Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆಯಾಗದ ಕಾರಣ ಹಲವಾರು ಮಹಿಳೆಯರು ಇದೀಗ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ತಿಂಗಳು 3 ಕಂತಿನ ಹಣ ಫಾಲಾನುಭವಿಗಳ ಖಾತೆಗೆ ಹಾಕುತ್ತೆವೆ ಎಂದು ಭರವಸೆ ನೀಡಿದರು. ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ, ಹಣ ಜಮೆ ಆಗದ ವಿಚಾರವಾಗಿ ಬೆಂಗಳೂರಿನ ಹೆಚ್ ಎ ಎಲ್ ಏರ್ಪೋರ್ಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯಾಗಿ ಹಣಕಾಸಿನ ಸಮಸ್ಯೆ ಇಲ್ಲ.ಎರಡು ಮೂರು ತಿಂಗಳಿಂದ ವಿಳಂಬ ಆಗಿದೆ ಆದರೆ ಯೋಜನೆಗಳನ್ನು ನಿಲ್ಲಿಸಲ್ಲ. ಈ ತಿಂಗಳು ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುತ್ತೆ ಎರಡು ಮೂರು ತಿಂಗಳ ಹಣ ಒಂದೇ ಬಾರಿ ಖಾತೆಗಳಿಗೆ ಜಮೆ ಮಾಡುತ್ತೇವೆ ಎಂದು ತಿಳಿಸಿದರು. ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ಗೃಹ ಲಕ್ಷ್ಮೀ ಯೋಜನೆಯ…
ಗದಗ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಹಲವು ಭಾಗಗಳಲ್ಲಿ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದರ ಮಧ್ಯ ಮುಸುಕುಧಾರಿ ಗ್ಯಾಂಗ್ ಹಾವಳಿ ಕೂಡ ಹೆಚ್ಚಾಗಿತ್ತು. ಇದೀಗ ಗದಗ ನಗರಕ್ಕೂ ಈ ಒಂದು ಮುಸುಕುಧಾರಿ ಗ್ಯಾಂಗ್ ಕಾಲಿಟ್ಟಿದ್ದು, ಕಳೆದ ಒಂದೇ ದಿನಗಳಲ್ಲಿ ಸುಮಾರು 8 ಅಂಗಡಿಗಳ ದೋಚಿ ಮುಸುಕುಧಾರಿ ಗ್ಯಾಂಗ್ ಪರರಿಯಾಗಿದೆ. ಹೌದು ಗದಗ ಜಿಲ್ಲೆಗೂ ಎಂಟ್ರಿಕೊಟ್ಟ ಖತರ್ನಾಕ್ ಮುಸುಕುದಾರಿ ಗ್ಯಾಂಗ್ ಗದಗ-ಬೆಟಗೇರಿ ಅವಳಿ ನಗರದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಶೆಟರ್ ಮುರಿದು ಅಂಗಡಿಗಳಲ್ಲಿ ಇದ್ದ 25000 ಹಣ ದೋಚಿ ಪರಾರಿಯಾಗಿದ್ದಾರೆ. ಗದಗ-ಬೆಟಗೇರಿ ಅವಳಿ ನಗರದ ಹಾತಲಗೇರಿ, ಕೆ ಸಿ ರಾಣಿ ರೋಡ್, ಹಾಳಕೇರಿ ಮಠದ ಬಳಿ ಹಲವು ಕಿರಣಿ ಅಂಗಡಿಗಳಲ್ಲಿ ಮುಸುಕುದಾರಿ ಗ್ಯಾಂಗ್ ಕಳ್ಳತನ ಮಾಡಿದೆ. ಫೆಬ್ರವರಿ 16ರ ಮಧ್ಯರಾತ್ರಿ 8 ಅಂಗಡಿಗಳಿಗೆ 6 ಕಳ್ಳರ ಗ್ಯಾಂಗ್ ಕನ್ನ ಹಾಕಿದೆ, ಪೊಲೀಸ್ ಸೆಕ್ಯೂರಿಟಿ ಇದ್ದರೂ ಕೂಡ ಮುಸಕುದಾರಿ ಗ್ಯಾಂಗ್ ಈ ಒಂದು ಕೃತ್ಯ…
ಬೆಂಗಳೂರು : ಕುಡಿತದ ಚಟಕ್ಕೆ ದಾಸನಾಗಿದ್ದರಿಂದ ಬೈದು ಬುದ್ಧಿ ಹೇಳಿದ ತಂದೆಯ ಎದೆಗೆ ಮಗನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದ ಕೆರೆ ಮುನೇಶ್ವರ ದೇವಸ್ಥಾನದ ಬಳಿ ಸೋಮವಾರ ಸಂಜೆ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ಚನ್ನಬಸವಯ್ಯ (61) ಎಂದು ತಿಳಿದುಬಂದಿದೆ.ಕೊಲೆ ಮಾಡಿದ ಪಾಪಿ ಮಗನನ್ನು ಅಮಿತ್ (21) ಎಂದು ತಿಳಿದುಬಂದಿದೆ.ಪ್ರತಿ ದಿನ ಇದೇ ವಿಚಾರಕ್ಕೆ ಅಪ್ಪ – ಮಗನ ನಡುವೆ ಗಲಾಟೆ ನಡೆಯುತ್ತಿತ್ತು. ಸೋಮವಾರ ಸಹ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಮಗನಿಗೆ ಈ ಚಟದಿಂದ ಮುಕ್ತಿಹೊಂದಿ ಚೆನ್ನಾಗಿ ದುಡಿ ಎಂದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಮಗ ಅಮಿತ್ ತಂದೆ ಚನ್ನಬಸವಯ್ಯ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆಯೇ ಚನ್ನಬಸವಯ್ಯ ಸಾವನ್ನಪ್ಪಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಬ್ಯಾಡರಹಳ್ಳಿ ಪೊಲೀಸರು ಅಮಿತ್ ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಮುಸ್ಲಿಂ ಮುಖಂಡ ಮುಸ್ತಾಕ್ ಪ್ರಚೋದನಾಕಾರಿ ಭಾಷಣ ಕೇಳಿ ಕೆಲವರು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಪೊಲೀಸರು ಮುಸ್ಲಿಂ ಮುಖಂಡ ಮುಸ್ತಾಕ್ ಅನ್ನು ಬಂಧಿಸಿಲ್ಲ. ಹೌದು ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಘಟನೆ ನಡೆದು ಇಷ್ಟು ದಿನಗಳಾದರೂ ಕೂಡ ಪೊಲೀಸರು ಮುಸ್ತಾಕ್ಕನ್ನು ಅರೆಸ್ಟ್ ಯಾಕೆ ಮಾಡಿಲ್ಲ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಈತ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ನಿವಾಸಿ ಎಂದು ತಿಳಿದುಬಂದಿದೆ. ಮೈಸೂರಿನಲ್ಲಿ ಮುಸ್ತಾಕ್ ಮಕ್ಬೋಲಿ, ಬಾಡಿಗೆ ಮನೆಯಲ್ಲಿ ನೆಲೆಸಿದ್ದಾನೆ. ಮೈಸೂರಿನ ರಾಜೀವ ನಗರದ ಶಿವಣ್ಣವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಸದ್ಯ ಮುಸ್ತಾಕ್ ಮೈಸೂರಿನ ಸಾಡೇ ರಸ್ತೆ ದರ್ಗಾ ಮಸೀದಿಯಲ್ಲಿ ಇದ್ದಾನೆ ಎಂಬ ಮಾಹಿತಿ ಇದೆ. ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿ ಯಾರ ಮಸೀದಿ ಪಕ್ಕದಲ್ಲಿ ಇದ್ದು ಕಷ್ಟ ಎಂದು ಬಂದವರಿಗೆ ನಿಂಬೆಹಣ್ಣು ಮಂತ್ರಿಸಿ ಮುಸ್ತಾಕ್…
ನವದೆಹಲಿ : 1984 ಸಿಖ್ ವಿರೋಧಿ ದಂಗೆ ವೇಳೆ ಇಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಇಂದು ದೆಹಲಿಯ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಒಂದು ಶಿಕ್ಷೆ ಪ್ರಕಟಿಸಲಿದ್ದಾರೆ. ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ಇಂದು ತೀರ್ಪು ಹೊರಬೀಳಲಿದೆ. ಇಂದು ಸಜ್ಜನ್ ಕುಮಾರ್ ಗೆ ಶಿಕ್ಷೆಯ ಪ್ರಮಾಣ ಪ್ರಕಟಸಲಿರುವ ಕೋರ್ಟ್, 1984 ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಈ ಒಂದು ಕೊಲೆ ನಡೆದಿತ್ತು. ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು.. 1984ರ ನವೆಂಬರ್ 1 ರಂದು ತಂದೆ ಮಗನ ಕೊಲೆ ಆಗಿತ್ತು. ತಂದೆ ಜಸ್ವಂತ್ ಸಿಂಗ್ ಹಾಗೂ ಮಗ ತರುಣ ದೀಪ ಸಿಂಗ್ ಕೊಲೆ ಆಗಿತ್ತು. ಈ ಕುರಿತು ಸಜ್ಜನ್ ಕುಮಾರ್ ನೇತೃತ್ವದ ಗುಂಪಿನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪಂಜಾಬಿ ಬಾಗ್ ಪೊಲೀಸ್…
ಬೆಳಗಾವಿ : ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನ ರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿ ಯಾದ ಗುಯಿಲಿನ್ ಬರೆ ಸಿಂಡೋಮ್ (GBS)ಗೆ ಇದೀಗ ಕರ್ನಾಟಕದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 64 ವರ್ಷದ ವೃದ್ದರೊಬ್ಬರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶನಿವಾರ ಈ ವೈರಸ್ ನಿಂದ ಸಾವಿಗೀಡಾಗಿದ್ದಾರೆ. ದೋನೆವಾಡಿ ಗ್ರಾಮದ ಯೆತಿಲ್ ಬಾಳಗೊಂಡ ಪಾಟೀಲ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.ಇದು ಈ ಕಾಯಿಲೆಗೆ ರಾಜ್ಯದವರು ಬಲಿಯಾದ ಮೊದಲ ಪ್ರಕರಣ. ಇದರೊಂದಿಗೆ ಕರ್ನಾಟಕ ಅಕ್ಕಪಕ್ಕದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡಿ ನಲ್ಲಿ ಈಗಾಗಲೇ ಈ ವ್ಯಾಧಿ ಕಾಣಿಸಿಕೊಂಡಿದೆ. ಇದು ಸಾಂಕ್ರಾಮಿಕ ಅಲ್ಲ, ಭಾರೀ ಪ್ರಮಾಣ ದಲ್ಲಿ ಮಾರಣಾಂತಿಕವೂ ಅಲ್ಲವಾದರೂ, ಸೊಂಕಿಗೆ ನಿಖರ ಕಾರಣ ಏನೆಂಬುದು ಇದು ವರೆಗೂ ಖಚಿತವಾಗದ ಹಿನ್ನೆಲೆ ವಿವಿಧ ರಾಜ್ಯ ಗಳಲಿ ಈ ಕುರಿತು ಆತಂಕ ಉಂಟಾಗಿದೆ.ಈಗಾಗಲೇ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಹಾಗೂ ಮುಂಬೈನಲ್ಲಿ ಇಬ್ಬರು ವ್ಯಕ್ತಿಗಳು ಜಿಬಿಎಸ್ ವೈರಸ್ ನಿಂದ…
ಕೊಡಗು : ಮದುವೆ ಆಗಿಲ್ಲ ಎಂದು ಮನನೊಂದಿದ್ದೆ ವ್ಯಕ್ತಿ ಒಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೊಯಿಕೇರಿ ಗ್ರಾಮದಲ್ಲಿ ಈ ಒಂದು ಆಘಾತಕಾರಿ ಘಟನೆ ನಡೆದಿದೆ. ಹೌದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೋಯಿಕೆರಿ ಗ್ರಾಮದಲ್ಲಿ ದಿಲೀಪ್ (40) ಎನ್ನುವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಿಲೀಪ್ ಮದುವೆ ಆಗಿಲ್ಲ ಎಂದು ತೀವ್ರವಾಗಿ ಮನನೊಂದಿದ್ದರು ಎಂಬ ಮಾಹಿತಿ ಬಂದಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತಿ ಪ್ರಕರಣ ದಾಖಲಾಗಿದೆ.
ಯಾದಗಿರಿ : ನಿವೃತ್ತ ನೌಕರರೊಬ್ಬರು ಡಿಜಿಟಲ್ ಅರೆಸ್ಟ್ಗೆ ಒಳಗಾಗಿ 10 ಲಕ್ಷ ರು. ಕಳೆದುಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಜಿಲ್ಲೆಯ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಕೆಬಿಜೆಎನ್ಎಲ್ ನಿವೃತ್ತ ನೌಕರರೊಬ್ಬರು ಡಿಜಿಟಲ್ ಸ್ಕ್ಯಾಮ್ ಗೆ ಒಳಗಾಗಿದ್ದಾರೆ. ಈ ಮೂಲಕ ಯಾದಗಿರಿ ಜಿಲ್ಲೆಯಲ್ಲಿ ಡಿಜಿಟಲ್ ಅರೆಸ್ಟ್ ಕುರಿತು ಮೊದಲ ಪ್ರಕರಣ ದಾಖಲಾದಂತಾಗಿದೆ. ಏನಿದು ಪ್ರಕರಣ…? ಜನವರಿ 26 ರಂದು ಕಲಬುರಗಿಯಲ್ಲಿ ತಮ್ಮ ಸಹೋದರಿಯ ಮನೆಯಲ್ಲಿದ್ದಾಗ ಮಧ್ಯಾಹ್ನ ಸುಮಾರು 12:30 ಗಂಟೆಗೆ ಅಪಚಿತ ವ್ಯಕ್ತಿಯಿಂದ ವಿಡಿಯೊ ಕಾಲ್ ಕರೆ ಬಂದಿದೆ. ಹಿಂದಿ ಭಾಷೆಯಲ್ಲಿ ಮಾತನಾಡಿ ನಾವು ಮುಂಬೈ ಕ್ರೈಂ ಬ್ರಾಂಚ್ನ ಆಫೀಸರ್ ಎಂದು ಪರಿಚಯಿಸಿಕೊಂಡಿದ್ದಾರೆ. ನಿಮ್ಮ ಮೇಲೆ ಮನಿ ಲಾಂಡರಿಂಗ್ ಪ್ರಕರಣ ದಾಖಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗಳು ಮನಿ ಲಾಂಡರಿಂಗ್ಗೆ ಬಳಕೆ ಆಗುತ್ತಿದೆ. ಎಫ್ಐಆರ್ ದಾಖಲಾಗಿದೆ ಎಂದು ಸುಳ್ಳು. ಹೇಳಿ ಭಯ ಹುಟ್ಟಿಸಿದ್ದಾರೆ. ಮುಖ್ಯ ಆರೋಪಿ ನರೇಶ್ ಗೋಯಲ್ನೊಂದಿಗೆ ನೀವೂ ಕೃತ್ಯದಲ್ಲಿ ಭಾಗಿಯಾಗಿರುವ ಸಂಶಯವಿದೆ ಎಂದು…
ಚಿಕ್ಕಮಗಳೂರು : ರೈತರೊಬ್ಬರ ಬಳಿ ಜಮೀನಿನೊಂದರ ಹಳೇ ನಕ್ಷೆ ಸರಿಯಿಲ್ಲದ್ದರಿಂದ ಹೊಸ ನಕ್ಷೆ ತಯಾರಿಸಲು 4 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಪರವಾನಗಿ ಪಡೆದ ಸರ್ವೆಯರ್ ಹಾಗೂ ಜಿಪಂ ಕೆಡಿಪಿ ನಾಮನಿರ್ದೇಶಿತ ಸದಸ್ಯ ಅಶೋಕ್ ಅವರನ್ನು ಖಚಿತ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಲ್ಲೆಹಳ್ಳಿ ವೆಂಕಟೇಶ್ ಎಂಬವರು ಈ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಹೌದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹುಲ್ಲೆ ಹಳ್ಳಿ ಗ್ರಾಮದ ವೆಂಕಟೇಶ್ ಜಮೀನಿನೊಂದರ ಹಳೇ ನಕ್ಷೆ ಸರಿಯಿಲ್ಲದ್ದರಿಂದ ಹೊಸ ನಕ್ಷೆ ತಯಾರಿಸಲು ಕಡೂರು ಎಡಿಎಲ್ಆರ್ ಅವರಿಗೆ ಅರ್ಜಿ ಸಲ್ಲಿಸಿದ್ದರು. ಜಮೀನಿನ ಸರ್ವೆ ಮಾಡುವ ಸಮಯದಲ್ಲಿ ಅಶೋಕ್ ಅವರು ವೆಂಕಟೇಶ್ ಅವರ ಸಹೋದರನಿಂದ 1200 ಪಡೆದು ಕಡತ ತಯಾರಿಸಲು 5 ಸಾವಿರಕ್ಕೆ ಬೇಡಿಕೆಯಿಟ್ಟಿದ್ದರು. ಕಡೆಗೆ 4 ಸಾವಿರ ನೀಡಲು ಪೋನ್ ಮಾಡಿಲು ಒತ್ತಾಯಿಸಿದ್ದರು ಎನ್ನಲಾಗಿದೆ. ಅದರಂತೆ ಸೋಮವಾರ ಸಂಜೆ ಅಶೋಕ್ ಅವರು 4 ಸಾವಿರ ರೂಪಾಯಿಗಳನ್ನು ಸರ್ವೆ ಇಲಾಖೆ ಕಚೇರಿಯಲ್ಲಿ…
ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗದ ಕಾರಣ ಹಲವಾರು ಮಹಿಳೆಯರು ಇದೀಗ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ 3 ತಿಂಗಳ ಹಣ ಫಾಲಾನುಭವಿಗಳ ಖಾತೆಗೆ ಹಾಕುತ್ತೆವೆ ಎಂದು ಭರವಸೆ ನೀಡಿದರು. ಈ ಕುರಿತು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಅಕೌಂಟಿಗೆ ಹಾಕಲಿದ್ದೇವೆ.ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಪ್ರತಿಕ್ರಿಯಿಸಿದ್ದು, ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ…












