Author: kannadanewsnow05

ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಬಿ ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು, ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯಾಧ್ಯಕ್ಷರ ಆಯ್ಕೆ ಬಾಕಿ ಉಳಿದ ರಾಜ್ಯಗಳ ಬಗ್ಗೆ ಬಿಜೆಪಿ ಗಮನ ಹರಿಸಲಿದೆ ಎಂಬ ವರದಿಗಳ ಬೆನ್ನಲ್ಲೇ, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ.ಆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುತ್ತೇನೆ. ಪಕ್ಷ ಸಂಘಟನೆಯ ಉದ್ದೇಶದಿಂದ ಎಲ್ಲರನ್ನೂ ಭೇಟಿಯಾಗುತ್ತಿದ್ದೇನೆ. ಏನೇ ಸಮಸ್ಯೆ, ಕಷ್ಟ ಬಂದರೂ ಸಹಿಸಿಕೊಂಡು ಪಕ್ಷ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಕಾರ್ಯಕರ್ತರ ಮಧ್ಯೆ ದುಡಿಯುತ್ತಿದ್ದೇನೆ. ಸಣ್ಣ, ಪುಟ್ಟ ಸಮಸ್ಯೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸವನ್ನು ನಾನು ಮಾಡಿಕೊಂಡು ಹೋಗುತ್ತೇನೆ ಎಂದರು.

Read More

ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಯ ಕುರಿತು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊಟ್ಟಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು ಸದ್ಯಕ್ಕೆ ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನಿನ್ನೆ ಸಿಎಂ ಸಿದ್ದರಾಮಯ್ಯ ರಾತ್ರಿ 8 ಗಂಟೆಗೆ ಬೆಂಗಳೂರಿನ ಸದಾಶಿವನಗರ್ದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಹಲವು ವಿಚಾರಗಳು ಕುರಿತು ಚರ್ಚೆ ಮಾಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಏನೇ ಇದ್ದರೂ ಹೈಕಮಾಂಡ್ ಮಾಡುತ್ತೆ , ರಾಜ ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ. ಯಾವ ವಿಚಾರದಲ್ಲೂ ಹೇಳೋಕೆ ಏನೂ ಇಲ್ಲ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನು ಹೇಳಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಯಾವುದೇ ವಿಚಾರವನ್ನು ಬಿಟ್ಟು ಕೊಡದೆ ಎಲ್ಲವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ನುಣಿಚಿಕೊಂಡ ಪ್ರಸಂಗ ನಡೆಯಿತು.

Read More

ಮೈಸೂರು : ಕಾಂಗ್ರೆಸ್ ಶಾಸಕರನ್ನೇ ಖರೀದಿ ಮಾಡಲು 50 ಕೋಟಿ ಹಣ, ಒಂದು ಫ್ಲಾಟ್ ಹಾಗೂ ಫಾರ್ಚುನರ್ ಕಾರು ನೀಡಲಾಗುತ್ತದೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪಿಸಿದ್ದರು . ಇವರ ಒಂದು ಈ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ವಿ.ಸೋಮಣ್ಣ ಸಹ ಕಳೆದ ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಸ್ಪೋಟಕವಾದ ಆರೋಪ ಮಾಡಿದರು. ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಕರ್ನಾಟಕದ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರುವಾಗಿದೆ. ಕಳೆದು 1 ವರ್ಷದಿಂದಲೇ ಕುದುರೆ ವ್ಯಾಪಾರ ಶುರುವಾಗಿದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು ಹಿಡಿದಿದೆ ಇದೊಂದು ಲಫಂಗ ಸರ್ಕಾರ 2013ರಲ್ಲಿ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಕಾಣುತ್ತಿಲ್ಲ. ಇವಾಗ ಇರೋದು ಭ್ರಷ್ಟಾಚಾರದ ಸಿದ್ದರಾಮಯ್ಯ. ಕಾಂಗ್ರೆಸ್ನವರು ನವೆಂಬರ್ ಕ್ರಾಂತಿ ಮತ್ತು ಬ್ರಾಂತಿಯಲ್ಲಿ ಮುಳುಗಿದ್ದಾರೆ. ಇವರಿಗೆ ಅಧಿಕಾರದ…

Read More

ಬೆಂಗಳೂರು : ನಾನು ಯಾವಾಗ್ಲು ರೇಸ್ ಅಲ್ಲಿ ಇರ್ತೀನಿ. 2013ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ, ಎಲ್ಲರೂ ಸೇರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೆವು. ಆದರೆ ನಾನು ಸೋತೆ. ಒಂದು ವೇಳೆ ನಾನು ಗೆದ್ದಿದ್ದರೆ ಏನಾಗುತ್ತಿತ್ತು ಗೊತ್ತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ಎಟಿಎಂ ಹಣ ದರೋಡೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿರು. ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬಂಧಪಟ್ಟಂತೆ, ನಾನು ಕೂಡ ಸಿಎಂ ಆಕಾಂಕ್ಷಿ ನನಗೂ ಸಿಎಂ ಆಗುವ ಆಸೆ ಇದೆ. ಆದರೆ ಈ ಸಂದರ್ಭ ಆ ರೀತಿ ಇಲ್ಲ ಸಿಎಂ ಬದಲಾವಣೆಯನ್ನು ವಿಚಾರ ಬಂದಾಗ ಆ ಕುರಿತು ವಿಚಾರ ಮಾಡೋಣ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.…

Read More

ಚಾಮರಾಜನಗರ : ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಚಾಮರಾಜನಗರದ ಈದ್ಗ ಮೈದಾನದ ಬಂಜಾರ ಶಾಲೆಯ ಬಳಿ ವ್ಯಕ್ತಿಯ ಅನುಮಾನಸ್ಪದ ಶವ ಪತ್ತೆಯಾಗಿದೆ. ಕಾರಿನ ಚಾಲಕನ ಸೀಟ್ನಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ಕಾರು ಅಲ್ಲಿಗೆ ನಿಂತಿತ್ತು ಸಾರ್ವಜನಿಕರು ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಪರಿಶೀಲಿಸಿದಾಗ ಚಾಲಕನ ಸೀಟ್ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸದ್ಯ ಪೊಲೀಸರು ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ

Read More

ಕಲಬುರ್ಗಿ : ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ವಿರುದ್ಧ ಮತ್ತೊಂದು FIR ದಾಖಲಾಗಿದೆ. ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಇದೀಗ ಆತನ ವಿರುದ್ಧ FIR ದಾಖಲಾಗಿದೆ. ಆರ್‌ಡಿ ಪಾಟೀಲ್ ಮಧ್ಯಂತರ ಜಾಮೀನು ಮೇಲೆ ಬಿಡುಗಡೆಯಾಗಿದ್ದ. ಬಿಡುಗಡೆ ದಿನವೆ ಜೈಲಿ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾನೆ. ಶುಲ್ಲಕ ಕಾರಣಕ್ಕೆ ಆರ್ ಡಿ ಪಾಟೀಲ್ ಜೈಲು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ನವೆಂಬರ್ 20ರಂದು ಆರ್ಡಿ ಪಾಟೀಲ್ ಜೈಲಿಂದ ಬಿಡುಗಡೆಯಾಗಿದ್ದ. ಮೂರು ವಾರಗಳ ಮಧ್ಯಂತರ ಜಾಮೀನು ಪಡೆದಿದ್ದಾನೆ. ಅದೇ ದಿನ ಹಲ್ಲೆ ಮಾಡಿದ ಆರೋಪದ ಅಡಿ ಆತನ ವಿರುದ್ಧ FIR ದಾಖಲಾಗಿದೆ . ಆರೋಪಿ ಆರ್ ಡಿ ಪಾಟೀಲ್ ನಿಂದಲೂ ಪ್ರತಿದೂರು ದಾಖಲಾಗಿದೆ. ಜೈಲು ಸಿಬ್ಬಂದಿ ಶಿವಕುಮಾರ್ ವಿರುದ್ಧ ಪ್ರತಿ ದೂರು ದಾಖಲಾಗಿದೆ. ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಅಡಿಪಟೀಲ್ ದೂರು ನೀಡಿದ್ದಾನೆ. ಬಿಡುಗಡೆ ದಿನ ಅನಾವಶ್ಯಕವಾಗಿ ಹಲ್ಲೆ ಮಾಡಿದ್ದಾನೆ ಎಂದು…

Read More

ತಿರುಪತಿ : ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಸಿದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವ ನಡುವೆಯೇ, 2019-2024 ಅವಧಿಯಲ್ಲಿ ದೇವ ಸ್ಥಾನಕ್ಕೆ ಭೇಟಿ ನೀಡಿದ 11 ಕೋಟಿ ಭಕ್ತರಿಗೆ 48.76 ಕೋಟಿ ಲಡ್ಡು ವಿತರಿಸಲಾಗಿದೆ. ಇದರಲ್ಲಿ 20 ಕೋಟಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿದ್ದಾರೆ. ಈ ಮೊದಲು ಕೂಡ ತಿರುಪತಿಯಲ್ಲಿ ಕಲಬರಿಕೆ ತುಪ್ಪ ಬೆಳೆಸಿ ಭಕ್ತರಿಗೆ ಲಡ್ಡು ವಿತರಣೆ ಮಾಡಿರುವ ಪ್ರಕರಣ ನಡೆದಿತ್ತು. ಅದರ ಬೆನ್ನಲ್ಲೆ ಇದೀಗ 2019-2024 ಅವಧಿಯಲ್ಲಿ ದೇವ ಸ್ಥಾನಕ್ಕೆ ಭೇಟಿ ನೀಡಿದ 11 ಕೋಟಿ ಭಕ್ತರಿಗೆ 48.76 ಕೋಟಿ ಲಡ್ಡು ವಿತರಿಸಲಾಗಿದೆ. ಇದರಲ್ಲಿ 20 ಕೋಟಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿದ್ದಾರೆ. 5 ವರ್ಷದಲ್ಲಿ ದೇಗುಲಕ್ಕೆ ದೈನಂದಿನ ಭಕ್ತರ ಭೇಟಿ, ತುಪ್ಪ ಖರೀದಿ, ಲಡ್ಡು…

Read More

ನವದೆಹಲಿ : ಚಂಡೀಗಢವನ್ನು ಸಂವಿಧಾನದ 240 ನೇ ವಿಧಿಯ ಅಡಿಯಲ್ಲಿ ತರುವ ಕೇಂದ್ರ ಸರ್ಕಾರದ ಪ್ರಸ್ತಾವವು ಪಂಜಾಬಿನಲ್ಲಿ ರಾಜಕೀಯ ಗದ್ದಲ ಸೃಷ್ಟಿಸಿದೆ. ಕೇಂದ್ರವು ಕೇವಲ ಶಾಸನ ಸರಳಗೊಳಿಸುವ ಬಗ್ಗೆ ಪರಿಶೀಲಿಸುತ್ತಿದೆ, ಅಂತಿಮ ನಿರ್ಧಾರವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಹೌದು ಕೇಂದ್ರ ಸರ್ಕಾರವು ಚಂಡೀಗಢವನ್ನು ಸಂವಿಧಾನದ 240 ನೇ ವಿಧಿಯ ಅಡಿಯಲ್ಲಿ ತರುವ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ಪಂಜಾಬಿನಲ್ಲಿ ರಾಜಕೀಯ ಗದ್ದಲ ಹೆಚ್ಚಾಗಿದೆ.ಚಂಡೀಗಢವನ್ನು ಸಂವಿಧಾನದ 240 ನೇ ವಿಧಿಯ ಅಡಿಯಲ್ಲಿ ತರುವ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಆದರೆ ಇದುವರೆಗೂ ಯಾವುದೇ ಅಂತಿಮ ನಿರ್ಧಾವಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಪಂಜಾಬಿನ ರಾಜಧಾನಿಯನ್ನು ಕಬಳಿಸಲು ಸಂಚು ನಡೆಸುತ್ತಿದೆ. ಚಂಡೀಗಢವು ಪಂಜಾಬಿನ ಭಾಗವಾಗಿತ್ತು, ಇದೆ ಮತ್ತು ಯಾವಾಗಲೂ ಇರುತ್ತದೆ ಎಂದು ಅವರು ಹೇಳಿದರು. ಈ ತಿದ್ದುಪಡಿಯನ್ನು ಅಂಗೀಕರಿಸಲು ರಾಜ್ಯವು ಬಿಡುವುದಿಲ್ಲ ಎಂದು ಪಂಜಾಬಿನ ಮುಖ್ಯಮಂತ್ರಿ ಭಗವಂತ್ ಮಾನ್ ಸ್ಪಷ್ಟನೆ ನೀಡಿದರು.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನದಿಂದ ದಿನಕ್ಕೆ ಬಹುದೊಡ್ಡ ಬೆಳವಣಿಗೆಗಳು ಆಗುತ್ತಿದ್ದು ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ ಇದರ ಮಧ್ಯ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದ್ದು ಒಬ್ಬೊಬ್ಬ ಶಾಸಕನಿಗೆ 50 ಕೋಟಿ ಹಾಗೂ ಒಂದು ಫ್ಲಾಟ್ ಆಫರ್ ನೀಡಲಾಗಿದೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರ ಬೆಂಬಲ ಸೂಚಿಸುವಂತೆ ಸಹಿ ಮಾಡಿಸಿಕೊಂಡಿರುವ ವಿಚಾರವಾಗಿ ಇಷ್ಟು ದಿನ ಕಾಂಗ್ರೆಸ್ ಬೇರೆ ಪಕ್ಷದಲ್ಲಿ ಕುದುರೆ ವ್ಯಾಪಾರ ಮಾಡುತ್ತಿದ್ದರು. ಇದೀಗ ತಮ್ಮ ಪಕ್ಷದಲ್ಲಿಯೇ ಕುದುರೆ ವ್ಯಾಪಾರ ಶುರು ಮಾಡಿದ್ದಾರೆ. ಕೆಲವೊಬ್ಬರು 75 ಕೋಟಿ 100 ಕೋಟಿ ಕೊಡಿ ಎಂದು ಡಿಮ್ಯಾಂಡ್ ಇಟ್ಟಿದ್ದಾರೆ ಎಂದರು. ಒಬ್ಬೊಬ್ಬ MLA ಗೆ 50 ಕೋಟಿ ಕೋಡುವುದಾಗಿ ಆಮಿಷವೊಡ್ಡಿದ್ದಾರಂತೆ. ಇನ್ನು ಕೆಲ ಶಾಸಕರಿಗೆ 50…

Read More

ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಒಂದು ಕಡೆ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದರೆ ಮತ್ತೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಸಿಎಂ ಸ್ಥಾನಕ್ಕಾಗಿ ಜಟಾಪಟಿ ನಡೆಸುತ್ತಿದ್ದಾರೆ. ಇದರ ಮಧ್ಯ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ. ಆ ಮೂಲಕ ಡಿಕೆಶಿ ‘ಗಿಣಿ ಶಾಸ್ತ್ರ ಕೇಳಿ’ ಹೇಳಿಕೆಗೆ ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯದ ನಗರಸಭೆ ಎದುರು ಗಿಳಿ ಶಾಸ್ತ್ರ ಕೇಳಲಾಯಿತು. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ, ಇಲ್ವಾ ಎಂದು ಬಿಜೆಪಿಗರು ಶಾಸ್ತ್ರ ಕೇಳಿದರು. ಮುಖ್ಯಮಂತ್ರಿ ವಿಚಾರಕ್ಕೆ ಬಿಜೆಪಿಯವರು ಗಿಣಿ ಶಾಸ್ತ್ರ ಕೇಳಿ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದರು. ಡಿಕೆಶಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು, ಗಿಳಿ ಶಾಸ್ತ್ರ ಕೇಳಿದರು. ಈ ವೇಳೆ ಚೊಂಬು ಇರುವ ಕಾರ್ಡ್‌ನ್ನು ಗಿಣಿ ತೆಗೆದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲ್ಲ.…

Read More