Author: kannadanewsnow05

ರಾಂಚಿ : ಮಹಾಕುಂಭ ಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸಂಸದೆ ಮಹುವಾ ಮಾಜಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಅವರ ಕುಟುಂಬ ಸದಸ್ಯರು ಕೂಡ ಗಾಯಗೊಂಡಿದ್ದಾರೆ. ಅವರ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಅವರನ್ನು ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ. ಜೆಎಂಎಂನ ರಾಜ್ಯಸಭಾ ಸಂಸದೆ ಮಹುವಾ ಮಾಜಿಮಹಾ ಕುಂಭ ಮೇಳದಲ್ಲಿ ಸ್ನಾನ ಮಾಡಿ ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದರು l. ಈ ಸಮಯದಲ್ಲಿ ಅವರ ಮಗ ಮತ್ತು ಸೊಸೆ ಕೂಡ ಅವರೊಂದಿಗೆ ಇದ್ದರು. ರಾಷ್ಟ್ರೀಯ ಹೆದ್ದಾರಿ-39ರ ಲತೇಹಾರ್‌ನ ಹೊಟ್‌ವಾಗ್ ಗ್ರಾಮದಲ್ಲಿ ಅವರ ಕಾರು, ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.ಅಪಘಾತದ ಬಳಿಕ ತಕ್ಷಣ ಅವರನ್ನು ರಾಂಚಿಯ ಆರ್ಕಿಡ್ ವೈದ್ಯಕೀಯ ಕೇಂದ್ರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಸಭಾ ಸದಸ್ಯೆಯಾಗಿರುವ ಮಹುವಾ ಎಡ ಮಣಿಕಟ್ಟಿನಲ್ಲಿ ಮೂಳೆ ಮುರಿತ ಉಂಟಾಗಿದ್ದು, ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ. ನಾವು ಪ್ರಯಾಗರಾಜ್‌ನ…

Read More

ಕೊಡಗು : ಶಿವರಾತ್ರಿ ದಿನದಂದೇ ಕೊಡಗು ಜಿಲ್ಲೆಯಲ್ಲಿ ಘೋರವಾದಂತಹ ಘಟನೆ ಸಂಭವಿಸಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗಲೇ ಹೆಜ್ಜೇನು ದಾಳಿ ಮಾಡಿದೆ. ಹೆಜ್ಜೇನು ದಾಳಿಯಿಂದ ಲೋಹಿತ್ (30) ಎನ್ನುವ ಯುವಕ ಸಾವನಪ್ಪಿದ್ದಾನೆ. ಪೋದ್ದಮಾನಿ ಗ್ರಾಮದ ಬಳಿ ಕಾಫಿ ಕೊಯ್ಲು ಮಾಡುವಾಗ ಹೆಜ್ಜೆನು ದಾಳಿಯಿಂದ ಈ ದುರಂತ ಸಂಭವಿಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೋದ್ದಮಾನಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಹೆಜ್ಜೆನು ದಾಳಿಯ ವೇಳೆ ಲೋಹಿತ್ ಶರ್ಟ್ ಬಿಚ್ಚಿಕೊಂಡು ಓಡಿದ. ಏಕಾಏಕಿ ನೂರಾರು ಹೆಜ್ಜೆನುಗಳು ದಾಳಿ ಮಾಡಿ ಗಾಯಗೊಳಿಸಿವೆ ಹೀಗಾಗಿ ಚಿಕಿತ್ಸೆ ಫಲಿಸದೆ ಲೋಹಿತ್ ಸಾವನಪ್ಪಿದ್ದಾನೆ

Read More

ಕಲಬುರ್ಗಿ : ಕಳೆದ ಹಲೋ ತಿಂಗಳ ಹಿಂದೆ ಬಳ್ಳಾರಿ ಬೆಳಗಾವಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಲ್ಬುರ್ಗಿಯ ಪ್ರತಿಷ್ಠಿತ ESI ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿಯೋರ್ವಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಲಬುರ್ಗಿya ESI ಆಸ್ಪತ್ರೆಯಲ್ಲಿ ಬಾಣಂತಿ ಶಿಲ್ಪ (32) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೋನಸನಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.ಸೋಮವಾರ ಹೆರಿಗೆಗೆ ಎಂದು ಇಎಸ್ಐ ಆಸ್ಪತ್ರೆಗೆ ಶಿಲ್ಪ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ ನಂತರ ಶಿಲ್ಪಗೆ ನಿರಂತರವಾಗಿ ರಕ್ತ ನೀಡಲಾಗಿತ್ತು. ಆದರೂ ಸಹ ಚಿಕಿತ್ಸೆ ಫಲಿಸದೇ ಇದೀಗ ಲೋ ಬಿಪಿ ಯಿಂದಾಗಿ ಶಿಲ್ಪಾ ಸಾವನ್ನಪ್ಪಿದ್ದರೆ.

Read More

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಆಳಂದ್ ಪಟ್ಟಣದಲ್ಲಿರುವ ಲಾಡ್ಲೆ ಮಾಶಾಕ್ ದರ್ಗಾದಲ್ಲಿರುವಂತಹ ರಾಘವ ಚೈತನ್ಯ ಶಿವಲಿಂಗ ಪೂಜೆಗಾಗಿ ನಿನ್ನೆ ಹಿಂದೂ ಸಂಘಟನೆಗಳು ಕಲಬುರ್ಗಿ ಹೈಕೋರ್ಟಿಗೆ ಅನುಮತಿ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದವು.ನಿನ್ನೆ ಹೈಕೋರ್ಟ್ ಪೀಠ ಹಲವು ಷರತ್ತುಗಳನ್ನು ವಿಧಿಸಿ ಶಿವಲಿಂಗ ಪೂಜೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಆಳಂದ್ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ 144 ಜಾರಿ ಮಾಡಲಾಗಿದೆ. ಹೌದು ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ಶ್ರೀರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹಿಂದೂಗಳಿಗೆ ಹೈಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಇಂದಿನ ಮಹಾ ಶಿವರಾತ್ರಿಯ ದಿನದಂದು ಶಿವಲಿಂಕಕ್ಕೆ ವಿಶೇಷ ಪೂಜೆ ಸಲ್ಲಿಸಲು ಶಿವಭಕ್ತರು ಮುಂದಾಗಿದ್ದಾರೆ. ಹೀಗಾಗಿ ಶಿವಲಿಂಗೆಕ್ಕೆ ವಿಶೇಷ ಪೂಜೆ ಸಲ್ಲಿಸಲು ಹಿಂದೂಪರ ಸಂಘಟನೆಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸದ್ಯ ಕಲಬುರಗಿಯ ಆಳಂದ ಪಟ್ಟಣದಲ್ಲಿ 144 ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಇಂದು ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯವರೆಗೆ ಶಿವಲಿಂಗ ಪೂಜೆಗೆ ಅವಕಾಶ ಇದೆ.

Read More

ಚಿಕ್ಕಬಳ್ಳಾಪುರ : ಇಂದು ಎಲ್ಲೆಡೆ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಮಹಾಶಿವರಾತ್ರಿಯ ಅಂಗವಾಗಿ ಚಿಕ್ಕಬಳ್ಳಾಪುರದಲ್ಲಿರುವ ಆದಿಯೋಗಿ ಶಿವನ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿವನ ದರ್ಶನ ಪಡೆಯುತ್ತಿದ್ದಾರೆ ಆದರೆ ಇದೆ ಆದಿಯೋಗಿ ದರ್ಶನ ಪಡೆದು ಹಿಂದಿರುಗುವಾಗ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಹೌದು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬ್ರಿಡ್ಜ್ ಬಳಿ ದುರ್ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೇಪಾಳ ಮೂಲದ ಸುನಿಲ್ ಬಿಸ್ತೂರಿ ಹಾಗೂ ಕುಜಲ್ ಭಂಡಾರಿ ಮೃತ ಯುವಕರು ಎಂದು ತಿಳಿದು ಬಂದಿದೆ. ಮೃತ ಯುವಕರು ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಈ ಇಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬೈಕ್ ನಲ್ಲಿದ್ದ ಸುನಿಲ್ ಬಿಸ್ತೋರಿ ಹಾಗೂ ಕುಜಲ್ ಭಂಡಾರಿ ದುರ್ಮರಣ ಹೊಂದಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ…

Read More

ಬೆಂಗಳೂರು : ಅತಿ ವೇಗವಾಗಿ ತೆರಳುವಾಗ ಆಯತಪ್ಪಿ ಬಿದ್ದು ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಜೆಪಿ ಪಾರ್ಕ್ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ತಡರಾತ್ರಿ 1.30 ರ ಸುಮಾರಿಗೆ ಬೈಕ್ ಸವಾರ ಅರುಣ್ (30) ಸಾವನಪ್ಪಿದ ಬೈಕ್ ಸವಾರ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಕೊನೆಯುಸಿರೆಳಿದಿದ್ದಾನೆ.

Read More

ಬೆಂಗಳೂರು : ಸಮಾಜಕ್ಕೆ ರಕ್ಷಣೆ ಒದಗಿಸುವವರು ಸಮಾಜಕ್ಕೆ ಮಾದರಿಯಾಗಬೇಕಿದ್ದವರಿಂದಲೇ ಇದೀಗ ಲಂಚಕ್ಕೆ ಕೈ ಒಡ್ಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರಿಂದ ಗೂಗಲ್ ಪೇ ಮೂಲಕ ಲಂಚ ಸ್ವೀಕರೀಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಸಂಚಾರಿ ಪೊಲೀಸರ ಭ್ರಷ್ಟಾಚಾರ ಇದೀಗ ಬಯಲಾಗಿದೆ. ಟ್ರಾಫಿಕ್ ಫೈನ್ ನೆಪದಲ್ಲಿ ಗೂಗಲ್ ಪೇ ಮೂಲಕ ಲಂಚ ಸ್ವೀಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ದಂಡ ವಿಧಿಸುವ ಬದಲು ತಮ್ಮ ಸ್ವಂತ ಖಾತೆಗೆ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಫೆಬ್ರುವರಿ 21ರಂದು ವರ್ತೂರು ಕೆರೆಯ ಬಳಿ ಸವಾರ ಒನ್ ವೇ ನಲ್ಲಿ ಬಂದಿದ್ದ. ಸಂಚಾರಿ ನಿಯಮ ಉಲ್ಲಂಘಿಸಿದ್ದ ರಾಜಮಲ್ಲನನ್ನು ಪಿಸಿ ತಡೆದಿದ್ದ. ಕರ್ತವದಲ್ಲಿದ್ದ ಟ್ರಾಫಿಕ್ ಕಾನ್ಸ್ಟೇಬಲ್ ಮಂಜುನಾಥ ಸವಾರನನ್ನು ಅಡ್ಡಗಟ್ಟಿದ್ದ. 1,500 ದಂಡ ಪಾವತಿಸಲು ಸಿದ್ಧವಾಗಿದ್ದ ಸವಾರ ರಾಚಮಲ್ಲ ಆದರೆ ಸವಾರನಿಗೆ ದಂಡದ ರಶೀದಿ ನೀಡಲು ಮಂಜುನಾಥ್ ಸಿದ್ದನಿರಲಿಲ್ಲ. ಸವಾರನಿಗೆ ಗೂಗಲ್ ಪೇ ಮೂಲಕ 500 ರೂಪಾಯಿ ಪಡೆದು ಮಂಜುನಾಥ್ ಬಿಟ್ಟು ಕಳುಹಿಸಿದ್ದಾರೆ.…

Read More

ಗಂಗಾವತಿ : ಇತ್ತೀಚಿಗೆ ತಾನೇ ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡಿ ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಮಹಾರಾಷ್ಟ್ರದ ಪುಂಡರು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಸ್ ಟಿಕೆಟ್ ದರ ಹೆಚ್ಚಾಗಿದ್ದಕ್ಕೆ ಪ್ರಯಾಣಿಕಂಬ್ಬ ಕೂಡಿದ ಮತ್ತಿನಲಿ ಕಂಡಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹೌದು ಪ್ರಯಾಣಿಕನಿಂದ ಸರ್ಕಾರಿ ಕಂಡಕ್ಟರ್ ಮೇಲೆ ಹಲ್ಲೆ ನಡೆದಿದೆ. ಬಸ್ ಕಂಡಕ್ಟರ್ ಹನುಮಂತ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದಾಗಿ ಕಂಡಕ್ಟರ್ ಬಲಭಾಗದ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಪ್ರಯಾಣಿಕ ಶ್ರೀಧರ್ ಎಂಬಾತ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಬಸ್ ಟಿಕೆಟ್ ದರ ಯಾರನ್ನು ಕೇಳಿ ಜಾಸ್ತಿ ಮಾಡಿದ್ದೀರಾ ಎಂದು ಕೂಗಾಡಿ ಹಲ್ಲೆ ಮಾಡಿದ್ದಾನೆ. ಕೂಡಲೇ ಗಂಗಾವತಿ ಪೊಲೀಸರು ಆರೋಪಿ ಶ್ರೀಧರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಬೆಂಗಳೂರು : ಕುಡಿಯೋಕೆ ಹಣ ಕೊಡದಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಬಿಳಿಶಿವಾಲೆ ಸರ್ಕಲ್ ಬಳಿ ಈ ಒಂದು ಘಟನೆ ನಡೆದಿದೆ. ನಾಗಲಕ್ಷ್ಮಿ ಎನ್ನುವ ಮಹಿಳೆಯ ಮೇಲೆ ಆನಂದ್ ಎನ್ನುವ ವ್ಯಕ್ತಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಎಡಭಾಗದ ಕಿವಿಯಿಂದ ಗದ್ದಲವರೆಗೆ ಚಾಕುವಿನಿಂದ ಪಾಪಿ ಆನಂದ್ ಇರಿದಿದ್ದಾನೆ. ಫೆಬ್ರವರಿ 24ರ ಸಂಜೆ ಈ ಒಂದು ಘಟನೆ ನಡೆದಿದ್ದು, ಕುಡಿತದ ಚಟಕ್ಕೆ ಬಿದ್ದಿದ್ದ ಆನಂದ್ ಕಂಡ ಕಂಡವರ ಬಳಿ ಹಣ ಕೇಳುತ್ತಿದ್ದ ಎನ್ನಲಾಗಿದೆ. ಹಾಗಾಗಿ ನಾಗಲಕ್ಷ್ಮಿ ಬಳಿಯು ಆನಂದ್ ಹಣ ಕೇಳಿದ್ದಾನೆ ಎಂದು ತಿಳಿದುಬಂದಿದೆ.ಹಣ ಕೊಡಲು ನಿರಾಕರಿಸಿದ್ದಕ್ಕೆ ನಾಗಲಕ್ಷ್ಮಿಗೆ ಚಾಕುವಿನಿಂದ ಇರಿದಿದ್ದಾನೆ ಇದೀಗ ಕೊತ್ತನೂರು ಪೊಲೀಸರು ಆನಂದ್ ನನ್ನು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಪತಿಯೊಬ್ಬ ತನ್ನ ಪತ್ನಿಯ ಶೀಲವನ್ನು ಶಂಕಿಸಿದ್ದು, ಅಲ್ಲದೆ ಕುಡಿದ ನಶೆಯಲ್ಲಿ ಆಕೆಯ ತಲೆಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾನೆ. ಅಷ್ಟಕ್ಕೆ ಸುಮ್ಮನಿರದೇ ಪತ್ನಿಯ ಅಂತ್ಯಕ್ರಿಯೆಗೂ ಯತ್ನಿಸಿದ್ದಾನೆ. ಈ ವೇಳೆ ಸ್ಮಶಾನಕ್ಕೆ ಎಂಟ್ರಿ ಕೊಟ್ಟ ಪೊಲೀಸರು ಪತಿಯನ್ನು ಬಂಧಿಸಿ ಎಳೆದೊಯ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ನಡೆದಿದೆ. ಹೌದು ಸೀನಿಮಿಯ ರೀತಿಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು, ಪತ್ನಿ ಅಂತ್ಯಕ್ರಿಯ ವೇಳೆ ಆರೋಪಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದ ಪತಿ ಲಕ್ಷ್ಮಯ್ಯ ನಿಂದ ಪತ್ನಿ ರಾಧಮ್ಮ (45) ಳನ್ನು ಕೊಲೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಪತ್ನಿಯ ಜೊತೆಗೆ ಗಲಾಟೆ ಮಾಡಿದ್ದ ಲಕ್ಷ್ಮಯ್ಯ ಗಲಾಟೆಯ ವೇಳೆ ಪತ್ನಿಯ ತಲೆಯನ್ನು ಗೋಡೆಗೆ ಗುಡ್ಡಿ ಕೊಲೆ ಮಾಡಿದ್ದಾನೆ. ಬಳಿಕ ಕುಟುಂಬಸ್ಥರು ಸೇರಿ ಕೊಲೆ ಕೇಸ್ ಅನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಹತ್ಯೆ ಮಾಡಿ ದೂರು ದಾಖಲಿಸದೆ ಅಂತ್ಯಕ್ರಿಯೆಗೆ ಯತ್ನಿಸಿದ್ದಾರೆ. ಕೊನೆ…

Read More