Author: kannadanewsnow05

ಹಿಂದೂ ದರ್ಮದಲ್ಲಿ ತುಪ್ಪದ ದೀಪಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಪೂಜೆ ಸಮಯದಲ್ಲಿ ಹಲವು ಜನರು ತುಪ್ಪದ ದೀಪ ಹಚ್ಚುವುದನ್ನು ನೋಡಿದ್ದೇವೆ.. ತುಪ್ಪದ ದೀಪ ಹಚ್ಚುವುದರಿಂದ ಸಕಾರಾತ್ಮಕತೆ ಹೆಚ್ಚುತ್ತದೆ. ದೇವರಿಗೆ ತುಪ್ಪದ ದೀಪ ಯಾಕೆ ಶ್ರೇಷ್ಠ.. ವಿಸ್ತಾರವಾಗಿ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ದೇವರಿಗೆ, ತುಪ್ಪದ ದೀಪ , ಪ್ರಯೋಜನಗಳು, ಹಿಂದೂ ಧರ್ಮ ಹಾಗೂ ಧರ್ಮ ಗ್ರಂಥಗಳಲ್ಲಿ ತುಪ್ಪದ ದೀಪಕ್ಕೆ ಸಾಕಷ್ಟು ಮಹತ್ವವಿದೆ. ಪ್ರತಿ ಹಿಂದೂ ಕುಟುಂಬದಲ್ಲಿ ಬೆಳಿಗ್ಗೆ, ಮತ್ತು ಸಂಜೆ ಮನೆಯಲ್ಲಿ ಮಹಿಳೆಯರು ದೇವರ ಮುಂದೆ ದೀಪವನ್ನು ಹಚ್ಚುವ ಪದ್ಧತಿ ಇದೆ. ದೀಪ ಹಚ್ಚುವುದರಿಂದ ದೇವತೆಗಳು ಸಂತೋಷವಾಗುತ್ತಾರೆ ಎಂದು ಹೇಳಲಾಗಿದೆ. ಆದ್ರೆ ಶಿವ ಪುರಾಣದ ಪ್ರಕಾರ, ದೇವರ ಮುಂದೆ ದೀಪ ಹಚ್ಚುವುದರಿಂದ ಮನೆಯಲ್ಲಿ ಸಂತೋಷ, ನೆಮ್ಮದಿ,…

Read More

ಮಂಡ್ಯ : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಭ್ರಷ್ಟ ಅಧಿಕಾರಿ ಚಳಿ ಬಿಡಿಸುತ್ತಿರುವ ಲೋಕಾಯುಕ್ತರು, ಏಕಕಾಲಕ್ಕೆ ಪ್ರತ್ಯೇಕ ತಂಡವಾಗಿ ಮೂರು ಕಡೆ ದಾಳಿ ಮಾಡಿದ್ದಾರೆ. ಇನ್ನು ಮಂಡ್ಯ ನಗರಸಭೆ ಸಂಯೋಜನಾಧಿಕಾರಿ ಪುಟ್ಟಸ್ವಾಮಿ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರು, ಸ್ವಗ್ರಾಮ ತೊರೆಚಾಕನಹಳ್ಳಿಯ ಮನೆಯ ಮೇಲೆ ದಾಳಿ ಮಾಡಿದ್ದಾರೆ.ಅದೇ ಗ್ರಾಮದಲ್ಲಿರುವ ಆಲೆಮನೆ ಮೇಲು ದಾಳಿ ಮಾಡಿದ್ದಾರೆ. ಮೈಸೂರಿನ ಅಧಿಕೃತ ನಿವಾಸದ ಮೇಲೂ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿರುವ ಆರೋಪ ಹಿನ್ನೆಲೆ ಎಲ್ಲಾ ಕಡೆಯಲ್ಲೂ ಸಂಪೂರ್ಣವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Read More

ದಾವಣಗೆರೆ : ರಾಜ್ಯದಲ್ಲಿ ಇತ್ತೀಚಿಗೆ ಬೆಂಗಳೂರು ನಗರದಲ್ಲಿ 7 ಕೋಟಿ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ಮತ್ತೊಂದು ದರೋಡೆ ನಡೆದಿತ್ತು. ಚಿಕ್ಕಮಗಳೂರಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ನಗ ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಅದರ ಬಳಿಕ ಇದೀಗ ದಾವಣಗೆರೆಯಲ್ಲಿ ಚಿನ್ನದ ವ್ಯಾಪಾರಿ ಬಳಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಪಿಎಸ್ಐ ಸೇರಿದಂತೆ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪಿಎಸ್‍ಐಗಳನ್ನು ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರಾದ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬವರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಪಿಎಸ್‍ಐಗಳಿಗೆ ವ್ಯಾಪಾರಿ ಬಳಿ ಚಿನ್ನ ಇರುವುದರ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿದುಬಂದಿದೆ. ಇಬ್ಪಿಬರು ಎಸ್‌ಐಗಳು ವರ್ಗಾವಣೆ ಆಗಿ ಐಜಿ ಅಫೀಸ್‌ನಲ್ಲಿ ರಿಪೋರ್ಟ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಕಾರವಾರ ಮೂಲದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು…

Read More

ನವದೆಹಲಿ : ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಧರ್ಮೇಂದ್ರ ಅವರು ತಮ್ಮ ಅಭಿನಯದಿಂದ ದಶಕಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ್ದರು. ಅವರ ಅಗಲಿಕೆಯ ಸುದ್ದಿ ಚಿತ್ರರಂಗದಲ್ಲಿ ದುಃಖ ಮೂಡಿಸಿದೆ. ಅವರ ನಿಧನವು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಿರಿಯ ನಟ, ಪ್ರೇಕ್ಷಕರ ಮನಗೆದ್ದಿದ್ದ ಧರ್ಮೇಂದ್ರ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ಚಿತ್ರರಂಗದಲ್ಲಿ ಮತ್ತು ಅಭಿಮಾನಿ ವಲಯದಲ್ಲಿ ದುಃಖ ಮೂಡಿಸಿದೆ.ಧರ್ಮೇಂದ್ರ ಅವರು ತಮ್ಮ ಅಭಿನಯದ ಮೂಲಕ ದಶಕಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ್ದರು. ಅವರ ನಟನೆಯು ಅನೇಕರಿಗೆ ಸ್ಫೂರ್ತಿಯಾಗಿದೆ. ಧರ್ಮೇಂದ್ರ ಅವರು ತಮ್ಮ ನಟನೆಯಿಂದ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಅಭಿನಯಕ್ಕೆ ಅನೇಕ ಪ್ರಶಸ್ತಿಗಳು ಸಂದಿವೆ. ಅವರ ಅಭಿನಯದ ಚಿತ್ರಗಳು ಇಂದಿಗೂ ಜನಪ್ರಿಯವಾಗಿವೆ. ಪ್ರೇಕ್ಷಕರು ಅವರನ್ನು ಬಹಳ ಪ್ರೀತಿಸುತ್ತಿದ್ದರು.a

Read More

ಇಂದು ನಾವು ನೋಡಲಿರುವ ಎರಡೂ ಎಲೆಗಳು ಔಷಧೀಯ ಗುಣಗಳನ್ನು ಹೊಂದಿವೆ. ಹಿರಿಮೆ ಇದೆ. ಈ ಆಧ್ಯಾತ್ಮಿಕ ದಾಖಲೆಯಲ್ಲಿ ನಾವು ನೋಡಲಿರುವುದು ಈ ಎರಡು ಎಲೆಗಳ ಶ್ರೇಷ್ಠತೆಯ ಬಗ್ಗೆ. ಈ ಎರಡು ಎಲೆಗಳನ್ನು ಔಷಧದಲ್ಲಿ ಬಳಸುವುದರಿಂದ ದೇಹದಲ್ಲಿರುವ ಎಲ್ಲಾ ತ್ಯಾಜ್ಯವನ್ನು ಹೊರಹಾಕಲು, ಹಾಗೆಯೇ ನಮ್ಮ ಮನೆಯಲ್ಲಿನ ಅನಗತ್ಯ ಸಮಸ್ಯೆಗಳನ್ನು ಹೊರಹಾಕಲು ಬಳಸಲಾಗುತ್ತದೆ ಎಂದು ಹೇಳಲಾಗುತ್ತದೆ. ಆ ಎರಡು ಎಲೆಗಳು ಯಾವುವು? ಆ ಎರಡು ಎಲೆಗಳನ್ನು ಮನೆಗೆ ತರುವುದು ಹೇಗೆ. ತಿದ್ದುಪಡಿ ಮಾಡುವುದು ಹೇಗೆ ಎಂಬುದರ ಕುರಿತು ನಿಮಗಾಗಿ ಆಧ್ಯಾತ್ಮಿಕ ಪೋಸ್ಟ್ ಇಲ್ಲಿದೆ. ಬಡತನವನ್ನು ದೂರವಿಡುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ಯುವಕನೊಬ್ಬ ಸ್ನೇಹಿತೆಯ ರೂಮ್ಗೆ ಕರೋದಯ್ದು ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿ ಈ ಒಂದು ಬರ್ಬರ ಹತ್ಯೆ ನಡೆದಿದೆ. ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾಗಿರುವ ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ದೇವಿಶ್ರೀ ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನ ಜೊತೆ ಸ್ನೇಹಿತೆ ರೂಂಗೆ ತೆರಳಿದ್ದಳು. ಅಲ್ಲಿ ಆಕೆಯನ್ನು ಕೊಲೆ ಮಾಡಿ ಯುವಕ ಓರ್ವನೇ ವಾಪಸ್ ಆಗಿದ್ದಾನೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತ ದೇವಿಶ್ರೀ ರೆಡ್ಡಪ್ಪ, ಜಗದಂಭ ದಂಪತಿಯ ಕೊನೆಯ ಮಗಳು. ಚೆನ್ನಾಗಿ ಓದಲಿ ಅಂತಾ ಪೋಷಕರು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಪ್ರೇಮ್ ವರ್ಧನ್‌ಗೆ ಪೊಲೀಸರು…

Read More

ಮೈಸೂರು : ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಸಂಪ್ನಿಂದ ನೀರು ಮೇಲೆತ್ತಿಸಿ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಶಿಕ್ಷಕರು ಶಾಲಾ ವಿದ್ಯಾರ್ಥಿಗಳಿಂದ ನೀರು ಎತ್ತಿಸಿ ಶೌಚಾಲಯ ಸ್ವಚ್ಛ ಮಾಡಿಸಿದ ಘಟನೆ ನಡೆದಿದೆ. ವರುಣಾದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಬಳಿ ಸಂಪ್ ನಿಂದ ನೀರು ಎತ್ತಿಸಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಈ ಘಟನೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಗ್ರಾಮಸ್ಥ ಸಿದ್ದರಾಜು ಎಂಬುವವರು ಮಗಳನ್ನು ಅಂಗನವಾಡಿಗೆ ಬಿಡಲು ಹೋಗಿದ್ದಾಗ, ಶಾಲೆಯ ವಿದ್ಯಾರ್ಥಿಗಳು ಸಂಪ್ ನಿಂದ ನೀರು ಎತ್ತಿ ಶೌಚಾಲಯ ಶುಚಿಗೊಳಿಸುತ್ತಿದ್ದರು. ಈ ವೇಳೆ ಅವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಬಿಇಒಗೆ ದೂರು ನೀಡಿದ್ದಾರೆ. ಈ ಬಗ್ಗೆ ಶಿಕ್ಷಕರ ವಿರುದ್ಧ ಕ್ರಮ…

Read More

ಹಾಸನ : ಹಾಸನದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಗೋಪಾಲ್ (27), ದೀಪು (24) ಎಂದು ತಿಳಿದುಬಂದಿದೆ. ಭಾನುವಾರ ದಂಪತಿ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು. ಬಟ್ಟೆ ತೊಳೆಯುವಾಗ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದಾಳೆ. ಪತ್ನಿಯನ್ನು ರಕ್ಷಿಸಲು ಪತಿ ಗೋಪಾಲ್ ನಾಲೆಗೆ ಇಳಿದಿದ್ದಾರೆ. ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದರಿಂದ ನೀರಿನಲ್ಲಿ ಮುಳುಗಿ ದಂಪತಿ ಸಾವನ್ನಪ್ಪಿದ್ದಾರೆ. ದಂಪತಿ ಮನೆಗೆ ಬಾರದಿದ್ದರಿಂದ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ನಂತರ ನಾಲೆ ಬಳಿ ನೋಡಿದಾಗ ಬಟ್ಟೆಗಳು ದಡದಲ್ಲಿತ್ತು. ಈ ಹಿನ್ನೆಲೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಅಗ್ನಿಶಾಮಕದಳ ಸಿಬ್ಬಂದಿ ನಾಲೆಯಲ್ಲಿ ಶೋಧಕಾರ್ಯ ನಡೆಸಿದ ವೇಳೆ ಪತಿ ಗೋಪಾಲ್ ಮೃತದೇಹ ನಾಲೆಯಲ್ಲಿ ಪತ್ತೆಯಾಗಿದೆ. ಪತ್ನಿ ದೀಪು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ…

Read More

ಚಿಕ್ಕಬಳ್ಳಾಪುರ : ನಾಲ್ಕೈದು ತಿಂಗಳ ಹಿಂದೆ ನಾನು ಹೈಕಮಾಂಡ್ ಅವರನ್ನು ಭೇಟಿಯಾಗಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ಪುನಾರಚನೆಯ ಕುರಿತು ಪ್ರಸ್ತಾಪ ಮಾಡಿದ್ದೆ. ಅಂದು ಸಚಿವ ಸಂಪುಟ ಪುನರಚನೆ ಮಾಡು ಅಂತ ಹೈಕಮಾಂಡ್ ಹೇಳಿದರು. ಎರಡುವರೆ ವರ್ಷ ಆಗಲಿ ಆಮೇಲೆ ಸಂಪುಟ ಪುನಾರಚನೆ ಮಾಡೋಣ ಅಂತ ಅಂದೆ ಇದೀಗ ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಕೇಳುತ್ತೇನೆ ಹೈಕಮಾಂಡ್ ಹೇಳಿದಂತೆ ಸಂಪುಟ ಪುನಾರಚನೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದರು. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೋ, ಇದೀಗ ತಮ್ಮ ಮಾತು ಬದಲಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ. ಹೌದು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ…

Read More

ಚಿಕ್ಕಬಳ್ಳಾಪುರ : ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದರು. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೋ, ಇದೀಗ ತಮ್ಮ ಮಾತು ಬದಲಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ. ಹೌದು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ದ ಆಗಿರುತ್ತೇನೆ ಎಂದು ಹನುಮಂತಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಹೈಕಮಾಂಡ್ ಎನ್ನು ತೀರ್ಮಾನ ತೆಗೆದುಕೊಳ್ಳುತೋ ಅದಕ್ಕೆ ಬದರಾಗುತ್ತೇವೆ ಎಂದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದ. ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ. ಅಕಸ್ಮಾತ್ ಹೈಕಮಾಂಡ್ ನನ್ನನ್ನೇ ಮುಂದುವರೆಸಲು ಹೇಳಿದರೆ ನಾನೇ…

Read More