Author: kannadanewsnow05

ಕಲಬುರ್ಗಿ : ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಹಾಸನ ಜಿಲ್ಲೆ ಒಂದರಲ್ಲಿ 40ಕ್ಕೂ ಹೆಚ್ಚು ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಆದರೆ ಈ ಒಂದು ಹೃದಯಘಾತ ಹಾಸನ ಜಿಲ್ಲೆ ಅಷ್ಟೇ ಸೀಮಿತವಾಗದೆ, ವಿವಿಧ ಜಿಲ್ಲೆಗಳಲ್ಲೂ ಇದೀಗ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಇದೀಗ ಹಿಂದೂ ಕಲ್ಬುರ್ಗಿಯಲ್ಲಿ ಮದುವೆಯಾದ ಒಂದೇ ವಾರಕ್ಕೆ ಹೃದಯಘಾತದಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಕಲ್ಬುರ್ಗಿಯಲ್ಲಿ ಹೃದಯಾಘಾತಕ್ಕೆ ಯುವಕನೊಬ್ಬ ಬಲಿಯಾಗಿದ್ದಾನೆ ಮೋಹಸೀನ್ ಪಟೇಲ್ (22) ಮೃತ ಯುವಕ ಎಂದು ತಿಳಿದುಬಂದಿದ್ದು, ಚಿಂಚೋಳಿ ತಾಲೂಕಿನ ಚಂದನಕೆರಾ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮದುವೆಯಾಗಿ ಒಂದೇ ವಾರದಲ್ಲೇ ಯುವಕ ಹೃದಯಘಾತಕ್ಕೆ ಬಲಿಯಾಗಿದ್ದಾನೆ. ಲಾರಿ ಚಾಲಕನಾಗಿ ಮೋಹಸೀನ್ ಪಟೇಲ್ ಕೆಲಸ ಮಾಡುತ್ತಿದ್ದ. ಮೊಹರಂ ಹಬ್ಬಕ್ಕೆ ಎಂದು ಚಂದನಕೆರಾ ಗ್ರಾಮಕ್ಕೆ ತೆರಳಿದ್ದ ಮನೆಯಲ್ಲಿಯೇ ಕುಸಿದು ಬಿದ್ದಿದ್ದ ಮೊಸಿನ್ ಪಟೇಲ್ ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

Read More

ಬೆಂಗಳೂರು : ರಾಜ್ಯದಲ್ಲಿ ಎನ್ ಐಎ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿದೆ. ರಾಜ್ಯದ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಉತ್ತರ ವಿಭಾಗದ ನಗರ ಶಶಸ್ತ್ರ ಮೀಸಲು ಪಡೆ ಎಎಸ್ಐ ಚಾಂದ್ ಪಾಷಾ ಮತ್ತು ತಲೆ ಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಜೈಲಿನಲ್ಲಿರುವ ಉಗ್ರರಿಗೆ ನೆರವು ನೀಡಿದ ಆರೋಪ ಹಿನ್ನೆಲೆ ಎನ್ಐಎ ಅಧಿಕಾರಿಗಳ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ವೈದ್ಯ ನಾಗರಾಜ್ ಕರ್ಮಕಾಂಡ ಬಯಲಾಗಿದೆ. ಸಹಾಯಕಿ ಪವಿತ್ರಗಳನ್ನು ಬಳಸಿಕೊಂಡು ಜೈಲಿಗೆ ಮೊಬೈಲ್ ಗಳನ್ನು ಪೂರೈಕೆ ಮಾಡುತ್ತಿದ್ದ ಜೈಲಿನಲ್ಲಿರುವ ಕೈದಿಗಳಿಗೆ ವೈದ್ಯ ನಾಗರಾಜ್ ಮೊಬೈಲ್ ಮಾರಾಟ ಮಾಡುತ್ತಿದ್ದ. ಕೇವಲ…

Read More

ಕಲಬುರ್ಗಿ : ಸ್ನೇಹಿತರೆಂದರೆ ಕಷ್ಟಕಾಲದಲ್ಲಿ ಕೈ ಬಿಡದೆ ಜೊತೆಯಲ್ಲಿ ಇರುವವರು ಅಂತ ಹೇಳುತ್ತಾರೆ ಆದರೆ ಇನ್ನೊಬ್ಬ ಸ್ನೇಹಿತ ತನ್ನ ಹೆಂಡತಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಕುತ್ತಿಗೆಗೆ ವೈರ್ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರುಡಿ ಎಂಬ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಅಂಬರೀಶ್ (28) ಸ್ನೇಹಿತನಿಂದಲೇ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಅಜಯ್ ಹಾಗೂ ಆತನ ಸ್ನೇಹಿತರು ಕೊಲೆ ಮಾಡಿರುವ ಆರೋಪಿಗಳು. ಅಜಯ್ ಪತ್ನಿ ಜೊತೆ ಅಂಬರೀಶ್ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಜಯ್ ತನ್ನ ಹೆಂಡತಿ ಜೊತೆ ಇರುವಂತೆ ಹೇಳಿ ಕಲಬುರಗಿಯಿಂದ ಬೆಂಗಳೂರಿಗೆ (Bengaluru) ಹೋಗಿ ಅಂಬರೀಶ್‌ನನ್ನ ಕರೆತಂದಿದ್ದ. ಅಂಬರೀಶ್‌ನನ್ನು ಮುರಡಿ ಗ್ರಾಮಕ್ಕೆ ಕರೆತಂದ ಅಜಯ್, ಆತನ ಸ್ನೇಹಿತರ ಜೊತೆ ಸೇರಿ ವಯರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸರಿಗೆ ಕರೆ ಮಾಡಿ ಕೊಲೆ ಮಾಡಿರುವ ಕುರಿತು ಮಾಹಿತಿ ನೀಡಿದು ಅಲ್ಲದೆ, ತಾನೇ ಠಾಣೆಗೆ ಹೋಗಿ…

Read More

ಬೆಂಗಳೂರು : ರಾಜ್ಯದಲ್ಲಿ ಇಂದು NIA ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದ ಅಡಿ ಮೂರನ್ನು ಬಂಧಿಸಿದೆ. ಆದರೆ ದಕ್ಷಿಣ ಭಾರತದ ಬಹುತೇಕ ಸ್ಫೋಟಗಳಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ಉಗ್ರ ನಾಸಿರ್ ಬೆಂಗಳೂರಲ್ಲಿ ಕೂಡ ದೊಡ್ಡ ವಿದ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿಕೊಂಡಿದ್ದ ಎಂದು ಸ್ಪೋಟಕ ಅಂಶ ಬಯಲಾಗಿದೆ. ಹೌದು ಶಂಕಿತ ಉಗ್ರರ ವಿಚಾರಣೆಯಲ್ಲಿ ಸ್ಪೋಟಕ ಅಂಶ ಬಯಲಾಗಿದ್ದು ಜೈಲಿನಲ್ಲಿ ಇದ್ದುಕೊಂಡೇ ಉಗ್ರ ಚಟುವಟಿಕೆಗಳ ಬಗ್ಗೆ ಪ್ಲಾನ್ ಮಾಡಲಾಗುತ್ತಿತ್ತು. ಭಯೋತ್ಪಾದನೆ ಬಗ್ಗೆ ಉಗ್ರ ನಾಸಿರ್ ಮೈಂಡ್ ವಾಷ್ ಮಾಡುತ್ತಿದ್ದ. ಮೈಂಡ್ ವಾಷ್ ಮಾಡುವುದರಲ್ಲಿ ನಾಸಿರ್ ಎತ್ತಿದ ಕೈ ಹಲವರನ್ನು ಉಗ್ರ ಚಟುವಟಿಕೆಗಾಗಿ ಬಳಸಿಕೊಂಡಿದ್ದಾನೆ. ಜೈಲಿನಲ್ಲಿದ್ದ ಯುವಕರ ತಂಡವನ್ನು ಕೂಡ ನಾಸಿರ್ ತಯಾರು ಮಾಡಿದ್ದ. ಅಲ್ಲದೇ ನಾಸಿರ್ ನನ್ನು ಹಲವು ಬ್ಲಾಸ್ಟ್ ಗಳ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಉಗ್ರ ನಾಸಿರ್ ದಕ್ಷಿಣ ಭಾರತದಲ್ಲಿನ ಹಲವು ಬ್ಲಾಸ್ಟ್ ಗಳ ಮಾಸ್ಟರ್ ಮೈಂಡ್ ಎನ್ನಲಾಗಿದೆ. 2008ರ ಸರಣಿ…

Read More

ಬೆಳಗಾವಿ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಿಗ್ಗೆ ತಾನೇ ಕನಕಪುರ, ಧಾರವಾಡ ಹಾಗೂ ದಾವಣಗೆರೆಯಲ್ಲಿ ಓರ್ವ ಯುವತಿ ಹಾಗೂ ಇಬ್ಬರು ಯುವಕರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದೀಗ ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ಕೂಡ ಹಾರ್ಟ್ ಅಟ್ಯಾಕ್ ಗೆ ಚಾಲಕರು ಒಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಅಶೋಕ್ ಹೆಸರು ಕಾಳು ತಂದಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದು ಚಾಲಕ ಅಶೋಕ್ ಸಾವನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಇಂದು ಕೂಡ ರಾಜ್ಯದಲ್ಲಿ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಹೃದಯಾಘಾತಕ್ಕೆ 5 ಜನರು ಬಲಿಯಾಗಿದ್ದಾರೆ. ಕಳೆದ 46 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನದಲ್ಲಿ ಈ ಒಂದು ಸರಣಿ ಸಾರಿಗೆ ಅತಿಯಾದ ಮಾಂಸ ಸೇವನೆ ಕಾರಣ ಎಂದು ಶಾಸಕ ಎಚ್.ಡಿ ರೇವಣ್ಣ ತಿಳಿಸಿದರು. ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸರಣಿ ಸಾವು ವಿಚಾರವಾಗಿ ಹೃದಯಾಘಾರದಿಂದ ಸರಣಿ ಸಾವುಗಳಿಗೆ ಮಾಂಸಹಾರ ಸೇವನೆಯೇ ಕಾರಣ ಎಂದು ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಎಚ್.ಡಿ ರೇವಣ್ಣ ಈ ಒಂದು ಹೇಳಿಕೆ ನೀಡಿದ್ದು, ಬೀಗರೂಟದಲ್ಲಿ ಅತಿಯಾಗಿ ರೆಡ್ ಮೀಟ್ ಸೇವನೆ ಮಾಡುತ್ತಿದ್ದಾರೆ ಎಂದರು. ಅಲ್ಲದೇ ಹಾಸನ ಜಿಲ್ಲೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗಳ ಸಂಖ್ಯೆ ಹೆಚ್ಚಾಗಿದೆ. ಆದಾಯ ಬರುತ್ತೆ ಎಂದು ಹೆಚ್ಚಿನ ಸಂಖ್ಯೆಯಲ್ಲಿ ಬಾರ್ ತೆರೆದಿದ್ದಾರೆ. ಬಾರ್ ನಲ್ಲಿ ಕುಡಿದು ಅನಾಹುತವಾಗುತ್ತಿದೆ ಎಂದು ಕಿಡಿಕಾರಿದರು. ವೈದ್ಯರ ಜೊತೆ ಶಾಸಕ…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು ಇಂದು ರಾಜ್ಯದಲ್ಲಿ ಒಂದೇ ದಿನ 6 ಜನ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಮಂಗಳೂರು, ದಾವಣಗೆರೆ, ವಿಜಯನಗರ ಮಂಡ್ಯ ಸೇರಿದಂತೆ ಒಟ್ಟು 6ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ರಾಯಚೂರಲ್ಲಿ ನರಳಾಡಿ ಪ್ರಣಾಬಿಟ್ಟ ವ್ಯಕ್ತಿ! ರಾಯಚೂರಿನ ಮಸ್ಕಿ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ ಪಗಡದಿನ್ನಿ ಕ್ಯಾಂಪ್‌ನ ಶರಣಬಸವ (32) ಎಂಬ ವ್ಯಕ್ತಿ ಎದೆನೋವಿನಿಂದ ನರಳುತ್ತಿದ್ದ ಶರಣಬಸವನನ್ನು ಆತನ ಸ್ನೇಹಿತರು ಚಿಕಿತ್ಸೆಗಾಗಿ ಬೈಕ್‌ ನಲ್ಲಿಯೇ ಮಸ್ಕಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಆದರೆ ಆ ಸಮಯದಲ್ಲಿ ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ಅಲ್ಲಿದ್ದ ನರ್ಸ್‌ಗಳು ಆತನಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಕೂಡ ಫಲಕಾರಿಯಾಗಿರಲಿಲ್ಲ. ಪ್ರಾಣ ಉಳಿಸಲು ಆತನ ಸ್ನೇಹಿತರು, ಸಂಬಂಧಿಕರು ನಾನಾ ಪ್ರಯತ್ನಗಳನ್ನು ಮಾಡಿದ್ದು, ಬಳಿಕ ಆರೋಗ್ಯ ಕೇಂದ್ರದಿಂದ ಸಿಂಧನೂರು ತಾಲೂಕಾಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ನರಳಾಡಿ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವಾಗಲೇ ಹಾರ್ಟ್ ಅಟ್ಯಾಕ್! ಹಾಸನ ಮೂಲದ ವ್ಯಕ್ತಿಯೊಬ್ಬ ಬಸ್ ನಲ್ಲಿ ಪ್ರಯಾಣಿಸುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಕೋರ್ಟ್ ನಿಂದ ಮತ್ತೊಂದು ರಿಲೀಫ್ ಸಿಕ್ಕಿದ್ದು, ಈ ಹಿಂದೆ ಜುಲೈ 1 ರಿಂದ 25 ರವರೆಗೆ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ ನೀಡಿತ್ತು. ಆದರೆ ದಿನಾಂಕ ಬದಲಾವಣೆ ಮಾಡಿ ಎಂದು ಅರ್ಜಿ ಸಲ್ಲಿಸಿದ್ದ ದರ್ಶನ್, ಇದೀಗ ಕೋರ್ಟ್ ಜುಲೈ 11 ರಿಂದ ಜುಲೈ 30 ರವರೆಗೆ ವಿದೇಶಕ್ಕೆ ತೆರಲು ಅನುಮತಿ ನೀಡಿದೆ. ಹೌದು ನಟ ದರ್ಶನ್ ವಿದೇಶ ಪ್ರಯಾಣದ ಹೊಸ ದಿನಾಂಕಕ್ಕೆ ಕೋರ್ಟ್ ಅನುಮತಿ ನೀಡಿದೆ. ಜುಲೈ 11 ರಿಂದ 30 ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದ್ದು, ಅವರ ನಟನೆಯ ಡೆವಿಲ್ ಸಿನಿಮಾ ಶೂಟಿಂಗ್ ಗೆ ಯುರೋಪ್, ದುಬೈಗೆ ತೆರಳಲು ಅನುಮತಿ ನೀಡಿದೆ. ಈ ಹಿಂದೆ ಜುಲೈ 1 ರಿಂದ 25 ರವರೆಗೆ ತೆಳುವಂತೆ ಅನುಮತಿಸಿತ್ತು. ದಿನಾಂಕ ಬದಲಾವಣೆ ಮಾಡಿ ಎಂದು ಕೋರಿ ಕೋರ್ಟಿಗೆ ದರ್ಶನ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಜುಲೈ 13 ರಿಂದ…

Read More

ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಚಿವ ಈಶ್ವರ್ ಖಂಡ್ರೆ ಇಂದು ಅಧಿಕಾರಿಗಳಿಗೆ ಭರ್ತಿ ಮಾಡುವಂತೆ ಸೂಚನೆ ನೀಡಿದರು. ವಿಕಾಸ ಸೌಧದಲ್ಲಿ ಇಂದು ಅಧಿಕಾರಿಗಳಿಗೆ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು. ಇಂದು ವಿಕಾಸ ಸಹೋದರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಪಟ್ಟಿಮಾಡಿ. ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮತ್ತು ತಕ್ಷಣ ಅಗತ್ಯವಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಕೂಡಲೇ ನೇಮಕಾತಿ ಮಾಡಿಕೊಳ್ಳಲು ಹಾಗೂ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಅಗತ್ಯವಾದ ವಾಹನ ಮತ್ತು ಉಪಕರಣ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು. ಕಾಡಂಚಿನ ಗ್ರಾಮಸ್ಥರ ಜೊತೆಗೆ ಸೌಹಾರ್ದಯುತ ಸಂಬಂಧ ಹೊಂದಬೇಕು ಜನರಿಗೆ ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ ತಿಳಿಸಿಕೊಡಬೇಕು ಕಾಡಂಚಿನ ಜನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಬೇಕು. ಜೊತೆಗೆ ಕಾಡಂಚಿನ…

Read More

ಮಂಡ್ಯ : ರಾಜ್ಯದಲ್ಲಿ ಪ್ರತಿದಿನ ಹೃದಯಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಸಹ ರಾಜ್ಯದಲ್ಲಿ ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು 5 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಮಂಡ್ಯ ಜಿಲ್ಲೆಯಲ್ಲಿ ವ್ಯಕ್ತಿ ಒಬ್ಬರು ನೀರು ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ನೀರು ಕುಡಿಯುತ್ತಿದ್ದಾಗ ವ್ಯಕ್ತಿಗೆ ಹಾರ್ಟ್ ಅಟ್ಯಾಕ್ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ನೀರು ಕುಡಿಯುವಾಗಲೇ ಬಿದ್ದು ಪುಟ್ಟಸ್ವಾಮಿ (55) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ.ಮಳವಳ್ಳಿ ತಾಲೂಕಿನ ಅಟ್ಟುವನಹಳ್ಳಿಯಲ್ಲಿ ಈ ಒಂದು ದುರಂತ ನಡೆದಿದೆ. ಜಮೀನಿನಿಂದ ಮೇಕೆಗೆ ಮೇವಿಗೆ ತಂದಿರುತ್ತಾರೆ. ಈ ವೇಳೆ ಮನೆಯವರ ಬಳಿ ನೀರು ಪಡೆದು ನೀರು ಕುಡಿಯುವಾಗಲೇ ಪುಟ್ಟಸ್ವಾಮಿ ಏಕಾಏಕಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.

Read More