Author: kannadanewsnow05

ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ.ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿರುಋುತಿ(ರಾಕ್ಷಸ)- ನೈಋುತ್ಯ. ಇಂದ್ರ : ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. ಐರಾವತ ಇವನ ವಾಹನ. ವಜ್ರಾಯುಧ ಇವನ ಆಯುಧ. ಅಧಿತಿಯ ಇಬ್ಬರು ಮಕ್ಕಳಲ್ಲಿ ಒಬ್ಬನಾದ ಇವನನ್ನು ಆದಿತ್ಯ ಎಂತಲೂ ಕರೆಯುತ್ತಾರೆ. ಅಗ್ನಿ : ಬೆಂಕಿಯ ದೇವತೆ. ಅವನೇ ಯಜ್ಞ ಪುರುಷ. ಹೋಮ, ಹವನಗಳಲ್ಲಿ ಅರ್ಪಣೆಯಾಗುವ ಹವಿಸ್ಸನ್ನು ಸಂಬಧಿಂಧಿತ ದೇವತೆಗಳಿಗೆ ಮುಟ್ಟಿಸುತ್ತಾನೆ. ದೇವತೆಗಳ ಸಂದೇಶವಾಹಕನಾಗಿ ಕೆಲಸ ನಿರ್ವಹಿಸುತ್ತಾನೆ. ಅಗ್ನಿಯು ಪೃಥ್ವಿಗೆ ಅಧಿಧಿಪತಿಯಾದ ದೇವತೆ ಎಂದೂ ಪ್ರಸಿದ್ಧ. ಯಮ : ಹಿಂದೂ ಪುರಾಣಗಳ ಪ್ರಕಾರ ಯಮರಾಜನೇ ಮೃತ್ಯುದೇವತೆ.…

Read More

ಮಂಗಳೂರು : ಯುವತಿ ಎಂದು ಭಾವಿಸಿ ಕಾಮುಕನೊಬ್ಬ ಯುವಕನಿಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ. ಅಲ್ಲದೇ ರಾತ್ರಿ ವೇಳೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಕೂಡ ಒತ್ತಾಯಿಸಿದ್ದಾನೆ. ಇದೀಗ ಕಾಮುಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಲ್ನಾಡು ಗ್ರಾಮದ ಕುಡ್ತಮುಗೇರಿನಲ್ಲಿ ನಡೆದಿದೆ. ಧರ್ಮದೇಟು ತಿಂದ ಕಾಮುಕ ಕನ್ಯಾನದ ಪಂಜಾಜೆ ನಿವಾಸಿ ಸವಾದ್(20) ಎಂದು ತಿಳಿದುಬಂದಿದೆ. ಸಾವದ್ ಅಂಗಡಿಯೊಂದರಲ್ಲಿ ವಸ್ತುವೊಂದನ್ನು ಖರೀದಿಸಿ ಹಣವಿಲ್ಲವೆಂದು ಗೂಗಲ್ ಪೇ ನಂಬರ್ ಕೇಳಿದ್ದ. ಅಂಗಡಿಯಲ್ಲಿದ್ದ ಹಿಂದೂ ಯುವತಿ ತನ್ನ ನಂಬರ್ ನೀಡದೇ, ಅಂಗಡಿಯ ಮತ್ತೋರ್ವ ಯುವಕನ ನಂಬರ್ ನೀಡಿದ್ದಳು. ಆ ಫೋನ್ ನಂಬರ್ ಯುವತಿಯದ್ದೆಂದು ಭಾವಿಸಿ ರಾತ್ರಿ ವೇಳೆ ಸಾವದ್ ಅಶ್ಲೀಲ ಸಂದೇಶ ಕಳುಹಿಸಿದ್ದ. ಈ ವೇಳೆ ಸಹೊದ್ಯೋಗಿ ಯುವಕ ಎಲ್ಲಾ ಮೆಸೇಜ್‌ಗಳಿಗೂ ಉತ್ತರಿಸಿ ಆಟವಾಡಿಸಿದ್ದ. ತಡರಾತ್ರಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿದ್ದ ಸವಾದ್, ಬಳಿಕ ಯುವತಿಗೆ ನಗ್ನ ವೀಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ್ದ. ಅಲ್ಲದೇ ನಾಳೆ ಮತ್ತೆ ಅಂಗಡಿಯತ್ತ ಬರುತ್ತೇನೆ ಎಂಬ ಸಂದೇಶವನ್ನೂ…

Read More

ವಿಜಯಪುರ : ವಿಜಯಪುರದಲ್ಲಿ ಖಾಸಗಿ ಆಸ್ಪತ್ರೆಯಲ್ಲಿಯೇ ವೈದ್ಯರು ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವೈದ್ಯ ಡಾ. ರಾಜಶೇಖರ್ ಎಂದು ತಿಳಿದುಬಂದಿದೆ. ಹೌದು ಆಸ್ಪತ್ರೆಯಲ್ಲಿಯೆ ನೇಣು ಬಿಗಿದುಕೊಂಡು ವೈದ್ಯ ಡಾ.ರಾಜಶೇಖರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ತಾಳಿಕೋಟಿ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಡಾ. ರಾಜಶೇಖರ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ವೈದ್ಯ ಡಾ. ರಾಜಶೇಖರ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಬಂಧಿಸಿದಂತೆ ಇದೀಗ ಐವರು ಮಕ್ಕಳು ಪತ್ತೆಯಾಗಿದ್ದಾರೆ. ಈ ಒಂದು ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ನಡೆದಿತ್ತು. ನಿನ್ನೆ ರಾತ್ರಿ ಕುಮಾರಿ ನಾರಾಯಣಪುರ ಗ್ರಾಮದ ಬಳಿಯ ದೇಗುಲದಲ್ಲಿ ಮಕ್ಕಳು ಇದ್ದರು ಎನ್ನಲಾಗಿದೆ. ಮೀನು ಹಿಡಿಯಲು ಹೋಗಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಗಾಬರಿಯಾದ ಐವರು ಮಕ್ಕಳು ದೇಗುಲದಲ್ಲಿಯೇ ಉಳಿದುಕೊಂಡಿದ್ದಾರೆ. ಹಾಗಾಗಿ ಮಕ್ಕಳ ಪೋಷಕರು ಗಾಬರಿಯಾಗಿ ದ್ದರು. ಈಗ ಮಕ್ಕಳು ಸಿಕ್ಕಿದ್ದಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ಐವರು ಮಕ್ಕಳು ಇದೀಗ ಪತ್ತೆಯಾಗಿದ್ದಾರೆ. ಧನುಷ್ (14 ಕಿರಣ್ (10) ಲೋಹಿತ್ (12) ಭುವನ್ (8) ಮತ್ತು ಲಕ್ಷ್ಮೀಶ (12) ಇದೀಗ ಪತ್ತೆಯಾಗಿದ್ದಾರೆ. ತಿಳಿದುಬಂದಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಕಾಲುವೆಯಲ್ಲಿ ಮೀನು ಹಿಡಿಯಲು ಹೋದಾಗಲೇ ಒಂದು ದುರಂತ ಸಂಭವಿಸಿದೆ. ಹೌದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಐವರು ಮಕ್ಕಳು ನಾಪತ್ತೆಯಾಗಿದ್ದಾರೆ. ಧನುಷ್ (14 ಕಿರಣ್ (10) ಲೋಹಿತ್ (12) ಭುವನ್ (8) ಮತ್ತು ಲಕ್ಷ್ಮೀಶ (12) ನಾಪತ್ತೆಯಾದ ಮಕ್ಕಳು ಎಂದು ತಿಳಿದುಬಂದಿದೆ.ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ದಾಖಲಾಗಿದ್ದು, ಮಕ್ಕಳಿಗೆ ಅಗ್ನಿಶಾಮಕ ದಳ ಸಿಬ್ಬಂದಿ ಇದೀಗ ಶೋಧ ನಡೆಸುತ್ತಿದ್ದಾರೆ

Read More

ದಕ್ಷಿಣಕನ್ನಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಗನಿಂದಲೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. 17 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ PSI ಮಗ ಅತ್ಯಾಚಾರ ಎಸಗಿದ್ದಾನೆ. ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಒಂದು ಕೃತ್ಯ ಎಸಗಿದ್ದಾನೆ. ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಇನ್ಸ್ಪೆಕ್ಟರ್ ಮಗ ಅತ್ಯಾಚಾರ ಎಸಗಿದ್ದಾನೆ.ಅಲ್ಲದೇ ಬಾಲಕಿಗೆ ಬೆದರಿಸಿ ಏಳೆಂಟು ಬಾರಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್ಐ ಒಬ್ಬರ ಪುತ್ರ ಮಂಜುನಾಥ್ ಎನ್ನುವ ಕಾಮುಕನಿಂದ ಈ ಒಂದು ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೋಕ್ಸೋ ಕೇಸ್ ದಾಖಲಿಸಿ, ಇದೀಗ ಪೊಲೀಸರು ಆರೋಪಿ ಮಂಜುನಾಥನನ್ನು ಅರೆಸ್ಟ್ ಮಾಡಿದ್ದಾರೆ.

Read More

ಮಂಗಳೂರು : ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದು ಅಲ್ಲದೇ 1 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಕೂಳೂರು ಉಸ್ತಾದ್‌, ಗುರುವಾಯನಕೆರೆಯ ನಿವಾಸಿ ಜಿ. ಅಬ್ದುಲ್‌ ಕರೀಮ್‌ನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು ಉಸ್ತಾದ್ ಎಂಬ ಹೆಸರಿನ ಈ ಅಬ್ದುಲ್ ಕರೀಮ್ ಎಂಬಾತ ಮಹಿಳೆಯನ್ನು ನೋಡಿ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ. ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದಾನೆ ಈ ಅಬ್ದುಲ್ ಕರೀಮ್. ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಈತ ಕೆಲವು ಬಾರಿ…

Read More

ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿದ್ದ ಇಲಿ ಪಾಷಾಣವನ್ನು ತಿಳಿಯದೇ ತಿಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಳಿಯ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ ಮೃತರನ್ನು ಗುಜ್ಜರಬೆಟ್ಟು ನಿವಾಸಿ ಸರೋಜ(51) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು, ಎ.4ರಂದು ಮಧ್ಯಾಹ್ನ ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣವನ್ನು ತಿಳಿಯದೆ ಸೇವಿಸಿದ್ದರು. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಅವರು ಎ.5ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆಯಾದರು, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಇದೀಗ ಬಿಎಸ್ ಯಡಿಯೂರಪ್ಪ ವಿರುದ್ಧ ಮತ್ತೊಂದು ಆರೋಪ ಮಾಡಿರುವ ಶಾಸಕ ಯತ್ನಾಳ್ ನನ್ನನ್ನು ಸೋಲಿಸಲು ಬಿಎಸ್ ಯಡಿಯೂರಪ್ಪ ಪ್ರಯತ್ನಿಸಿದ್ದರು ಎಂದು ಆರೋಪಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಗ್ಗೆ ಮಾತನಾಡಿದರೆ ಸರಿ ಇರಲ್ಲ. ಶ್ರೀಗಳ ಬಗ್ಗೆ ಯಾರಾದರೂ ಮಾತನಾಡಿದರೆ ಪರಿಣಾಮ ಸರಿ ಇರಲ್ಲ. ನನ್ನನ್ನು ಸೋಲಿಸುವುದಕ್ಕೂ ಯಡಿಯೂರಪ್ಪ ಪ್ರಯತ್ನ ಮಾಡಿದ್ದರು. ನಾನು ಕೇವಲ ಹಿಂದುಗಳ ಮತಗಳಿಂದ ಗೆದ್ದಿದ್ದು. ಯಡಿಯೂರಪ್ಪ ಬ್ಲಾಕ್ಮೇಲ್ ಮಾಡಿ ದೊಡ್ಡ ವ್ಯಕ್ತಿ ಆಗಿದ್ದಾನೆ. ಭ್ರಷ್ಟಾಚಾರದಿಂದಾಗಿ ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಕೆಳಗಿಳಿದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ವಿಚಾರವಾಗಿ, ವಿಜಯಪುರದಲ್ಲಿ ಯತ್ನಾಳ್ ಬೆಂಬಲಿಗರ ಪ್ರತಿಭಟನೆ…

Read More

ಬೆಂಗಳೂರು : ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಅಪರಾಧಿ ರಾಹುಲ್ ತೋನ್ಸೆ ಎಂಬಾತನಿಗೆ 61.50 ಲಕ್ಷ ರೂ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ 2018-19ರಲ್ಲಿ ಸಂಜನಾ ಗಲ್ರಾನಿಯಿಂದ 45 ಲಕ್ಷ ರೂ ಪಡೆದು ವಂಚಿಸಿದ್ದ ಆರೋಪವಿತ್ತು.ದಂಡದ ಮೊತ್ತದಲ್ಲಿ 10 ಸಾವಿರ ರೂ ಕೋರ್ಟ್ ಶುಲ್ಕವನ್ನು ಕಡಿತಗೊಳಿಸಿ ಉಳಿದ 61.40 ಲಕ್ಷ ರೂಪಾಯಿಗಳನ್ನು ದೂರುದಾರೆ ಸಂಜನಾಗೆ ನೀಡಬೇಕು. ನಿಗದಿತ ಸಮಯದಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡಿದರೆ 6 ತಿಂಗಳ ಶಿಕ್ಷೆಯನ್ನು ಮಾಫಿ ಮಾಡಲಾಗುತ್ತದೆ. ಇಲ್ಲವಾದರೆ, 6 ತಿಂಗಳು ಜೈಲು ಮತ್ತು ದಂಡವನ್ನು ಪಾವತಿ ಮಾಡಬೇಕೆಂದು ನ್ಯಾಯಾಲಯ ತೀರ್ಪಿನಲ್ಲಿ ತಿಳಿಸಿದೆ. ಗೋವಾ ಮತ್ತು ಕೊಲಂಬೋದಲ್ಲಿ ಕ್ಯಾಸಿನೋಗಳ ವ್ಯವಸ್ಥಾಪಕ ನಿರ್ದೇಶಕನಾಗಿದ್ದೇನೆ. ನಾನು ಹೇಳಿದ ಕಡೆಗಳಲ್ಲಿ ಹಣವನ್ನು ಹೂಡಿಕೆ…

Read More