Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು, ಜುಲೈ 14: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ: ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು…
ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ವಿಚಾರವಾಗಿ ಪ್ರಸ್ತಾಪಿಸಲಾಯಿತು. ಅಸುರಕ್ಷಿತ ಆಹಾರ ಸೇವನೆಯೇ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದರು. ಹೃದಯಾಘಾತ ಸಂಬಂಧಪಟ್ಟಂತೆ ಸರಣಿ ಹೃದಯಾಘಾತ ಸಾವುಗಳಿಗೆ ಅಸುರಕ್ಷಿತ ಆಹಾರ ಸೇವನೆ ಕಾರಣವಾಗಿದೆ. ಬೀದಿ ಬದಿಯ ಆಹಾರಗಳ ಬಗ್ಗೆ ಸರಿಯಾದ ಪರಿಶೀಲನೆ ನಡೆಸಬೇಕಿದೆ. ಗೋಬಿ ಮಂಚೂರಿಯಲ್ಲಿ ಅತಿ ಹೆಚ್ಚು ಹಾನಿಕಾರಕ ಅಂಶಗಳು ಇರುತ್ತವೆ. ಹೂಕೋಸು ಬೆಳೆಯುವಾಗ ಭಾರಿ ಪ್ರಮಾಣದ ಕ್ರಿಮಿನಾಶಕ ಬಳಸುತ್ತಾರೆ. ಇದನ್ನು ಅಡಿಗೆ ತಯಾರಿ ಮಾಡುವಾಗ ಸರಿಯಾಗಿ ಬೇಯಿಸುವುದಿಲ್ಲ. ಗೋಬಿ ಮಂಚೂರಿಯನ್ನು ಕೂಡ ಅರ್ಧಂಬರ್ಧ ಬೇಯಿಸಿ ಕೊಡುತ್ತಾರೆ ಇದನ್ನು ತಿಂದ ಜನರ ಹೊಟ್ಟೆಗೆ ಹೋಗಿ ರೋಗಕ್ಕೆ ಕಾರಣವಾಗುತ್ತದೆ. ಜೊತೆಗೆ ನೀರಿನ ಘಟಕಗಳ ಬಗ್ಗೆಯೂ ಗಮನ ನೀಡಬೇಕು ಸುರಕ್ಷಿತ ನೀರು ಕುಡಿಯದಿದ್ದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗಾಗಿ ಶುದ್ಧ…
ಬೆಂಗಳೂರು : ಸಿಗಂದೂರಿನ ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲು ಕೇಂದ್ರ ಸಚಿವರು ಸಮ್ಮತಿಸಿದ್ದರೂ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತರದೇ ಇಂದೇ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಗಾಗಿ ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು. ಹೀಗಿದ್ದರೂ ಸಹ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತರದೇ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದರು. ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರ. ಇಲ್ಲಿ ಶಿಷ್ಟಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ…
BIG NEWS : ಗಾಳಿ ಆಂಜನೇಯಸ್ವಾಮಿ ದೇಗುಲ ಮುಜರಾಯಿ ಇಲಾಖೆಯ ಸುಪರ್ದಿಗೆ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ಗೆ ಅರ್ಜಿ
ಬೆಂಗಳೂರು : ಬೆಂಗಳೂರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಸರ್ಕಾರ ಮುಜರಾಯಿ ಇಲಾಖೆಗೆ ತೆಗೆದುಕೊಂಡಿದ್ದು, ಈ ವಿಚಾರವಾಗಿ ಇದೀಗ ಹೈಕೋರ್ಟಿಗೆ ಮುಜರಾಯಿ ಇಲಾಖೆ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಹೌದು ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ವಕೀಲ ಪಿ.ಪ್ರಸನ್ನ ಕುಮಾರ್ ಅವರು ನ್ಯಾಯಮೂರ್ತಿ ಸುನಿಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪೀಠ, ನಾಳೆ ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ.
ಬೆಂಗಳೂರು : ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು ತಮಿಳು ಹಿಂದಿ ಭಾಷೆಯಲ್ಲೂ ಕೂಡ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದ, ಬಹುಭಾಷಾ ನಟಿ ಬಿ.ಸರೋಜಾದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಕ್ಕಲಿಗರ ಸಂಪ್ರದಾಯದಂತೆ ನಾಳೆ ಬೆಳಿಗ್ಗೆ 11:30 ಕ್ಕೆ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಹೌದು ನಾಳೆ ಹಿರಿಯ ನಟಿ ಬಿ ಸರೋಜಾ ದೇವಿ ಅಂತ್ಯಕ್ರಿಯೆ ನೆರವಿರಲಿದೆ, ನಾಳೆ ಹುಟ್ಟೂರು ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಬೆಳಿಗ್ಗೆ 11:30 ಕ್ಕೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಹಾಗಾಗಿ ನಾಳೆವರೆಗೂ ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ನಟಿ ಸರೋಜಾದೇವಿ ಪುತ್ರ ಗೌತಮ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು ತಮಿಳು ಹಿಂದಿ ಭಾಷೆಯಲ್ಲೂ ಕೂಡ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದ, ಬಹುಭಾಷಾ ನಟಿ ಬಿ.ಸರೋಜಾದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಕ್ಕಲಿಗರ ಸಂಪ್ರದಾಯದಂತೆ ನಾಳೆ ಬೆಳಿಗ್ಗೆ 11:30 ಕ್ಕೆ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇದೀಗ ಬಿ.ಸರೋಜದೇವಿ ಅವರು ನಿಧನರಾಗೋದಕ್ಕು ಮುನ್ನ ಅಂತಿಮ ಕ್ಷಣ ಹೇಗಿತ್ತು ಅನ್ನೋದು, ಅವರ ಮ್ಯಾನೇಜರ್ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ನಟಿ ಎಂದಿನಂತೆ ಪೂಜೆ ಸಲ್ಲಿಸಿ ಕುಳಿತುಕೊಂಡಾಗ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ನಿಧನರಾಗಿರುವುದು ತಿಳಿಯಿತು ಎಂದಿದ್ದಾರೆ. ‘ಸರೋಜಾದೇವಿ ಅವರು ದಿನವೂ ಎದ್ದ ತಕ್ಷಣ ಪತ್ರಿಕೆ ಓದುತ್ತಿದ್ದರು. ಬಳಿಕ ಸ್ನಾನ ಮಾಡಿ ಪೂಜೆ ಮಾಡುತ್ತಿದ್ದರು. ಅದಾದ ಮೇಲಷ್ಟೇ ಉಪಾಹಾರ ಸೇವಿಸುತ್ತಿದ್ದರು. ಇಂದು ಕೂಡ ಪೂಜೆ ಮಾಡಿ ಟಿವಿ ಆನ್…
ಬೆಂಗಳೂರು : ಈಗಾಗಲೇ ರಾಜು ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಅಲ್ಲದೆ ಇಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರು ಈವರೆಗೆ ಒಟ್ಟು 500 ಕೋಟಿ ಪ್ರಯಾಣ ಮಾಡಿದರು. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ವಿತರಣೆ ಮಾಡಿದರು. ಇದೀಗ ಸಾರಿಗೆ ಇಲಾಖೆ ಕೆಎಸ್.ಆರ್.ಟಿ.ಸಿ ಲಗೇಜ್ ರೂಲ್ಸ್ ನಲ್ಲಿ ಒಂದಿಷ್ಟು ಹೊಸ ಮಾರ್ಪಾಡು ಮಾಡಿದೆ. ದೂರದೂರಿಗೆ ಸರ್ಕಾರಿ ಬಸ್ಸುಗಳಲ್ಲಿ ತೆರಳುವ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಇದೀಗ ಪ್ರಯಾಣಿಕರ ಜೊತೆಗೆ ಪ್ರಾಣಿ ಪಕ್ಷಿ ಸಾಗಿಸಲೂ ಅವಕಾಶ ನೀಡಿ ಸಾರಿಗೆ ಇಲಾಖೆ ಅವಕಾಶ ಮಾಡಿದೆ. ಹೌದು ನಿರ್ದಿಷ್ಟ ಹಣ ಪಾವತಿಸಿದರೆ ಪ್ರಾಣಿ ಪಕ್ಷಿ, ಟಯರ್, ಟ್ಯೂಬ್, ಫ್ರಿಡ್ಜ್, ವಾಷಿಂಗ್ ಮಿಷಿನ್ ಸಾಗಿಸುವುದಕ್ಕೂ ಕೂಡ ಸಾರಿಗೆ ಇಲಾಖೆ ಅವಕಾಶ ಮಾಡಿದೆ. 30 ಕೆಜಿಯವರೆಗೆ ಯಾವುದೇ ಹಣ ಪಾವತಿ ಮಾಡುವಂತಿಲ್ಲ. ಅದಕ್ಕಿಂತ ಮೇಲಿನ ಲಗೇಜ್ ಗೆ ಪ್ರಯಾಣಿಕರು…
ರಾಯಚೂರು : ಜುಲೈ 11 ರಂದು ರಾಯಚೂರಿನಲ್ಲಿ ಪತ್ನಿಯಿಂದ ನದಿಗೆ ತಳ್ಳಲ್ಪಟ್ಟ ಗಂಡ ತಾತಪ್ಪ, ಸ್ಥಳೀಯರ ಸಹಕಾರದಿಂದ ಪ್ರಾಣ ಉಳಿಸಿಕೊಂಡು ಬದುಕಿ ಬಂದಿದ್ದಾನೆ. ಇದೀಗ ಆತನನ್ನು 2025ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ ಎಂದು ಕರೆಯಲಾಗುತ್ತಿದೆ. ಹೆಂಡತಿಯ ಸಂಬಂಧದ ಕುರಿತು ದಿಟ್ಟ ನಿರ್ಧಾರ ಕೈಗೊಂಡಿದ್ದಾನೆ. ಹೌದು ಜುಲೈ 11ರಂದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಬಳಿ ಪತ್ನಿ ಗದ್ದೆಮ್ಮ ತನ್ನ ಪತಿ ತಾತಪ್ಪನನ್ನು ಕೃಷ್ಣ ನದಿಗೆ ತಳ್ಳಿದ ಘಟನೆಯು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಪತಿ ನಾನು ಹೆಂಡತಿ ಜೊತೆಗೆ ಬಾಳಲ್ಲ. ಅವಳನ್ನ ತವರು ಮನೆಗೆ ಬಿಟ್ಟು ಬರ್ತೀನಿ ಡೈವೋರ್ಸ್ ಮೂಲಕ ನನಗೆ ಮುಕ್ತಿ ಬೇಕು ಎಂದು ಹೇಳಿದ್ದಾನೆ. ಇದೀಗ ಸಂಧಾನ ಸಭೆಯ ಅಂತಿಮ ಮಾತುಕತೆಗಳು ತಾತಪ್ಪ ಹಾಗೂ ಪತ್ನಿ ಗದ್ದೆಮ್ಮ ಕುಟುಂಬಸ್ಥರು, ಗ್ರಾಮದ ಹಿರಿಯರ ಸಮ್ಮುಖದಲ್ಲಿ ನಡೆಸಲಾಯಿತು. ಈ ರಾಜಿ ಪಂಚಾಯಿತಿಯಲ್ಲಿ ಪತಿ ತಾತಪ್ಪ ತನ್ನ ಪತ್ನಿಯ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು. ಘಟನೆ ಬಗ್ಗೆ ತಾತಪ್ಪನಿಂದ…
ಬೆಂಗಳೂರು : ಅಭಿನಯ ಸರಸ್ವತಿ ಅಂದೆ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ ಅವರು ವಯೋಜಹಜ ಕಾಯಿಲೆಯಿಂದ ಬಳಲುತ್ತಿದ್ದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಬಿ ಸರೋಜಾ ದೇವಿ ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ…
ಬೆಂಗಳೂರು : ಅಭಿನಯ ಸರಸ್ವತಿ ಎಂದೇ ಖ್ಯಾತಿ ಹೊಂದಿದ್ದ ಹಿರಿಯ ಬಹುಭಾಷಾ ನಟಿ ಬಿ ಸರೋಜಾದೇವಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ತಮ್ಮ ನಿವಾಸದಲ್ಲಿ ಸಾವನಪ್ಪಿದ್ದಾರೆ ಡಾಕ್ಟರ್ ರಾಜಕುಮಾರ್ ಕಲ್ಯಾಣಕುಮಾರ್ ಸೇರಿದಂತೆ ಹಲವಾರು ಮೇರು ನಟನೊಂದಿಗೆ ಚಿತ್ರರಂಗದಲ್ಲಿ ಸರೋಜಾದೇವಿ ಅದ್ಭುತವಾಗಿ ನಟಿಸಿದ್ದರು. ಹೌದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ. ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಪತಿ ಹರ್ಷ ಸಮಾಧಿ ಪಕ್ಕದಲ್ಲಿ ಮಾಡಿಕೊಳ್ಳಲಾಗಿದೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ಸರೋಜಾ ದೇವಿಯಂತೆ ಕ್ರಿಯೆ ನಡೆಯಲಿದೆ. ಬಿ.ಸರೋಜಾ ದೇವಿ ಅವರು 1938 ಜನವರಿ 7ರಂದು ಜನಿಸಿದ್ದಾರೆ. 17ನೇ…













