Author: kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ವಾಪಸ್ ತೆರಳುವ ವೇಳೆ ಕಾರಿಗೆ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಹೌದು KSRTC ಬಸ್ ಡಿಕ್ಕಿ ಆಗಿ ಕಾರಿನಲ್ಲಿ ಮೂವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಈ ಒಂದು ಘಟನೆ ನಡೆದಿದ್ದು, ಮೃತರೆಲ್ಲರೂ ಕಲಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನವರು ಎಂದು ತಿಳಿದು ಬಂದಿದೆ. ಮೃತರನ್ನು ಗಿರೀಶ್ ಬಳ್ಳೂರ್ಗಿ, ರಾಹುಲ್ ಮತ್ತು ಸಂಗು ಅಮರಗೊಂಡ ಎಂದು ತಿಳಿದುಬಂದಿದೆ ಗಂಭೀರವಾಗಿ ಗಾಯಗೊಂಡ ರಾಧಿಕಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅದರಂಥೆ ಅವರು ನಾನು ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.‌ ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.‌ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಅಂತ ತಿಳಿಸಿದ್ದಾರೆ. ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸ-ಪ್‌ ಸೇರಿಕೊಳ್ಳಿ https://chat.whatsapp.com/IrUCOvj6lb9BOTe0MLkeaY

Read More

ಬೆಂಗಳೂರು : ನಾನು ದುರಹಂಕಾರಿ ಅಲ್ಲ ಸ್ವಾಭಿಮಾನಿ ಅಷ್ಟೇ ಎಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಿಮ್ಮ ಮಕ್ಕಳನ್ನು ಅವಿದ್ಯವಂತರಾಗಲು ಬಿಡಬೇಡಿ ವಿದ್ಯೆ ಇದ್ದರೆ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಗುಲಾಮಗಿರಿ ಮನೆ ಮಾಡಿಕೊಳ್ಳುತ್ತದೆ ಎಂದು ವೀರೇಂದ್ರ ಕೇಶವ ತಾರಕಾನಂದಪುರಿಶ್ರೀ ಪುಣ್ಯಾರಾಧನೆ ಸ್ಮರಣಾರ್ಥ ಭಕ್ತರ ಭಂಡಾರದ ಕುಟಿಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೇಲ್ಜಾತಿಯ ಬಡವ ಬಂದರೆ ಗೌರವ ಕೊಡುತ್ತೇವೆ. ಕೆಲವರ್ಗದ ಶ್ರೀಮಂತ ಬಂದರೆ ಅವರನ್ನು ಕೀಳಾಗಿ ಕಾಣುತ್ತೇವೆ. ಸ್ವಾಭಿಮಾನಿಗಳಾಗಿ ಬದುಕುವುದು ದುರಹಂಕಾರ ಅಲ್ಲ. ನನ್ನ ನೋಡಿದರೆ ದುರಹಂಕಾರಿ ಅಂತಾರೆ ನಾನು ಸ್ವಾಭಿಮಾನಿ ದುರಹಂಕಾರಿ ಅಂತ ಯಾರೇ ಕರೆದರೂ ನಾನು ಅದಕ್ಕೆ ಸೊಪ್ಪು ಹಾಕಲ್ಲ ವಿರೋಧ ಮಾಡುವವರು ಸತ್ಯಕ್ಕೆ ಹತ್ತಿರವಾಗಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ರಾಮನಗರ : ಒಂದು ಕಡೆ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಹಲವು ಶಾಸಕರು ಡಿಕೆ ಶಿವಕುಮಾರ್ ಶೀಘ್ರದಲ್ಲಿ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ರಂಭಾಪುರಿ ಶ್ರೀಗಳು ಜನರಿಗೆ ಡಿಕೆ ಶಿವಕುಮಾರ್ ಅವರನ್ನು ಉನ್ನತ ಸ್ಥಾನದಲ್ಲಿ ನೋಡುವಂತಾಗಲಿ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿಕೆ ನೀಡಿದ್ದಾರೆ. ಹೌದು ಜನರು ಡಿಕೆ ಶಿವಕುಮಾರ್ ಅವರನ್ನು ಉನ್ನತ ಸ್ಥಾನದಲ್ಲಿ ನೋಡುವ ಭಾಗ್ಯ ಸಿಗಲಿ ಎಂದು ಕನಕಪುರ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ರಂಭಾಪುರಿ ಶ್ರೀಗಳು ಹೇಳಿಕೆ ನೀಡಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತಂದುಕೊಟ್ಟಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಡಿಕೆ ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಬೇಕಿತ್ತು. ವರಿಷ್ಠರ ಸಮ್ಮುಖದಲ್ಲಿ ನಡೆದ ಮಾದನಂತೆ ಮುಂದೆ ಅವಕಾಶ ಕಲ್ಪಿಸಬೇಕು. ಡಿಕೆ ಶಿವಕುಮಾರ್…

Read More

ಕೊಪ್ಪಳ : ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ರ್ಯಾವಣಿಕದಲ್ಲಿ ಶನಿವಾರ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಸವರಾಜ ರಾಯರೆಡ್ಡಿ ಅವರು ಮಾತನಾಡಿ, ನಿಮಗ್ ರಸ್ತೆಗಳು ಬೇಕೆಂದರೆ ಗ್ಯಾರಂಟಿ ಯೋಜನೆ ನಿಲ್ಲುತ್ತವೆ ಅಕ್ಕಿ ಕೊಡಕ್ಕೆ ಆಗಲ್ಲ ಎಂದು ಹೇಳಿಕೆ ನೀಡಿದ್ದರು ಇದರ ಬೆನ್ನೆಲು ಇದೀಗ ಮತ್ತೆ ಬಸವರಾಜ್ ರೆಡ್ಡಿ ಉಲ್ಟಾ ಹೊಡೆದಿದ್ದು ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ. ಅಕಸ್ಮಾತ್ ನಾನು ‘ಸಿಎಂ’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ ಎಂದು ಹೇಳಿಕೆ ನೀಡಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ಸಿಎಂ ಸಿದ್ದರಾಮಯ್ಯ ನೇಮಕ ಮಾಡಿದ ವಿಚಾರವಾಗಿ ಹೈಕಮಾಂಡ್ ನಿರ್ಧಾರವನ್ನು ಬಸವರಾಜ ರಾಯರೆಡ್ಡಿ ಸ್ವಾಗತಿಸಿದರು. ಕೊಪ್ಪಳದಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದರು. ಇದೆ ವೇಳೆ ರಸ್ತೆ ಬೇಕೆಂದ್ರೆ ಗ್ಯಾರಂಟಿ ಬಂದ್ ಆಗುತ್ತೆ ಎಂಬ ತಮ್ಮ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ನಾನು ಹಾಗೆ ಹೇಳಿಲ್ಲ. ನಾವು ಇಷ್ಟೆಲ್ಲಾ…

Read More

ಕೊಪ್ಪಳ : ಕಾಂಗ್ರೆಸ್​ನ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬೆಳಿಗ್ಗೆ ತಾನೇ ನಿಮಗೆ ಅಕ್ಕಿ ಬ್ಯಾಡ, ಇನ್ನೊಂದು ಬ್ಯಾಡ ಅಂದ್ರ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್​ ಆಗತಾವ ಎಂದು ಹೇಳಿಕೆ ನೀಡಿದ್ದರು. ಇದೀಗ ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ ಎಂದು ತಮ್ಮ ಹೇಳಿಕೆ ಕುರಿತು ಉಲ್ಟಾ ಹೊಡೆದಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ಸಿಎಂ ಸಿದ್ದರಾಮಯ್ಯ ನೇಮಕ ಮಾಡಿದ ವಿಚಾರವಾಗಿ ಹೈಕಮಾಂಡ್ ನಿರ್ಧಾರವನ್ನು ಬಸವರಾಜ ರಾಯರೆಡ್ಡಿ ಸ್ವಾಗತಿಸಿದರು. ಕೊಪ್ಪಳದಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದರು. ಇದೆ ವೇಳೆ ರಸ್ತೆ ಬೇಕೆಂದ್ರೆ ಗ್ಯಾರಂಟಿ ಬಂದ್ ಆಗುತ್ತೆ ಎಂಬ ತಮ್ಮ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ನಾನು ಹಾಗೆ ಹೇಳಿಲ್ಲ. ನಾವು…

Read More

ರಾಮನಗರ : ಕನ್ನಡಿಗರ ಮೇಲೆ ಮತ್ತೆ ಪದೇಪದೇ ಅನ್ಯ ಭಾಷೆ ಕರ ದಬ್ಬಾಳಿಕೆ ಮುಂದುವರೆದಿದೆ , ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕನ್ನಡದಲ್ಲಿ ವಿವರಿಸಿದ ಕ್ಕೆ ಲೆಕ್ಚರರ್ ಒಬ್ಬರನ್ನು ಕಾಲೇಜು ಅಮಾನತು ಮಾಡಿತ್ತು. ಬಳಿಕ ಮತ್ತೆ ಅವರನ್ನು ಕೆಲಸಕ್ಕೆ ಸೇರಿಸಿಕೊಂಡ ಘಟನೆ ನಡೆದಿತ್ತು. ಇದೀಗ ರಾಮನಗರದಲ್ಲಿ ಕರ್ನಾಟಕದ ಬ್ಯಾಡ್ಜ್ ಧರಿಸಿಕೊಂಡು ಹೋಗಿದ್ದಕ್ಕೆ ಕಂಪನಿಯ ಎಂಡಿ ಒಬ್ಬ ಕೆಲಸಕ್ಕೆ ಬರಬೇಡ ಎಂದು ಹೇಳಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಹೌದು ಹೌದು ಕರ್ನಾಟಕದಲ್ಲಿ ಕನ್ನಡ, ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ಹೆಚ್ಚಾಗುತ್ತಿವೆ ಎನ್ನುವ ಆಕ್ರೋಶ ಇತ್ತೀಚೆಗೆ ಹೆಚ್ಚಾಗುತ್ತಿವೆ. ಇದಕ್ಕೆ ಸಂಬಂಧಿಸಿದ ಹಲವು ಘಟನೆಗಳು ದಿನಬೆಳಗಾದರೆ ರಾಜ್ಯದಲ್ಲಿ ನೋಡುತ್ತಿದ್ದೇವೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಕನ್ನಡಿಗರ ಮೇಲೆ ಪರಭಾಷಿಕರ ದರ್ಪ ಮಿತಿ ಮೀರಿದೆ.ಇದೀಗ ರಾಮನಗರದಲ್ಲಿ ಕರ್ನಾಟಕದ ಬ್ಯಾಡ್ಜ್ ಹಾಕಿಕೊಂಡಿದ್ದ ಅದಕ್ಕೆ ತಮಿಳುನಾಡಿನ ಕಂಪನಿಯ ಎಂ.ಡಿ ಕೆಲಸಕ್ಕೆ ಬರಬೇಡ ಅಂತ ಹೇಳಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ನನ್ನ ಹೆಸರು ಕಾರ್ತಿಕ್‌, ನಾನು ರಾಮನಗರ ಬಳಿ ಇರುವ…

Read More

ಮೈಸೂರು : ತಡರಾತ್ರಿ ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ಜೋಮ್ಯಾಟೋ ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ ಹೊಂದಿರುವ ಘಟನೆ ಎನ್.ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಮೈಸೂರಿನಲ್ಲಿ ಎರಡು ಬೈಕ್ ಗಳ ಮಧ್ಯ ಈ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಜೋಮಾಟೋ ಫುಲ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರ ಸಾವಾಗಿದೆ. ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಒಂದು ಬೈಕ್ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಹೊತ್ತಿ ಉರಿದಿದೆ.ಎನ್. ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ತುಮಕೂರು : ತುಮಕೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು ಪತಿ ಪತಿ ನಡುವೆ ಗಲಾಟೆ ನಡೆದು ಗಲಾಟೆ ವಿಕೋಪಕ್ಕೆ ತಿರುಗಿದಾಗ ಪತಿ ತನ್ನ ಪತ್ನಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದು ಸುಮಾರು 20ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿರುವ ಘಟನೆ ತುಮಕೂರಿನ ಅಂತರಸನಹಳ್ಳಿ ಎಂಬಲ್ಲಿ ನಡೆದಿದೆ. ಗೀತಾ (20) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಚಾಕುವಿನಿಂದ ಇರಿದು ಪತಿ ನವೀನ್ ಕೊಲೆ ಮಾಡಿದ್ದಾನೆ. 20ಕ್ಕೂ ಹೆಚ್ಚು ಬಾರಿ ಇರಿದು ಗೀತಾಳನ್ನು ನವೀನ್ ಕೊಂದಿದ್ದಾನೆ. ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.ಎರಡು ವರ್ಷದ ಹಿಂದೆ ಎಷ್ಟೇ ಗೀತಾ ನವೀನ್ ನನ್ನು ಮದುವೆಯಾಗಿದ್ದಳು. ಅಂತರಸನಹಳ್ಳಿಯಲ್ಲಿ ದಂಪತಿಗಳು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ದಂಪತಿಯ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಇಂದು ಮನೆಯ ಮಾಲೀಕ ಬಾಡಿಗೆ ಪಡೆಯಲೆಂದು ಮನೆಯ ಬಳಿ ಬಂದಿದ್ದ. ಈ ವೇಳೆ ರಕ್ತದ ಮಾಡಿವಿನಲ್ಲಿ ನವೀನ್ ಪತ್ನಿ ಗೀತಾ ಬಿದ್ದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.…

Read More

ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿದ್ದು, ಬಾಲಕನ ಮುಖ, ತಲೆ ಮತ್ತು ಕುತ್ತಿಗೆಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಅಂದ್ರೂನ್ ಖಿಲ್ಲಾದಲ್ಲಿ ನಡೆದಿದೆ. ಹೌದು 4 ವರ್ಷದ ಬಾಲಕನ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ನೌಮಾನ್ ಎನ್ನುವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿದ್ದು, ಮುಖ, ತಲೆ ಕತ್ತಿನ ಭಾಗಕ್ಕೆ ಕಚ್ಚಿ ಗಾಯಗೊಳಿಸಿವೆ. ರಾಯಚೂರಿನ ಅಂದ್ರೂನ್ ಖಿಲ್ಲಾದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿನಾಯಿಗಳಿಗೆ ಕಡಿವಾಣ ಹಾಕದ್ದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ. ಪದೇಪದೇ ದಾಳಿ ಮಾಡುತ್ತಿದ್ದರು ಕೂಡ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ. ಸದ್ಯ ಗಾಯಾಳು ಬಾಲಕ ನೌಮಾನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Read More