Author: kannadanewsnow05

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತವಾಗಿದ್ದು, ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿದುರ್ಗಾ ಬಳಿ ಜರುಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರು ಮೂಲದ ವಸಂತ್ (30) ಮತ್ತು ಚೇತನ್ (39) ಎಂದು ತಿಳಿದುಬಂದಿದೆ. ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಕಾರು ಬರುತ್ತಿತ್ತು. ಈ‌ ವೇಳೆ ಮುಂದೆ ಹೋಗ್ತಿದ್ದ ವಾಹನ, ಒವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬರ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಮತ್ತು ಕಾರಿನ ಮುಂಬಾಗ ಜಖಂ ಆಗಿದೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ‌ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣದ ಟಿಕೆಟ್ ದರ ಹಾಗೂ ಪೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಇದರ ಮಧ್ಯ, ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ರಾಜ್ಯ ಬಜೆಟ್ ನಂತರ ಮತ್ತೆ ಪ್ರತಿ ಲೀಟರ್ ಹಾಲಿನ ದರವನ್ನು 5 ರೂಗೆ ಹೆಚ್ಚಿಸಲು ಕೆಎಂಎಫ್ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಹೌದು ಹಾಲಿನ ದರವನ್ನು ಅಗಸ್ಟ್ 2023ರಲ್ಲಿ 2 ರು. ಹೆಚ್ಚಿಸಿ, ಲೀಟ‌ರ್ಗೆ 43 ರು.ಗೆ ಹೆಚ್ಚಿಸಲಾಯಿತು. ಜೂನ್ 2024ರಲ್ಲಿ ಪ್ರತಿ ಪ್ಯಾಕೇಟ್‌ಗೆ 50 ಮಿಲಿ ಲೀ. ಹಾಲು ಹೆಚ್ಚುವರಿಯಾಗಿ ಕೊಟ್ಟು ಮತ್ತೆ 2ರು.ಹೆಚ್ಚಿಸಿತ್ತು. ಇದೀಗ ರಾಜ್ಯದ 16 ಹಾಲು ಒಕ್ಕೂಟಗಳಿಂದ ದರವನ್ನು ಪ್ರತಿ ಲೀಟರ್ ಗೆ 5 ರೂ. ಏರಿಕೆ ಮಾಡಲು ಒತ್ತಡವಿದೆ. ಹೀಗಾಗಿ ದರ ಏರಿಸುವಂತೆ ಕೆಎಂಎಫ್ ಸರ್ಕಾರಕ್ಕೆ ಕಳೆದ ವರ್ಷವೇ ಪ್ರಸ್ತಾವನೆ ಸಲ್ಲಿಸಿದೆ. ಈ ಪ್ರಸ್ತಾವನೆ ಕುರಿತು ಕಳೆದ ತಿಂಗಳು ರಾಜ್ಯದ ಎಲ್ಲಾ…

Read More

ಮಹಾರಾಷ್ಟ್ರ : ಈಗಾಗಲೇ ಹಲವು ರಾಜ್ಯಗಳಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ತಡೆಯಲು ಹಲವು ಕಠಿಣ ಕ್ರಮ ಕೈಗೊಂಡಿದ್ದು, ಇದೀಗ ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ಸರ್ಕಾರ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ನಿಲ್ಲಿಸಲು ಕಾನೂನು ಕ್ರಮಗಳನ್ನು ಸೂಚಿಸುತ್ತದೆ.ಈ ಮೂಲಕ ಲವ್ ಜಿಹಾದ್ ವಿರುದ್ಧ ಮಹಾರಾಷ್ಟ್ರ ಸಮರ ಸಾರಿದೆ. ಹೌದು ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ತಡೆಗೆ ಕಾನೂನು ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ಇದೀಗ ಮುಂದಾಗಿದೆ. ಮಹಾರಾಷ್ಟ್ರ ಸರ್ಕಾರ ರಚಿಸಿದ ಸಮಿತಿಯಲ್ಲಿ, ಮಹಾರಾಷ್ಟ್ರದ ಡಿಜಿಪಿ ಜೊತೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಕಾನೂನು ಮತ್ತು ನ್ಯಾಯಾಂಗ ಇಲಾಖೆ, ಸಾಮಾಜಿಕ ನ್ಯಾಯ ಇಲಾಖೆ ಮತ್ತು ವಿಶೇಷ ಸಹಾಯ ಇಲಾಖೆಯ ಕಾರ್ಯದರ್ಶಿಗಳು ಮತ್ತು ಗೃಹ ಇಲಾಖೆಯ ಉಪ ಕಾರ್ಯದರ್ಶಿ ಕೂಡ ಇದ್ದಾರೆ. ಈ ಸಂಬಂಧ…

Read More

ಚಿಕ್ಕಮಗಳೂರು : ನಿನ್ನೆ ರಾತ್ರಿ ಚಿಕ್ಕಮಂಗಳೂರಿನಲ್ಲಿ ಕಿಡಿಗೇಡಿಗಳು ಘೋಷಣೆ ಕೂಗಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಮನೆಯ ಕಿಟಕಿ ಮತ್ತು ಗಾಜುಗಳನ್ನು ಹೊಡೆದು ಹಾಕಿರುವ ಘಟನೆ ನಡೆದಿದೆ. ಹೌದು ಚಿಕ್ಕಮಗಳೂರಿನ ಮಹೇಶ್ ಎಂಬುವರ ಮನೆ ಮೇಲೆ ತಡರಾತ್ರಿ ಕಲ್ಲು ತೂರಲಾಗಿದೆ. ಕಲ್ಲು ತೂರಾಟ ನಡೆಸಿ, ಘೋಷಣೆ ಕೂಗಿ ಯುವಕರು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮನೆ ಮಾಲೀಕರು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಸವನಹಳ್ಳಿ ಪೊಲೀಸರು ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ರಾತ್ರಿ ಮನೆಯ ಮೇಲೆ ಕಲ್ಲು ಎಸೆದಿದ್ದು ಮನೆಯ ಕಿಟಕಿಯ ಗಾಜು ಒಡೆದಿದ್ದಾರೆ. ಮನೆ ಮೇಲೆ ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಈ ಕುರಿತು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪತ್ತೆಹಚ್ಚಲಾಗುತ್ತದೆ ಎಂದು ಚಿಕ್ಕಮಂಗಳೂರು ಎಸ್ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಇನ್ನು ಬಾಡಿಗೆದಾರ ಉಮೇಶ್ ಎನ್ನುವವರು ಮಾತನಾಡಿ,ರಾತ್ರಿ 10 ರಿಂದ 12 ಗಂಟೆಗೆ ಕಲ್ಲು ಎಸೆದಿದ್ದಾರೆ. ನಾನು ಮನೆಯಿಂದ ಹೊರಗಡೆ…

Read More

ತೆಲಂಗಾಣ : ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕುರಿತು ಹೇಳಿಕೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಹುಟ್ಟಿನಿಂದ ಹಿಂದುಳಿದ ವರ್ಗದವರು ಅಲ್ಲ ಆದರೂ ಮೋದಿ ತಾವು ಓಬಿಸಿ ವರ್ಗದವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿವಾದಿತ ಹೇಳಿಕೆ ನೀಡಿದರು. ಮೋದಿ ಸಿಎಂ ಆಗುವ ಮುನ್ನ ಉನ್ನತ ಜಾತಿಯವರಾಗಿದ್ದರು. ವಾಸ್ತವಿಕವಾಗಿ ಪ್ರಧಾನಿ ನರೇಂದ್ರ ಮೋದಿ ಓಬಿಸಿ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಪರಿವರ್ತಿತ ಹಿಂದುಳಿದ ವರ್ಗದವರಾಗಿದ್ದಾರೆ. ಹುಟ್ಟಿನಿಂದಲೇ ನರೇಂದ್ರ ಮೋದಿ ಉನ್ನತ ಜಾತಿಗೆ ಸೇರಿದವರಾಗಿದ್ದಾರೆ.ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಉನ್ನತ ಜಾತಿಯಲ್ಲಿದ್ದವರು. 2001ರಲ್ಲಿ ಸಿಎಂ ಆದ ಬಳಿಕ ಅವರ ಜಾತಿಯನ್ನು ಒಬಿಸಿಗೆ ಸೇರಿಸಿದರು ಎಂದು ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.

Read More

ಹುಬ್ಬಳ್ಳಿ : ದಲಿತ ಸಿಎಂ ಮಾಡಿದರೆ ಬಹಳ ಸಂತೋಷ. ಆದರೆ ಇದನ್ನು ಹಾದಿ ಬೀದಿಯಲ್ಲಿ ಮಾತನಾಡಿರುವುದು ಸರಿಯಲ್ಲ ಕಾಂಗ್ರೆಸ್ ನಲ್ಲಿ ಬಹಳ ಗೊಂದಲ ಇದೆ ಇದೊಂದು ರಾಜ್ಯ ಹೋಗುತೆಂದು ಮ್ಯಾನೇಜ್ ಮಾಡುತ್ತಿದ್ದಾರೆ. ದಲಿತ ಸಿಎಂ ಆಗಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರು ಅಧಿಕಾರ ಹಂಚಿಕೆ ಬಗ್ಗೆಯೂ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಸೀರಿಯಸ್ ರಾಜಕಾರಣಿ ಅಲ್ಲ. ಪ್ರತಿಭಟನೆ ಮಾಡೋದು ನಂತರ ವಿದೇಶಕ್ಕೆ ಹೋಗೋದು. ರಾಹುಲ್ ಬರೀ ಅದಾನಿ, ಅಂಬಾನಿ ಬಗ್ಗೆ ಮಾತನಾಡುವುದೇ ಆಗಿದೆ ಇನ್ನು ಎಷ್ಟು ವರ್ಷ ಅವರ ಬಗ್ಗೆ ಮಾತಾಡುತ್ತೀರಿ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು. ಸಿದ್ದರಾಮಯ್ಯ ಬೇಕೊ ಬೇಡವೋ ಎಂದು ಅವರ ಪಕ್ಷ ತೀರ್ಮಾನಿಸಲಿ. ಆದರೆ ಸರಿಯಾದ ರೀತಿ ಆಡಳಿತ ಕೊಡಲಿ. ಈಗ ಯಾಕೆ ಸಿದ್ದರಾಮಯ್ಯ ನಿವೃತ್ತಿಯ ಬಗ್ಗೆ ಚರ್ಚೆ? ಸಿದ್ದರಾಮಯ್ಯ ನಿವೃತ್ತಿ ಆಗುತ್ತಾರೋ ಅಥವಾ ಇರುತ್ತಾರೋ ಡಿಕೆ ಸಿಎಂ ಆಗುತ್ತಾರೋ ಇದೆಲ್ಲ ಇವಾಗ ಯಾಕೆ…

Read More

ಹುಬ್ಬಳ್ಳಿ : ಮೈಸೂರು ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದೆ. ಪೂರ್ವ ತಯಾರಿ ಇಲ್ಲದೆ ಈ ಒಂದು ಗಲಭೆ ಆಗಲು ಸಾಧ್ಯವೇ ಇಲ್ಲ. ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ದೊಡ್ಡ ಗಲಾಟೆ ಆಗಿದೆ ಅಂದರೆ ಹೇಗೆ? ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಈ ವಿಷಯದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಇಲ್ಲ. ಆದರೆ ಗಲಭೆಗೆ ಎಲ್ಲ ತಯಾರಿ ಮಾಡಿಕೊಂಡಿದ್ದು ಸ್ಪಷ್ಟವಾಗಿದೆ. ಹುಬ್ಬಳ್ಳಿ ಪಿ ಎಫ್ ಐ ಗಲಭೆ ಕೇಸ್ ಹಿಂಪಡೆದಿರುವುದು ಕುಮುಕು ಸಿಕ್ಕಿದೆ.ಹಿಂದೂಗಳ ಭಾವನೆಗೆ ಧಕ್ಕೆ ತರುವ ಹಾಗೆ ವರ್ತಿಸಿದ್ದಾರೆ. ತನ್ನ ಎಡಬಿಡಂಗಿತನದಿಂದಲೇ ಕಾಂಗ್ರೆಸ್ ಎಲ್ಲೂ ಗೆಲ್ಲುತ್ತಿಲ್ಲ ಎಂದರು. ಇದೇ ರೀತಿ ಆದರೆ ರಾಜ್ಯದಲ್ಲೂ ನಿಮ್ಮನ್ನು ಕಿತ್ತು ಎಸೆಯುತ್ತಾರೆ. ಕಾಂಗ್ರೆಸ್ ಕುಮ್ಮಕ್ಕಿ ನಿಂದ ಮತಾಂಧ ಶಕ್ತಿಗಳು ಕೆಲಸ ಮಾಡುತ್ತಿವೆ. ಗೃಹ ಸಚಿವರು ಅವರಿಗೆ ಬೇಕಾದಂತೆ ಮಾತುಗಳು ಆಡುತ್ತಿದ್ದಾರೆ. ಗಲಭೆ ಮಾಡಿರುವರು ಕ್ರಿಮಿನಲ್ ಚಟುವಟಿಕೆ ಹಿನ್ನೆಲೆ ಉಳ್ಳವರಾಗಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ…

Read More

ದಾವಣಗೆರೆ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ.  ಡೆತ್ ನೋಟ್ ಬರೆದಿಟ್ಟು ಬಸವರಾಜ್  (37) ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಮೂಲದ ವ್ಯಕ್ತಿಯ ಜೊತೆಗೆ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಳು. ಪತ್ನಿಯ ಅನೈತಿಕ ಸಂಬಂಧಕ್ಕೆ ಬೆಸತ್ತು ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ಬಸವರಾಜ್ ನೇಣಿಗೆ ಶರಣಾಗಿದ್ದಾರೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನನ್ನ ಪತ್ನಿಯ ಕಾರಣ. ಆಕೆಗೆ ಶಿಕ್ಷೆ ವಿಧಿಸಬೇಕು ಅಲ್ಲದೆ ಅವಳ ಪ್ರಿಯಕರನಿಗೂ ಕೂಡ ಶಿಕ್ಷೆ ಆಗಬೇಕು. ನನ್ನ ಮಕ್ಕಳನ್ನ ನನ್ನ ತಾಯಿ ಸಾಕಬೇಕೆಂದು ಡೆತ್ ನೋಟ್ ನಲ್ಲಿ ಬಸವರಾಜ್ ಉಲ್ಲೇಖಿಸಿದ್ದಾರೆ. ಘಟನೆ ಕುರಿತು ಜಗಳೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಹಾಸನ : ಮೈಸೂರು ನಗರದ ಉದಯಗಿರಿ ಠಾಣೆಯ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ ಅದನ್ನು ಬಿಟ್ಟು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಹೆಚ್ಚಿನ ಪ್ರಚಾರ ಕೊಡುವ ಅಗತ್ಯ ಇಲ್ಲ ಎಂದು ತಿಳಿಸಿದರು. ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರಕ್ಕೆ ಹೆಚ್ಚಿನ ಪ್ರಚಾರ ಕೊಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಗಲಭೆ ಆರಂಭವಾಗಿದ್ದು ಸಾಮಾಜಿಕ ಜಾಲತಾಣದ ಹರಿಬಿಡಲಗಿದ್ದ ಪೋಸ್ಟ್ ನಿಂದ ಈ ಒಂದು ಗಲಭೆ ನಡೆದಿದೆ ಎಂದು ತಿಳಿಸಿದರು. ದೊಡ್ಡ ಮಟ್ಟದ ಕಲಹ ಉಂಟು ಮಾಡಿ ಅಶಾಂತಿ ನಿರ್ಮಿಸಲು ಯತ್ನಿಸಲಾಗಿದೆ. ಇದರ ಹಿನ್ನೆಲೆಯಲ್ಲಿ ರಾಜಕೀಯ ಶುರುವಾಗಿದೆ ರಾಜ್ಯ ಯಾವ ಸ್ಥಿತಿಯಲ್ಲಿ ಹೋಗುತ್ತಿದೆ ಅದಕ್ಕೆ ಗಮನಹರಿಸುವುದು ಸೂಕ್ತ ಎಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.

Read More

ಬೆಂಗಳೂರು : ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್‌ ಮೂಲಕ ಸಭೆ ನಡೆಸಿದ ಅವರು, ಕಳೆದ ವರ್ಷ ಸುರಿದ ಉತ್ತಮ ಮಳೆಯ ನಡುವೆಯೂ ಈ ಬಾರಿ ಬಿಸಿಲು ಹೆಚ್ಚಳವಾಗಿದ್ದು, ಕಾಡ್ಗಿಚ್ಚಿನ ಅಪಾಯ ಎದುರಿಸಲು ಸರ್ವಸನ್ನದ್ಧರಾಗಿರುವಂತೆ ಸೂಚನೆ ನೀಡಿದರು. ಉಪಗ್ರಹ ಆಧಾರಿತ ಕಾಡ್ಗಿಚ್ಚು ಮುನ್ನಚ್ಚರಿಕೆ ವ್ಯವಸ್ಥೆಯ ಸಂದೇಶಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ತಿಳಿಸಿದ ಅವರು, ಪದೆ ಪದೆ ಕಾಡ್ಗಿಚ್ಚು ಸಂಭವಿಸುವ ಪ್ರದೇಶಗಳಲ್ಲಿ ಬೆಂಕಿರೇಖೆ ನಿರ್ಮಿಸಲು, ದೈನಂದಿನ ಆಧಾರದಲ್ಲಿ ಪರಾಮರ್ಶೆ ನಡೆಸಿ, ಕಾಡ್ಗಿಚ್ಚು ನಿಯಂತ್ರಣ ಯೋಜನೆ ರೂಪಿಸಿ, ಕ್ಷೇತ್ರಮಟ್ಟದ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ ಬೆಂಕಿಯಿಂದ ಕಾಡು ನಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಕಿಡಿಗೇಡಿಗಳು ಕಾಡಿಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದರೆ ಅಂತಹವರ ವಿರುದ್ಧ ಎಫ್ಐ.ಆರ್. ದಾಖಲಿಸಲು ಮತ್ತು ಪೊಲೀಸ್‌…

Read More