Author: kannadanewsnow05

ರಾಮನಗರ : ರಾಮನಗರದಲ್ಲಿ ಇಂದು ಭೀಖರವಾದ ಕೊಲೆ ನಡೆದಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ, 14 ವರ್ಷದ ಬಾಲಕಿಯನ್ನ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮನೆಯಲ್ಲಿಯೇ ಮಾರಕಾಸ್ತ್ರಗಳಿಂದ ಹೊಡೆದು ಅರುಣ (14) ಎನ್ನುವ ಬಾಲಕಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ ಈ ಒಂದು ಕೃತ್ಯ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ತಂದೆ ತಾಯಿ ಕೆಲಸಕ್ಕೆ ಹೋಗಿದ್ದಾಗ ಬಾಲಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಶಾಲೆಗೆ ಹೋಗದೆ ಮನೆಯಲ್ಲಿ ಇದ್ದಂತಹ ಬಾಲಕಿಯ ಮೇಲೆ ಹಂತಕರು ಹಲ್ಲೆ ಮಾಡಿದ್ದಾರೆ. ಆದರೆ ಒಂದು ಭೀಕರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತಾವರೆಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಐಶ್ವರ್ಯ ಗೌಡ ಮಾದರಿ ವಂಚನೆ ನಡೆದಿದೆ. ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದವರಿಗೆ ಕೋಟಿ ಕೋಟಿ ರೂಪಾಯಿ ವಂಚನೆ ಎಸಗಿದ್ದು, ಸುಮಾರು 20ಕ್ಕೂ ಹೆಚ್ಚು ಮಹಿಳೆಯರಿಗೆ 30ಕ್ಕೂ ಹೆಚ್ಚು ಕೋಟಿ ವಂಚನೆ ಎಸಗಲಾಗಿದೆ. ಕಿಟ್ಟಿ ಪಾರ್ಟಿಯಲ್ಲಿ ಹಣದ ಹಿನ್ನೆಲೆ ಇರುವ ಮಹಿಳೆಯರಿಗೆ ಗಾಳ ಹಾಕಲಾಗಿದ್ದು, ಸ್ನೇಹಿತೆಯರಿಗೆ ವಂಚನೆ ಮಾಡಿದ ಮಹಿಳೆಯನ್ನು ಸದ್ಯ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಬಸವೇಶ್ವರನಗರ ಪೊಲೀಸರಿಂದ ಆರೋಪಿ ಸವಿತಾ ಎನ್ನುವ ಮಹಿಳೆಯನ್ನು ಬಂಧಿಸಲಾಗಿದೆ. ಕಿಟ್ಟಿ ಪಾರ್ಟಿಯಲ್ಲಿ ಸವಿತಾ ಮಹಿಳೆಯರನ್ನು ಪರಿಚಯ ಮಾಡಿಕೊಂಡಿದ್ದಳು. ಈ ವೇಳೆ ಮಹಿಳೆಯರ ಹಿನ್ನೆಲೆ ಬಗ್ಗೆ ಆರೋಪಿ ಸವಿತಾ ವಿಚಾರಿಸುತ್ತಿದ್ದಳು. ಬಳಿಕ ಬಗೆ ಬಗೆಯ ತಿಂಡಿ ಊಟ ಕೊಡಿಸಿ ನಂಬಿಕೆ ಬರಿಸುತ್ತಿದ್ದಳು. ಹಲವು ರಾಜಕಾರಣಿಗಳು ಪರಿಚಯ ಎಂದು ಹೇಳಿಕೊಳ್ಳುತ್ತಿದ್ದಳು. ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಎಂ ಬಿ ಪಾಟೀಲ್ ಹೆಸರು ದುರ್ಬಳಕೆ ಮಾಡಿಕೊಂಡಿದ್ದು, ನಂತರ ನಿಧಾನವಾಗಿ ಹೂಡಿಕೆ ನೆಪದಲ್ಲಿ ಹಣ ಪಡೆದುಕೊಳ್ಳುತ್ತಿದ್ದಳು. ಹಣ ಹೂಡಿಕೆ ಮಾಡಿದ ಮಹಿಳೆಯರಿಗೆ ಹಣ ಡಬಲ್ ಮಾಡಿ…

Read More

ಕಲಬುರ್ಗಿ : ಸಿಸಿರಸ್ತೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಂತಹ ಪಿ.ಆರ್.ಇ ಜೆಇ ಶ್ರೀಪಾದ ಕುಲಕರ್ಣಿ ಹಾಗು ಪಿಡಿಒ ಮಂಜುಶ್ರೀ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಲ್ಬುರ್ಗಿ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.ಸಚಿವ ಪ್ರಿಯಾಂಕ ಖರ್ಗೆ ಸೂಚನೆಯ ಮೇರೆಗೆ ಅಮಾನತು ಮಾಡಿ ಅದೇಶಿಸಲಾಗಿದೆ. ಇಲಾಖೆಯ ವಿಚಾರಣೆ ಬಾಕಿ ಇಟ್ಟು ಅಮಾನತು ಅಮಾನತುಗೊಳಿಸಲಾಗಿದೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆದಿತ್ತು. ಈ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಇನ್ನು ವೈರಲ್ ಆದ ವಿಡಿಯೋ ದಲ್ಲಿ 15ನೇ ಹಣಕಾಸಿನ ಯೋಜನೆ ಅಡಿ ಕಾಮಗಾರಿ ನಡೆದಿತ್ತು. ಕಾಮಗಾರಿಗಳಿಗೆ ಜೆಇ ಶ್ರೀಪಾದ್ ಕುಲಕರ್ಣಿ 5% ಲಂಚ ಕೇಳಿದ್ದಾರೆ. ಪಿಡಿಒ ಅವರಿಗೆ 3% ಕೊಡಬೇಕು. ನಾವೇ ಎಸ್ಟಿಮೇಟ್ ಮಾಡುತ್ತೇವೆ. ಎಂಬಿ ಬರೀತೀವಿ. ಎಲ್ಲ ಮಾಡುತ್ತೇವೆ ಟೈಪ್ ಮಾಡಿಸೋದು ಗೊತ್ತು, ಕೆಲಸಕ್ಕೆ…

Read More

ಚಾಮರಾಜನಗರ : ರಾಜ್ಯದಲ್ಲಿ ಕಳೆದ ಹಲವು ತಿಂಗಳಿನಿಂದ ಹೃದಯಾಘಾತದಿಂದ ಸರಣಿ ಸಾವುಗಳು ಸಂಭವಿಸುತ್ತಿದ್ದು ಹಾಸನ ಜಿಲ್ಲೆಯ ಒಂದರಲ್ಲಿ ಇದುವರೆಗೂ ನಲವತ್ತಕ್ಕೂ ಹೆಚ್ಚು ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ ಅದರಲ್ಲೂ ಯುವಜನತೆ ಹೆಚ್ಚು ಬಳಿಯಾಗಿದ್ದು ಇದೀಗ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪಾಠ ಕೇಳುತ್ತಲೇ ಕುಸಿದು ಬಿದ್ದು 4ನೇ ತರಗತಿ ವಿದ್ಯಾರ್ಥಿ ಒಬ್ಬ ಸಾವನ್ನಪ್ಪಿದ್ದಾನೆ. ಹೌದು ಪಾಠ ಕೇಳುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವನಪ್ಪಿದ್ದಾನೆ. ಕುರುಬಗೆರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದು ಘಟನೆ ನಡೆದಿದ್ದು, ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಕುರುಬಗ್ಗೇರಿ ಎಂಬಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿ 10 ವರ್ಷದ ಮನೋಜ್ ಕುಮಾರ್ ಸಾವನಪ್ಪಿದ್ದಾನೆ. ಪಾಠ ಕೇಳುತ್ತಿದ್ದಾಗ ಕುಸಿದು ಬಿದ್ದು ಮನೋಜ್ ಸಾವನಪ್ಪಿದ್ದಾನೆ. ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹೃದಯದಲ್ಲಿ ರಂದ್ರ ಇತ್ತು ಎಂಬ ಮಾಹಿತಿ ತಿಳಿದು ಬಂದಿದೆ.

Read More

ರಾಜಸ್ಥಾನ : ಇತ್ತೀಚಿಗೆ ಗುಜರಾತ್ನ ಅಹ್ಮದಾಬಾದ್ ಏರ್ಪೋರ್ಟ್ ಬಳಿ ವಿಮಾನ ಪತನಗೊಂಡು 270ಕ್ಕೂ ಹೆಚ್ಚು ಜನರು ಈ ಒಂದು ದುರಂತದಲ್ಲಿ ಸಾವನಪ್ಪಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ರಾಜಸ್ಥಾನದಲ್ಲಿ ಮತ್ತೊಂದು ವಿಮಾನ ದುರಂತ ಸಂಭವಿಸಿದ್ದು ಭಾರತೀಯ ವಾಯುಪಡೆಯ ವಿಮಾನ ಒಂದು ಪತನಗೊಂಡಿರುವ ಘಟನೆ ರಾಜಸ್ಥಾನದ ಚುರುನಲ್ಲಿ ನಡೆದಿದೆ. ಹೌದು ರಾಜಸ್ಥಾನದಲ್ಲಿ ಭಾರತೀಯ ವಾಯು ಪಡೆಯ ವಿಮಾನ ಪತನವಾಗಿದೆ. ರಾಜಸ್ಥಾನದ ಚುರುನಲ್ಲಿ ವಾಯುಪಡೆಯ ವಿಮಾನ ಪತನವಾಗಿದ್ದು, ವಿಮಾನದ ಅವಶೇಷಗಳ ಅಡಿ ಒಬ್ಬನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ರಾಜಸ್ಥಾನದ ಚುರುವಿನಲ್ಲಿ ಬುಧವಾರ ಭಾರತೀಯ ವಾಯುಪಡೆಯ ಜೆಟ್ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ರತನ್‌ಗಢ್ ತೆಹಸಿಲ್‌ನ ಭಾನೋಡಾ ಗ್ರಾಮದಲ್ಲಿರುವ ರಾಜಲ್ದೇಸರ್ ಪೊಲೀಸ್ ಠಾಣೆಯ ಅಧಿಕಾರಿಗಳು, ಇಬ್ಬರು ಪೈಲಟ್‌ಗಳು ಸ್ಥಳದಲ್ಲಿದ್ದರು ಎಂದು ತಿಳಿಸಿದ್ದಾರೆ. https://twitter.com/upuknews1/status/1942859343483003006?t=K8eH88vi04x85MP8vRmSOA&s=19

Read More

ಬೆಂಗಳೂರು : ಉಗ್ರ ಟಿ.ನಾಸಿರ್ ಗೆ ನೆರವು ನೀಡಿದ್ದ ಆರೋಪದ ಮೇಲೆ ಇಂದು NIA ಬೆಂಗಳೂರು ಸೇರಿ 5 ಕಡೆ ದಾಳಿ ನಡೆಸಿ ಒಟ್ಟು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಅನೀಸ್ ಫಾತಿಮಾ, ಡಾ. ನಾಗರಾಜ್, ಹಾಗು ASI ಚಾನ್ ಪಾಷಾನನ್ನು ಇದೀಗ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ NIA ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆಯ ಬಳಿಕ ಇದೀಗ ಕೋರ್ಟ್ ಮೂವರು ಉಗ್ರರನ್ನು 6 ದಿನಗಳ ಕಾಲ NIA ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಹೌದು ಇಂದು ರಾಜ್ಯದಲ್ಲಿ ಎನ್ ಐಎ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿದೆ. ರಾಜ್ಯದ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಉತ್ತರ ವಿಭಾಗದ ನಗರ ಶಶಸ್ತ್ರ ಮೀಸಲು ಪಡೆ ಎಎಸ್ಐ…

Read More

ನವದೆಹಲಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಲ್ಲಿ ಹಲವು ಬದಲಾವಣೆಗಳು ಆಗುತ್ತಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡುವ ವಿಚಾರವಾಗಿ ರೆಬೆಲ್ ಟೀಮ್ ಪ್ರತ್ಯೇಕ ಸಭೆ ನಡೆಸುತ್ತಿದ್ದರೆ, ಇನ್ನೊಂದು ಕಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಇದೀಗ ಇಂದು ಸಿಎಂ ಸಿದ್ದರಾಮಯ್ಯ ನವದೆಹಲಿಗೆ ತೆರಳಿದ್ದಾರೆ. ಇ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಯಾವುದೇ ಕಾರಣಕ್ಕೂ ಸಚಿವ ಸಂಪುಟ ಪುನರ್ ರಚನೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. ನವದೆಹಲಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು,ಸಚಿವ ಸಂಪುಟ ಪುನರ್ ರಚನೆ ಇಲ್ಲ. ಸಂಪುಟ ವಿಸ್ತರಣೆ ಎನ್ನುವ ಪ್ರಶ್ನೆಯೇ ಇಲ್ಲ. ಇಂದು ಸಿಎಂ ಸಿದ್ದರಾಮಯ್ಯ ನವದೆಹಲಿಗೆ ಬರುತ್ತಿದ್ದಾರೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುತ್ತೇವೆ. ದಸರಾದಲ್ಲಿ ಏರ್ ಶೋ ನಡೆಸುವ ಕುರಿತು ಚರ್ಚಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಶಾಪಿಂಗ್ ಗೆ ಹೋಗಿದ್ದಕ್ಕೆ ಪತ್ನಿಯನ್ನು ಪತಿಯೋಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ಪದ್ಮಜ (29) ರನ್ನು ಪತಿ ಹರೀಶ್ ಕೊಲೆ ಮಾಡಿದ್ದಾನೆ. ಶಾಪಿಂಗ್ ಹೋಗಿದ್ದಕ್ಕೆ ಕುತ್ತಿಗೆ ಹಿಸುಕಿ ಕಾಲಿನಿಂದ ತುಳಿದು ಉಸಿರು ಗಟ್ಟಿಸಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ದಂಪತಿಗಳು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೊಮ್ಮನಹಳ್ಳಿ ಠಾಣೆ ಪೊಲೀಸ್ರು ಭೇಟಿ ನೀಡಿದ್ದು ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ದಂಪತಿಗಳು ಇಬ್ಬರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ಬಿಇ ಮುಗಿಸಿಕೊಂಡಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೋಲಾರದ ಶ್ರೀನಿವಾಸಪುರ ಮೂಲದವರು ಎಂದು ತಿಳಿದುಬಂದಿದ್ದು, ಕೆಲ ತಿಂಗಳಿನಿಂದ ಗಂಡ ಹರೀಶ್ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಪತ್ನಿಯ ಜೊತೆಗೆ ನಿತ್ಯ ಗಲಾಟೆ ಮಾಡುತ್ತಿದ್ದ. ಆದರೆ ನಿನ್ನೆ ಶಾಪಿಂಗ್ ಗೆ ಹೋಗಿ ಬಂದಿದ್ದಕ್ಕೆ ಪತ್ನಿ ಜೊತೆಗೆ ಹರೀಶ್ ಗಲಾಟೆ…

Read More

ಬೆಳಗಾವಿ : ಬೆಳಗಾವಿಯಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಮೂವರು ಸಾವನಪ್ಪಿದ್ದು, ಅದರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿ ನಗರದ ಜೋಶಿಮಾಳ್ನಲ್ಲಿ ಈ ಒಂದು ದುರ್ಘಟನೆ ನಡೆದಿದೆ. ತಾಯಿ ಮಂಗಳಾ, ಮಗ ಸಂತೋಷ ಕುರುಡೇಕರ್ (44) ಹಾಗು ಮಗಳು ಸುವರ್ಣ ಮೃತ ದುರ್ದೈವಿಗಳಾಗಿದ್ದು, ಇನ್ನೊರ್ವ ಮಗಳು ಸುನಂದ ಕುರುಡೇಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮೃತ ಸಂತೋಷ್ ಅಕ್ಕಸಾಲಿಗರಾಗಿ ಕೆಲಸ ಮಾಡುತ್ತಿದ್ದು, ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದರು ಎಂದು ಮಾಹಿತಿ ತಿಳಿದು ಬಂದಿದೆ ಇನ್ನು ಬೆಳಿಗ್ಗೆ 9 ಗಂಟೆಗೆ 4 ಜನ ವಿಷ ಸೇವಿಸಿದ್ದಾರೆ. ತಾಯಿ ಇಬ್ಬರು ಹೆಣ್ಣುಮಕ್ಕಳ ಜೊತೆಗೆ ಮಗ ಸಂತೋಷ ಕೂಡ ಇದ್ದರು. ಇದರಲ್ಲಿ ಸಂತೋಷ್ ಸುವರ್ಣ…

Read More

ಮಂಡ್ಯ : ಮಂಡ್ಯದಲ್ಲಿ ನಿನ್ನೆ ತಡರಾತ್ರಿ ಘೋರ ದುರಂತ ನಡೆದಿದ್ದು, ಕಾವೇರಿ ಬ್ರಿಡ್ಜ್ ಮೇಲಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ತಡರಾತ್ರಿ ಒಂದು ಘಟನೆ ನಡೆದಿದೆ. ಹಾಸನ ಮೂಲದ ಸಿಂಚನ (23) ನದಿಗೆ ಹಾರಿದ ಯುವತಿ ಎಂದು ತಿಳಿದುಬಂದಿದೆ. ಯುವತಿ ನದಿಗೆ ಹಾರಿದ ಬಗ್ಗೆ ಸ್ಥಳೀಯರು ಕೂಡಲೇ ಪೊಲೀಸರಿಗೆ ತಿಳಿಸಿದರು. ಯುವತಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಗ್ಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಅಗ್ನಿಶಾಮಕ ದಳ ಹಾಗೂ ಪೋಲೀಸರು ಯುವತಿಗಾಗಿ ಶೋಧ ಕಾರ್ಯಕ್ರಮ ಮುಂದುವರೆಸಿದ್ದಾರೆ. ಯುವತಿಯ ಶೋಧ ಕಾರ್ಯಕ್ಕೆ ಭಾರಿ ಪ್ರಮಾಣದ ನೀರು, ಅಡ್ಡಿಯಾಗಿದೆ.

Read More