Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯ ಸರ್ಕಾರ ಜಾತಿ ಗಣತಿ ಜಾರಿಗೆ ಸಂಬಂಧಪಟ್ಟಂತೆ, ದಸರಾ ರಜೆ ವಿಸ್ತರಣೆಯಿಂದ ಕೊರತೆಯಾಗಿರುವ ಕಲಿಕಾ ಅವಧಿ ಯನ್ನು ಸರಿದೂಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಳಿದಿರುವ ಶಾಲಾ ದಿನಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಅವಧಿ (ಪೀರಿಯಡ್) ತರಗತಿ ಬೋಧನೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಸೆ.22ರಿಂದ ಅ.7ರವರೆಗೆ ಇದ್ದ ದಸರಾ ರಜೆ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ದಸರಾ ರಜೆ ಅವಧಿಯನ್ನು ಅ.18ರವರೆಗೆ ವಿಸ್ತರಿಸಲಾಗಿತ್ತು. ಇದರಿಂದ ಶಾಲಾಮಕ್ಕಳಿಗೆ ಅ.12ರ ಭಾನುವಾರ ರಜಾ ದಿನ ಹೊರತುಪಡಿಸಿ ಉಳಿದ 10 ದಿನಗಳ ಬೋಧನಾ ಅವಧಿ ಕೊರತೆಯಾಗಿದೆ. ಪ್ರೌಢಶಾಲಾ ಮಕ್ಕಳಿಗೆ ಈ 10 ದಿನಗಳ ಪೈಕಿ ಎಂಟು ಪೂರ್ಣ ದಿನ, ಎರಡು ಅರ್ಧ ದಿನ ಸೇರಿ ಒಟ್ಟು 66 ಬೋಧನೆ ಪೀರಿಯಡ್ ಕೊರತೆಯಾಗಿದೆ. ಅದೇ ರೀತಿ ಪ್ರಾಥಮಿಕ ಶಾಲಾ ಮಕ್ಕಳಿಗೆ 74 ಪೀರಿಯಡ್ ಪಾಠದ ಕೊರತೆಯಾಗಿದೆ. ಹಾಗಾಗಿ ಇದನ್ನು ಸರಿದೂಗಿಸಲು ಫೆ.5ರವರೆಗಿನ 74…

Read More

ಬೆಂಗಳೂರು : ಶಾಸಕ ಸತೀಶ್ ಸೈಲ್ ಗೆ ಬಿಗ್ ಶಾಕ್ ಎನ್ನುವಂತೆ ಬೆಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ್ದಂತ ಮಧ್ಯಂತ ಜಾಮೀನನ್ನು ರದ್ದುಗೊಳಿಸಲಾಗಿದೆ. ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್.25ರಂದು ಹೈಕೋರ್ಟ್ ಶಾಸಕ ಸತೀಶ್ ಸೈಲ್ ಗೆ ಜಾಮೀನು ಮಂಜೂರು ಮಾಡಿತ್ತು. ಅನಾರೋಗ್ಯಕ್ಕೆ ಚಿಕಿತ್ಸೆ ಕಾರಣಕ್ಕಾಗಿ ಈ ಜಾಮೀನು ಮಂಜೂರು ಮಾಡಲಾಗಿತ್ತು. ಇಂದಿನವರೆಗೆ ಜಾಮೀನು ವಿಸ್ತರಣೆ ಕೂಡ ಆಗಿತ್ತು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಅವರಿಗೆ ನೀಡಿದ್ದಂತ ಮಧ್ಯಂತರ ಜಾಮೀನು ರದ್ದುಗೊಳಿಸಿದೆ. ಹೀಗಾಗಿ ಶಾಸಕ ಸತೀಶ್ ಸೈಲ್ ಮತ್ತೆ ಜೈಲುಪಾಲಾಗಲಿದ್ದಾರೆ ಎನ್ನಲಾಗುತ್ತಿದೆ.

Read More

ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…

Read More

ಮಂಗಳೂರು : ಮಂಗಳೂರಿನ ಉದ್ಯಮಿಯ ಪುತ್ರನ ಮೃತ ದೇಹ ನದಿಯಲ್ಲಿ ಪತ್ತೆಯಾಗಿದೆ ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಆಳ್ವ (29) ಮೃತದೇಹ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಬಳಿ ಒಂದು ಘಟನೆ ನಡೆದಿದೆ. ಮುಲ್ಕಿ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ನವೀನ್ ಚಂದ್ರ ಆಳ್ವಪುತ್ರ ಅಭಿಷೇಕ ಆಳ್ವ ಮೃತದೇಹ ಪತ್ತೆಯಾಗಿದೆ. ನವೆಂಬರ್ 5ರಂದು ಮುಲ್ಕಿ ಬಪ್ಪನಾಡು ಬ್ರಿಡ್ಜ್ ಬಳಿ ಕಾರು ನಿಲ್ಲಿಸಿ ಅಭಿಷೇಕ್ ನಾಪತ್ತೆಯಾಗಿದ್ದ. ಇಂದು ಬೆಳಿಗ್ಗೆ ಬಪ್ಪನಾಡು ಸಮೀಪ ನದಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ಅಭಿಷೇಕ್ ತನ್ನ ತಂದೆಯ ಉದ್ಯಮವನ್ನು ಮುನ್ನಡೆಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದ್ದು, ತಿರುವೈಲು ಗುತ್ತು ಕರಾವಳಿ ಕಂಬಳದಲ್ಲಿ ಈ ಒಂದು ಮನೆತನ ಗುರುತಿಸಿಕೊಂಡಿದ್ದು, ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಇದೀಗ ಮೃತದೇಹ ಪತ್ತೆಯಾಗಿದ್ದು ಮಂಗಳೂರಿನ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಸರಗೂರು ತಾಲೂಕಿನ ಹಳೆ ಹೆಗ್ಗೋಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಲಿಯಾಗಿದ್ದಾನೆ. 8ತಿಂಗಳ ಹಿಂದೆ ಆನೆ ದಾಳಿಯಿಂದ ತಪ್ಪಿಸಿಕೊಂಡಿದ್ದ ರೈತ ಇಂದು ಹುಲಿ ದಾಳಿಗೆ ಬಲಿಯಾಗಿದ್ದಾನೆ. ಹುಲಿ ದಾಳಿಯಿಂದ ಚೌಡಯ್ಯ (58) ಎನ್ನುವ ರೈತ ಸ್ಥಳದಲ್ಲಿ ಸಾವನಪ್ಪಿದ್ದು, ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಹುಲಿ ದಾಳಿಗೆ ರೈತನೊಬ್ಬ ಬಳಿ ಹಾಕಿದ್ದ ಘಟನೆ ನಡೆದಿತ್ತು ಈ ಒಂದು ಘಟನೆ ಮಾಸುವ ಮುನ್ನವೇ ಮತ್ತೊಬ್ಬ ರೈತ ಹುಲಿ ದಾಳಿಗೆ ಸಾವನಪ್ಪಿದ್ದಾನೆ.

Read More

ಚಾಮರಾಜನಗರ : ಇತ್ತೀಚಿಗೆ ರೈತನೊಬ್ಬನನ್ನು ಕೊಂದ ಹುಲಿ ಸೆರೆಗಾಗಿ ಇದೀಗ ನಾಗರಹೊಳೆ ಬಂಡಿಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಸೂಚಿಸಿದ್ದಾರೆ. ಇಂದು ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಚೌಡಯ್ಯ ನಾಯ್ಕ (35) ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಈ ಹಿನ್ನೆಲೆ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ…

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ 14 ಕೆಜಿಗೂ ಹೆಚ್ಚು ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯರ ವಿರುದ್ಧ 153 ಕೋಟಿ ರೂಪಾಯಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಾಟ ಮಾಡಿರೋದು ಪ್ರಕರಣದ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈಗಾಗಲೇ 5 ಜನ ಆರೋಪಿಗಳಿಗೂ ಕೂಡ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್‌ಐ ಕೇವಲ ರನ್ಯಾ ರಾವ್ 102 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮ ಮಾಡಿದ್ದಾರೆ ಅನ್ನೋದು ಸ್ಪಷ್ಟವಾಗಿ ತನಿಖೆಯಲ್ಲಿ ಅನಾವರಣ ಆಗಿದೆ.ಇದ್ರಲ್ಲಿ ಮಲತಂದೆ ರಾಮಚಂದ್ರರಾವ್ ಅವರ ಕಾರು ದುರ್ಬಳಕೆ, ರಾಜಕಾರಣಿಗಳ ಹೆಸರು ದುರ್ಬಳಕೆ ಎಲ್ಲಾ ಮಾಹಿತಿಯೂ ತನಿಖೆಯಲ್ಲಿ ಬಹಿರಂಗ ಆಗಿದೆ.ಇನ್ನುಳಿದ ನಾಲ್ವರು ಆರೋಪಿಗಳಿಗೂ ಕೂಡ ಪ್ರತ್ಯೇಕ ಶೋಕಾಸ್ ನೋಟಿಸ್ ನೀಡಲಾಗಿತ್ತು. ಈಗ ಪ್ರಕರಣ ಕೊನೆಯ ಹಂತಕ್ಕೆ ತಲುಪಿದ್ದು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ.

Read More

ನವದೆಹಲಿ : ದೇಶಾದ್ಯಂತ ಬೀದಿನಾಯಿಗಳ ಉಪಟಳ ಹೆಚ್ಚಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಇದೀಗ ಮಹತ್ವದ ಆದೇಶ ಹೊರಡಿಸಿದ್ದು ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆಗಳು ಶಾಲೆಗಳು ಹಾಗೂ ಕಾಲೇಜುಗಳಿಗೆ ಬೇಲಿ ಹಾಕುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೆದ್ದಾರಿಗಳಿಂದ ಬೀದಿ ಪ್ರಾಣಿಗಳನ್ನು ತಡೆಯಲು ಕ್ರಮವಹಿಸಲು ಸೂಚನೆ ನೀಡಿದೆ ಎರಡು ವಾರದಲ್ಲಿ ಬೇಲಿ ಹಾಕುವ ಕೆಲಸ ಆಗಬೇಕು ಇದರ ನಿರ್ವಹಣೆಗೆ ನೋಡಲ್ ಅಧಿಕಾರಿಯನ್ನು ನೇಮಿಸಬೇಕು ಸ್ಥಳೀಯ ಆಡಳಿತ ಸಂಸ್ಥೆಗಳು ಮೂರು ತಿಂಗಳಿಗೊಮ್ಮೆ ಪರಿಶೀಲಿಸಬೇಕು ಹೆದ್ದಾರಿಗಳಲ್ಲಿ ಪ್ರಾಣಿಗಳನ್ನು ಪತ್ತೆಹಚ್ಚಲು ಗಸ್ತು ತಂಡ ರಚಿಸಬೇಕು ಪ್ರಾಣಿಗಳ ಬಗ್ಗೆ ದೂರು ನೀಡಲು ಸಹಾಯವಾಣಿ ಸ್ಥಾಪಿಸಬೇಕು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿತು ಆದೇಶ ಜಾರಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

Read More

ಬೆಂಗಳೂರು : ಒಂದೆಡೆ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತಿದ್ದು ಮತ್ತೊಂದು ಕಡೆ ಸಂಪುಟ ಪುನರಚನೆ, ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯ ಬಿಜೆಪಿ ಶಾಸಕ ಸುನಿಲ್ ಕುಮಾರ್ ಜನವರಿ ಹೊತ್ತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪಥನವಾಗಲಿದ್ದು ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ ಮಾಡಿಕೊಳ್ಳಲಿದೆ ಎಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕಳೆದ ಎರಡೂವರೆ ವರ್ಷದಿಂದ ಕಾಂಗ್ರೆಸ್‌ ಸರ್ಕಾರ ಕಾಲ ಹರಣ ಮಾಡಿದ್ದು, ಪಕ್ಷದವರೇ ನವೆಂಬರ್ ಕ್ರಾಂತಿ ಎನ್ನುವುದನ್ನು ಹುಟ್ಟುಹಾಕಿ ಚರ್ಚೆ ಮಾಡುತ್ತಿದ್ದಾರೆ. ನಾಯಕರು ಸಿಎಂ ಯಾರಾಗಬೇಕು ಎನ್ನುವ ಗೊಂದಲದಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಶಾಸಕರು ಪ್ರತ್ಯೇಕವಾಗಿ ಸಭೆ ಮಾಡುತ್ತಿದ್ದು, ಜನವರಿ ಹೊತ್ತಿಗೆ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ. ಹಾಗಾಗಿ ಮಧ್ಯಂತರ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಹೇಳಿದ್ದಾರೆ. ರಾಜ್ಯದ ಜನರು ಈ ಹಿಂದೆಯೇ ಕಬ್ಬು ಬೆಳೆಗೆ ನಿರ್ದಿಷ್ಟ ಬೆಲೆ ನಿಗದಿಗೆ ಒತ್ತಾಯಿಸಿದ್ದರು. ಕಳೆದ 8 ದಿನಗಳಿಂದ ರೈತರು…

Read More

ಎಷ್ಟೇ ಜನ ಮಗುವಿನ ಲಾಲನೆ ಪಾಲನೆ ಮಾಡಿದರೂ ತಾಯಿಯನ್ನು ನೋಡಿಕೊಂಡಂತೆ ಆಗುವುದಿಲ್ಲ ಎನ್ನುತ್ತಾರೆ. ಕುಟುಂಬ ದೇವತೆಯ ಆರಾಧನೆಯ ವಿಷಯವೂ ಇದೇ ಆಗಿದೆ. ನಾವು ಎಷ್ಟೇ ಸಾವಿರ ದೇವರನ್ನು ಪೂಜಿಸಿದರೂ ನಮಗೆ ಕಷ್ಟ ಬಂದಾಗ ಮೊದಲು ಬಂದು ಸಹಾಯ ಮಾಡುವವರು ನಮ್ಮ ಕುಲದೇವರು. ಕುಲದೇವತೆಯಲ್ಲಿ ಹೃದಯ ಕರಗಿ ನಿಂತರೆ ಇತರ ದೇವತೆಗಳು ಕೇಳಿ ಪಡೆಯದ ವರಗಳೂ ತಾನಾಗಿಯೇ ಆಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಈ ಒಂದು ಕಾರ್ಯವನ್ನು ಮಾಡಿದರೆ ಅಂತಹ ಶಕ್ತಿಶಾಲಿ ಕುಲದೇವತೆಯನ್ನು ನಮ್ಮ ಮನೆಯಲ್ಲಿ ಸದಾ ಇರಿಸಬಹುದು ಎಂದು ಹೇಳಲಾಗುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ಏನು ಮತ್ತು ಹೇಗೆ ಮಾಡಬೇಕೆಂದು ನೀವು ಕಂಡುಹಿಡಿಯಬಹುದು . ಆರಾಧನಾ ದೇವತೆಯ ಆರಾಧನೆಯು ನಮ್ಮೊಂದಿಗೆ ಮಾತ್ರ ಮಾಡಬಹುದಾದ ವಿಷಯವಲ್ಲ. ಇದು ನಮ್ಮ ಪೂರ್ವಜರು ಪೂಜಿಸಿದ ಮತ್ತು ನಾವು ಪೂಜಿಸುವ ದೇವತೆ ಮತ್ತು ನಮ್ಮ ಮುಂದಿನ ಪೀಳಿಗೆಯೂ ಪೂಜಿಸಬೇಕು. ಈ ದೇವತೆ ಸದಾ ನಮ್ಮೊಂದಿಗಿದ್ದರೆ…

Read More