Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಮರ್ಯಾದ ಹತ್ಯೆ ಪ್ರಕರಣ ನಡೆದಿದ್ದು,ಪಾಲಕರ ವಿರೋಧದ ನಡುವೆಯೂ ಅನ್ಯ ಜಾತಿ ಯುವಕನೊಂದಿಗೆ ಮದುವೆಯಾಗಿ ಗರ್ಭಿಣಿಯಾಗಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಮರ್ಯಾದಗೇಡು ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಭಾನುವಾರ ನಡೆದಿದೆ. ಮಾನ್ಯಾ ಪಾಟೀಲ (19) ಮೃತ ಗರ್ಭಿಣಿ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಯುವಕನ ತಂದೆ, ತಾಯಿ ಸೇರಿದಂತೆ ನಾಲೈದು ಜನ ಗಾಯಗೊಂಡು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರೆಲ್ಲರೂ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹತ್ಯೆಗೆ ಸಂಬಂಧಪಟ್ಟಂತೆ ಯುವತಿ ತಂದೆ ಪ್ರಕಾಶಗೌಡ ಪಾಟೀಲ, ಕುಟುಂಬದ ವೀರನಗೌಡ ಮತ್ತು ಅರುಣಗೌಡರನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏಳೆಂಟು ಮಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ. ಘಟನೆ ವಿವರ ಮಾನ್ಯಾ ಹಾಗೂ ಯುವಕ ವಿವೇಕಾನಂದ ದೊಡ್ಡಮನಿ ಇಬ್ಬರು ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿಯ ಕುಟುಂಬಸ್ಥರ ತೀವ್ರ ವಿರೋಧವಿತ್ತು. ಈ ಕುರಿತು ಪೊಲೀಸ್ ಠಾಣೆಯಲ್ಲಿ ರಾಜಿ…
ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಭಾರತ ನೌಕಾ ಪಡೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಲ್ಲಿನ ಕೊಚ್ಚಿನ್ ಶಿಪ್ಯಾರ್ಡ್ನ ಇಬ್ಬರು ನೌಕರರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಜ ರಾತ್ನ ಆನಂದ್ ತಾಲೂಕು, ಕೈಲಾಸ್ ನಗರಿ ನಿವಾಸಿ ಹೀರೇಂದ್ರ ಕುಮಾರ್ ಖಡಯಾತ್ (34) ಎಂದು ಗುರುತಿಸಲಾಗಿದೆ. ಈತ ಕೂಡ ಕೊಚ್ಚಿನ್ ಶಿಪ್ ಯಾರ್ಡ್ನಲ್ಲಿ ಉದ್ಯೋಗಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದ ಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್ಮತ್ತಿತರ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ವಾಟ್ಸ್ಆ್ಯಪ್ ಮೂಲಕ ಪಾಕಿಸ್ತಾನಕ್ಕೆ ರವಾನಿಸಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದರು. ವಿಚಾರಣೆ ವೇಳೆ ಈ ಆರೋಪಿಗಳಿಗೆ ನೀಡಿದ ಮಾಹಿತಿಯಂತೆ ಅವರಿಗೆ ಸಿಮ್ಗಳನ್ನು ಒದಗಿಸುತಿದ್ದ ಹೀರೇಂದ್ರನನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.…
ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವ ರಾಜು ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾ ದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ 2-3 ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ. ಎಲ್ಲ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್ ಔಟ್ ನೋಟಿಸ್ ನೀಡಲು ಮುಂದಾಗಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.
ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ಕಬ್ಬು ಕಟಾವು ಮಾಡುಗ ವೇಳೆ ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಹರಿದು ರೈತ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿಯಲ್ಲಿ ನಡೆದಿದೆ. ಚಂದ್ರಯ್ಯ ಬಸಲಿಂಗಯ್ಯ ಮಠಪತಿ (65) ಮೃತ ದುರ್ದೈವಿ. ಜಮೀನಿನಲ್ಲಿ ಟ್ರ್ಯಾಕ್ಟರ್ ಕೆಲಸ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರೈತನ ಮೇಲೆ ಹರಿದಿದ್ದು, ಚಕ್ರಕ್ಕೆ ಸಿಲುಕಿದ ರೈತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಕೊಟ್ಟಿದ್ದಾರೆ. ಇಂದಿನಿಂದ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಇದೇ ವೇಳೆ ಬೆಳಗಾವಿ ಜಿಲ್ಲೆ ವಿಭಜನೆ ಬೆಳವಣಿಗೆಯ ಕುರಿತು ಮಾತನಾಡಿದ ಅವರು, “ಜಿಲ್ಲೆ ವಿಭಜನೆ ಮಾಡಬೇಕು. ಹೊಸ ಜಿಲ್ಲೆ ಘೋಷಿಸೋಣ ಎನ್ನುವ ಮನಸ್ಸಿನಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಗೆ ಬಂದಿದ್ದರು. ಎಲ್ಲರನ್ನೂ ಕರೆದು ಮಾತನಾಡೋಣ ಎಂದಿದ್ದರು. ಎಲ್ಲರೂ ನಿಯೋಗ ತೆಗೆದುಕೊಂಡು ಬಂದಿದ್ದರಿಂದ ಜಿಲ್ಲೆ ವಿಭಜನೆ ಬಗ್ಗೆ ಇನ್ನೂ ಚಿಂತನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ನಮ್ಮ ಜಿಲ್ಲೆ 15 ತಾಲೂಕು, 18 ವಿಧಾನಸಭಾ ಕ್ಷೇತ್ರ ಹೊಂದಿದೆ. ಬರುವ ದಿನಗಳಲ್ಲಿ ಹೊಸದಾಗಿ 3 ತಾಲೂಕು ಆಗುವ ಎಲ್ಲ ಲಕ್ಷಣಗಳಿವೆ. 2ರಿಂದ 3 ಜಿಲ್ಲೆ ಮಾಡಬೇಕೆನ್ನುವ ಬಗ್ಗೆ ನನ್ನ ಮತ್ತು ಸತೀಶ ಜಾರಕಿಹೊಳಿ ಅವರ ಮುಂದೆ ಮುಖ್ಯಮಂತ್ರಿಗಳು ಮೊದಲ ದಿನವೇ ಚರ್ಚಿಸಿದ್ದರು. ನಮ್ಮ ತಾಲೂಕು ಜಿಲ್ಲೆ ಆಗಬೇಕು…
ಮಂಡ್ಯ : ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಇದು ಜಡತ್ವದಿಂದ ಕೂಡಿದೆ ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿಸಬೇಕು ಆಗ ಮಾತ್ರ ಜಾಸ್ತಿ ವ್ಯವಸ್ಥೆಗೆ ಚಲನೆ ಸಿಗುತ್ತದೆ. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮ ಕರ್ತವ್ಯ ಆಗಿದೆ. ಜಾತಿ ಹೋಗಬೇಕಾದರೆ ಸಮಾನತೆ ಬರಬೇಕು ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಶಿವರಾತ್ರಿ ಶಿವಯೋಗಿಗಳ ಜಯಂತೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೌಢ್ಯ ಆಚರಿಸುವ ನಾವುಗಳು ವಚನಗಳನ್ನು ಪಾಲನೆ ಮಾಡುತ್ತಿಲ್ಲ. ವಿದ್ಯಾವಂತರು ಕೂಡ ಮೌರ್ಯ ನಂಬುತ್ತಿದ್ದಾರೆ ಹಿಂದಿನ ಜನ್ಮ ಹಾಗೂ ಮುಂದಿನ ಜನ್ಮ ಎಂಬುವುದು ಗೊತ್ತಿಲ್ಲ ಎಲ್ಲರೂ ಹುಟ್ಟಿದ ಮೇಲೆ ಸಾಯಲೇಬೇಕು ಸಾವು ಗ್ಯಾರಂಟಿ, ಹುಟ್ಟು ಆಕಸ್ಮಿಕ ಈ ನಡುವೆ ಸಾರ್ಥಕ ಜೀವನ ನಮ್ಮದಾಗಬೇಕು ವೈಚಾರಿಕತೆಯಿಂದ ಕೂಡಿದ ವಿದ್ಯೆ ಸಿಗದಿದ್ದರೆ ಪ್ರಯೋಜನವಿಲ್ಲ ವಿದ್ಯಾವಂತರಾದವರು ಕೂಡ ಯಾವುದೇ ಪ್ರಯೋಜನವಿಲ್ಲ. ಸುತ್ತೂರು ಮಠ ಗ್ರಾಮೀಣ ಜನರಿಗೆ ಶಿಕ್ಷಣ ಮತ್ತು ಆರೋಗ್ಯ ನೀಡುತ್ತಿದೆ ದಾಸೋಹ ಕಾಯಕ ಎಂದರೆ ಪ್ರೊಡಕ್ಷನ್ ದಾಸೋಹ ಎಂದರೆ ಡಿಸ್ಟ್ರಿಬ್ಯೂಷನ್ ಎಂದು ಸಿದ್ದರಾಮಯ್ಯ…
ಮಂಡ್ಯ : ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಇದು ಜಡತ್ವದಿಂದ ಕೂಡಿದೆ ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿಸಬೇಕು ಆಗ ಮಾತ್ರ ಜಾಸ್ತಿ ವ್ಯವಸ್ಥೆಗೆ ಚಲನೆ ಸಿಗುತ್ತದೆ. ಧರ್ಮಗಳು ಪ್ರೀತಿ ಹಾಗೂ ಕರುಣೆ ಬೋಧಿಸುತ್ತವೆ ಹೊರತು ದ್ವೇಷವನ್ನಲ್ಲ ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಶಿವರಾತ್ರಿ ಶಿವಯೋಗಿಗಳ ಜಯಂತೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೌಢ್ಯ ಆಚರಿಸುವ ನಾವುಗಳು ವಚನಗಳನ್ನು ಪಾಲನೆ ಮಾಡುತ್ತಿಲ್ಲ. ವಿದ್ಯಾವಂತರು ಕೂಡ ಮೌರ್ಯ ನಂಬುತ್ತಿದ್ದಾರೆ ಹಿಂದಿನ ಜನ್ಮ ಹಾಗೂ ಮುಂದಿನ ಜನ್ಮ ಎಂಬುವುದು ಗೊತ್ತಿಲ್ಲ ಎಲ್ಲರೂ ಹುಟ್ಟಿದ ಮೇಲೆ ಸಾಯಲೇಬೇಕು ಸಾವು ಗ್ಯಾರಂಟಿ, ಹುಟ್ಟು ಆಕಸ್ಮಿಕ ಈ ನಡುವೆ ಸಾರ್ಥಕ ಜೀವನ ನಮ್ಮದಾಗಬೇಕು ವೈಚಾರಿಕತೆಯಿಂದ ಕೂಡಿದ ವಿದ್ಯೆ ಸಿಗದಿದ್ದರೆ ಪ್ರಯೋಜನವಿಲ್ಲ ವಿದ್ಯಾವಂತರಾದವರು ಕೂಡ ಯಾವುದೇ ಪ್ರಯೋಜನವಿಲ್ಲ. ಸುತ್ತೂರು ಮಠ ಗ್ರಾಮೀಣ ಜನರಿಗೆ ಶಿಕ್ಷಣ ಮತ್ತು ಆರೋಗ್ಯ ನೀಡುತ್ತಿದೆ ದಾಸೋಹ ಕಾಯಕ ಎಂದರೆ ಪ್ರೊಡಕ್ಷನ್ ದಾಸೋಹ ಎಂದರೆ ಡಿಸ್ಟ್ರಿಬ್ಯೂಷನ್ ಎಂದು ಸಿದ್ದರಾಮಯ್ಯ ತಿಳಿಸಿದರು. ಬದಲಾವಣೆಗೆ ಪ್ರಯತ್ನಿಸಿದ ಪ್ರಮುಖರಲ್ಲಿ ಶಿವಯೋಗಿಗಳು…
ಬೆಳಗಾವಿ : ಚಿಕ್ಕೋಡಿ ಜಿಲ್ಲೆಯಾಗಲು ಬಹಳ ದಿನವಿಲ್ಲ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭ ಆಗಬಹುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ ಎಂದರು. 800 ವರ್ಷಗಳ ಇತಿಹಾಸ ಇರುವ ಚಿಕ್ಕೋಡಿ ನ್ಯಾಯಾಲಯದ ಹೊಸ ಕಟ್ಟಡ ಉದ್ಘಾಟನೆ ಬಹಳ ಸಂತೋಷ ತಂದಿದೆ ಎಂದರು. ಈ ನ್ಯಾಯಾಲಯಕ್ಕೆ ಅಂಬೇಡ್ಕರ್ ಕೂಡ ಬಂದಿದ್ದರು. ಅವರು ನ್ಯಾಯಕ್ಕಾಗಿ ಹೋರಾಟ ಮಾಡಿರುವ ಇತಿಹಾಸ ಕೇಳಿದ್ದೇವೆ. ಈ ನ್ಯಾಯಾಲಯದ ಬಾರ್ ರಾಜ್ಯಕ್ಕೆ ಬಹು ದೊಡ್ಡ ಕೊಡುಗೆ ಕೊಟ್ಟಿದೆ. ವಿಧಾನಸಭೆ ಸ್ಪೀಕರ್ ಕಟಾವಳಿ ಹೆಸರು ನೆನಪಿಗೆ ಬರುತ್ತದೆ ಎಂದು ಇತಿಹಾಸ ಮೆಲುಕು ಹಾಕಿದರು.
ಚಾಮರಾಜನಗರ : ಬಾಳೆ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಹುಲಿಯನ್ನು ಇದೀಗ ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಮಕ್ತಿ ಕಾಲೋನಿ ಬಳಿ ಸೆರೆ ಹಿಡಿಯಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನ ಅರವಳಿಕೆ ಮದ್ದು ನೀಡಿ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಹುಲಿಯನ್ನು ಸೆರೆ ಹಿಡಿದಿದ್ದಕ್ಕೆ ಬರಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ದಾವಣಗೆರೆ : ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದಾರೆ. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ ಈ ರೀತಿ ಹೇಳಿಕೆ ನೀಡುವವರು ಬೆಂಗಳೂರಿನಲ್ಲಿ ಇದ್ದಾರೋ ಇಲ್ವೋ ಅಂತ ಇರುತ್ತಾರೆ ಎಂದು ಕಿಚ್ಚ ಸುದೀಪ್ ಗೆ ಟಾಂಗ್ ನೀಡಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದಾಗ ಕೆಲವರು ಹೇಳಿಕೆ ಕೊಡುತ್ತಾರೆ. ಫ್ಯಾನ್ಸ್ ಬಗ್ಗೆ ವೇದಿಕೆಯ ಮೇಲೆ ಮಾತನಾಡುತ್ತಾರೆ ಆದರೆ ದರ್ಶನ್ ಇದ್ದಾಗ ಮಾತ್ರ ಅವರೆಲ್ಲ ಬೆಂಗಳೂರಿನಲ್ಲಿ ಇದ್ದಾರ ಇಲ್ವಾ ಅಂತ ಗೊತ್ತಾಗದಂತೆ ಇರುತ್ತಾರೆ. ಕಿಚ್ಚ ಸುದೀಪ್ ದರ್ಶನ್ ಪತ್ನಿ ಇದೀಗ ಟಾಂಗ ನೀಡಿದ್ದಾರೆ. ದಾವಣಗೆರೆಯಲ್ಲಿ ಪತ್ನಿ ವಿಜಯ್ ಲಕ್ಷ್ಮಿ ಈ ವಿಚಾರವಾಗಿ ಮಾತನಾಡಿದರು ದರ್ಶನ್ ಬಗ್ಗೆ ಹೇಳುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ದರ್ಶನ್ ಅಭಿಮಾನಿಗಳು ತಲೆ ಕೆಡಿಸಿಕೊಳ್ಳಬೇಡಿ ಎಂದು ಟಾಂಗ್ ನೀಡಿದ್ದಾರೆ. ಹಾಗಾದ್ರೆ ಕಿಚ್ಚ…














