಂಕದ ಖಾಸಗಿ ರೆಸರ್ಟಲ್ಲಿ ಸಭೆ ನಡೆಯಲಿದೆ.ಇಂದು 13 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಬೀದರ್, ಕಲಬುರ್ಗಿ,ರಾಯಚೂರು, ಕೊಪ್ಪಳ, ಬಳ್ಳಾರಿ, ಮೈಸೂರು, ಚಾಮರಾಜನಗರ, ಮಂಡ್ಯ,ಹಾಸನ, ತುಮಕೂರು, ಚಿಕ್ಕಬಳ್ಳಾಪುರ,ಕೋಲಾರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ತಿಳಿದುಬಂದಿದೆ. ಜೆಡಿಎಸ್ ಗೆ ಬಿಟ್ಟುಕೊಡುವ ಸಂಭಾವ್ಯ ಕ್ಷೇತ್ರಗಳ ಬಗ್ಗೆಯೂ ಚರ್ಚಿಸಲಾಗುತ್ತಿದ್ದು ಕ್ಷೇತ್ರದಲ್ಲಿ ಇರುವ ವಾತಾವರಣ ಹಾಗೂ ಸಂಭಾವ್ಯ ಬಿಜೆಪಿ ಬಿಜೆಪಿ ಅಭ್ಯರ್ಥಿಗಳು ಹಾಗೂ ಜೆಡಿಎಸ್ ವತಿಗಿನ ಸಮನ್ವಯ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Read More

ಬೆಂಗಳೂರು : ಕಳೆದ ವರ್ಷ ಇಡೀ ದೇಶಾದ್ಯಂತ ಹಿಜಾಬ್ ಪ್ರಕರಣ ಭಾರಿ ಸಂಚಲನ ಸೃಷ್ಟಿಸಿತ್ತು. ಶಾಲಾ ಕಾಲೇಜುಗಳಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಆಗಮಿಸಬಾರದು ಎಂದು ಅನೇಕ ಹೋರಾಟ ಪ್ರತಿಭಟನೆಗಳು ನಡೆದಿದ್ದವು. ಅದೇ ರೀತಿಯಾಗಿ ಈಗ ಈ ವಸ್ತ್ರ ಸಂಹಿತೆ ದೇವಸ್ಥಾನಕ್ಕೂ ಕಾಲಿಟ್ಟಿದ್ದು,ಬೆಂಗಳೂರಲ್ಲಿ ಅರೆಬರೆ ಬಟ್ಟೆ ಹಾಕಿಕೊಂಡು ಅವರಿಗೆ ದೇವಸ್ಥಾನದಲ್ಲಿ ಪ್ರವೇಶವಿಲ್ಲ ಎಂದು ನಿರ್ಬಂಧ ಹೇರಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಬೆಂಗಳೂರಿನ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ ಆರಂಭಿಸಿದ್ದು ಕರ್ನಾಟಕ ದೇವಸ್ಥಾನ ಮಠ ಧಾರ್ಮಿಕ ಸಂಸ್ಥೆಗಳ ಮಹಾಸಂಘ ಅಭಿಯಾನ ಆರಂಭಿಸಿದೆ.ಮಧ್ಯಾಹ್ನ 12ಕ್ಕೆ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು ವಸಂತನಗರದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ಇಂದು ಚಾಲನೆ ನೀಡಲಾಗುತ್ತದೆ. ದೇವಾಲಯಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರ್ಬಂಧಿಸಬೇಕು.ಸ್ಕರ್ಟ್, ಮಿಡ್ಡಿ, ಹರಿದ ಜೀನ್ಸ್, ಶಾರ್ಟ್ಸ್ ಧರಿಸಿ ಬರುವವರಿಗೆ ನಿರ್ಬಂಧ ಹೇರಬೇಕು. ದರ್ಶನಕ್ಕೆ ಅವಕಾಶ ನೀಡದಂತೆ ಸಂಘವು ಆಗ್ರಹಿಸಿದೆ ಕರ್ನಾಟಕ ದೇವಸ್ಥಾನ ಮಠ ಧಾರ್ಮಿಕ ಸಂಸ್ಥೆಗಳ ಮಹಾಸಂಘ ಈ…

Read More

ಬೆಂಗಳೂರು : ಈ ಕಳ್ಳರಿಗೆ ರಸ್ತೆಯಲ್ಲಿ ಕಾರಿನಲ್ಲಿ ತೆರಳುವ ಟೆಕ್ಕಿಗಳೇ ಟಾರ್ಗೆಟ್. ಬೇಕು ಬೇಕಂತಲೇ ದ್ವಿಚಕ್ರ ವಾಹನಗಳನ್ನು ಅಡ್ಡ ಗಟ್ಟಿ ಬೈಕಿಗೆ ಗುದ್ದಿದ್ದೀರಿ ಎಂದು ಹಣ ವಸೂಲಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಇದೀಗ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ಹೋಗುತ್ತಿರುವ ಕಾರಿನಲ್ಲಿ ಹೋಗುತ್ತಿದ್ದ ಟೆಕ್ಕಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿದ್ದ ಮೂವರನ್ನು ಬೆಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಚರಣ್ ಪಾಲ್ ಸಿಂಗ್ ಎಂಬುವರು ಭಾನುವಾರ ಸಂಜೆ ಸಹೋದ್ಯೋಗಿಗಳೊಂದಿಗೆ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ನಾಲ್ವರು ಕಾರಿಗೆ ಅಡ್ಡ ಹಾಕಿದ್ದಾರೆ. ಬಳಿಕ “ನಮ್ಮ ಬೈಕ್​ಗೆ ಡಿಕ್ಕಿ ಹೊಡೆದಿದ್ದೀರಿ ಹಣ ನೀಡಿ” ಎಂದು ಚರಣ್ ಪಾಲ್ ಸಿಂಗ್ ಅವರ ಬಳಿ ಬಂದಿದ್ದಾರೆ. ಚರಣ್​ ಪಾಲ್​ ಸಿಂಗ್​ ಅವರು ಕಾರಿನಲ್ಲೇ ಕೂತಿದ್ದು, “ನಾವು ಯಾವುದೇ ಅಪಘಾತ ಮಾಡಿಲ್ಲ” ಎಂದಿದ್ದಾರೆ. ನಂತರ ಚರಣ್ ಪಾಲ್ ಸಿಂಗ್ ಅವರು ಕಾರಿನ ಗಾಜುಗಳನ್ನು ಹಾಕಿದ್ದಾರೆ. ಅದಕ್ಕೆ ದುಷ್ಕರ್ಮಿಗಳು ಗಾಜು ಇಳಿಸುವಂತೆ ಹೇಳಿದ್ದಾರೆ. ಆದರೆ…

Read More

ಚಿಕ್ಕಮಗಳೂರು : ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹಳೆ ಭಾಗದ ಮೈಸೂರು ಹಾಗೂ ಮಂಡ್ಯ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಜೆಡಿಎಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗಿದ್ದು ಚಿಕ್ಕಮಗಳೂರಿನ ಖಾಸಗಿ ರಿಸಲ್ಟ್ ನಲ್ಲಿ ಪಕ್ಷದ ಮುಖಂಡರು ಹಾಗೂ ನಾಯಕರು ಜೊತೆ ಇಂದು ಸಮಾಲೋಚನೆ ನಡೆಸಲಿದ್ದಾರೆ. ರೆಸಾರ್ಟ್ ನಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದು, ಹಳೆ ಮೈಸೂರು ಭಾಗದ ಕ್ಷೇತ್ರಗಳ ಮೇಲೆ ಕುಮಾರಸ್ವಾಮಿ ಕಣ್ಣು ಇಟ್ಟಿದ್ದಾರೆ. ಹಳೆ ಮೈಸೂರು ಭಾಗದ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ರೆಸಾರ್ಟ್ ತಂತ್ರಗಾರಿಕೆಗೆ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಮಂಡ್ಯ ಮೈಸೂರು ಭಾಗದ ನಾಯಕರ ಜೊತೆ ಎಚ್ಡಿಕೆ ಸಮಲೋಚನೆ ನಡೆಸಲಿದ್ದು,ಜೆಡಿಎಸ್ ಮುಖಂಡರೊಂದಿಗೆ ರೆಸಾರ್ಟ್ ಗೆ ಆಗಮಿಸಿರುವ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಟಿಕೆಟ್ ವಿಚಾರವಾಗಿ ಎಚ್ ಡಿ ಕೆ ಜೆಡಿಎಸ್ ನಾಯಕರುರೊಂದಿಗೆ ಚರ್ಚೆ ನಡೆಸಲಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ…

Read More

ನವದೆಹಲಿ : ತಿಂಗಳುಗಟ್ಟಲೆ ಜನಾಂಗೀಯ ಹಿಂಸಾಚಾರದ ನಂತರವೂ ಸಹಜ ಸ್ಥಿತಿಗೆ ಬರಲು ಹೆಣಗಾಡುತ್ತಿರುವ ಈಶಾನ್ಯ ರಾಜ್ಯಕ್ಕೆ ಮಣಿಪುರದಿಂದ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ 2.0 ಜನವರಿ 14 ರಂದು ಆರಂಭವಾಗಬೇಕಿತ್ತು. ಆದರೆ ಕಾಂಗ್ರೆಸ್ ಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಮಣಿಪುರ ಹಾಗೂ ಅಸ್ಸಾಂ ಸರ್ಕಾರ್ ನಿರಾಕರಿಸಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇದೆ ಜನವರಿ 14 ರಿಂದ ಭಾರತ ಜೋಡೋ ನ್ಯಾಯ ಯಾತ್ರೆಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಆದರೆ ಯಾತ್ರೆ ನಡೆಸಲು ಮಣಿಪುರ ಅಸ್ಸಾಂನಲ್ಲಿ ರಾಹುಲ್ ಯಾತ್ರೆಗೆ ಅನುಮತಿ ನಿರಾಕರಿಸಲಾಗಿದೆ.ಈ ಕುರಿತಂತೆ ಕಳೆದ ವಾರವೇ ಕಾಂಗ್ರೆಸ್ ಯಾತ್ರೆಯ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಆದರೆ ಯಾತ್ರೆಗೆ ಮಣಿಪುರ ಸರ್ಕಾರ ಇನ್ನು ಅನುಮತಿ ನೀಡಿಲ್ಲ ಅಸ್ಸಾಂ ಸರ್ಕಾರ ಕೂಡ ರಾಹುಲ್ ಯಾತ್ರೆಗೆ ಅನುಮತಿ ನೀಡಿಲ್ಲ ಅನುಮತಿ ವಿಚಾರವನ್ನು ಕೇಂದ್ರಕ್ಕೆ ಕಳುಸಿದ್ದೇವೆ ಎಂದು ಮಣಿಪುರ ಸರ್ಕಾರ ತಿಳಿಸಿದ್ದು ಈ ಬಗ್ಗೆ ಕಾಂಗ್ರೆಸ್ ಗೆ ಮಣಿಪುರ್ ಮತ್ತು ಅಸಂಸರಕಾರ…

Read More

ಚನ್ನಪಟ್ಟಣ: ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಯುವಕನೊಬ್ಬನ ಮೃತದೇಹ ತಾಲ್ಲೂಕಿನ ಸಿಂಗರಾಜಪುರ ಗ್ರಾಮದ ಹೊರವಲಯದಲ್ಲಿರುವ ಗವಿರಂಗಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.ಮೃತ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗುತ್ತಿದೆ. ಲೋಕೇಶ್ (35) ಮೃತ ವ್ಯಕ್ತಿ. ಬೆಂಗಳೂರಿನ ಹೊಸಕೆರೆಹಳ್ಳಿ ನಿವಾಸಿಯಾದ ಈತ ಡಿ.31 ರಂದು ನಾಪತ್ತೆಯಾಗಿದ್ದ. ಈ ಸಂಬಂಧ ಬೆಂಗಳೂರು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನಿಂದ ಬೈಕ್‌ನಲ್ಲಿ ಬಂದು ಸಿಂಗರಾಜಪುರದ ಗವಿರಂಗಸ್ವಾಮಿ ಬೆಟ್ಟದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಟ್ಟದ ಬಳಿ ಕಳೆದ ಮೂರು ನಾಲ್ಕು ದಿನಗಳಿಂದ ಬೈಕ್‌ವೊಂದು ನಿಂತಿದ್ದನ್ನು ಗಮನಿಸಿದ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕಿನ ಅಕ್ಕೂರು ಠಾಣೆ ಪೊಲೀಸರು ಸುತ್ತಮುತ್ತ ಪರಿಶೀಲನೆ ನಡೆಸಿದಾಗ ಯುವಕನ ಮೃತದೇಹ ಪತ್ತೆಯಾಗಿದೆ. ಬೈಕ್ ನಂಬರಿನ ಆಧಾರದ ಮೇಲೆ ಯುವಕನ ವಿಳಾಸವನ್ನು ಪತ್ತೆ ಹಚ್ಚಲಾಗಿದೆ. ಆನಂತರ ಆತ ಕಾಣೆಯಾಗಿದ್ದ ವಿಷಯದ ಆಧಾರದ ಮೇಲೆ ಸಾವಿನ ವಿಚಾರ ಬೆಳಕಿಗೆ ಬಂದಿದೆ. ಕೊಳೆತಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ…

Read More

ದಕ್ಷಿಣ ಕನ್ನಡ : ಹಿಂದೂಗಳು ಕೇವಲ ಒಂದೋ ಎರಡೋ ಮಕ್ಕಳಿಗೆ ಜನ್ಮ ನೀಡಿದರೆ ಸಾಕಾಗೋದಿಲ್ಲ. ಇದರಿಂದ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯು ಹಿಂದೂಗಳ ಜನಸಂಖ್ಯೆಗಿಂತ ಹೆಚ್ಚಾಗುತ್ತದೆ ಎಂದು ಉಡುಪಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜನವರಿ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಭಾರತದಲ್ಲಿ ಹಿಂದೂಗಳ ಜನಸಂಖ್ಯೆ 80 ಕೋಟಿ ಮತ್ತು ಮುಸ್ಲಿಮರು ಕೇವಲ 20 ಕೋಟಿ ಇದ್ದಾರೆ ಎಂದು ಕೆಲವರು ಭಾವಿಸುತ್ತಾರೆ. ಆದರೆ, ನೀವು ಇನ್ನೊಂದು ದಿಕ್ಕಿನಲ್ಲಿ ಯೋಚಿಸಬೇಕಿದೆ ಎಂದು ಹೇಳಿದ್ದಾರೆ. ಮುಸ್ಲಿಮರು ಸಂಖ್ಯೆಯಲ್ಲಿ ಕಡಿಮೆಯಿದ್ದಾರೆ ಮತ್ತು ಅವರು ಯಾವುದೇ ಹಾನಿ ಮಾಡುವುದಿಲ್ಲ ಎಂಬುದು ನಮ್ಮ ನಂಬಿಕೆ. ಆದರೆ, ಮುಸ್ಲಿಮರು ತಲಾ ನಾಲ್ಕು ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ ಮತ್ತು ಹಿಂದೂಗಳು ಹೆಚ್ಚಾಗಿ ಒಂದು ಅಥವಾ ಎರಡು ಮಕ್ಕಳನ್ನು ಹೊಂದಿದ್ದಾರೆ. 20 ಕೋಟಿ ಇರುವ ಮುಸ್ಲಿಮರು ತಲಾ ನಾಲ್ಕು ಮಕ್ಕಳಿಗೆ ಜನ್ಮ ನೀಡಿದರೆ ಅವರ…

Read More

ಬೆಂಗಳೂರು : ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ನಡೆಸಿದ ಅಧ್ಯಯನದ ಆಧಾರದ ಮೇಲೆ ರಾಜ್ಯದಲ್ಲಿ 16,000ಕ್ಕೂ ಹೆಚ್ಚು ವೈದ್ಯಕೀಯ ವೃತ್ತಿಪರರ ಕೊರತೆ ಇದೆ ವರದಿಯಾಗಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಎಫ್‌ಐಸಿಸಿಐ ನಡೆಸಿದ ಅಧ್ಯಯನದ ಆಧಾರದ ಮೇಲೆ ಪತ್ರಿಕೆ ಪ್ರಕಟಿಸಿದ್ದ ವರದಿಯನ್ನು ಆಧರಿಸಿ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ. ಕರ್ನಾಟಕದಲ್ಲಿ ಆರೋಗ್ಯ ಸೇವೆಗಳು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ಸಂಕಷ್ಟದಲ್ಲಿದ್ದು, ಸಾಂಕ್ರಾಮಿಕ ರೋಗಗಳ ಆತಂಕಕಾರಿ ಏರಿಕೆಯೊಂದಿಗೆ, ಕಡಿಮೆ ಸಿಬ್ಬಂದಿ ಮತ್ತು ರೋಗಿಗಳ ಹೆಚ್ಚಳವನ್ನು ನಿಭಾಯಿಸಲು ಆರೋಗ್ಯ ಇಲಾಖೆ ಅಸಮರ್ಥವಾಗಿದೆ ಎಂದು ಪಿಐಎಲ್ ಹೇಳಿದೆ. FICCI ಕಳೆದ ವರ್ಷ ಅಕ್ಟೋಬರ್ 11…

Read More