Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಅರಣ್ಯ ಇಲಾಖೆಯಲ್ಲಿ ಪಶು ವೈದ್ಯರ ಕೊರತೆ ಹಿನ್ನೆಲೆ : ಪ್ರತ್ಯೇಕ ಕೇಡರ್ ರೂಪಿಸಿ ವೈದ್ಯರ ನೇಮಕಕ್ಕೆ ಸಚಿವ ಖಂಡ್ರೆ ಸೂಚನೆ
ಬೆಂಗಳೂರು : ಅರಣ್ಯ ಇಲಾಖೆಯಲ್ಲಿ ಪಶು ವೈದ್ಯರ ಕೊರತೆಯ ಹಿನ್ನೆಲೆಯಲ್ಲಿ ಪಶು ವೈದ್ಯರ ನೇಮಕಕ್ಕೆ ರೂಪರೆಷೆ ಸಿದ್ಧಪಡಿಸಲು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ACS ಗೆ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ವಿವಿಧ ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ಮತ್ತು ವನ್ಯಜೀವಿ ಪುನರ್ವಸತಿ ಕೇಂದ್ರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದೆ. ಪಶು ವೈದ್ಯರನ್ನು ನಿಯೋಜನೆ ಮತ್ತು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಈಗಾಗಲೇ ಅರಣ್ಯ ಇಲಾಖೆಗೆ ಪ್ರತಿಭ ಈಶ್ವರ ಕಂಡ್ರೆ ಸೂಚನೆ ನೀಡಿದ್ದಾರೆ ಸಕ್ಕರೆ ಬೈಲುಕಿ ಬರದಲ್ಲಿ ಕಾಯಿಲೆಯಿಂದ ನಾಲ್ಕು ಆನೆಗಳು ನರಳುತ್ತಿವೆ ಬಾಲಣ್ಣ ಎಂಬ ಹಣೆಗೆ ಸೋಂಕು ಹಿನ್ನೆಲೆಯಲ್ಲಿ ವೈದ್ಯರು ಆನೆಯ ಕಿವಿಯನ್ನು ತೆಗೆದಿದ್ದಾರೆ. ಅಲ್ಲದೇ ಶಿವಮೊಗ್ಗ ದಸರಾ ಮಹೋತ್ಸವದಲ್ಲಿ ಬಾಲಣ್ಣ ಎಂಬ ಆನೆ ಪಾಲ್ಗೊಂಡಿತ್ತು. ಕಾರ್ಯಾಚರಣೆ ವೇಳೆ ಅರವಳಿಕೆ ಚುಚ್ಚು ಮದ್ದು ನೀಡಲು ವೈದ್ಯರ ಕೊರತೆ ಉಂಟಾಗಿದೆ ಹೀಗಾಗಿ ಪ್ರತ್ಯೇಕ ಕೇಡರ ರೂಪಿಸಿ ವನ್ಯಜೀವಿ ವೈದ್ಯರ ನೇಮಕ ಅಗತ್ಯವಾಗಿದೆ. ತಜ್ಞ ವನ್ಯಜೀವಿ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಪ್ರತ್ಯೇಕ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ದುರಂತದಿಂದ ಪಾರಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಬೊಮ್ಮನಹಳ್ಳಿಯ ಸಮೀಪದ ರೂಪೇನ ಅಗ್ರಹಾರ ಬಳಿಯ ರಸ್ತೆಯಲ್ಲಿ ಹೊರಟಿದ್ದ ಎಸ್ಯುವಿ ಕಾರು ಒಮ್ಮೆಗೆ ನಿಂತುಕೊಂಡಿತು. ತಾಂತ್ರಿಕ ಸಮಸ್ಯೆ ಇರಬಹುದು ಎಂದು ಚಾಲಕ ಕಾರನ್ನು ಪುನರಾರಂಭಿಸಲು ಹೋದಾಗ ದಿಢೀರ್ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಚಾಲಕ ಅಲರ್ಟ್ ಆಗಿದ್ದು, ಕಾರಿನಿಂದ ಹೊರಗಡೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಅಲ್ಲೇ ಇದ್ದಂತ ಸಂಚಾರಿ ಪೊಲೀಸರು ಘಟನೆಯನ್ನು ಗಮನಿಸಿ ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಬಂದ ಅಗ್ನಿ ಶಾಮಕ ದಳ ಸುಮಾರು ಅರ್ಧ ಗಂಟೆಯವರೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು.
ಯಾದಗಿರಿ : ರಾಜ್ಯದಲ್ಲಿ RSS ಪಥ ಸಂಚಲನ ಕುರಿತಂತೆ ಈಗಾಗಲೇ ಹಲವು ಘಟನೆಗಳು ನಡೆದಿದ್ದು, ಇದೀಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಲ್ಲಿ ನಾಳೆ RSS ಪಥ ಸಂಚಲನ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. RSS ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಅನುಮತಿ ನೀಡಿದೆ. ಹೌದು ಗುರುಮಠಕಲ್ ಪಟ್ಟಣದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಂದ ಗುರುಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಔಟ್ನಿಂದ ಪಥಸಂಚಲನ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಸಾಮ್ರಾಟ್ ವೃತ್ತ, ಬಸವೇಶ್ವರ ವೃತ್ತ, ಹನುಮಾನ್ ದೇವಸ್ಥಾನ ಹಾಗೂ ಕುಂಬಾರವಾಡಿ ಸೇರಿ ಹಲವೆಡೆ ಪಥಸಂಚಲನ ಸಂಚರಿಸಲಿದೆ. ಷರತ್ತುಗಳೇನು? ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು, ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು ಹಾಗೂ ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಿ…
ಹಾಸನ : ದನ ಮೆಯಿಸಲು ತೆರಳಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಹೋದರರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ದುದ್ದ ಸಮೀಪದ ವಳಗೆರಹಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ದರ್ಶನ್ (17) ಹಾಗೂ ಲಕ್ಷ್ಮಿಕಾಂತ್ (5) ಮೃತ ಸಹೋದರರು ಎಂದು ತಿಳಿದುಬಂದಿದೆ. ಹಾಸನ ತಾಲೂಕಿನ ವಳಗೇರಹಳ್ಳಿಯ ಅರ್ಚಕ ರಾಮಚಂದ್ರ ಹಾಗೂ ರತ್ನ ದಾಂಪತ್ಯ ಪುತ್ರರಾಗಿದ್ದು ಧನಮಹಿಸಲು ತೆರಳಿದ ವೇಳೆ ದರ್ಶನ್ ಹಾಗೂ ಲಕ್ಷ್ಮೀಕಾಂತ ಮನೆಗೆ ವಾಪಸ್ ಆಗಿರಲಿಲ್ಲ. ಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ನೆಡೆಸಿದಾಗ ಇಬ್ಬರು ಸಹೋದರ ಶವ ಪತ್ತೆಯಾಗಿದೆ ಘಟನೆ ಕುರಿತಂತೆ ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಧರ್ಮಸ್ಥಳ ತಲೆಬುರುಡೆ ಕೇಸ್ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಧರ್ಮಸ್ಥಳದ ಠಾಣೆಯ FIR 39/2025 ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪರ-ವಿರೋಧ ವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದದೆ. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ವಕೀಲ ಬಾಲನ್ ವಾದ ಮಂಡಿಸಿದರು. 9 ಬಾರಿ ಈಗಾಗಲೇ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದಾರೆ. ಎಫ್ಐಆರ್ ನಲ್ಲಿ ನಮ್ಮನ್ನು ಆರೋಪಿಗಳು ಎಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೆ ವಾಟ್ಸಾಪ್ ಮತ್ತು ಇ-ಮೇಲ್ ನಲ್ಲಿ ನೋಟಿಸ್ ನೀಡಿದ್ದಾರೆ. ಬಿಎನ್ಎಸ್ ಸೆಕ್ಷನ್ 35 (3) ಅಡಿಯಲ್ಲಿ ಸಮನ್ಸ್ ನೀಡಿದ್ದಾರೆ. ಎಸ್ಐಟಿ ನೀಡಿರುವುದು ಕಾನೂನು ಬಾಹಿರ. ನಾವು ಆರೋಪಿಗಳು ಅಲ್ಲ ಸಾಕ್ಷಿಗಳು ಅಲ್ಲ. ರಾಜಕೀಯ, ಧಾರ್ಮಿಕ, ಸಂಘಟನಾತ್ಮಕ ವೈರತ್ವದಿಂದ…
ಮೈಸೂರು : ಮೈಸೂರಿನ ಹೊಸರಾಮನಹಳ್ಳಿ ಬಳಿ ಲಕ್ಷ್ಮಣತೀರ್ಥ ನದಿಯಲ್ಲಿ ವಕೀಲ ಕೆ. ರಾಜು ಎನ್ನುವ ಶವ ಪತ್ತೆಯಾಗಿದೆ. ವಕೀಲ ಕೆ.ರಾಜು, ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಾಪತ್ತೆಯಾಗಿದ್ದರು. ವಕೀಲ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಹೊಸ ರಾಮನಹಳ್ಳಿ ಬಳಿ ಲಕ್ಷ್ಮಣ ತೀರ್ಥ ನದಿಯಲ್ಲಿ ಕೆ. ರಾಜು ಶವವಾಗಿ ಪತ್ತೆಯಾಗಿದ್ದಾರೆ. ಹುಣಸೂರಿನ ಗೋಕುಲ ಬಡಾವಣೆ ನಿವಾಸಿಯಾಗಿದ್ದ ಹೋಗುತ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದಾರೆ. ಮನೆಗೆ ಬಾರದ ಹಿನ್ನೆಲೆಯಲ್ಲಿ ವಕೀಲನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ ಕೆ.ರಾಜು ಲಕ್ಷ್ಮಣ ತೀರ್ಥ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನದಿಗೆ ಹಾರಿ ವಕೀಲ ಕೆ.ರಾಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮಹದೇವಪುರದಲ್ಲಿ ಬಹುಮಡಿ ಕಟ್ಟಡ ದುರಸ್ತಿ ವೇಳೆ ಅವಘಡ ಸಂಭವಿಸಿದೆ. ಬಿಲ್ಡಿಂಗ್ ಅವಳವಡಿಸಿದ್ದ ಕಟ್ಟಿಗೆ ಮೇಲಿಂದ ಬಿದ್ದು ಓರ್ವ ಕೂಲಿ ಕಾರ್ಮಿಕ ಸಾವನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹದೇವಪುರ ಮುಖ್ಯ ರಸ್ತೆಯಲ್ಲಿರುವ ಪೈ ಲೇಔಟ್ ನಲ್ಲಿ ಈ ಒಂದು ಅವಘಡ ಸಂಭವಿಸಿದೆ. ಹಾವೇರಿ ಮೂಲದ ಯೂಸುಫ್ (35) ಎನ್ನುವ ಕೂಲಿಕಾರ್ಮಿಕ ಮೃತಪಟ್ಟಿದ್ದಾನೆ. ಇನ್ನು ಮೂವರು ಕೂಲಿ ಕಾರ್ಮಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಮಾಲೀಕ ಮತ್ತು ಗುತ್ತಿಗೆದಾರನ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಒಟ್ಟು 51,000 ಶಿಕ್ಷಕರ ಕೊರತೆ ಇದ್ದು, 32 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಈಗಾಗಲೇ 13,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 32 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡುತ್ತಿದ್ದೇವೆ. ಈಗಾಗಲೇ 13,000 ಶಿಕ್ಷಕರನ್ನು ನೇಮಕ ಮಾಡಿದ್ದೇವೆ. ಒಟ್ಟು ರಾಜ್ಯದಲ್ಲಿ 51,000 ಶಿಕ್ಷಕರ ಕೊರತೆ ಇದೆ. ಅಲ್ಲದೆ ಕಾಯಂ ಶಿಕ್ಷಕರನ್ನು ಸಹ ನೇಮಕ ಮಾಡುತ್ತಿದ್ದೇವೆ. ಒಂದನೇ ತರಗತಿ ಮಕ್ಕಳಿಗೆ ಗಣಕಯಂತ್ರದ ತರಬೇತಿ ನೀಡುತ್ತೇವೆ. ಗ್ರಾಮೀಣ ಭಾಗದ ಮಕ್ಕಳಿಗೆ ವಿಶೇಷ ಅವಕಾಶ ನೀಡಬೇಕಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಇಂದ ಅನುಕೂಲ ಆಗಿದೆ. ಸರ್ಕಾರಿ ಶಾಲೆಗಳಲ್ಲಿ ಸಂಜೆ ವಿಶೇಷ ತರಗತಿ ಮಾಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಮೈಸೂರು : ಇತ್ತೀಚಿಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ ಹೆಂಡತಿಯನ್ನು ಕೊಲ್ಲೋದು ಅಥವಾ ಹೆಂಡತಿ ಗಂಡನನ್ನು ಕೊಲ್ಲುವುದು ಆತಂಕಕ್ಕೆ ಕಾರಣವಾಗಿದೆ ಇವರಿಬ್ಬರ ಮಧ್ಯ ಮಕ್ಕಳು ಅನಾಥರಾಗುತ್ತಿದ್ದಾರೆ ಇದೀಗ ಮೈಸೂರಿನಲ್ಲಿ ಅಂತಹ ಘಟನೆ ನಡೆದಿದ್ದು ಗಂಡನ ಕಥೆ ಮುಗಿಸಿ ಆತನಿಗೆ ಚಟ್ಟ ಕಟ್ಟಲು ಪ್ಲಾನ್ ಮಾಡಿದ್ದ ಪತ್ನಿಯೊಬ್ಬಳು ಸಿಕ್ಕಿ ಬಿದ್ದಿದ್ದು ಹಾಗೆ ಜೊತೆಗೆ ಪೊಲೀಸರು ಒಟ್ಟು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಜಿಲ್ಲೆಯ ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾರೆ. ಪತಿಯನ್ನ ಮುಗಿಸಲು ಸಹೋದರನ ನೆರವನ್ನು ಪಡೆದು, ದರೋಡೆ ಸನ್ನಿವೇಶ ಸೃಷ್ಟಿಸಿ ತಪ್ಪಿಸಿಕೊಳ್ಳುವ ಹುನ್ನಾರ ನಡೆಸಿದ ಪತ್ನಿ ಪೊಲೀಸರು ಹೆಣೆದ ಬಲೆಗೆ ಸಿಲುಕಿದ್ದಾರೆ. ಸಹೋದರ ಹಾಗೂ ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ? ರಾಜೇಂದ್ರ ಹಾಗೂ ಪತ್ನಿ ಸಂಗೀತಾ ನಡುವೆ ಭಿನ್ನಾಭಿಪ್ರಾಯವಿತ್ತು, ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರ ನಡುವೆ ಸಾಮರಸ್ಯ ಇರಲಿಲ್ಲ. ಅಕ್ಟೋಬರ್ 25 ರಂದು ರಾಜೇಂದ್ರ ಅವರು ಪತ್ನಿ ಸಂಗೀತಾಳನ್ನ ತಮ್ಮ…
ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರಾಜ್ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಇಬ್ಬರಿಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಪ್ರಕಾಶ್ ರಾಜ್ ಮತ್ತು ವಿಜಯಲಕ್ಷ್ಮಿ ಸಿಂಗಗೆ ರಾಜೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ. ಬಹುಭಾಷ ನಟ ಪ್ರಕಾಶ್ ರಾಜ್, ವಿಜಯಲಕ್ಷ್ಮಿ ಸಿಂಗ್, IAS ಅಧಿಕಾರಿ ಸಿದ್ದಯ್ಯನವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ, ಪೌರಕಾರ್ಮಿಕರಾದ ಫಕೀರವ್ವಗೆ ರಾಜ್ಯ ಸರ್ಕಾರ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ. ಇನ್ನು ಸಾಹಿತ್ಯ ಕ್ಷೇತ್ರದಲ್ಲಿ ಆರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ, ಆರ್ ಸುನಂದಮ್ಮ, ಡಾ. ಎಚ್ ಎಲ್ ಪುಷ್ಪ, ರಹಮದ್ ತರೀಕೆರೆ ಹಾಗೂ ಹ.ಮ ಪೂಜಾರ್ ಅವರಿಗೆ ರಾಜೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.














