Author: kannadanewsnow05

ಧಾರವಾಡ : ಧಾರವಾಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಪಶು ಆಸ್ಪತ್ರೆ ಮುಂದೇನೆ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಕಳೆದ ರಾತ್ರಿ ಈ ಒಂದು ಘಟನೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹನುಮಂತ (36) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಸ್ಪತ್ರೆ ಮುಂದೆ ಮರಕೆ ನೇಣು ಹಾಕಿಕೊಂಡು ಹನುಮಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹನುಮಂತ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಇದೀಗ ತಿಳಿದು ಬಂದಿದೆ.

Read More

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದಾರೆ. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ ಈ ರೀತಿ ಹೇಳಿಕೆ ನೀಡುವವರು ಬೆಂಗಳೂರಿನಲ್ಲಿ ಇದ್ದಾರೋ ಇಲ್ವೋ ಅಂತ ಇರುತ್ತಾರೆ ಎಂದು ಕಿಚ್ಚ ಸುದೀಪ್ ಗೆ ಟಾಂಗ್ ನೀಡಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದಾಗ ಕೆಲವರು ಹೇಳಿಕೆ ಕೊಡುತ್ತಾರೆ. ಫ್ಯಾನ್ಸ್ ಬಗ್ಗೆ ವೇದಿಕೆಯ ಮೇಲೆ ಮಾತನಾಡುತ್ತಾರೆ ಆದರೆ ದರ್ಶನ್ ಇದ್ದಾಗ ಮಾತ್ರ ಅವರೆಲ್ಲ ಬೆಂಗಳೂರಿನಲ್ಲಿ ಇದ್ದಾರ ಇಲ್ವಾ ಅಂತ ಗೊತ್ತಾಗದಂತೆ ಇರುತ್ತಾರೆ. ಕಿಚ್ಚ ಸುದೀಪ್ ದರ್ಶನ್ ಪತ್ನಿ ಇದೀಗ ಟಾಂಗ ನೀಡಿದ್ದಾರೆ. ದಾವಣಗೆರೆಯಲ್ಲಿ ಪತ್ನಿ ವಿಜಯ್ ಲಕ್ಷ್ಮಿ ಈ ವಿಚಾರವಾಗಿ ಮಾತನಾಡಿದರು ದರ್ಶನ್ ಬಗ್ಗೆ ಹೇಳುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ದರ್ಶನ್ ಅಭಿಮಾನಿಗಳು ತಲೆ ಕೆಡಿಸಿಕೊಳ್ಳಬೇಡಿ ಎಂದು ಟಾಂಗ್ ನೀಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ…

Read More

ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಕೇಪು ಎಂಬಲ್ಲಿ ಕೋಳಿ ಅಂಕ ನಡೆಸುವ ವಿಚಾರವಾಗಿ ಕೋಳಿ ಅಂಕ ನಡೆಸುವವರ ಪರ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾನುವಾರ ಬಿಜೆಪಿ ಮುಖಂಡರ ದಂಡು ಸ್ಥಳಕ್ಕೆ ಆಗಮಿಸಿ, ಎರಡನೇ ದಿನದ ಕೋಳಿ ಅಂಕ ನಡೆಸಲು ಬೆಂಬಲಿಸಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್​ ಕುಂಪಲ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಹಲವರು ಆಗಮಿಸಿದ್ದರು. ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಸತೀಶ್ ಕುಂಪಲ, ಮಠಂದೂರು ಸಹಿತ 27 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 20 ಜನರನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ 20 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾನೂನು ಬಾಹಿರ ಕೃತ್ಯಕ್ಕೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದವರು ಹಾಗೂ ಕಾನೂನು…

Read More

ಹುಬ್ಬಳ್ಳಿ : ಪಾಲಕರ ವಿರೋಧದ ನಡುವೆಯೂ ಅನ್ಯ ಜಾತಿ ಯುವಕನೊಂದಿಗೆ ಮದುವೆಯಾಗಿ ಗರ್ಭಿಣಿಯಾಗಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಮರ್ಯಾದಗೇಡು ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದೆ. ಯುವತಿಯ ತಂದೆ ಪ್ರಕಾಶ್ ಗೌಡ ಪಾಟೀಲ್, ಈರಣ್ಣಗೌಡ ಹಾಗು ಅರುಣ್ ಬಂಧಿತರು. ಮಾನ್ಯಾ ಪಾಟೀಲ (19) ಮೃತ ಗರ್ಭಿಣಿ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಯುವಕನ ತಂದೆ, ತಾಯಿ ಸೇರಿದಂತೆ ನಾಲೈದು ಜನ ಗಾಯಗೊಂಡು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರೆಲ್ಲರೂ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹತ್ಯೆಗೆ ಸಂಬಂಧಪಟ್ಟಂತೆ ಯುವತಿ ತಂದೆ ಪ್ರಕಾಶಗೌಡ ಪಾಟೀಲ, ಕುಟುಂಬದ ವೀರನಗೌಡ ಮತ್ತು ಅರುಣಗೌಡರನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏಳೆಂಟು ಮಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ. ಘಟನೆ ವಿವರ ಮಾನ್ಯಾ ಹಾಗೂ ಯುವಕ ವಿವೇಕಾನಂದ ದೊಡ್ಡಮನಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಕೋರ್ಟ್ ತೀರ್ಪಿನ ಮೇಲೆ ಬೈರತಿ ಬಸವರಾಜ್ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ನಡೆಯಲಿದೆ ಜಾಮೀನು ಸಿಗದಿದ್ದರೆ ಬೈರತಿ ಬಸವರಾಜ್ ಸರೆಂಡರ್ ಆಗಲೇಬೇಕು. ಹಾಗಾಗಿ ಇಂದು ಕೋರ್ಟ್ ತೀರ್ಪಿನ ಮೇಲೆ ಭೈರತಿ ಬಸವರಾಜ್ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಅವರ ಲೊಕೇಶನ್

Read More

ಬೆಳಗಾವಿ : ಚಿಕ್ಕೋಡಿ ಜಿಲ್ಲೆಯಾಗಲು ಬಹಳ ದಿನವಿಲ್ಲ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭ ಆಗಬಹುದು ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಹೇಳಿದ್ದಾರೆ. ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ ಎಂದರು. 800 ವರ್ಷಗಳ ಇತಿಹಾಸ ಇರುವ ಚಿಕ್ಕೋಡಿ ನ್ಯಾಯಾಲಯದ ಹೊಸ ಕಟ್ಟಡ ಉದ್ಘಾಟನೆ ಬಹಳ ಸಂತೋಷ ತಂದಿದೆ ಎಂದರು. ಈ ನ್ಯಾಯಾಲಯಕ್ಕೆ ಅಂಬೇಡ್ಕರ್ ಕೂಡ ಬಂದಿದ್ದರು. ಅವರು ನ್ಯಾಯಕ್ಕಾಗಿ ಹೋರಾಟ ಮಾಡಿರುವ ಇತಿಹಾಸ ಕೇಳಿದ್ದೇವೆ. ಈ ನ್ಯಾಯಾಲಯದ ಬಾರ್ ರಾಜ್ಯಕ್ಕೆ ಬಹು ದೊಡ್ಡ ಕೊಡುಗೆ ಕೊಟ್ಟಿದೆ. ವಿಧಾನಸಭೆ ಸ್ಪೀಕರ್ ಕಟಾವಳಿ ಹೆಸರು ನೆನಪಿಗೆ ಬರುತ್ತದೆ ಎಂದು ಇತಿಹಾಸ ಮೆಲುಕು ಹಾಕಿದರು.

Read More

ಕೋಲಾರ : ಕನ್ನಡಿಗರಿಗೆ ಇದೀಗ ಕೇಂದ್ರ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮತಿಸಿದ್ದಾರೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದ ಹೊರವಲಯದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಕನ್ನಡಿಗರಿಗೆ ಅ‍ವಕಾಶ ನೀಡುವಂತೆ ತಾವು ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾಗಿ ತಿಳಿಸಿದರು. ಇದಕ್ಕೆ ಮೋದಿ ಅವರು ಸಮ್ಮತಿಸಿದರು ಎಂದು ಮಾಹಿತಿ ನೀಡಿದರು.

Read More

ಬೆಂಗಳೂರು : ಬೆಂಗಳೂರಿನ ಜನರ ಇ-ಖಾತಾ ಕನಸಿಗೆ ಜಿಬಿಎ ಅಧಿಕಾರಿಗಳೇ ಕೊಳ್ಳಿ ಇಟ್ಟಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕನಸಿನ ಕೂಸಿಗೆ ಅಧಿಕಾರಿಗಳೇ ವಿಲನ್‌ ಆಗಿದ್ದಾರೆ ಎಂದು ಆರೋಪಿಸಲಾಗಿದೆ. ಹೌದು ಸಾವಿರಾರು ಇ-ಖಾತಾ ಅರ್ಜಿಗಳನ್ನು ಉದ್ದೇಶಪೂರ್ವಕವಾಗಿ ಅಧಿಕಾರಿಗಳು ರಿಜೆಕ್ಟ್‌ ಮಾಡಿದ್ದಾರೆ. ಈ ಕುರಿತು ಜಿಬಿಎ ಉಪ ಆಯುಕ್ತ ಆಡಳಿತ ವಿಭಾಗದಿಂದ ನಗರಾಭಿವೃದ್ಧಿ ಇಲಾಖೆಗೆ ಬಹಿರಂಗ ಪತ್ರ ಕಳುಹಿಸಲಾಗಿದೆ.  ಜಯನಗರ ನಿವಾಸಿ ಮುರಳೀಧರ್ ಅನ್ನೋರಿಂದ ಇ-ಖಾತಾಗೆ ಅರ್ಜಿ ಸಲ್ಲಿಕೆಯಾಗಿತ್ತು. ವ್ಯಕ್ತಿ ಸೂಕ್ತ ದಾಖಲೆಯನ್ನು ನೀಡಿದ್ದರು. ಆದರೆ, ಕಂದಾಯ ಇಲಾಖೆಯ ಅಧಿಕಾರಿಗಳು ಮಾಹಿತಿ ಸರಿಯಿಲ್ಲ ಅಂತ ಖಾತೆ ನೀಡದೆ ತಿರಸ್ಕರಿಸಿದ್ದಾರೆ. ಅಂತಿಮ ಖಾತೆ ಪಡೆಯಲು ಬೇಕಾದ ದಾಖಲೆ ನೀಡಿದ್ರೂ ರಿಜೆಕ್ಟ್ ಮಾಡಲಾಗಿದೆ. ಹೀಗೆ, ಸಾವಿರಾರು ಅರ್ಜಿಗಳನ್ನು ವಿನಾಕಾರಣ ರಿಜೆಕ್ಟ್ ಮಾಡಲಾಗಿದೆ ಎಂದು ಆರೋಪಿಸಿ ಉಪ ಆಯುಕ್ತರು ಆಡಳಿತ ವಿಭಾಗದಿಂದ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಇ-ಖಾತಾ ಅರ್ಜಿಗಾಗಿ ಸಾರ್ವಜನಿಕರ ದಾಖಲೆ ಸರಿಯಾಗಿದ್ರೂ ಉದ್ದೇಶಪೂರ್ವಕವಾಗಿ ಇ-ಖಾತಾ ಕೊಡದೇ ಅಧಿಕಾರಿಗಳು ಆಟವಾಡಿಸುತ್ತಿದ್ದಾರೆ. ಅಧಿಕಾರಿಗಳ ಉದ್ಧಟತನದಿಂದ…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಮರ್ಯಾದ ಹತ್ಯೆ ಪ್ರಕರಣ ನಡೆದಿದ್ದು,ಪಾಲಕರ ವಿರೋಧದ ನಡುವೆಯೂ ಅನ್ಯ ಜಾತಿ ಯುವಕನೊಂದಿಗೆ ಮದುವೆಯಾಗಿ ಗರ್ಭಿಣಿಯಾಗಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಮರ್ಯಾದಗೇಡು ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಭಾನುವಾರ ನಡೆದಿದೆ. ಮಾನ್ಯಾ ಪಾಟೀಲ (19) ಮೃತ ಗರ್ಭಿಣಿ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಯುವಕನ ತಂದೆ, ತಾಯಿ ಸೇರಿದಂತೆ ನಾಲೈದು ಜನ ಗಾಯಗೊಂಡು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರೆಲ್ಲರೂ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹತ್ಯೆಗೆ ಸಂಬಂಧಪಟ್ಟಂತೆ ಯುವತಿ ತಂದೆ ಪ್ರಕಾಶಗೌಡ ಪಾಟೀಲ, ಕುಟುಂಬದ ವೀರನಗೌಡ ಮತ್ತು ಅರುಣಗೌಡರನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏಳೆಂಟು ಮಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ. ಘಟನೆ ವಿವರ ಮಾನ್ಯಾ ಹಾಗೂ ಯುವಕ ವಿವೇಕಾನಂದ ದೊಡ್ಡಮನಿ ಇಬ್ಬರು ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿಯ ಕುಟುಂಬಸ್ಥರ ತೀವ್ರ ವಿರೋಧವಿತ್ತು. ಈ ಕುರಿತು ಪೊಲೀಸ್ ಠಾಣೆಯಲ್ಲಿ ರಾಜಿ…

Read More

ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಭಾರತ ನೌಕಾ ಪಡೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಲ್ಲಿನ ಕೊಚ್ಚಿನ್ ಶಿಪ್‌ಯಾರ್ಡ್‌ನ ಇಬ್ಬರು ನೌಕರರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಜ ರಾತ್‌ನ ಆನಂದ್ ತಾಲೂಕು, ಕೈಲಾಸ್ ನಗರಿ ನಿವಾಸಿ ಹೀರೇಂದ್ರ ಕುಮಾರ್ ಖಡಯಾತ್ (34) ಎಂದು ಗುರುತಿಸಲಾಗಿದೆ. ಈತ ಕೂಡ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಉದ್ಯೋಗಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ರೋಹಿತ್‌ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದ ಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಮತ್ತಿತರ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ವಾಟ್ಸ್‌ಆ್ಯಪ್ ಮೂಲಕ ಪಾಕಿಸ್ತಾನಕ್ಕೆ ರವಾನಿಸಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದರು. ವಿಚಾರಣೆ ವೇಳೆ ಈ ಆರೋಪಿಗಳಿಗೆ ನೀಡಿದ ಮಾಹಿತಿಯಂತೆ ಅವರಿಗೆ ಸಿಮ್‌ಗಳನ್ನು ಒದಗಿಸುತಿದ್ದ ಹೀರೇಂದ್ರನನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.…

Read More