Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಚಾಮರಾಜನಗರದಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಿಯತಮೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದು ಅಲ್ಲದೆ ಆಕೆಯ ಜೀವನವನ್ನು ದುರುಳನೊಬ್ಬ ನರಕ ಮಾಡಿದ್ದಾನೆ. ಪ್ರೀತಿ ಪ್ರೇಮದ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿದ್ದಲ್ಲದೆ 3 ಬಾರಿ ಗರ್ಭಪಾತ ಮಾಡಿಸಿದ್ದಾನೆ. ಪ್ರಿಯಕರನ ವಂಚನೆಗೆ ಸದ್ಯ ಯುವತಿ ಮತ್ತು ಸಂಬಂಧಿಕರು ಇದೀಗ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಹೌದು 2021 ರಲ್ಲಿ ನರ್ಸಿಂಗ್ ಕೋರ್ಸ್ ಮಾಡುವಾಗ ಯುವತಿಗೆ ಯುವಕ ಕ್ಲಿಂಟನ್ ಪರಿಚಯನಾಗಿದ್ದಾನೆ. ಕ್ಲಿಂಟನ್ ಎಂಬಾತನ ಸ್ನೇಹ ಬೆಳೆಸಿದ್ದ ಜಾನ್ ಪ್ರೆಸಿಲ್ಲಾ ಎಂಬ ಯುವತಿ, ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರು ಸುತ್ತಾಡಿದ್ದಾರೆ. ಮನೆಯವರಿಗೆ ಇವರ ವಿಷಯ ಗೊತ್ತಾಗಿ ಪೋಷಕರು ಮದುವೆಗೆ ಮುಂದಾಗಿದ್ದರು. ಆದರೆ ಕ್ಲಿಂಟನ್ ಸಹೋದರಿಗೆ ಈ ಮದುವೆ ಒಪ್ಪಿಗೆ ಇರಲಿಲ್ಲ ಹೀಗಾಗಿ ಪ್ರೆಸಿಲ್ಲಾಗೆ ಆಕೆಯ ಪೋಷಕರು ಬೇರೆ ಮದುವೆ ಮಾಡಿಸಿದ್ದಾರೆ. 2022ರಲ್ಲಿ ಪ್ರೆಸಿಲ್ಲಾ ಜೊತೆಗೆ ಪೋಷಕರು ಬೇರೆ ಮದುವೆ ಮಾಡಿಕೊಟ್ಟಿದ್ದಾರೆ. ಮದುವೆಯಾಗಿದ್ದು ಗೊತ್ತಾಗುತ್ತಿದ್ದಂತೆ ಕ್ಲಿಂಟನ್ ಆಕೆಗೆ ಬ್ಲಾಕ್ ಮೇಲ್ ಮಾಡಲು ಮುಂದಾಗಿದ್ದಾನೆ. ಪತಿ…
ಬೆಂಗಳೂರು : ಮುಂದಿನ ಚುನಾವಣೆ ಗೆಲ್ಲಬೇಕೆಂದರೆ ಸಿಎಂ ಸಿದ್ದರಾಮಯ್ಯ ಇರಲೇಬೇಕು. ಚುನಾವಣೆ ಗೆಲ್ಲಲು ಅನುಕೂಲವಾಗುತ್ತದೆ ಇನ್ನೊಂದು ಅವಧಿಯವರೆಗೆ ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿರಬೇಕು ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಮಗೆ ಬೇಕೇ ಬೇಕು ಅವರು ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಸಿಎಂ ನಿವೃತ್ತಿ ಆದರೂ ಪಕ್ಷದ ಪರವಾಗಿ ಕೆಲಸ ಮಾಡಬೇಕು. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇರದಿದ್ದರೂ ಅವರು ಇರಬೇಕು ಹೊಸ ನಾಯಕತ್ವ ತಯಾರಾಗುವವರೆಗೆ ಅವರ ಇರುವಿಕೆ ಅನಿವಾರ್ಯವಾಗಿದೆ ಎಂದು ತಿಳಿಸಿದರು. ಇನ್ನು ಅಧಿಕಾರ ಹಂಚಿಕೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಖರ್ಗೆ ಸುರ್ಜೆವಾಲಾ ಈ ಕುರಿತು ಎಲ್ಲಾ ಹೇಳಬೇಕು ಪವರ್ ಶೇರಿಂಗ್ ಬಗ್ಗೆ ನನಗೆ ಗೊತ್ತಿಲ್ಲ. ಇದೆಲ್ಲ ನಮ್ಮ ವ್ಯಾಪ್ತಿಯಲ್ಲಿ ಇಲ್ಲ. ಪವರ್ ಶೇರಿಂಗ್ ಆಗಿದೆಯೋ ಇಲ್ಲವೋ ನಮಗೆ ಆ ವಿಷಯದ ಕುರಿತು ಗೊತ್ತಿಲ್ಲ. ಇವರೇ ಮುಂದುವರೆಯುತ್ತಾರೋ ಅದು ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸಹ…
ತುಮಕೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಒಂದು ವೇಳೆ ಬಿವೈ ವಿಜಯೇಂದ್ರ ಅವರ ಸ್ಥಾನದಲ್ಲಿ ನಾನೇನಾದರೂ ಇದ್ದಿದ್ದರೆ ಕೂಡಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಅಮಾನತು ಮಾಡುತ್ತಿದ್ದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣ ಸೃಷ್ಟಿಯಾಗಿದೆ ಎಂದು ಬಿಜೆಪಿ ನಾಯಕರ ಆರೋಪಗಳಿಗೆ ಸಚಿವ ಕೆ ಎನ್ ರಾಜಣ್ಣ ಇದೀಗ ತಿರುಗೇಟು ನೀಡಿದ್ದಾರೆ. ಬಿಜೆಪಿ ತಟ್ಟೆಯಲ್ಲೆ ಹೆಗ್ಗಣ ಸತ್ತಿದೆ ನಮಗೆ ಹೇಳೋಕೆ ಬರುತ್ತಾರೆ. ನಾನು ವಿಜಯೇಂದ್ರ ಸ್ಥಾನದಲ್ಲಿ ಇದ್ದಿದ್ರೆ ಶಾಸಕ ಯತ್ನಾಳ್ ಅವರನ್ನು ಅಮಾನತು ಮಾಡುತ್ತಿದ್ದೆ. ವಿಜಯೇಂದ್ರ ಬಗ್ಗೆ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ.ಇವರು ಒಂದು ಬಾರಿಯಾದರೂ ನೋಟಿಸ್ ಕೊಟ್ಟಿದ್ದಾರಾ? ನಮ್ಮಲ್ಲೂ ಶಿಸ್ತು ಸಮಿತಿ ಇರುತ್ತೆ ಅಲ್ವಾ? ನಮ್ಮಲ್ಲಿ ಭಿನ್ನಮತ ಇರಬಹುದು ಆದರೆ ಯಾವುದೇ ಗುಂಪುಗಾರಿಕೆ…
ಮೈಸೂರು : ಮೈಸೂರಿನ ಉದಯಗಿರಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ಸತೀಶ್ ಮೊಬೈಲ್ ನಲ್ಲಿ ಅಂದು ಆತ ಸ್ಟೇಟಸ್ ಹಾಕಿಕೊಂಡಿದ್ದ ವಿಡಿಯೋ ಇದೀಗ ವೈರಲ್ ಆಗಿದೆ. ಹೌದು ಆರೋಪಿ ಸತೀಶ್ ಹಾಕಿಕೊಂಡಿದ್ದ ಸ್ಟೇಟಸ್ ರಿಲೀಸ್ ಆಗಿದ್ದು, ಸತೀಶ್ ಅಂಗಡಿಯ ಹುಡುಗರಿಂದಲೇ ಈ ಒಂದು ವಿಡಿಯೋ ಸ್ಟೇಟಸ್ ಲೀಕ್ ಆಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸತೀಶ್ ಹಾಕಿಕೊಂಡಿದ್ದ ಆಕ್ಷೇಪಾರ್ಹ ಫೋಟೋ ಇದೀಗ ರಿವಿಲ್ ಆಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಕೇಜ್ರಿವಾಲ್ ಫೋಟೋ ಸ್ಟೇಟಸ್ ಹಾಕಿಕೊಂಡಿದ್ದು, ಫೋಟೋ ತುಂಬಿಲ್ಲ ಅರೇಬಿಕ್ ಅಕ್ಷರಗಳಲ್ಲಿ ಬರೆಯಲಾಗಿತ್ತು. ಅಲ್ಲದೇ ಸ್ಟೇಟಸ್ ಓಪನ್ ಮಾಡಿ ವಿಡಿಯೋ ಮಾಡಲಾಗಿತ್ತು. ಆರೋಪಿ ಮೊಬೈಲ್ ನಿಂದ ವಿಡಿಯೋ ಮಾಡಲಾಗಿತ್ತು. ಈ ಒಂದು ವಾಟ್ಸಪ್ ಸ್ಟೇಟಸ್ ಆರೋಪಿ ಸತೀಶ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕರೇ ಇದನ್ನು ಸತೀಶ್ ಮೊಬೈಲ್ ಪಡೆದುಕೊಂಡು…
ಕೋಲಾರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಬಾಲ್ಯ ವಿವಾಹ ಪ್ರಕರಣ ಅಪರಾಧಿಗೆ 20 ವರ್ಷ ಶಿಕ್ಷೆ ಹಾಗೂ 45,000 ದಂಡ ವಿಧಿಸಿ ಕೋಲಾರ ಪೋಕ್ಸೋ ವಿಶೇಷ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಅಪರಾಧಿ ಕಾರು ಚಾಲಕ ಗಂಗಾಧರ್ ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಮಾರುತಿ ನಗರದ ನಿವಾಸಿಯಾಗಿರುವ ಗಂಗಾಧರ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಬಳಿಕ ಮದುವೆ ಕೂಡ ಆಗಿದ್ದ. ಈ ಕುರಿತು 2023 ಮೇ 17ರಂದು ಈ ಬಗ್ಗೆ ಬಾಲಕಿಯ ಪೋಷಕರು ದೂರು ನೀಡಿದ್ದರು. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತನಿಖೆ ಬಳಿಕ ಪೊಲೀಸರು ಕೋರ್ಟಿಗೆ ದೋಷಾರೋಪ ಪಟ್ಟಿ ಸಲ್ಲಿಸಿದರ ಪ್ರಕರಣದ ವಿಚಾರಣೆ ನಡೆಯಿಸಿದ ನ್ಯಾ.ಕೆಬಿ ಪ್ರಸಾದ್ ಅವರು ಇದೀಗ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಗಂಗಾಧರ್ಗೆ 20 ವರ್ಷ ಶಿಕ್ಷೆ ರೂ. 45,000 ದಂಡ ವಿಧಿಸಿ ತೀರ್ಪು ನೀಡಿದ್ದು ಸಂತ್ರಸ್ತೇಗೆ 4 ಲಕ್ಷ…
ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕಾಗಿ ನಿನ್ನೆ ಬೆಂಗಳೂರಿನ ಮೆಜೆಸ್ಟಿಕ್ ಬಳಿ ABVP ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದೀಗ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ್ದರಿಂದ ಎಬಿವಿಪಿಯ ಒಟ್ಟು 16 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಬೆಂಗಳೂರಲ್ಲಿ ಮೆಟ್ರೋ ದರ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಇದೀಗ FIR ದಾಖಲಾಗಿದೆ. ಕಾಟನ್ ಪೇಟಿ ಠಾಣೆಯಲ್ಲಿ 16 ಜನರ ವಿರುದ್ಧ ದಾಖಲಾಗಿದೆ. ನಿನ್ನೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ್ದಕ್ಕಾಗಿ ಇದೀಗ 16 ಜನ ಎಬಿವಿಪಿ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ವಿಜಯಪುರದ ಮದೀನಾ ನಗರದ ಬಳಿ ಭೀಮಾ ತೀರದ ಹಂತಕ ಭಾಗಪ್ಪ ಹರಿಜನ್ ಭೀಕರವಾಗಿ ಕೊಲೆಯಾಗಿತ್ತು. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಹಂತಕರು ಭಾಗಪ್ಪನನ್ನು ಕೊಲೆ ಮಾಡಿರುವ ರಹಸ್ಯವನ್ನು ಬಾಯಿಬಿಟ್ಟಿದ್ದಾರೆ. ಫೆಬ್ರವರಿ 11 ರಂದು ರಾತ್ರಿ ವಿಜಯಪುರ ನಗರದ ಮದೀನಾ ನಗರದ ಬಾಡಿಗೆ ಮನೆಯಲ್ಲಿದ್ದ ಭೀಮಾತೀರದ ಹಂತಕ ಬಾಗಪ್ಪ ಹರಿಜನನ್ನು ಪ್ರಕಾಶ ಅಲಿಯಾಸ್ ಪಿಂಟ್ಯಾ, ರಾಹುಲ ಭೀಮಾಶಂಕರ ತಳಕೇರಿ, ಸುದೀಪ ಕಾಂಬಳೆ ಹಾಗೂ ಮಣಿಕಂಠ ಅಲಿಯಾಸ್ ಗದಿಗೆಪ್ಪ ಶಂಕ್ರಪ್ಪ ಬೆನಕೊಪ್ಪ ಭಾಗಪ್ಪನನ್ನು ಕೊಡಲಿ ಮತ್ತು ತಲ್ವಾರ್ನಿಂದ ಕೊಚ್ಚಿ ಹಾಕಲಾಗಿತ್ತು. ಎಡ ಮುಂಗೈ ಕಟ್ ಆಗಿ ಬಿದ್ದಿತ್ತು. ನಂತರ ಆತನ ಮೇಲೆ ಕಂಟ್ರಿ ಪಿಸ್ತೂಲ್ನಿಂದ ಗುಂಡು ಹಾರಿಸಿ ಬಾಗಪ್ಪ ಮೃತಪಟ್ಟ ಎಂದು ದೃಢ ಪಡಿಸಿಕೊಂಡು ಪರಾರಿಯಾಗಿದ್ದರು. ವಿಚಾರ ತಿಳಿದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿಗಳಾದ ಶಂಕರ ಮಾರೀಹಾಳ, ರಾಮನಗೌಡ…
BREAKING : ‘RSS’ ಚಮಚಾಗಿರಿ ಮಾಡಿದರೆ ‘PFI’ ನಿನ್ನ ಸುಮ್ನೆ ಬಿಡಲ್ಲ : ಕೈ ಮುಖಂಡ ಬಿಕೆ ಅಲ್ತಾಫ್ ಖಾನ್ ಗೆ ಬೆದರಿಕೆ!
ಬೆಂಗಳೂರು : ಕಾಂಗ್ರೆಸ್ ಮುಖಂಡ ಹಾಗೂ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷರಾಗಿರುವ ಬಿಕೆ ಅಲ್ತಾಫ್ ಖಾನ್ ಅವರಿಗೆ ಅನಾಮಿಕ ವ್ಯಕ್ತಿಯಿಂದ ಕೊಲೆ ಬೆದರಿಕೆ ಕರೆ ಬಂದಿದ್ದು, RSS ಚಮಚಾಗಿರಿ ಮಾಡಿದರೆ PFI ನಿನ್ನನ್ನು ಸುಮ್ಮನೆ ಬಿಡಲ್ಲ ಎಂದು ಬಿಕೆ ಅಲ್ತಾಫ್ ಖಾನ್ ಗೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಅಲ್ತಾಫ್ ಪರಿಚಯಸ್ಥ ಅಜ್ಮತ್ ಉಲ್ಲಾಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ಅಲ್ತಾಫ್ ಕಾಂಗ್ರೆಸ್ ಮುಖಂಡರಾಗಿದ್ದು, ಹಾಗೂ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷರಾಗಿದ್ದಾರೆ. ಈ ಕುರಿತು ಜೆಜೆ ನಗರ ಠಾಣೆಗೆ ಬಿಕೆ ಅಲ್ತಾಫ್ ಖಾನ್ ದೂರು ನೀಡಿದ್ದಾರೆ. ಅಲ್ಲದೆ ಕೋರ್ಟ್ ನಲ್ಲಿರುವ ಕೇಸ್ ಗೂ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಫೆಬ್ರವರಿ 5ರಂದು ರಾತ್ರಿ 8 ಗಂಟೆ ಸುಮಾರಿಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಈ ಕುರಿತು ಜಯನಗರ ಠಾಣೆಯಲ್ಲಿ FIR ದಾಖಲಾಗಿದೆ.
ಉಡುಪಿ : ಪ್ರೇಮಿಗಳ ದಿನಾಚರಣೆ ದಿನದಂದೇ ಉಡುಪಿಯಲ್ಲಿ ಹುಡುಗಿಯರಗೋಸ್ಕರ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ವಿದ್ಯಾರ್ಥಿಗಳ ಮಧ್ಯ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಹೌದು ಹುಡುಗಿಯರ ವಿಚಾರಕ್ಕೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು. ಉಡುಪಿ ತಾಲೂಕಿನ ಮಣಿಪಾಲದಲ್ಲಿ ಹುಡುಗಿಯರ ವಿಚಾರಕ್ಕೆ ವಿದ್ಯಾರ್ಥಿಗಳ ಮಧ್ಯ ಮಾರಾಮಾರಿ ನಡೆದಿದೆ. ಮಣಿಪಾಲನ ಕಾಯಿನ್ ವೃತ್ತದ ಬಳಿಯ ಬಾರ್ ಮುಂದೆ ನಿನ್ನೆ ಈ ಒಂದು ಗಲಾಟೆ ನಡೆದಿದೆ.ಗಲಾಟೆ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ. ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಪ್ರದೇಶ : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭ ಮೇಳಕ್ಕೆ ಪವಿತ್ರ ಸ್ಥಾನಕ್ಕೆ ಎಂದು ತೆರಳುತ್ತಿದ್ದ ವೇಳೆ ಇದೀಗ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೊಲೆರೋ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತದಲ್ಲಿ 10 ಜನ ಸಾವನ್ನಪ್ಪಿದ್ದು 19 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಿರ್ಜಾಪುರ ಮತ್ತು ಪ್ರಯಾಗ್ ರಾಜ್ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಕುಂಭ ಮೇಳಕ್ಕೆ ಎಂದು ಪವಿತ್ರ ಸ್ನಾನ ಮಾಡಲು, ತೆರಳುವ ವೇಳೆ ಮಿರ್ಜಾಪುರ ಪ್ರಯಾಗ್ರಾಜ್ ಹೆದ್ದಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದೆ. ಬೋಲೇರೋ ವಾಹನ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ 10 ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕುಂಭಮೇಳಕ್ಕೆ ತರುಳುವಾಗತೆರಳುವಾಗ ಈ ಭೀಕರವಾದ ಅಪಘಾತವಾಗಿ 10 ಜನ ದುರ್ಮರಣ ಹೊಂದಿದ್ದಾರೆ. ಮೃತರನ್ನು ಛತ್ತಿಸ್ಗಢ ಕೊರ್ಬಾ ಜಿಲ್ಲೆಯ 10 ಜನರು ಸಾವನ್ನಪ್ಪಿದ್ದಾರೆ. ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಬರುವಾಗ ಈ ಒಂದು ಘೋರವಾದ ದುರಂತ ಸಂಭವಿಸಿದೆ. ಘಟನೆಯಲ್ಲಿ 19 ಜನರಿಗೆ ಗಂಭೀರವಾದ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ…














