Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾ.ಮೈಕಲ್ ಡಿ.ಕುನ್ಹಾ ಅವರ ವರದಿಯಲ್ಲಿ ಹಲವು ಅಂಶಗಳು ಉಲ್ಲೇಖವಾಗಿವೆ. ಕುನ್ಹಾ ವರದಿಯಲ್ಲಿ ಕಲ್ತುಳಿತ ಪ್ರಕರಣಕ್ಕೆ KSCA, RCB, DNA ಮತ್ತು ಪೊಲೀಸರೇ ನೇರ ಹೊಣೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರಕ್ಕೆ ಸಲ್ಲಿಸಿರುವ ಮೈಕಲ್ ಡಿ ಕುನ್ಹ ವರದಿಯಲ್ಲಿ ಇವೆಲ್ಲಾ ಅಂಶಗಳು ಉಲ್ಲೇಖವಾಗಿವೆ. ವಿಜಯೋತ್ಸವ ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂದು ಗೊತ್ತಿದ್ದರೂ ಕೂಡ ಎಲ್ಲರೂ ಶಾಮಿಲಾಗಿ ಕಾರ್ಯಕ್ರಮ ನಡೆಸಿದ್ದರು. ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲರ ಕರ್ತವ್ಯ ಲೋಪವಾಗಿದೆ. ಇದರಲ್ಲಿ ಎಲ್ಲರ ನಿರ್ಲಕ್ಷತನದ ಪರಮಾವಧಿ ಎದ್ದು ಕಾಣುತ್ತಿದೆ. ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂದು ಉಲ್ಲೇಖಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಇದ್ದಿದ್ದು 79 ಪೋಲೀಸರು ಮಾತ್ರ. ಹೊರಗೆ ಪೊಲೀಸರು…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಇಬ್ಬರಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಯುವತಿಯ ಸಾಲದ ವಿಚಾರಕ್ಕೆ ಗಲಾಟೆ ಆಗಿ ಇಬ್ಬರಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದ್ದು, ಜಗಳ ಬಿಡಿಸಲು ಬಂದ ಮತ್ತು ಸಾಲ ನೀಡಿದವನಿಗೆ ಇಬ್ಬರಿಗೂ ಚಾಕು ಇರಿದಿದ್ದಾರೆ. ಹೌದು ನಾಲ್ಕರಿಂದ ಐದು ಯುವಕರ ಗ್ಯಾಂಗ್ ನಿಂದ ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ. ಜಗಳ ಬಿಡಿಸಲು ಬಂದ ಚೇತನ್ ಮತ್ತು ಸಾಲ ನೀಡಿದ ಸುದೀಪ್ ಇಬ್ಬರಿಗೂ ಚಾಕು ಇರಿದಿದ್ದಾರೆ. ಸದ್ಯ ಜಗಳ ಬಿಡಿಸಲು ಬಂದ ಚೇತನಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸಾಲ ತೆಗೆದುಕೊಂಡ ಸುದೀಪ್ ನೆಲಮಂಗಲದ ಜ್ಯೂಸ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ. ಎರಡು ವರ್ಷದ ಹಿಂದೆ ಸುದೀಪ್ ಗೆ ಯುವತಿಯೊಬ್ಬಳು ಪರಿಚಯವಾಗಿ ಪ್ರೀತಿಸಿದ್ದರು. ಈ ನಡುವೆ ಯುವತಿಗೆ 2000 ಹಣ ಸುದೀಪ್ ಸಾಲ ನೀಡಿದ್ದ. ಕೆಲ ತಿಂಗಳ ಹಿಂದೆ ಯುವತಿ ಮತ್ತು ಸುದೀಪ್ ನಡುವೆ ಬ್ರೇಕ್ ಅಪ್ ಆಗಿತ್ತು, ಯುವತಿಗೆ ಹಣ ವಾಪಸ್ ನೀಡುವಂತೆ ಸುದೀಪ್…
ಬೆಂಗಳೂರು : ಮುಂದಿನ 10 ದಿನಗಳಲ್ಲಿ ನಿಗಮ ಮಂಡಳಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ. ಕೆಲವೇ ದಿನಗಳಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತೆ ರಾಜಕ್ಕೆ ಆಗಮಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ನಿನ್ನೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ಭರ್ತಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪಕ್ಷದ ಸಂಘಟನೆ ವಿಚಾರದಲ್ಲಿ ಏನೆಲ್ಲಾ ಖಾಲಿ ಇದೆ, ತುಂಬಬೇಕು. ಮುಂದಿನ ಹತ್ತು ದಿನದಲ್ಲಿ ತುಂಬಲಿದ್ದೇವೆ. ಸುರ್ಜೇವಾಲ ಮತ್ತೆ ಬೆಂಗಳೂರಿಗೆ ಬರಲಿದ್ದಾರೆ. ಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಪಕ್ಷದ ಕಾರ್ಯಕರ್ತರಿದ್ದಾರೆ, ಅವರನ್ನೂ ನೇಮಕ ಮಾಡುವ ಕೆಲಸ ಆಗಲಿದೆ ಎಂದರು. ಇನ್ನು ದೆಹಲಿಗೆ ಹೋಗಿ ಬಂದ ಬಳಿಕ, ನೀರಾವರಿ ನಿಗಮದ ಬಗ್ಗೆ ತಿಳಿಸಿದ್ದೇವೆ. ಕೃಷ್ಣಾ, ಎತ್ತಿನಹೊಳೆ, ಕಳಸಬಂಡೂರಿ, ಮೇಕೆದಾಟು ಯೋಜನೆ ಏನೆಲ್ಲಾ ಪ್ರಸ್ತಾವನೆ ಇದೆಯೋ ಅದನ್ನು ತಿಳಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆ ಒಂದು ನಡೆದಿದ್ದು ದಂಪತಿಗಳು ಸಂಘ ಒಂದರಲ್ಲಿ ಸಾಲ ತೆಗೆದುಕೊಂಡಿರುತ್ತಾರೆ. ಆದರೆ ಈ ಒಂದು ಸಾಲ ತೀರಿಸಲು ಆಗದೆ 20 ದಿನದ ಹಸುಗೂಸನ್ನು ಮಾರಾಟ ಮಾಡಿರುವ ಅಮಾನವೀಯ ಘಟನೆ ದಾಂಡೇಲಿಯಲ್ಲಿ ನಡೆದಿದೆ. ಹೌದು ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಳೇ ದಾಂಡೇಲಿಯ ದೇಶಪಾಂಡೆ ನಗರದಲ್ಲಿ ನಡೆದಿದೆ. ಮಗು ಖರೀದಿಸಿದ ಬೆಳಗಾವಿಯ ಆನಗೋಳದ ನಿವಾಸಿಗಳಾದ ನೂರ್ ಮಹಮ್ಮದ್ ಅಬ್ದುಲ್ ಮಜೀದ್ (47), ಕಿಶನ್ ಐರೇಕರ (42) ಮಗು ಖರೀದಿಸಿದವರು. ಸಾಲದ ಸುಳಿಗೆ ಸಿಲುಕಿದ ದಂಪತಿ ತಮ್ಮ 20 ದಿನದ ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಪೊಲೀಸರು ಬೆಳಗಾವಿಯಲ್ಲಿ ಮಗುವನ್ನು ಖರೀದಿಸಿದವರನ್ನು ಬಂಧಿಸಿ, ಮಗುವನ್ನು ರಕ್ಷಿಸಿದ್ದಾರೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬುವರು ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ತಂದೆ ವಸೀಂ ಚಂಡು ಪಟೇಲ್ ಮೈತುಂಬಾ ಸಾಲ ಮಾಡಿಕೊಂಡಿದ್ದರು. ಸಂಘದ…
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿತ್ತು. ಆದರೆ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ವಿಚಾರಗಳಿಗೆ ತಿಲಾಂಜಲಿ ಇಟ್ಟಿದ್ದು, 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಅಲ್ಲದೆ 2028ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಲವು ಶಾಸಕರು ಹೇಳಿಕೆ ನೀಡಿದ್ದರು. ಆದರೆ ಡಿಕೆ ಶಿವಕುಮಾರ್ ಯಾವುದಕ್ಕೂ ಪ್ರತಿಕ್ರಿಯೆ ನೀಡದೆ ಹೈಕಮಾಂಡ್ ಏನು ಹೇಳುತ್ತೋ ಅದೇ ಫೈನಲ್ ಅವರ ಹೇಳಿಕೆಗೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಏನೇ ಹೇಳಿದರೂ ಕೂಡ ಮನಸಲ್ಲಿ ಸಿಎಂ ಕುರ್ಚಿಗಾಗಿ ಯಾವುದೇ ನಾಯಕನಿರಲಿ ಆಸೆ ಇದ್ದೇ ಇರುತ್ತದೆ. ಇದೀಗ ಬೆಂಗಳೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ನಾವು ಚೇರ್ ಗಾಗಿ ಬಡದಾಡುತ್ತಿದ್ದೇವೆ ನೀವು ಚೇರ್ ಬೇಡ ಅಂತಿದ್ದೀರಾ ಬಂದು ಕುರ್ಚಿಯಲ್ಲಿ ಕೂತ್ಕೊಳ್ಳಿ ಎಂದು ಹೇಳಿಕೆ ನೀಡಿದ್ದು…
ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕುರಗೋಡು ತಾಲೂಕಿನ ಬಸ್ ನಿಲ್ದಾಣದ ಬಳಿ ನಡೆದಿದೆ. ಸರ್ಕಾರಿ ಬಸ್ ಬಳ್ಳಾರಿಗೆ ತೆರಳುತ್ತಿತ್ತು ಕುರುಗೋಡು ಡಿಪೋಗೆ ಸೇರಿದ ಕ 34 F-2016 ಸಂಖ್ಯೆಯ ಬಸ್ ತೆರಳುತ್ತಿತ್ತು. ಈ ವೇಳೆ ಏಕಾಏಕಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ. ಬಸ್ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಬಸ್ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಆ ವೇಳೆಯಲ್ಲಿ ಕಂಬದಲ್ಲಿ ಕರೆಂಟ್ ಇಲ್ಲದಿರುವುದರಿಂದ ಪ್ರಯಾಣಿಕರೆಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ. ಘಟನೆ ಕುರಿತಂತೆ ಕುರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ಪಿಣ್ಯ ಬಳಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದೆ. ಮಹಿಳೆ ಓಡಿಸುತ್ತಿದ್ದ ಕಾರಿಗೆ ಅಡ್ಡ ಹಾಕಿ ಕ್ಯಾಂಟರ್ ಚಾಲಕನೊಬ್ಬ ಕಿರಿಕ್ ಮಾಡಿದ್ದಾನೆ. ಮಹಿಳೆಯ ಜೊತೆ ಕ್ಯಾಂಟರ್ ಚಾಲಕ ನಂದನ್ ಗಲಾಟೆ ನಡೆಸಿದ್ದಾನೆ.ಜುಲೈ 5 ರಂದು ಪೀಣ್ಯ ಫ್ಲೈ ಓವರ್ ಬಳಿ ಈ ಒಂದು ಘಟನೆ ನಡೆದಿದೆ. ನೆಲಮಂಗಲದ ವೈದ್ಯ ಗೋವಿಂದಸ್ವಾಮಿ ಪತ್ನಿ ಕಾರು ಚಲಾಯಿಸುತ್ತಿದ್ದರು. ನೆಲಮಂಗಲದಿಂದ ಬೆಂಗಳೂರು ಸಿಟಿ ಕಡೆ ಬರುವಾಗ ಹಿಂದಿನಿಂದ ಬಂದು ಕ್ಯಾಂಟರ್ ಚಾಲಕ ನಂದನ್ ಗಲಾಟೆ ಮಾಡಿದ್ದಾನೆ. ಕಾರಿನ ಬಾನೆಟ್ ಗೆ ರಾಡ್ ನಿಂದ ಹೊಡೆದು ಗಲಾಟೆ ಮಾಡಿದ್ದಾನೆ. ಸದ್ಯ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿ ಕಳುಹಿಸಿದ್ದು, ಮತ್ತೆ ವಿಚಾರಣೆ ಕರೆದರೆ ಬರುವಂತೆ ಸೂಚನೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು ಕರ್ತವ್ಯ ನಿರತ ಕಾನ್ಸ್ಟೆಬಲ್ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪನ ಮೇಲೆ ಈ ಒಂದು ಹಲ್ಲೆ ನಡೆದಿದ್ದು, ಅಣ್ಣಪ್ಪ ಮತ್ತು ಪತ್ನಿ ಮಗು ರೇಣುಕಾಯಲ್ಲಮ್ಮ ದೇವಸ್ಥಾನಕ್ಕೆ ದೇವಿ ದರ್ಶನಕ್ಕೆ ಬಂದಿದ್ದರು. ಈ ವೇಳೆ ದೇಗುಲದಲ್ಲಿ ಅಣ್ಣಪ್ಪನ ಪತ್ನಿ ಮಗುವಿಗೆ ತಿಂಡಿ ತಿನಿಸುತ್ತಿದ್ದರು. ದೇಗುಲದಲ್ಲಿ ತಿಂಡಿ ತಿನ್ನಿಸದಂತೆ ಗೃಹ ರಕ್ಷಕ ದಳ ಸಿಬ್ಬಂದಿ ಅವರಿಗೆ ಹೇಳಿದ್ದಾರೆ. ಬಳಿಕ ದೇಗುಲದ ಹೊರಗೆ ಬಂದು ಪತಿ-ಪತ್ನಿ ಮಗುವಿಗೆ ತಿಂಡಿ ತಿನ್ನಿಸುತ್ತಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ ಆರೋಪ ಕೇಳಿ ಬಂದಿದ್ದು ಇದನ್ನು ಪ್ರಶ್ನೆ ಮಾಡಿದ ಅಣ್ಣಪ್ಪನ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಸೌದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಕೊಲೆಯಾಗಿದ್ದು, ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಎಣ್ಣೆ ಪಾರ್ಟಿಯ ವೇಳೆ ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಶಿವಮೊಗ್ಗದ ಹೊರವಲಯದ ಬೊಮ್ಮನಕಟ್ಟಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಗಲಾಟೆಯ ವೇಳೆ ಮಚ್ಚಿನಿಂದ ಹಳೆ ನಡೆಸಿ ಪವನ್ (28) ಕೊಲೆ ಮಾಡಲಾಗಿದೆ. ಶಿವಮೊಗ್ಗದ ಹೊರವಲಯದ ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಗಲಾಟೆ ವೇಳೆ ಮಚ್ಚಿನಿಂದ ಹಲ್ಲೆ ನಡೆಸಿ ಪವನ್ (28) ಎನ್ನುವ ಯುವಕನನ್ನು ಕೊಲೆ ಮಾಡಲಾಗಿದೆ. ಸ್ನೇಹಿತ ಪವನ್ ಅನ್ನು ಶಿವಕುಮಾರ್ ಎನ್ನುವ ಆರೋಪಿ ಕೊಲೆ ಮಾಡಿದ್ದಾನೆ. ಶಿವಕುಮಾರ್ ಮನೆಗೆ ರಾತ್ರಿ ಪವನ್ ಎಣ್ಣೆ ಪಾರ್ಟಿಗೆ ಎಂದು ತೆರಳಿದ್ದ. ಎಣ್ಣೆ ಪಾರ್ಟಿಯ ವೇಳೇ ಇಬ್ಬರು ನಡುವೆ ಗಲಾಟೆ ನಡೆದಿದೆ. ಸದ್ಯ ಸ್ಥಳಕ್ಕೆ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ. ಸದ್ಯ ಆರೋಪಿ ಶಿವಕುಮಾರ ವಶಕ್ಕೆ ಪಡೆದುಕೊಂಡಿದ್ದು, ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲಬುರ್ಗಿಯಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ದರೋಡೆ ನಡೆಸಲಾಗಿದೆ. ಕಲ್ಬುರ್ಗಿ ನಗರದ ಸೂಪರ್ ಮಾರ್ಕೆಟ್ ನಲ್ಲಿರುವ ಸರಫ್ ಬಜಾರ್ ನಲ್ಲಿ ಮಾಲಿಕ್ ಜ್ಯುವೆಲರಿ ಅಂಗಡಿಗೆ ನುಗ್ಗಿ ಗನ್ ತೋರಿಸಿ ಬೆದರಿಸಿ ದರೋಡೆ ನಡೆಸಿದ್ದಾರೆ. ಹೌದು ಕಲ್ಬುರ್ಗಿಯ ಸರಾಫ್ ಬಜಾರ್ ನಲ್ಲಿ ಈ ಒಂದು ದರೋಡೆ ನಡೆದಿದೆ. ಮಾಲಿಕ್ ಜುವೆಲರ್ಸ್ ನಲ್ಲಿ ಗನ್ ಹಿಡಿದು ಹಾಡ ಹಗಲೇ ದರೋಡೆ ನಡೆಸಲಾಗಿದ್ದು, ಏಕಾಏಕಿ ನಾಲ್ವರ ಗ್ಯಾಂಗ್ ಅಂಗಡಿಗೆ ನುಗ್ಗಿ ಚಿನ್ನಾಭರಣ ದೋಚಿದೆ. ಸದ್ಯ ಘಟನಾ ಸ್ಥಳಕ್ಕೆ ಕಲ್ಬುರ್ಗಿ ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ ಬಂದಿದ್ದ ದರೋಡೆಕೋರರಿಂದ ಈ ಕೃತ್ಯ ತೆಗೆದುರಿಸಿ ದರೋಡೆಸಿದರೆ ಸುಮಾರು ಎರಡರಿಂದ ಮೂರು ಕೆಜಿ ಚಿನ್ನ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅಲ್ಲಿದಂತಹ ಪ್ರತ್ಯಕ್ಷದರ್ಶಿ ಒಬ್ಬರು…














