Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಟೆಲಿಫೋನ್ ಕದ್ದಾಲಿಕೆ ಆರೋಪ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾವಾರು ತನಿಖೆ ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ)ಯ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಲೋಕ್ ಕುಮಾರ್ ವಿರುದ್ಧ ಟೆಲಿಫೋನ್ ಕದ್ದಾಲಿಕೆ ಆರೋಪವಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಸಿಬಿಐ, ಕ್ರಿಮಿನಲ್ ಆರೋಪವಿಲ್ಲ ಎಂದು ತಿಳಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿರುವುದಾಗಿ ವಿಶೇಷ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿತ್ತು. ಅಲ್ಲದೆ, ಪ್ರಕರಣ ಸಂಬಂಧ ಇಲಾಖಾವಾರು ತನಿಖೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಎಟಿ, ಇಲಾಖಾವಾರು ತನಿಖೆ ರದ್ದುಪಡಿಸಿ ಆದೇಶಿಸಿದೆ. ಆ ಆದೇಶವನ್ನು ಪ್ರಶ್ನಿಸಿ ಸರ್ಕಾರವು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ವಾದ ಆಲಿಸಿದ ನ್ಯಾಯಪೀಠ, ತಡೆ ನೀಡಲು ನಿರಾಕರಿಸಿ, ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು. ಅಲೋಕ್ ಕುಮಾರ್ ವಿರುದ್ಧದ…
ದಾವಣಗೆರೆ.ನ.10: ಅಡಕೆ ಬಗ್ಗೆ ಮತ್ತಷ್ಟು ಪರಿಣಾಮಕಾರಿಯಾದ ಸಂಶೋಧನೆಗಳ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದ್ದು, ಸಂಶೋಧನೆಗೆ ಹೆಚ್ಚು ಅನುದಾನ ನೀಡುವಂತೆ ಕೂಡ ಕೇಂದ್ರ ಮನವಿ ಸಲ್ಲಿಸಲಾಗಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಚನ್ನಗಿರಿ ತಾಲ್ಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಾಗಿನಕಟ್ಟೆ ಗ್ರಾಮದಲ್ಲಿ ಸೋಮವಾರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ದಾವಣಗೆರೆ ಜಿಲ್ಲೆ ದೇಶದಲ್ಲಿಯೇ ಅತಿ ಹೆಚ್ಚು ಅಡಿಕೆ ಬೆಳೆಯುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ ಅಡಿಕೆಯ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಸಬೇಕೆಂದು ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌವಾಣ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಅಡಕೆ ಕ್ಯಾನ್ಸರ್ಕಾರಕ ಎಂದು ಶ್ರೀಲಂಕಾದಲ್ಲಿ ನಡೆದ ಸಮಾವೇಶದಲ್ಲಿ ವಿಶ್ವಸಂಸ್ಥೆ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಎಲ್ಲ ಕಡೆ ಚರ್ಚೆ ನಡೆಯುತ್ತಿದೆ. ಕೇವಲ ಅಡಿಕೆ ಯಿಂದ ಕ್ಯಾನ್ಸರ್ ಬರುವುದಿಲ್ಲ. ಇದರ ಜೊತೆಗೆ ತಂಬಾಕು ಸೇರಿಸಿ ಸೇವಿಸಿದರೆ…
ಬೆಂಗಳೂರು : ಚಿನ್ನ ಮಾರಾಟ ಮಾಡಿ ಹಣ ಕೊಡಿಸುವುದಾಗಿ ಹೇಳಿ ವಂಚನೆ ಎಸೆಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಜಿರನ್ ಸಾಕಾರಿಯ ಮತ್ತು ರಾಜೇಂದ್ರ ಸಾಕಾರಿಯ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1.60ಕೋಟಿ ರೂಪಾಯಿ ಮೌಲ್ಯದ 1300 ಗ್ರಾಂ ಚಿನ್ನದ ಗಟ್ಟಿ ವರ್ಷಕ್ಕೆ ಪಡೆದುಕೊಂಡಿದ್ದು ಬಿ ಹರ್ಷಿತ್ ಎಂಬುವವರಿಗೆ ಆರೋಪಿಗಳು ವಂಚನೆ ಎಸಗಿದ್ದರು.ಜಿರನ್ ರಾಜೇಂದ್ರ ಮತ್ತು ಹರ್ಷಿತ್ ಒಟ್ಟಿಗೆ ವ್ಯವಹಾರ ಮಾಡಿಕೊಂಡಿದ್ದರು ಹರ್ಷಿತ್ ಬಳಿಯಿಂದ ಆರೋಪಿಗಳು ಚಿನ್ನದ ಗಟ್ಟಿ ಪಡೆದುಕೊಂಡಿದ್ದರು. ಚಿನ್ನದ ಗಟ್ಟಿ ಮಾರಾಟ ಮಾಡಿ ಹಣ ಕೊಡುವುದಾಗಿ ಹರ್ಷಿತ್ ನನ್ನು ನಂಬಿಸಿದ್ದರು. ಕಳೆದ 3 ತಿಂಗಳ ಹಿಂದೆ ಜೀರನ್ ಮತ್ತು ರಾಜೇಂದ್ರ ಹರ್ಷಿತ್ನಿಂದ ಚಿನ್ನದ ಗಟ್ಟಿ ಪಡೆದಿದ್ದರು. 3 ತಿಂಗಳಿಂದ ಹಣ ಚಿನ್ನ ಕೇಳಿದರು ನೀಡದೆ ವಂಚನೆ ಎಸಗಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಗೆ ಈ ಕುರಿತು ಹರ್ಷಿತ್ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ಪೊಲೀಸರು ಜೀರನ್ ಮತ್ತು ರಾಜೇಂದ್ರನ ಅರೆಸ್ಟ್ ಮಾಡಿದ್ದಾರೆ…
ನವದೆಹಲಿ : ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸುಭಾಷ್ ಮಾರ್ಗ್ ಟ್ರಾಫಿಕ್ ಸಿಗ್ನಲ್ ನಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಹಲವು ಮಂದಿ ಸಾವನ್ನಪ್ಪಿದ್ದಾರೆ. ಈ ಒಂದು ಘಟನೆ ಹಿನ್ನೆಲೆಯಲ್ಲಿ ಇದೀಗ ಇಂದಿನಿಂದ ಮೂರು ದಿನಗಳ ಕಾಲ ಅಂದರೆ ನವೆಂಬರ್ 13ರವರೆಗೆ ಕೆಂಪು ಕೋಟೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ವಿಧಿವಿಜ್ಞಾನ ಮತ್ತು ಭಯೋತ್ಪಾದನಾ ವಿರೋಧಿ ತಜ್ಞರು ಕುಳಿಗಳು, ಚೂರುಚೂರುಗಳು ಅಥವಾ ಉಂಡೆಗಳ ಅನುಪಸ್ಥಿತಿಯಿಂದ ಗೊಂದಲಕ್ಕೊಳಗಾಗಿದ್ದರು – ಸಾಮಾನ್ಯವಾಗಿ ಸಾಂಪ್ರದಾಯಿಕ ಸ್ಫೋಟಗಳಲ್ಲಿ ನಿರೀಕ್ಷಿಸಲಾಗುತ್ತದೆ. ಪ್ರಾಥಮಿಕ ತನಿಖೆಯಲ್ಲಿ ಗುರ್ಗಾಂವ್ನ ಸಲ್ಮಾನ್ ಎಂಬ ವ್ಯಕ್ತಿ ಸ್ಫೋಟದಲ್ಲಿ ಭಾಗಿಯಾಗಿರುವ ಎಚ್ಆರ್ 26 7674 ಐ20 ಅನ್ನು ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮಾರ್ಚ್ ನಲ್ಲಿ ದೇವೇಂದ್ರ ಎಂಬ ವ್ಯಕ್ತಿಗೆ ಕಾರನ್ನು ಮಾರಾಟ ಮಾಡಿದ್ದೇನೆ ಎಂದು ಸಲ್ಮಾನ್ ಪೊಲೀಸರಿಗೆ ತಿಳಿಸಿದ್ದಾನೆ. ಆದಾಗ್ಯೂ, ಹೆಚ್ಚಿನ ವಿಚಾರಣೆಯಲ್ಲಿ ಪುಲ್ವಾಮಾ ನಿವಾಸಿಗೆ ಸಂಬಂಧಿಸಿದ ಐಡಿ ಸೇರಿದಂತೆ ಕಾಲ್ಪನಿಕ ಗುರುತಿನ ಚೀಟಿಗಳನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ. ಎಸ್ ವಿಬಿ-ಐಇಡಿ (ಆತ್ಮಹತ್ಯಾ ವಾಹನ-ಬೋರ್ನ್ ಸುಧಾರಿತ…
ಮೈಸೂರು : ಅನಗತ್ಯವಾಗಿ ಜನರನ್ನು ಸರ್ಕಾರಿ ಕಚೇರಿಗೆ ಅಲಸುವುದು ಅಪರಾಧ ಅಧಿಕಾರಿಗಳು ಸಮಸ್ಯೆ ಬಗೆಹರಿಸಿದರೆ ಜನ ನನ್ನ ಬಳಿ ಬರುವುದು ಕಡಿಮೆ ಆಗುತ್ತೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಾಲೂಕು ಕೇಂದ್ರಗಳಲ್ಲಿ ತಾಲೂಕು ಅಧಿಕಾರಿಗಳು ವಾಸ ಮಾಡಬೇಕು ಮೈಸೂರಿನ ಜನ ಸಮಸ್ಯೆ ಬಗ್ಗೆ ಹರಿಸಿಕೊಳ್ಳಲು ಬೆಂಗಳೂರಿಗೆ ಬರುತ್ತಾರೆ. ಜನರು ಹಗಲು ರಾತ್ರಿ ನಿನಗಾಗಿ ಕಾಯುತ್ತಾರೆ ಕಂದಾಯ ಇಲಾಖೆ ಸಂಬಂಧದ ಪರಿಹಾರಕ್ಕಾಗಿ ನನ್ನ ಬಳಿ ಬರುತ್ತಿದ್ದಾರೆ. ನಾನು ಮೈಸೂರು ಜಿಲ್ಲಾಡಳಿತಕ್ಕೆ ಸಭೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇನೆ ಜನರ ಸಮಸ್ಯೆ ಬಗ್ಗೆ ಹರಿಸಲು ಮುತುವರ್ಜಿ ವಹಿಸಿ ಎಂದು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದರು.
ದಾವಣಗೆರೆ: ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದ ಜೆಡಿಎಸ್ ಮುಖಂಡ, ಸಾಮಾಜಿಕ ಹೋರಾಟಗಾರನ ಮೇಲೆ ಸೋಮವಾರ ಮೂವರು ಮುಸುಕುದಾರಿಗಳು ರಾತ್ರೋರಾತ್ರಿ ತಲ್ವಾರ್, ಪಂಚ್, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ದಾವಣಗೆರೆಯ ಬಾಷಾ ನಗರದಲ್ಲಿ ನಡೆದಿದೆ. ನಗರದ ಬಾಷಾ ನಗರದ ನಿವಾಸಿ ಟಿ.ಅಸ್ಟರ್ಮಾರಣಾಂತಿಕ ದಾಳಿಗೆ ಒಳಗಾದವರು. ಸೋಮವಾರ ರಾತ್ರಿ ಟಿಪ್ಪು ಜಯಂತಿಯಲ್ಲಿ ಅಸ್ಟರ್ ಭಾಗವಹಿಸಿದ್ದ ವೇಳೆ ಮೂವರು ದುಷ್ಕರ್ಮಿಗಳು ಹೊಂಚು ಹಾಕಿ, ಸಂಚು ಮಾಡಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ರಾಜಿ ಪಂಚಾಯಿತಿ ವಿಚಾರವಾಗಿ ಅಸ್ಥರ್ಮೇಲೆ ಮೂವರು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಇದೇ ವಿಚಾರವಾಗಿ ಅಸ್ಟರ್ಹಾಗೂ ಖಾಲಿದ್ ಪೈಲ್ವಾನ್ ಮಧ್ಯೆ ಗಲಾಟೆಯೂ ಆಗಿತ್ತು. ಸಾಮಾಜಿಕ ಜಾಲತಾಣದಲ್ಲೂ ಅಸ್ಥರ್ಗೆ ಖಾಲಿದ್ ಪೈಲ್ವಾನ್ ಬೆದರಿಕೆ ಹಾಕಿದ್ದು, ಈ ಬಗ್ಗೆ ದೂರು ನೀಡಿದ್ದರೂ ಪೊಲೀಸರು ಯಾವುದೇ ಕೈಗೊಂಡಿಲ್ಲ ಎಂದು ಅಸ್ಕರ್ ಕುಟುಂಬಸ್ಥರು ದೂರಿದ್ದಾರೆ.
ತಿರುಪತಿ : ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ತಿರುಪತಿ ದೇಗುಲಕ್ಕೆ ಕಲಬೆರಕೆ ತುಪ್ಪ ಪೂರೈಕೆ ಪ್ರಕರಣದ ತನಿಖೆ ವೇಳೆ ಸ್ಪೋಟಕ ಅಂಶಗಳು ಬೆಳಕಿಗೆ ಬಂದಿವೆ. ಹಾಲನ್ನೇ ಖರೀದಿಸದ ಉತ್ತರಾಖಂಡ ಮೂಲದ ಕಂಪನಿಯೊಂದು ವರ್ಷದಿಂದ ತಿರುಪತಿಗೆ 250 ಕೋಟಿ ರು. ಮೌಲ್ಯದ 68 ಲಕ್ಷ ಕೆ.ಜಿ.ಯಷ್ಟು ನಕಲಿ ತುಪ್ಪ ಪೂರೈಕೆ ಮಾಡಿತ್ತು ಎಂದು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಹೇಳಿದೆ. ಹೌದು ನೆಲ್ಲೂರು ಕೋರ್ಟ್ಗೆ ಸಿಬಿಐ ಸಲ್ಲಿಸಿದ ವರದಿಯಲ್ಲಿ ಈ ಅಂಶಗಳಿವೆ. ಕಂಪನಿಗೆ ನಕಲಿ ತುಪ್ಪ ತಯಾರಿಸಲು ಬೇಕಾದ ರಾಸಾಯನಿಕಗಳನ್ನು ಪೂರೈಕೆ ಮಾಡುತ್ತಿದ್ದ ಬಂಧಿತ ಅಜಯ್ ಕುಮಾರ್ ಅಕ್ರಮದ ಕುರಿತು ಬಾಯಿಬಿಟ್ಟಿದ್ದಾನೆ. ಪಾಮಿಲ್ ಜೈನ್ ಮತ್ತು ವಿಪುಲ್ ಜೈನ್ ಎಂಬಿಬ್ಬರು ಉತ್ತರಾ ಖಂಡದ ಭಗವಾನ್ಪುರದಲ್ಲಿ ಭೋಲಾ ಬಾಬಾ ಆರ್ಗ್ ಯಾನಿಕ್ ಡೈರಿ ಆರಂಭಿಸಿದ್ದ ರು. ಇದು ತಿರುಪತಿ ಲಡ್ಡು ತಯಾರಿಕೆಗೆ ತುಪ್ಪ ಪೂರೈಕೆ ಗುತ್ತಿಗೆ ಪಡೆದುಕೊಂಡಿತ್ತು. ವಿಚಿತ್ರವೆಂದರೆ ಈ ಸಂಸ್ಥೆ ರೈತರಿಂದ ಒಂದೂ ಲೀಟರ್ ಹಾಲು ಖರೀದಿಸುತ್ತಿರಲಿಲ್ಲ. ಆದರೆ ನಕಲಿ…
ಬೆಂಗಳೂರು : ಪರ್ಪನ ಅಗ್ರಹಾರ ಜಾಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ನಾನು ನೀವು ಕೊಡುವ ಅಂಕಿ-ಅಂಶಗಳ ಡೇಟಾ ನೋಡಲು ಬಂದಿಲ್ಲ. ರಾಷ್ಟ್ರಮಟ್ಟದಲ್ಲಿ ಇಲಾಖೆಯ ಮರ್ಯಾದೆ ಹರಾಜು ಹಾಕಿದ್ದೀರಿ ಎಂದು ಕಾರಾಗೃಹ ಅಧಿಕಾರಿಗಳ ಮೇಲೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೆಂಡಾ ಮಂಡಲವಾಗಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಸೌಲಭ್ಯ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಜತೆ ನಿನ್ನೆ ಸಚಿವರು ಸಭೆ ನಡೆಸಿದರು. ಈ ಸಭೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅಧಿಕಾರಿಗಳನ್ನು ಸಚಿವರು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ನಾನು ನೀವು ಕೊಡುವ ಅಂಕಿ-ಅಂಶಗಳ ಡೇಟಾ ನೋಡಲು ಬಂದಿಲ್ಲ. ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಹಾಳಾಗಿದೆ. ಈಗ ಬಂದು ಹಳೇ ವಿಡಿಯೋ ಎಂದು ಸಬೂಬು ಹೇಳುತ್ತಿದ್ದೀರಿ. 2023ರಲ್ಲಾಯ್ತು, 2024ರಲ್ಲಾಯ್ತು ಅಂತ ಹೇಳ್ತಿರಿ. ಆಗ ಯಾಕಾಯ್ತು ಅಂತ ಉತ್ತರ ಕೊಡಿ ಎಂದು ಅಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿದರು. ಜೈಲುಗಳಲ್ಲಿ ಶೋಧ ಕಾರ್ಯ ನಡೆಸಿದಾಗ ಏನೂ ಸಿಕ್ಕಿಲ್ಲ ಅಂತ ಹೇಳ್ತಿರಿ. ಈಗ ಅದೆಲ್ಲ ಹೇಗೆ…
ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಇಂದು ಮತ್ತೆ ಮರು ಎಣಿಕೆ ಆರಂಭವಾಗಿದ್ದು, ನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಇರಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಏಜೆಂಟ್ಗಳನ್ನು ತಪಾಸಣೆ ಮಾಡಿ ಒಳಗೆ ಬಿಡಲಾಗಿದೆ.ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಮಾಧ್ಯಮದವರಿಗೂ ಚುನಾವಣಾಧಿಕಾರಿಗಳು ನಿಷೇಧ ಹೇರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 248 ಮತಗಳ ಅಂತರದಿಂದ ಕಾಂಗ್ರೆಸ್ನ ಕೆ.ವೈ. ನಂಜೇಗೌಡ ಜಯಗಳಿಸಿದ್ದರು. ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಕೆ ನಡೆಯುತ್ತಿದೆ.
ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಗುರುವಾರದವರೆಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲದೇ, ಸೈಲ್ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ವೃತ್ತಿಪರ ವೈದ್ಯರ ಹೆಸರನ್ನು ಜಾರಿ ನಿರ್ದೇಶನಾಲಯ ಸೂಚಿಸಬೇಕು ಎಂದು ಪೀಠ ಇದೇ ವೇಳೆ ತಿಳಿಸಿದೆ. ಸತೀಶ್ ಸೈಲ್ಗೆ ಮಂಜೂರು ಮಾಡಲಾಗಿರುವ ವೈದ್ಯಕೀಯ ಮಧ್ಯಂತರ ಜಾಮೀನನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ, ಸೈಲ್ ಅವರ ಆರೋಗ್ಯ ಪರಿಸ್ಥತಿಗೆ ಸಂಬಂಧಿಸಿದ ದಾಖಲೆಯನ್ನು ಪರಿಶೀಲಿಸಿ ಅದನ್ನು ಖಾತರಿಪಡಿಸಲು ಯಾವ ವೈದ್ಯರನ್ನು ನೇಮಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲಹೆ ನೀಡಬೇಕು ಎಂದು ಇದೇ ವೇಳೆ ಪೀಠ ಹೇಳಿದೆ. ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ವೈದ್ಯಕೀಯ ಜಾಮೀನು…














