Author: kannadanewsnow05

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ SIT ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ಶೋಧ ಕಾರ್ಯ ನಡೆಸಿದ್ದು, ಈ ವೇಳೆ ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದೆ. ಹೌದು ಮಹೇಶ್ ಶೆಟ್ಟಿ ತಿಮರೊಡಿ ಮನೆಯಲ್ಲಿ ಚೆನ್ನಯ್ಯನ ಮೊಬೈಲ್ ಪತ್ತೆಯಾಗಿದೆ. ಎಸ್ಐಟಿಸಿ ಅಧಿಕಾರಿಗಳು ಚಿನ್ನಯ್ಯನ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಅಲ್ಲದೆ ಈ ಒಂದು ಗ್ಯಾಂಗ್ ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯವರನ್ನು ಸಹ ಭೇಟಿ ಮಾಡಿದರು ಎಂದು ಮತ್ತೊಂದು ಸ್ಪೋಟಕ ಅಂಶ ಬೆಳಕಿಗೆ ಬಂದಿದೆ.

Read More

ಗುಜರಾತ್ : ಗುಜರಾತ್ ನಲ್ಲಿ ಘೋರ ದುರಂತವೊಂದು ನಡೆದಿದ್ದು, ಅಪಾರ್ಟ್​​ಮೆಂಟ್​​ನ ಲಿಫ್ಟ್ ನಲ್ಲಿ ಸಿಲುಕಿ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಗುಜರಾತ್ ನ ನವ್ಸಾರಿ ಜಿಲ್ಲೆಯ ವಿಜಲ್ಪುರ್ ಪ್ರದೇಶದಲ್ಲಿ ನಡೆದಿದೆ.ನೀರವ್ ಸ್ಕ್ವೇರ್ ಅಪಾರ್ಟ್‌ಮೆಂಟ್‌ನಲ್ಲಿ ಎರಡನೇ ಮಹಡಿಯಿಂದ ಕೆಳಗೆ ಹೋಗುವಾಗ ಬಾಲಕ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ. ನಂತರ ಲಿಫ್ಟ್ ಅನ್ನು ಕಟ್ಟರ್‌ನಿಂದ ಕತ್ತರಿಸಿ ಬಾಲಕನನ್ನು ಹೊರ ತೆಗೆಯಲಾಯಿತು. ತಾಯಿ ಮನೆಗೆ ಬೀಗ ಹಾಕುತ್ತಿರುವಾಗ, ಬಾಲಕ ಲಿಫ್ಟ್​ ಒಳಗೆ ಪ್ರವೇಶಿಸಿದ್ದ, ಆ ಸಮಯದಲ್ಲಿ ಲಿಫ್ಟ್ ಸ್ಟಾರ್ಟ್ ಆಗಿ ಬಾಲಕ ಅದರಲ್ಲಿ ಸಿಲುಕಿಕೊಂಡಿದ್ದ.ತಾಯಿ ಕೂಡ ಲಿಫ್ಟ್ ನಲ್ಲಿ ಅವರನ್ನು ಹಿಂಬಾಲಿಸುತ್ತಿದ್ದರು, ಆದರೆ ಬಾಲಕ ಮೊದಲು ಒಳಗೆ ಪ್ರವೇಶಿಸಿದ್ದ ಕೂಡಲೇ ಲಿಫ್ಟ್​ ಸ್ಟಾರ್ಟ್​ ಆಗಿತ್ತು. ಘಟನೆಯ ಸಮಯದಲ್ಲಿ, ಲಿಫ್ಟ್ ಎರಡನೇ ಮಹಡಿಯಿಂದ ಕೆಳಗೆ ಇಳಿಯುತ್ತಿತ್ತು ಮತ್ತು ಬಾಲಕನ ದೇಹದ ಒಂದು ಭಾಗ ಲಿಫ್ಟ್‌ನಲ್ಲಿ ಸಿಲುಕಿಕೊಂಡಿತ್ತು.ಘಟನೆಯ ನಂತರ ತಕ್ಷಣವೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಒಂದು ಗಂಟೆ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ, ಅಗ್ನಿಶಾಮಕ ಸಿಬ್ಬಂದಿ ಕಟ್ಟರ್ ಯಂತ್ರದ…

Read More

ಮೈಸೂರು : ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ವಿಚಾರವಾಗಿ ಎಸ್​ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯ ಹೊರಬರುತ್ತದೆ, ಇದರಲ್ಲಿ ಯಾರು ರಾಜಕೀಯ ಮಾಡಬಾರದು. ಈ ಪ್ರಕರಣದಲ್ಲಿ ಎನ್​ಐಎ ತನಿಖೆಗೆ ವಹಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಮೈಸೂರಿನಲ್ಲಿ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಆಯೋಜಿಸಿದ್ದ ಪರಮೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಸದನದಲ್ಲಿ ಈಗಾಗಲೇ ಉತ್ತರ ನೀಡಿದ್ದೇನೆ. ಸತ್ಯ ಹೊರಬರಬೇಕು ಎಂದು ಎಸ್​ಐಟಿ ರಚನೆ ಮಾಡಿದ್ದೇವೆ. ಈ ನಡುವೆ ಅನೇಕರು ಅನೇಕ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಹೇಳಿಕೆಗಳಿಂದ ಸತ್ಯ ಹೊರಬರುವುದಿಲ್ಲ, ಹೇಳಿಕೆ ನಿಲ್ಲಿಸಿ ತನಿಖೆ ಮುಂದುವರೆಸಲು ಅವಕಾಶ ಮಾಡಿಕೊಡಬೇಕು ಆವಾಗ ಸತ್ಯ ಹೊರಬರುತ್ತದೆ. ಇದರಲ್ಲಿ ರಾಜಕೀಯ ಮಾಡಬಾರದು. ಈ ಪ್ರಕರಣದಿಂದ ಸತ್ಯ ಹೊರಬರಬೇಕೆಂಬುದೇ ನಮ್ಮ ಉದ್ದೇಶ ಎಂದರು.

Read More

ಮೈಸೂರು : ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ಮೈಸೂರಲ್ಲಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲೇಟಿನ್ ಕಡ್ಡಿ ಬಾಯಿಯ ಒಳಗೆ ಹಾಕಿ ಸ್ಪೋಟಿಸಿ ಮಹಿಳೆಯ ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಕಿರಾತಕ ಮೊಬೈಲ್ ಬ್ಲಾಸ್ಟ್ ಕಥೆ ಕಟ್ಟಿದ್ದಾನೆ. ಹೌದು ಮೈಸೂರಿನ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಸಿದ್ದರಾಜು ಎಂಬಾತನಿಂದ ರಕ್ಷಿತಾ (20) ಎನ್ನುವ ಯುವತಿಯ ಭೀಕರ ಕೊಲೆಯಾಗಿದೆ. ರಕ್ಷಿತಾ ಹುಣಸೂರು ತಾಲೂಕಿನ ಗೆರಸನಹಳ್ಳಿ ಗ್ರಾಮದ ನಿವಾಸಿ ಆಗಿದ್ದು, ಇನ್ನು ಸಿದ್ದರಾಜು ಪಿರಿಯಾಪಟ್ಟಣ ಬಿಳಿಕೆರೆ ಗ್ರಾಮದ ನಿವಾಸಿಯಾಗಿದ್ದಾನೇ ಎಂದು ತಿಳಿದು ಬಂದಿದೆ. ಹತ್ಯೆಯಾದ ರಕ್ಷಿತಾ ಕೇರಳ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದಳು. ಮದುವೆಯಾದರು ಸಹ ಸಿದ್ದರಾಜು ಜೊತೆಗೆ ರಕ್ಷಿತಾ ಆನಂತಿಕ ಸಂಬಂಧ ಇಟ್ಟುಕೊಂಡಿದ್ದಳು. ಅನೈತಿಕ ಸಂಬಂಧದಿಂದ ಇದೀಗ ರಕ್ಷಿತಾಳನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೋಸ್ಲಾ ಗ್ರಾಮದ ಮೂಲದವರಾದ ತಾಯಿ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಎಂದು ತಿಳಿದುಬಂದಿದೆ. ಮಹಾರಾಷ್ಟ್ರಕ್ಕೆ ಹೋಗಿದ್ದ ಇಬ್ಬರು ಬೈಕ್ ಮೇಲೆ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಹಾಲಿನ ಗೂಡ್ಸ್ ಗಾಡಿ ಟಿವಿಎಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯನನ್ನು ಅರೆಸ್ಟ್ ಮಾಡಿದ್ದು ಇನ್ನೊಂದು ಕಡೆ ಯೂಟ್ಯೂಬರ್ ಸಮೀರ್ ಎಂಡಿ ಎಂದು ಬೆಳತಂಗಡಿ ಠಾಣೆಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ. ಇದೇ ವಿಚಾರವಾಗಿ ಧರ್ಮಸ್ಥಳ ಪ್ರಕರಣ ಶೇಕಡ 90ರಷ್ಟು ಮುಗಿದಿದೆ ಮತ್ತು ಸಿಬಿಐಗೆ ಪ್ರಕರಣ ವಹಿಸುವ ಅಗತ್ಯವಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ಧರ್ಮಸ್ಥಳ ಪ್ರಕರಣದ ಕುರಿತು ಸತೀಶ್ ಜಾರಕಿಹೊಳಿ ಹೇಳಿಕೆಗೆ ನೆಲಮಂಗಲದಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ, ಪರಮೇಶ್ವರ್ ಕ್ಲಾರಿಟಿ ಕೊಡಬೇಕು ಎಂಬ ತೀರ್ಮಾನ ತೆಗೆದುಕೊಂಡಿದ್ದರಿಂದ ಒಂದು ಹಂತಕ್ಕೆ ಬಂದಿದೆ. ಎನ್‌ಐಎ, ಸಿಬಿಐ ಬೇಕಾಗಿಲ್ಲ, ನಮ್ಮ ಪೊಲೀಸರೇ ಸಮರ್ಥವಾಗಿದ್ದಾರೆ. ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಬಗ್ಗೆ ವ್ಯಾಪಕವಾಗಿ ಯೂಟ್ಯೂಬರ್ಸ್ ಪರ ಹಾಗೂ ವಿರೋಧ ಇದ್ದರೂ ಎಲ್ಲವೂ ಅಂತ್ಯವಾಗತ್ತದೆ ಎಂದರು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿಚಾರದ ಕುರಿತು ಮಾತನಾಡಿ, ಅಬ್ದುಲ್ ಕಲಾಂ ರಾಷ್ಟ್ರಪತಿಯವರಾಗಿರಲಿಲ್ವಾ? ಅಬ್ದುಲ್ ಕಲಾಂ ರಾಷ್ಟ್ರಪತಿಯಾಗಿದ್ದಾರೆ ಅಂದ್ರೆ ಬಾನು ಮುಷ್ತಾಕ್ ಉದ್ಘಾಟನೆ ಮಾಡೋದ್ರಲ್ಲಿ ತಪ್ಪೇನಿದೆ? ಅವರು…

Read More

ಮೈಸೂರು : ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ? ಎಂದು ಸಾಹಿತಿ ಬಾನು ಮುಷ್ತಾಕ್ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪೋಸ್ಟ್ ಹಂಚಿಕೊಂಡಿರುವ ಅವರು, 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಬಾನು ಮುಷ್ತಾಕ್ ಮಾತನಾಡಿದ್ದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಬರೆದು ಅಸಮಾಧಾನ ಹೊರಹಾಕಿದ್ದಾರೆ. ಭಾಷಣದಲ್ಲಿ ಬಾನು ಮುಷ್ತಾಕ್ ಕನ್ನಡ ಬಾವುಟದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಈಗ ಕನ್ನಡಿಗರ ಆಕ್ರೋಶಕ್ಕೂ ಗುರಿಯಾಗಿದೆ. ಬಾನು ಮುಸಲ್ಮಾನರು ಎಂಬ ಕಾರಣಕ್ಕೆ ನಾನು ಈ ಮಾತನ್ನು ಹೇಳುತ್ತಿಲ್ಲ. ನಿಮ್ಮ ಸಾಧನೆಗೆ ನಮ್ಮ ಹೆಮ್ಮಯಿದೆ. ನಿಮಗೆ ಬೂಕರ್ ಪ್ರಶಸ್ತಿ ಬಂದಿದೆ. ಇದು ರಾಜ್ಯದ ಜನರಿಗೆ ಖುಷಿ ಇದೆ. ಆದರೆ ದಸರಾ ಜಾತ್ಯತೀತತೆಯ ಪ್ರತೀಕ ಅಲ್ಲ, ಇದು ಧಾರ್ಮಿಕ ಆಚರಣೆ. ಇದು ನಮ್ಮ ಹಬ್ಬ. ಮೈಸೂರಿನ ಯದುವಂಶ…

Read More

ದಕ್ಷಿಣಕನ್ನಡ : ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ 2ನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾನೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಬಾಡಿಗೆ ಮನೆ ಹಾಗೂ ಬಳ್ಳಾರಿಯಲ್ಲಿರುವ ಸ್ವಂತ ಮನೆಗೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಅಂಟಿಸಿ ಬಂದಿದ್ದರು. ನಿನ್ನೆ ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದ. ಇದೀಗ ಇಂದು ಸಹ ಸಮೀರ್ 2ನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನು ಇದೇ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಮತ್ತೊಂದು ಭೀಕರವಾದ ಮುರ್ಡರ್ ನಡೆದಿದ್ದು, ಯುವಕನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೀರಾಪುರ ಕಾಲೋನಿ ಅಲ್ಲಿ ಮರಿಯಪ್ಪ ಕಟ್ಟಿಮನಿ (24) ಎಂನುಗ ಯುವಕನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಕಲಬುರ್ಗಿ ತಾಲೂಕಿನ ಮೈನಾಳ ಗ್ರಾಮದ ನಿವಾಸಿಯಾಗಿರುವ ಮಾರಪ್ಪ, ಕೊಲೆ ಕುರಿತು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಡ್ಯಾನ್ಸ್ ಮಾಸ್ಟರ್ ಒಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾವೇರೀ ಜಿಲ್ಲೆಯ ಮೋಟೆ ಬೆನ್ನೂರು ಎಂಬಲ್ಲಿ ಚಿತ್ರದುರ್ಗ ಮೂಲದ ಲಿಂಗೇಶ ಎಂಬ ಡಾನ್ಸ್ ಮಾಸ್ಟರ್ ನನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ.ಹಂತಕರು ಕೊಲೆ ಬಳಿಕ ಶವದ ಬಳಿ ಬೈಕ್ ಚಾಕು ನೀರಿನ ಬಾಟಲ್ ಎಸೆದು ಪರಾರಿ ಆಗಿದ್ದಾರೆ.

Read More