Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದು ಇಟ್ಟಿದ್ದು, ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ ಮಾದಕದ್ರವ್ಯ ವಿರೋಧಿ ಕಾರ್ಯಪಡೆ (ANTF)ಗೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಕಾರ್ಯಪಡೆಗೆ ಚಾಲನೆ ನೀಡಿದ್ದಾರೆ.66 ಸಿಬ್ಬಂದಿಗಳ ಅನುಮೋದಿತ ಬಲದೊಂದಿಗೆ ಮಾದಕವಸ್ತು ನಿಗ್ರಹ ದಳವನ್ನು ರಚಿಸಿ ಆಗಸ್ಟ್ನಲ್ಲಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ನೂತನ ಕಾರ್ಯಪಡೆಗೆ ಚಾಲನೆ ನೀಡಿದರು. ಹೇಗೆ ಕಾರ್ಯ ನಿರ್ವಹಿಸಲಿದೆ? ಕೇಂದ್ರ ತನಿಖಾ ಸಂಸ್ಥೆಯಾಗಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಾದರಿಯಲ್ಲಿ ಕಾರ್ಯ ನಿರ್ವಹಿಸಿಸಲಿರುವ ರಾಜ್ಯ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳು ಮಾತ್ರವಲ್ಲದೆ ಜಿಲ್ಲೆಗಳಲ್ಲಿನ ಸಂಘಟಿತ ಮಾದಕವಸ್ತು ಜಾಲಗಳನ್ನು ಪತ್ತೆ ಹಚ್ಚಲು ಕಾರ್ಯ ನಿರ್ವಹಿಸಲಿದೆ. ಹಾಗೂ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ…
ಬೆಂಗಳೂರು : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲಿ ದುರ್ಮರಣ ಹೊಂದಿದ್ದಾಳೆ. ಬೆಂಗಳೂರಿನಲ್ಲಿ ರೋಡ್ ರೋಮಿಯೋ ಕಿರುಕುಳದಿಂದ ಅಪ್ರಾಪ್ತೆ ಬಾಲಕಿಯೊಬ್ಬಳು ಹೆಣವಾಗಿದ್ದಾಳೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಲವ್ ಹೆಸರಿನಲ್ಲಿ ಅಪ್ರಾಪ್ತ ಹಿಂದೆ ಮನೋಜ್ ಎಂಬ ಯುವಕ ಬಿದ್ದಿದ್ದ ಲೈಂಗಿಕವಾಗಿ ಬಳಸಿಕೊಳ್ಳಲು ಗ್ಯಾಂಗ್ ಒಂದು ಆಕೆಯನ್ನು ಕರೆದೊಯ್ಯುತ್ತಿತ್ತು. ಬೈಕ್ ನಲ್ಲಿ ಕರೆದೋಯ್ಯುವಾಗ ಅಪಘಾತ ಸಂಭವಿಸಿ ಅಪ್ರಾಪ್ತೆ ಸಾವನ್ನಪ್ಪಿದ್ದಾಳೆ. ಲೈಂಗಿಕವಾಗಿ ಬಳಸಿಕೊಳ್ಳಲು ಆಕೆಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುವಾಗ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ. 9ನೇ ತರಗತಿ ಓದುತ್ತಿದ್ದ ಬಾಲಕಿಯ ಹಿಂದೆ ಮನೋಜ್ ಹಿಂದೆ ಬಿದ್ದಿದ್ದ ಪದೇ ಪದೇ ಕರೆ ಮಾಡಿ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಕ್ಟೋಬರ್ 24ರಂದು ಮನೋಜ್ ಕರೆದುಕೊಂಡು ಹೋಗಿದ್ದಾನೆ ಎರಡು ಬೈಕ್ಗಳಲ್ಲಿ ಹೊಸಕೋಟೆ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾನೆ. ಬಾಲಕಿ ಮನೋಜ್ ಮತ್ತು ಮತ್ತೋರ್ವ ಒಂದು ಬೈಕ್ನಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ. ಪ್ರಿಯತಮೆಗಾಗಿ ದುಬಾರಿ ಮೊಬೈಲ್ಗಳನ್ನು ಪ್ರಿಯಕರ ಕಳ್ಳತನ ಮಾಡಿದ್ದಾನೆ. ಕಳೆದ ವಾರ ಒಂದೇ ರಾತ್ರಿ ಎರಡು ಶೋ ರೂಮ್ಗೆ ಕನ್ನ ಹಾಕಿದ್ದಾನೆ. 30ಕ್ಕೂ ಹೆಚ್ಚು ದುಬಾರಿ ಮೊಬೈಲ್ ಗಳನ್ನ ಕಳ್ಳತನ ಮಾಡಿದ್ದಾನೆ. ಸ್ನೇಹಿತನೊಂದಿಗೆ ಸೇರಿ ಸುಮಾರು 30ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಮೊಬೈಲ್ ಕಳ್ಳತನ ಮಾಡಿದ್ದಾನೆ. ಪತಿ ಬಿಟ್ಟು ಮಹಿಳೆ ಅಸ್ಮಿತ ಕಳ್ಳನ ಜೊತೆಗೆ ಲಿವ್ ಇನ್ ರಿಲೇಶನ್ ನಲ್ಲಿ ಇದ್ದಳು ಪ್ರಿಯಕರ ತಂದುಕೊಟ್ಟ ಮೊಬೈಲ್ ಅನ್ನು ಪ್ರೇಯಸಿ ಸೇಲ್ ಮಾಡುತ್ತಿದ್ದಳು. ಪ್ರಿಯಕರ ದಿವಾಸ್ ಗೆಳೆಯ ಆರೋಹನ ಹಾಗೂ ಪ್ರೇಯಸಿ ಅಸ್ಮಿತಾಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಪ್ರಿಯಕರ ಕಳ್ಳತನ ಮಾಡಿ ಗಿಫ್ಟ್ ಕೊಡಬೇಕು ಅಂತ ಅಲ್ಲ. ಕದ್ದ ಮೊಬೈಲ್ ಗಳನ್ನ ಅಸ್ಮಿತಾಗೆ ತಂದು ಆತ ಕೊಡುತ್ತಿದ್ದ ಪ್ರೇಯಸಿ ಅಸ್ಮಿತ ಅದನ್ನು ಮಾರಾಟ ಮಾಡುತ್ತಿದ್ದಳು 30 ಲಕ್ಷದ ಒಟ್ಟು 28 ಮೊಬೈಲ್ ಹಾಗೂ ವಾಚ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವರ್ತೂರು ಪೋಲಿಸರಿಂದ…
ಧಾರವಾಡ : ಸಿದ್ದರಾಮಯ್ಯ ಜೀವನಪೂರ್ತಿ ರಾಜಕೀಯದಲ್ಲಿರಬೇಕು ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಆಗಬಾರದು. ಸಿದ್ದರಾಮಯ್ಯ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬೇಕು ಸಿಎಂ ಸಿದ್ದರಾಮಯ್ಯ ಅವರ ಅವಶ್ಯಕತೆ ರಾಜ್ಯಕ್ಕೆ ಬಹಳವಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು. ಕಲಘಟಗಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಸಹಜ ಪ್ರಕ್ರಿಯೆ ಅದರಲ್ಲಿ ಯಾವುದೇ ಕ್ರಾಂತಿ ಇಲ್ಲ. ಪುನಾರಚನೆ ಅಂದರೆ ಕೆಲವರನ್ನು ತೆಗೆಯಬೇಕು ಮತ್ತೆ ಕೆಲವರನ್ನು ಸೇರಿಸಿಕೊಳ್ಳಬೇಕು. ಎಲ್ಲರೂ ಎಲ್ಲಾ ತ್ಯಾಗಕ್ಕೂ ಸಿದ್ಧರಿರಬೇಕು ಸಿಎಂ ಹೈಕಮಾಂಡ್ ನಿರ್ಧಾರ ಅಂದಮೇಲೆ ಅದರಲ್ಲಿ ಗೊಂದಲ ಎಲ್ಲಿದೆ? ಕೇಂದ್ರ ಸರ್ಕಾರದಲ್ಲಿ ಯಾಕೆ ಬದಲಾವಣೆ ಆಗಬಾರದು? ನಿತಿನ್ ಗಡ್ಕರಿ ಯಾಕೆ ಪ್ರಧಾನಿ ಆಗಬಾರದು?ಎಂದು ಧಾರವಾಡ ಜಿಲ್ಲೆಯ ಕಲಘಟಕಿಯಲ್ಲಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು.
ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಕಳೆದ ತಿಂಗಳು ಜೀವಾವಧಿ ಶಿಕ್ಷೆ ಪ್ರಕಟಿಸಿ ಐತಿಹಾಸಿಕ ತೀರ್ಪು ನೀಡಿತ್ತು. ಇದೀಗ ಜೀವಿತಾವಧಿ ಸೆರೆವಾಸ ಶಿಕ್ಷೆ ಪ್ರಶ್ನಿಸಿ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಭಾಗೀಯದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂತ್ರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ನೀಡಿತು. ಬಳಿಕ ವಿಚಾರಣೆಯನ್ನು ನವೆಂಬರ್ 13ರ ಮಧ್ಯಾಹ್ನ 2:30ಕ್ಕೆ ನಿಗದಿಪಡಿಸಿತು.
ಧಾರವಾಡ: ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಹೌದು ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದೇಶ ಹೊರಡಿಸಿತ್ತು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ. ಧಾರವಾಡದ ಹೈಕೋರ್ಟ್ ಪೀಠದಲ್ಲಿ ಪುನಃಶ್ಚೇತನ ಸೇವಾ ಸಂಸ್ಥೆ ಹುಬ್ಬಳ್ಳಿಯ ಎನ್ಜಿಓ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯಲ್ಲಿ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ. ಆದೇಶದಲ್ಲಿ 10 ಜನಕ್ಕಿಂತ ಹೆಚ್ಚು…
ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಐದು ವರ್ಷಗಳ ಕಾಲ ಸಿಎಂ ಎಂದು ಹೇಳಿಕೆ ನೀಡಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಸಿದ್ದರಾಮಯ್ಯ ಸಿಎಂ ಆಗಿ ಆರಿಸಿದ್ದು ಎರಡುವರೆ ವರ್ಷಕ್ಕೆ ಅಲ್ಲ. ಅಧಿಕಾರ ಹಂಚಿಕೆ ಇದೆ ಎಂದು ನಮಗೆ ಯಾರು ಹೇಳಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಆರಿಸಿದ್ದು ಎರಡೂವರೆ ವರ್ಷಕ್ಕೆ ಅಲ್ಲ. ಅಧಿಕಾರ ಹಂಚಿಕೆ ಇದೆ ಎಂದು ನಮಗೆ ಯಾರು ಹೇಳಿಲ್ಲ. ಅಧಿಕಾರ ಹಂಚಿಕೆ ಇದ್ದರೆ ಹೈಕಮಾಂಡ್ ನಮಗೆ ಹೇಳಲಿ. ನಾವು ಸಿಎಲ್ಪಿ ನಾಯಕರನ್ನು ಆಯ್ಕೆ ಮಾಡಿದಾಗ, ನಮ್ಮ ಪಕ್ಷ ಮೆಜಾರಿಟಿ ಬಂದಾಗ ಎಲ್ಲಾ ಶಾಸಕರನ್ನು ಕರೆದು ಸಿಎಲ್ಪಿ ನಾಯಕರನ್ನು ಆಯ್ಕೆ ಮಾಡಿದೆವು. ಅವತ್ತು ನಮಗೆ ಯಾವುದೇ ದೃಷ್ಟಿಯಿಂದ ಸಿದ್ದರಾಮಯ್ಯ ಬರಿ ಎರಡುವರೆ ವರ್ಷ ಮುಖ್ಯಮಂತ್ರಿ ಅಂತ ಹೇಳಿಲ್ಲ. ಹೈಕಮಾಂಡ್ ಅವರು ಸಹ ಸಿದ್ದರಾಮಯ್ಯ ಅವರು ಸಿಎಲ್ ಪಿ ನಾಯಕ…
ಕೋಲಾರ : ನೀನೆ ತಾನೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದರು ಇದೀಗ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸಹ ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೆ ಮುಂದುವರೆಯುತ್ತಾರೆ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವಲ್ಲಿ ಅವರ ಶ್ರಮ ಸಾಕಷ್ಟಿದೆ. ಅಧ್ಯಕ್ಷರ ಆದಿಯಾಗಿ ಸಾಕಷ್ಟು ಜನರು ಸಿಎಂ ಆಗಲು ಅರ್ಹರಿದ್ದಾರೆ. ಆದರೆ ಬೆಳಗಾದರೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಸಿಎಂ ಬದಲಾವಣೆಯ ಬಗ್ಗೆ ನಾವು ತೀರ್ಮಾನ ಮಾಡುವುದಿಲ್ಲ ಸಿಎಂ ಬದಲಾವಣೆ ವಿಚಾರ ಮಾತನಾಡುವುದು ಪ್ರಸ್ತುತ ಸಿಎಂ ಆಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ. 136 ಜನ ಶಾಸಕರಾಗಿ ಗೆದ್ದಿದ್ದೇವೆ ಅದಕ್ಕೆ ನಾಯಕತ್ವ ಬೇಕು ಎಂದು ತಿಳಿಸಿದರು. ಮುನಿಯಪ್ಪ ಸಿಎಂ ಆದರೆ ಸಂತೋಷ ಎಂದು ನಿನ್ನೆ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದು ಅದಕ್ಕೆ ಪ್ರತಿಕ್ರಿಯಿಸಿದ ಅವರು…
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿದೆ. ಅಲ್ಲದೆ ಸಚಿವ ಸಂಪುಟ ಬದಲಾವಣೆ ಸಹ ಆಗಲಿದೆ ಎಂದು ಹೇಳಲಗುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಚಿವ ಸಂಪುಟಕ್ಕೆ ಸೇರಿತ್ತೀರಾ ಎಂಬ ಪ್ರಶ್ನೆಗೆ ಮಂತ್ರಿ ಆಸೆ ಯಾರಿಗಿರಲ್ಲ ಹೇಳಿ ಅವಕಾಶ ಕೊಟ್ಟರು ಕೊಡಬಹುದು ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಆದರೆ ಅದು ಬಿಜೆಪಿಯಲ್ಲೇ ಆಗಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕಣ್ಣನ ಚೇರ್ ಗೆ ಸುನೀಲ ಅಣ್ಣ ಬರುತ್ತಾರೆ. ಅಶೋಕ್ ಅವರ ಕುರ್ಚಿ ಹೋಗುತ್ತೆ, ಇದೆ ಕ್ರಾಂತಿ ಅನ್ನಿಸುತ್ತೆ. ಪ್ರಯಶಹ ಬದಲಾವಣೆ ಇರಬಹುದೇನೋ? ಎಂದು ತಿಳಿಸಿದರು.
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ನವೆಂಬರ್ ಕ್ರಾಂತಿ ಆದರೆ ಅದು ಬಿಜೆಪಿಯಲ್ಲೇ ಆಗಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್.ಅಶೋಕಣ್ಣನ ಚೇರ್ ಗೆ ಸುನೀಲ ಅಣ್ಣ ಬರುತ್ತಾರೆ. ಅಶೋಕ್ ಅವರ ಕುರ್ಚಿ ಹೋಗುತ್ತೆ, ಇದೆ ಕ್ರಾಂತಿ ಅನ್ನಿಸುತ್ತೆ. ಪ್ರಯಶಹ ಬದಲಾವಣೆ ಇರಬಹುದೇನೋ? ಎಂದು ತಿಳಿಸಿದರು. ಸಚಿವ ಸಂಪುಟಕ್ಕೆ ಸೇರಿತ್ತೀರಾ ಎಂಬ ಪ್ರಶ್ನೆಗೆ ಮಂತ್ರಿ ಆಸೆ ಯಾರಿಗಿರಲ್ಲ ಹೇಳಿ ಅವಕಾಶ ಕೊಟ್ಟರು ಕೊಡಬಹುದು ಎಂದು ತಿಳಿಸಿದರು.














