Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ಕೊಪ್ಪಳ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆಯಿಂದ ಎಲ್ಲ ರಸಗೊಬ್ಬರ ಅಂಗಡಿಗಳಲ್ಲಿ ನೋ ಸ್ಟಾಕ್ ಎಂದು ಬೋರ್ಡ್ ಹಾಕಲಾಗಿದೆ. ಬೆಳಿಗ್ಗೆ ಇಂದ ರಾತ್ರಿ ವರೆಗೂ ಸರತಿ ಸಾಲಲ್ಲಿ ನಿಂತರು ಗೊಬ್ಬರ ಸಿಕ್ಕಿಲ್ಲ ಇದರಿಂದ ಬೇಸತ್ತ ಕುಣಿಕೆರಿ ತಾಂಡಾ ನಿವಾಸಿ ಬಸಪ್ಪ ಬಡಿಗಿ ಮಣ್ಣು ತಿಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದೆ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಅನ್ನ ನೀಡುವ ರೈತರಿಗೆ ಮಣ್ಣು ಮುಕ್ಕಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಧಿಕಾರ. ಈ ಬಾರಿ ಮುಂಗಾರು ಒಂದು ತಿಂಗಳು ಮುಂಚಿತವಾಗಿ ಬಂದಾಗಲೇ ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದ ರಸಗೊಬ್ಬರ ದಾಸ್ತಾನು, ವಿತರಣೆ ಬಗ್ಗೆ ಗಮನ ಹರಿಸಬೇಕಾಗಿದ್ದ ಕಾಂಗ್ರೆಸ್ ಸರ್ಕಾರ, ಬಣ ಬಡಿದಾಟ, ಕುರ್ಚಿ ಕಿತ್ತಾಟದ ಭರಾಟೆಯಲ್ಲಿ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ ರೈತರು ಮಣ್ಣು ತಿನ್ನುವ ಪರಿಸ್ಥಿತಿ ತಂದಿಟ್ಟಿದೆ. ಅನ್ನದಾತರ ಶಾಪ ಈ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟದೇ ಇರದು. https://twitter.com/RAshokaBJP/status/1949317307307794544?t=tdB45zykzFdHYw6kzTEw9w&s=19
ಹುಬ್ಬಳ್ಳಿ : ರಾಜ್ಯದಲ್ಲಿ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಪೂರ್ಣವಧಿ ನಾನೇ ಸಿಎಂ ಆಗಿರುತ್ತೇನೆ. ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಡಿಸೆಂಬರ್ ನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ನಾನು ಸಿಎಂ ಆಗೋಕೆ ಗುರು ಬಲ, ತಾರಾ ಬಲ ಬೇಕು, ಜೊತೆಗೆ ಶನಿಕಾಟ ಕಡಿಮೆ ಆಗ್ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮತನಾಡಿದ ಅವರು, ನಾನು ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು. ಶನಿಕಾಟ ಕಡಿಮೆಯಾಗಬೇಕು. ಒಬ್ಬೊಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ. ನನಗೆ ಶನಿಕಾಟ ಇದೆ.ಸಿಎಂ ದೆಹಲಿ ಭೇಟಿ ವಿಚಾರವಾಗಿ, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್ ಮಾಡುವುದಾದರೂ ರಾಹುಲ್ ಗಾಂಧಿಯವರಿಗೆ ಹೇಳಿ ಮಾಡ್ತಾರೆ. ವಾರಕ್ಕೊಮ್ಮೆ ದೆಹಲಿಗೆ ಹೋದರೂ ಕಡಿಮೆ. ನಿಗಮ ಮಂಡಳಿ ಚರ್ಚೆಗೆ ಹೋಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ರಾಜ್ಯಾಧ್ಯಕ್ಷ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಾಸರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು ಇದೀಗ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆಯಿಂದ ಸಿಐಡಿ ತನಿಖೆ ಆರಂಭವಾಗಲಿದ್ದು, ಈಗಾಗಲೇ ಸಿಐಡಿ ತಂಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ಫೈಲ್ ತರಿಸಿಕೊಂಡಿದ್ದು ಎಸಿಪಿ ಪ್ರಕಾಶ್ ರಾಥೋಡ್ ತನಿಖೆಯ ಮಾಹಿತಿ ಪಡೆದಿದ್ದಾರೆ. ಇದೆ ವೇಳೆ ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಸಿಐಡಿ ತಂಡ ಸಿದ್ಧತೆ ಮಾಡಿಕೊಂಡಿದೆ. ಈ ಕೇಸ್ ಕುರಿತು ನಾಳೆ ಕೋರ್ಟಿಗೆ ಸಿಐಡಿ ತಂಡ ಅರ್ಜಿ ಸಲ್ಲಿಸಲಿದೆ. ಸದ್ಯ ಸಿಐಡಿ ಮುಂದೆ ಕೊಲೆ ಆರೋಪಿ ಜಗ್ಗನ ಬಂಧನ ಟಾಸ್ಕ್ ಮುಂದಿದೆ. ದುಬೈನಲ್ಲಿ ಆರೋಪಿ ಜಗನಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಲು ಇದೀಗ ಸಿಐಡಿ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.
ಈಡೇರದ ಬಯಕೆಗಳನ್ನು ಪೂರೈಸುವ ಶಕ್ತಿ ಚಕ್ರ ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…
ಬೆಂಗಳೂರು: ಅಪರಿಚಿತ ಕಿಡಿಗೇಡಿಗಳು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಚೇರಿ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಸಂದೇಶ ಕಳುಹಿಸಿದ್ದು, ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಿನ್ನೆ ಈ ಒಂದು ಘಟನೆ ನಡೆದಿದ್ದು, ಈ ಬೆದರಿಕೆ ಸಂದೇಶ ಬಂದ ಕೂಡಲೇ ಡಿಸಿಎಂ ಕಚೇರಿಗೂ ಮಾಹಿತಿ ರವಾನಿಸಲಾಗಿದ್ದು, ಮನೆ ಮತ್ತು ಕಚೇರಿ ಮತ್ತು ವಿಮಾನ ನಿಲ್ದಾಣದ ಪ್ರತಿ ಸ್ಥಳವನ್ನು ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗಿದೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಪರಿಚಿತ ಇ-ಮೇಲ್ನಿಂದ ಟರ್ಮಿನಲ್ ಮ್ಯಾನೇಜರ್ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಕಳುಹಿಸಿರುವ ಕಿಡಿಗೇಡಿಗಳು, ವಿಮಾನ ನಿಲ್ದಾಣದ ಎರಡು ಟರ್ಮಿನಲ್ನಲ್ಲಿ 4 ಸುಧಾರಿತ ಸ್ಫೋಟಕಗಳನ್ನು (ಐಇಡಿ) ಇಡಲಾಗಿದ್ದು, 11 ಗಂಟೆ ಸುಮಾರಿಗೆ ಸ್ಫೋಟಗೊಳ್ಳಲಿವೆ. ಇದಾದ 2 ಗಂಟೆ ಬಳಿಕ ಡಿಸಿಎಂ ಶಿವಕುಮಾರ್ ಅವರ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುತ್ತೇನೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹಾಸನ : ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು.ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದ ಡಿಕೆಶಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿ ಮಠಕ್ಕೆ ಭೇಟಿ ನೀಡಿ ದರ್ಶನ ಮಾಡಿದ್ದಾರೆ. ಕೋಡಿ ಶ್ರೀಗಳ ಭೇಟಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಏನು ಪ್ರಾರ್ಥನೆ ಮಾಡಬೇಕು ಮಾಡಿದ್ದೇನೆ ಎಂದಿದ್ದಾರೆ. ಇದೇ ವೇಳೆ ಸ್ವಾಮೀಗಳು ಊರಿನಲ್ಲಿ ಇದ್ದಾರೆ ಎಂಬುದು ಗೊತ್ತಾಯ್ತು. ಹೀಗಾಗಿ ಭೇಟಿಗೆ ಬಂದಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಧರ್ಮದ ಬಗ್ಗೆ, ದೇವರ ಬಗ್ಗೆ, ಸಂಸ್ಕೃತಿ ಬಗ್ಗೆ, ಆಚಾರ-ವಿಚಾರಗಳ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ದೇನೆ. ಯಾವುದೇ ಧರ್ಮದಲ್ಲಾಗಲಿ ಒಂದು ಶಕ್ತಿ ಇದೆ. ಕೆಲವರು ನಂಬಬಹುದು, ಕೆಲವರು ನಂಬದೇ ಇರಬಹುದು. ಆದರೆ ನನಗೆ ನಂಬಿಕೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನಂಬಿಕೆ ಇರುವ…
ಕೋಲಾರ : ಉಗ್ರವಾದಿ ಸಂಘಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಹುಡುಕಾಟ ನಡೆಸುತ್ತಿದ್ದ ಬಾಲಕನೊಬ್ಬನನ್ನು ಇದೀಗ ಆಂತರಿಕ ಭದ್ರತಾ ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೌದು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಹಾಗೂ ಉಗ್ರವಾದಿ ಸಂಘಟನೆಗಳ ಕುರಿತು ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಆರೋಪದಡಿ ಕೆಜಿಎಫ್ ತಾಲೂಕಿನ ದ್ಯಾವರಹಳ್ಳಿ ಗ್ರಾಮದ ಓರ್ವ ಬಾಲಕನನ್ನು ಆಂತರಿಕ ಭದ್ರತಾ ಅಧಿಕಾರಿಗಳು ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಾಲಕ ಮೂಲತಃ ಆಂದ್ರ ಪ್ರದೇಶದ ಮುಸ್ಲಿಂ ಕುಟುಂಬಕ್ಕೆ ಸೇರಿದವನು. ಬಾಲಕನ ಕುಟುಂಬ ಹಲವು ವರ್ಷಗಳ ಹಿಂದೆ ಆಂದ್ರ ಪ್ರದೇಶದ ರಾಮಕುಪ್ಪಂ ತೊರೆದು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ದ್ಯಾವರಹಳ್ಳಿ ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದೆ ಎಂದು ತಿಳಿದು ಬಂದಿದೆ. ಬಾಲಕ ಉಗ್ರಗಾಮಿ ಸಂಘಟನೆಗೆ ಸಂಬಂಧಿಸಿದಂತೆ ಕೆಲವೊಂದು ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದನು. ಅಲ್ಲದೆ, ಪದೇ…
ಹಾಸನ : ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ ರಾಜ್ಯದ ಅಧಿಕಾರಿಯೊಬ್ಬರಿಗೆ ಕರೆ ಮಾಡಿದ್ದಾರೆ ಎನ್ನುವ ವಿಚಾರವಾಗಿ, ಸುರ್ಜೆವಾಲಾ ಯಾವ ಅಧಿಕಾರಿಯನ್ನು ಭೇಟಿಯಾಗಿ ಮಾತನಾಡಿಲ್ಲ ಸರ್ಕಾರ ನಮ್ಮದೇ ಇದೆ ಏನಾದರೂ ಇದ್ದರೆ ನಮಗೆ ಹೇಳುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿ ಮಠದಲ್ಲಿ ಮಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸುರ್ಜೆವಾಲಾ ಯಾವ ಅಧಿಕಾರಿಯನ್ನು ಭೇಟಿಯಾಗಿ ಮಾತನಾಡಿಲ್ಲ ಸರ್ಕಾರ ನಮ್ಮದೇ ಇದೆ ಏನಾದರೂ ಇದ್ದರೆ ನಮಗೆ ಹೇಳುತ್ತಾರೆ. ನಮ್ಮ ಸರ್ಕಾರದ್ದು ಏನಾದರೂ ತಪ್ಪುಗಳಿದ್ದರೆ ತಿದ್ದಿಕೊಳ್ಳುತ್ತೇವೆ. ಬುಜವಾಲ ಆಗಲಿ ಖರ್ಗೆಯವರಾಗಲಿ ಕರೆ ಮಾಡಿಲ್ಲ ಇದುವರೆಗೂ ಒಬ್ಬ ಅಧಿಕರಿಗೂ ಕರೆ ಮಾಡಿಲ್ಲ ಮಾಡೋದು ಇಲ್ಲ. ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇದೆ ಸಂದರ್ಭದಲ್ಲಿ ಕೊಡಿ ಶ್ರೀಗಳನ್ನು ಭೇಟಿಯಾದ ಡಿಸಿಎಂ ಅಡಿಗೆ ಶಿವಕುಮಾರ್ ಸುಮಾರು ಅರ್ಧ ಗಂಟೆಗಳ ಕಾಲ ಸುಧೀರ್ಘವಾಗಿ ಮಾತುಕತೆ ನಡೆಸಿ ತಾಳೆಗರಿ ಭವಿಷ್ಯ ಕೇಳಿದರು. ಇವಳೆ ಶ್ರೀಗಳನ್ನು ಭೇಟಿಯಾಗಿ ಹೊರಬಂದ ಕೂಡಲೇ ಡಿಕೆ ಶಿವಕುಮಾರ್…
ಕೋಲಾರ : ಎಸ್ ಎಸ್ ಎಲ್ ಸಿ ಪಾಸ್ ಗೆ ಕನಿಷ್ಠ 33 ಅಂಕ ನಿಗದಿ ಮಾಡಿದ ವಿಚಾರವಾಗಿ ಎಲ್ಲರ ಅಭಿಪ್ರಾಯದಂತೆ ಕನಿಷ್ಠ ಅಂಕ 33ಕ್ಕೆ ನಿಗದಿ ಮಾಡಲಾಗಿದೆ ಎಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕನಿಷ್ಠ ಅಂಕದ ಬಗ್ಗೆ ತುಂಬಾ ವರ್ಷಗಳಿಂದ ಚರ್ಚೆ ನಡೆಯುತ್ತಿತ್ತು. ಒಂದೇ ಬಾರಿ ಇಂಥ ನಿರ್ಧಾರ ಮಾಡುವುದಕ್ಕೆ ಆಗುವುದಿಲ್ಲ. ತಮಿಳುನಾಡಿನಲ್ಲಿ ಇನ್ನೂ ಕಡಿಮೆ ಅಂಕ ನಿಗದಿ ಮಾಡಲಾಗಿದೆ. ಸಮಾನತೆಯ ಶಿಕ್ಷಣ ಪಡೆಯಬೇಕಾದರೆ ತೀರ್ಮಾನ ಮುಖ್ಯವಾಗುತ್ತದೆ ದೇಶ ರಾಜ್ಯಗಳ ನಿರ್ಧಾರ ಮುಖ್ಯವಾಗಿರುತ್ತದೆ. ವೆಬ್ ಕಾಸ್ಟಿಂಗ್ ನಿಂದ ನಕಲು ಮಾಡುವುದನ್ನು ತಡೆಯಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಮುಂಬೈ : ಇಂದು ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಮಧ್ಯಾಹ್ನ ವೇಗವಾಗಿ ಬಂದ ಕಂಟೇನರ್ ಟ್ರೇಲರ್ ಟ್ರಕ್ 18-20 ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ರಾಯಗಢ ಜಿಲ್ಲೆಯ ಖಲಾಪುರ ತಾಲೂಕಿನ ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅದೋಶಿ ಸುರಂಗದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಬ್ರೇಕ್ ವೈಫಲ್ಯದ ನಂತರ ಕಂಟೇನರ್ ಟ್ರೇಲರ್ ಟ್ರಕ್ನ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡನು. ಇದು ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್ನಂತಹ ಐಷಾರಾಮಿ ಕಾರುಗಳು ಸೇರಿದಂತೆ ಕನಿಷ್ಠ 20 ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮವಾಗಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಗಾಯಾಳುಗಳನ್ನು ನವಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿ ತಿಳಿಸಿದ್ದಾರೆ. ಇವರಲ್ಲಿ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಚಿಕಿತ್ಸೆ ಪಡೆಯುತ್ತಿರುವಾಗ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ವರದಿಗಳ ಪ್ರಕಾರ, ವೇಗವಾಗಿ ಬಂದ…