Subscribe to Updates
Get the latest creative news from FooBar about art, design and business.
Author: kannadanewsnow05
BREAKING : ರಾಜ್ಯದಲ್ಲಿ 2 ಸಾವಿರ ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಆರಂಭ : ಸಿಎಂ ಸಿದ್ದರಾಮಯ್ಯ
ರಾಜ್ಯದ ಸರ್ಕಾರಿ ಕಾಲೇಜು ಇಂಜಿನಿಯರಿಂಗ್ ಕಾಲೇಜು ಹಾಗೂ ಪಾಲಿಟೆಕ್ನಿಕ್ಗಳಲ್ಲಿ ಖಾಲಿಯಿರುವ 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನ ಭರ್ತಿ ಮಾಡುವ ಪ್ರಕ್ರಿಯೆಯನ್ನ ಈಗಾಗಲೇ ಆರಂಭಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳೆದ 2 ದಶಕಗಳಿಂದ ಕಾಲಕಾಲಕ್ಕೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ನೇಮಕಾತಿ ಸರಿಯಾಗಿ ಆಗದಿರುವುದರಿಂದ ಶಿಕ್ಷಕರ ಕೊರತೆ ಕಾಡುತ್ತಿದೆ. ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಶೇ. 60-70 ರಷ್ಟು ಶಿಕ್ಷಕರ ಹುದ್ದೆಗಳು ಖಾಲಿಯಿರುವುದು ಸರ್ಕಾರದ ಗಮನದಲ್ಲಿದೆ. ಈ ಹಿನ್ನೆಲೆಯಲ್ಲಿ ನಾವು ಸರ್ಕಾರಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಹಾಗೂ ಪಾಲಿಟೆಕ್ನಿಕ್ಗಳಲ್ಲಿ ಖಾಲಿಯಿರುವ 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನ ಭರ್ತಿ ಮಾಡುವ ಪ್ರಕ್ರಿಯೆಯನ್ನ ಈಗಾಗಲೇ ಆರಂಭಿಸಿದ್ದೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಒಟ್ಟು ದಾಖಲಾತಿ ಅನುಪಾತ [GER) ರಾಷ್ಟೀಯ ಸರಾಸರಿಗಿಂತ ಹೆಚ್ಚಾಗಿದೆ. ಇದು ಎಲ್ಲರನ್ನೂ ಒಳಗೊಂಡ ಸಾಮಾಜಿಕ ವ್ಯವಸ್ಥೆಯನ್ನು ಪಾಲಿಸುತ್ತಿರುವುದರ ನಿದರ್ಶನವಾಗಿದೆ. 2030 ರ ವೇಳೆಗೆ 50% ಒಟ್ಟು…
ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಇಂದು ನಡೆದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕುಲಪತಿಗಳ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ವಿವಿ ಕುಲಪತಿಗಳೂ ಒಪ್ಪಿಗೆ ಸೂಚಿಸಿದ್ದಾರೆ. ಸಣ್ಣ ವಯಸ್ಸಿನ ಮಕ್ಕಳಲ್ಲಿ ಮೊಬೈಲ್, ಸೋಷಿಯಲ್ ಮೀಡಿಯಾ (Social Media) ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ ಕಡೆಗಿನ ಆಸಕ್ತಿ ಕಡಿಮೆಯಾಗಿ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಾರೆ. ಹಿಂದೆಲ್ಲಾ ಮಕ್ಕಳಿಗೆ ಚಂದಮಾಮನನ್ನ ತೋರಿಸಿ ಊಟ ಮಾಡಿಸುತ್ತಿದ್ದರು. ಶಾಲೆಯಲ್ಲಿ ಮಕ್ಕಳು ಪಾಠಪ್ರವಚನ, ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಈಗ ಮೊಬೈಲ್, ಆನ್ಲೈನ್ ಗೇಮಿಂಗ್, ಸೋಷಿಯಲ್ ಮೀಡಿಯಾ ಇವುಗಳೇ ಅವರ ಪ್ರಪಂಚವಾಗಿಬಿಟ್ಟಿದೆ. ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹಾಗಾಗಿ ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್…
ಬೆಂಗಳೂರು : ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಆ ಮೂಲಕ ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅವರು ಇಂದು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ5 ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಹೊನ್ನಾರು ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನಿಂದ 26 ರ ವರೆಗೆ ಕಲಾಸಕ್ತರಿಗೆ ನಾಟಕಗಳನ್ನು ವೀಕ್ಷಿಸುವ ಸದವಕಾಶ ದೊರೆತಿದೆ. ನಾಟಕ ತಂಡಗಳು ಐವತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಅತ್ಯಂತ ಸೂಕ್ತವಾಗಿದೆ ಎಂದರು. ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ನಟನೆ ಎಲ್ಲರಿಗೂ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸಂದೇಶಗಳುಳ್ಳ ಸಿನಿಮಾಗಳು ವಿರಳ ಹಿಂದಿನ ಕಾಲದ ಸಿನಿಮಾಗಳಲ್ಲಿ ಸಂದೇಶಗಳಿರುತ್ತಿತ್ತು. ಇಂದಿನ ಸಿನಿಮಾಗಳಲ್ಲಿ ಸಮಾಜಕ್ಕೆ ಸಂದೇಶಗಳುಳ್ಳ ಸಿನಿಮಾಗಳು ವಿರಳ ಅಥವಾ ಇಲ್ಲವೇ ಇಲ್ಲ ಎಂಬಂತಾಗಿದೆ ಎಂದರು. ರಂಗಭೂಮಿ ಹಿನ್ನೆಲೆಯ…
ಬಾಗಲಕೋಟೆ : ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಜಿಲ್ಲಾಡಳಿತವು ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್ಗೆ ಒಂದು ತಿಂಗಳ ಕಾಲ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಹೌದು ಕಳೆದ 2 ದಿನಗಳ ಹಿಂದೆ ನಗರದಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಗಪ್ಪ (ಬಾ.ಆ.ಸೇ) ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. “ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 (BNSS) ಸೆಕ್ಷನ್ 163” ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿರುವ ಜಿಲ್ಲಾಧಿಕಾರಿಗಳು, ಫೆಬ್ರವರಿ…
ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲಂಚ ಕೊಟ್ಟು ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆದುಕೊಂಡಿದ್ದಾರೆಂಬ ಆಡಿಯೋ ಸೋಶಿಯಲ್ ಮೀಡಿಯಾವನ್ನು ಸ್ನೇಹಮಯಿ ಕೃಷ್ಣ ವೈರಲ್ ಮಾಡಿದ್ದರು. ವೈರಲ್ ಮಾಡಿ ಅಪಪ್ರಚಾರ ಮಾಡಲಾಗಿದೆ ಎಂದು ಸೈಬರ್ ಕ್ರೈಂ ಪೊಲೀಸರಿಗೆ ನಟೇಶ್ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೈಬರ್ ಕ್ರೈಂ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ನಿನ್ನೆ ಆರೆಸ್ಟ್ ಮಾಡಿದರು ಇದೀಗ, ತೀವ್ರ ವಿಚಾರಣೆ ಬಳಿಕ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸೈಬರ್ ಕ್ರೈ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ನಟೇಶ್ ಕೊಟ್ಟ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿ, ಆಡಿಯೋ ಸೃಷ್ಟಿ ಮಾಡಿದ್ದ ಮೈಸೂರು ಮೂಲದ ವಿನೋದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅದೇ ಪ್ರಕರಣದ ಆರೋಪಿಯಾಗಿರುವ ಸ್ನೇಹಮಯಿ ಕೃಷ್ಣರನ್ನ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದರು. ಆಡಿಯೋ ಮಾಡಿದವರು ಯಾರು? ಅಸಲಿ ಆಡಿಯೋ ಅಂದರೆ ಅದನ್ನ ನಿಮಗೆ ಕೊಟ್ಟವರು ಯಾರು? ಹೀಗೆ ಸಾಲು ಸಾಲು ಪ್ರಶ್ನೆಗಳನ್ನ ಮಾಡಿ…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಆಡಳಿತಾಧಿಕಾರಿ NVS ಕಿರಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ರಾಯನಕಲ್ಲು ಗ್ರಾಮ ಆಡಳಿತ ಅಧಿಕಾರಿ ಆಗಿರುವ ಕಿರಣ್ ಕುಮಾರ್, ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚನಹಳ್ಳಿ ತಾಲೂಕಿನ ರಾಯನ ಕಲ್ಲು ಗ್ರಾಮದಲ್ಲಿ ಫೋನ್ ಪೇ ಮೂಲಕ ಕಿರಣ್ ಕುಮಾರ್ ಲಂಚ ಪಡೆದಿದ್ದ. ಕಿರಣ್ ಕುಮಾರ್ ಚಿಕ್ಕಬಳ್ಳಾಪುರ ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. 28 ಗುಂಟೆ ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖರೀದಿಸಿದ ಜಮೀನು ಖಾತೆ ಮಾಡಿಕೊಡಲು 10,000 ಲಂಚಕ್ಕೆ ಕಿರಣ್ ಕುಮಾರ್ ಬೇಡಿಕೆ ಇಟ್ಟಿದ್ದ. 8,000 ಫೋನ್ ಪೇ ಮೂಲಕ ಪಡೆದಿದ್ದ ಪುನೀತ್ ಕಡಿವಾಳ ಎಂಬುವವರಿಂದ ಕಿರಣ್ ಕುಮಾರ್ ಲಂಚ ಪಡೆದಿದ್ದ.
ಬೆಂಗಳೂರು : ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಇಂದು 1,000 ಜನರು ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯ. https://twitter.com/siddaramaiah/status/2025114299912618186?t=LQqEjTo-Bz8tFRNogWsTig&s=19 ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತಿ ಮಹತ್ವದ್ದಾಗಿದ್ದು, ಇಲ್ಲಿ…
ಗದಗ : 5 ಲಕ್ಷ ರೂಪಾಯಿ ಕಮಿಷನ್ ಪಡೆಯುವಾಗ ಬಿಜೆಪಿ ಶಾಸಕ ಚಂದ್ರುಲ ಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಶಾಸಕ ಸೇರಿದಂತೆ ಮೂವರು ಲೋಕಾಯುಕ್ತ ವಶಕ್ಕೆ ಪಡೆದಿದ್ದಾರೆ. ಸದ್ಯ ಎಲ್ಲರನ್ನೂ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆ ಇಲ್ಲಿ ಚಂದ್ರು ಲಮಾಣಿ ಅವರಿಗೆ ಸೇರಿದ ಒಂದು ಆಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರನಿಂದ 5 ಲಕ್ಷ ಕಮಿಷನ್ ಪಡೆಯುವಾಗ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಳಕೆ ಬಿದ್ದಿದ್ದಾರೆ. ರಸ್ತೆ ಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ, 1ಕೋಟಿ ರುಪಾಯಿ ಮೊತ್ತದ ಮಾಲ್ ನಿರ್ಮಾಣ ಮಾಡೋದಿತ್ತು. ಇದಕ್ಕೆ 12 ಪರ್ಸೆಂಟ್ ಕಮಿಷನ್ ಕೇಳಿದರು. ಇದೀಗ ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ ನಡೆಸಿದೆ.ಶಾಸಕ ಚಂದ್ರು ಉಲಮಾಣಿ ಪಿಎ…
ಸಾಮಾನ್ಯವಾಗಿ ದೊಡ್ಡವರೇ ಎಷ್ಟೋ ಬಾರಿ ಲಿಪ್ಟ್ ನಲ್ಲಿ ಸಿಲುಕಿ ಪರದಾಟ ನಟಿಸಿರುವ ಘಟನೆಗಳು ವರದಿಯಾಗಿವೆ. ಇದೀಗ ಸಮಾಜಿಕ ಜಾಲತಾಣದಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಇಬ್ಬರು ಪುಟ್ಟ ಮಕ್ಕಳನ್ನು ಓರ್ವ ಬಾಲಕಿ ದೃತಿಗೆಡದೆ ಧೈರ್ಯವಾಗಿ ರಕ್ಷಣೆ ಮಾಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಹೌದು ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಲಿಫ್ಟ್ ನಲ್ಲಿ ಮಕ್ಕಳಿದ್ದಾಗಲೇ ಏಕಾಏಕಿ ಡೋರ್ ಲಾಕ್ ಆಗಿದೆ. ಮಕ್ಕಳ ರಕ್ಷಣೆಗೆ ಪ್ರಯತ್ನ ಮಾಡಲಾಗಿದೆ. ಓರ್ವ ಬಾಲಕಿ ಮಕ್ಕಳನ್ನು ರಕ್ಷಣೆ ಮಾಡಲು ಮುಂದಾಗಿದ್ದಾಳೆ. ಬಾಲಕಿಯ ಪ್ರಯತ್ನಕ್ಕೆ ಸ್ಥಳೀಯ ನಿವಾಸಿಗಳು ನೆರವಾಗಿದ್ದಾರೆ. ಬಾಲಕಿ ಬಾಗಿಲಲ್ಲಿ ಸಿಲುಕಿದರೂ ಕೂಡ ಭಯಪಡದೆ ಮಕ್ಕಳನ್ನು ರಕ್ಷಣೆ ಮಾಡಿದ್ದಾಳೆ. ಬಾಲಕಿಯ ಸಮಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.
ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಎನ್ ರಾಜಣ್ಣ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಮಾಡಿದ್ದು ಕುತೂಹಕ್ಕೆ ಕಾರಣವಾಗಿತ್ತು . ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾಯಕತ್ವದ ಗೊಂದಲದ ನಿವಾರಣೆಯ ಬಗ್ಗೆ ಖರ್ಗೆ ಭರವಸೆ ನೀಡಿದ್ದಾರೆ. ಖರ್ಗೆ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಿದ್ದೇವೆ ಹಾಗಾಗಿ ಗೊಂದಲ ಬೇಗನೆ ನಿವಾರಣೆ ಮಾಡಿ ಅಂತ ಚರ್ಚಿಸಿದ್ದೇವೆ. ಆದಷ್ಟು ಬೇಗ ಗೊಂದಲ ನಿವಾರಣೆ ಮಾಡುತ್ತೇವೆ ಅಂದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು.













