Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ…
ಬೆಂಗಳೂರು : ರಾಜ್ಯದಲ್ಲಿ ಸಿಎಂ ಸ್ಥಾನದ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು, ಇದೀಗ ನನಗೆ ಕಾಂಗ್ರೆಸ್ನ ಯಾವುದೇ ನಾಯಕರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಎಲ್ಲ ಕಾಂಗ್ರೆಸ್ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ನನ್ನ ಸ್ನೇಹಿತರು, ಸಹೋದ್ಯೋಗಿಗಳು, ಒಟ್ಟಿಗಿದ್ದೇವೆ. ನಾನಂತೂ ಯಾರ ಮೇಲೂ ಜಗಳ ಮಾಡಲು ಹೋಗಿಲ್ಲ. ಯಾವ ವಿಚಾರಕ್ಕೂ ಒಬ್ಬರ ಮೇಲೆ ಇನ್ನೊಬ್ಬರು ಇದುವರೆಗೂ ಹೇಳಿಕೆ ನೀಡಿಲ್ಲ. ದಾಖಲೆಗಳನ್ನು ತೆಗೆದು ನೋಡಿ. ವಿರೋಧ ಪಕ್ಷದವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ಹೊರತು, ನಾನಾಗಿಯೇ ಯಾರ ಮೇಲೂ ಹೇಳಿಕೆ ನೀಡಿಲ್ಲ. ನಾನಾಗಿಯೇ ಒಬ್ಬರ ಮೇಲಾದರೂ ಹೇಳಿಕೆ ನೀಡಿದ್ದರೆ ತಿಳಿಸಿ” ಎಂದು ಮರುಪ್ರಶ್ನಿಸಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿರುವ ಕುರಿತ ಪ್ರಶ್ನೆಗೆ, ಅವರಿಗೆ ಸಿಎಂ ಆಪ್ತರೇನು?. ಅವರು…
ಜೋಹನ್ಸ್ ಬರ್ಗ್ : ಕಳೆದ ಎರಡು ದಿನಗಳಹಿಂದೆಯಷ್ಟೇ ಆಸ್ಟ್ರೇಲಿಯಾದಲ್ಲಿ ಉಗ್ರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಎಸಗಿದ ಘಟನೆ ಮರೆಯಾಗುವ ಮುನ್ನವೇ ಸೌತ್ ಆಫ್ರಿಕಾದಲ್ಲಿ ಬಂದೂಕುದಾರಿಗಳಿಂದ ಭೀಕರ ದಾಳಿಯಾಗಿದೆ. ಜೋಹಾನ್ಸ್ಬರ್ಗ್ನ ಹೊರವಲಯದ ಚಿನ್ನದ ಗಣಿ ಸಮೀಪ ಇರುವ ಬೆಕ್ಕೆರ್ಸ್ಡನ್ ಟೌನ್ಶಿಪ್ ಬಳಿ ಆಗಂತುಕ ಬಂದೂಕುದಾರಿಗಳು ಸಾರ್ವಜನಿಕರ ಮೇಲೆ ದಾಳಿ ಎಸಗಿದ್ದಾರೆ. ಈ ಘಟನೆಯಲ್ಲಿ 9 ಮಂದಿ ಬಲಿಯಾಗಿದ್ದಾರೆ. ಹತ್ತು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಬೆಕ್ಕೆರ್ಸ್ಡಲ್ ಬಾರ್ ಮೇಲೆ ದಾಳಿಕೋರರು ನುಗ್ಗಿ ಸಿಕ್ಕಸಿಕ್ಕವರ ಮೇಲೆ ಗುಂಡಿನ ದಾಳಿ ಎಸಗಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 1 ಗಂಟೆಯಲ್ಲಿ ಈ ಘಟನೆ ನಡೆದಿದೆ. ಭಾರತೀಯ ಕಾಲಮಾನ ಬೆಳಗ್ಗೆ 4:30ರ ಸಮಯ ಆಗಿರಬಹುದು. ಈ ಗುಂಡಿನ ದಾಳಿಯಲ್ಲಿ ಬಲಿಯಾದ ಒಂಬತ್ತು ಮಂದಿಯಲ್ಲಿ ಮೂವರು ಬಾರ್ನ ಒಳಗೆಯೇ ಅಸು ನೀಗಿದ್ಧಾರೆ. ಇನ್ನುಳಿದವರು ಹೊರಗೆ ತಪ್ಪಿಸಿಕೊಳ್ಳಲು ಹೋಗುವಾಗ ಗುಂಡೇಟಿನಿಂದ ಸತ್ತಿದ್ದಾರೆ. ಇದೇ ಡಿಸೆಂಬರ್ 6ರಂದು ಸೌತ್ ಆಫ್ರಿಕಾದ ಪ್ರಿಟೋರಿಯಾ ನಗರದ ಬಳಿಯೂ ಪಬ್ವೊಂದರ ಮೇಲೆ ಕ್ರಿಮಿನಲ್ಗಳು ದಾಳಿ…
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ನ್ಯೂಸ್ ನೀಡಿದ್ದಾರೆ. ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ. ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸೋಮವಾರದಿಂದ ಶನಿವಾರದೊಳಗೆ ಬಿಡುಗಡೆಯಾಗಲಿದೆ. ಆ ಮೂಲಕ ಹಣ ಬರುತ್ತದೆ ಎಂದ ಕಾದುಕುಳಿತವರಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಕೈ ಸೇರಲಿದೆ.
ಕೊಪ್ಪಳ : ರಾಜ್ಯದಲ್ಲಿ ಪಟ್ಟದ ಕುರ್ಚಿಗೆ ಹಗ್ಗಜಗ್ಗಾಟ ಮುಂದುವರೆದಿದ್ದು ಒಂದು ಕಡೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಈಗಲೂ ನಾನೇ ಸಿಎಂ ಮುಂದೆಯೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಹೈಕಮಾಂಡ್ ಎಲ್ಲಿವರೆಗೆ ಹೇಳುತ್ತೋ ಅಲ್ಲಿವರೆಗೂ ನಾನೆ ಸಿಎಂ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ, ಇನ್ನೊಂದು ಕಡೆ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಇದರ ಮಧ್ಯ ಶಾಸಕ ಜನಾರ್ದನ ರೆಡ್ಡಿ ಯಾವ ಕ್ಷಣದಲ್ಲಾದರೂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ ಆಗಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಗಂಗಾವತಿಯಲ್ಲಿ ಮಾತನಾಡಿದ ಅವರು, ಯಾವ ಕ್ಷಣದಲ್ಲಾದರೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ ಆಗಲಿದೆ. ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ ಎಂದು ಗಂಗಾವತಿಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ ಅಂತ ಡಿಕೆ ಶಿವಕುಮಾರ್ ಹೇಳುತ್ತಿದ್ದರು. ಹೀಗಾಗಿ ಅಧಿಕಾರ ಹಂಚಿಕೆಗೆ ಸಮಯ ಸನ್ನೀಹೀತವಾಗಿದೆ. ಪ್ರಮಾಣವಚನ ಸ್ವೀಕರಿಸಲು ಡಿಕೆ ಶಿವಕುಮಾರ್ ದೇಗುಲಕ್ಕೆ ಹೋಗುತ್ತಿದ್ದಾರೆ ಡಿನ್ನರ್ ಮೀಟಿಂಗ್ಗಳಿಂದ ಏನು ನಡೆಯುವುದಿಲ್ಲ ಎಂದು ಕೊಪ್ಪಳದ…
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ಭಾರತ ಅಭಿಯಾನದ ಜೊತೆಯಾಗಿ ಇಂದು ನೀವು ಮಗುವಿಗೆ ಹಾಕಿಸುವ ಎರಡು ಹನಿ ಲಸಿಕೆ, ಅದರ ಭವಿಷ್ಯವನ್ನು ಶಾಶ್ವತ ಅಂಗವೈಕಲ್ಯದಿಂದ ರಕ್ಷಿಸಲಿದೆ ಎಂದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಭಾರತದಾದ್ಯಂತ ಪೋಲಿಯೋ ಲಸಿಕೆ ಹಾಕುವುದು ಮತ್ತು ಅದರ ಕುರಿತು ಅಭಿಯಾನ ನಡೆಯುತ್ತಿದೆ. ಸತತ ಜಾಗೃತಿಯಿಂದಾಗಿ ಪೋಲಿಯೋ…
ಉಡುಪಿ : ಉಡುಪಿ ಜಿಲ್ಲೆಯ ಬೈಂದುರು ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ಸೈಟ್ ತೆರೆದು ವಂಚನೆ ಎಸುಗುತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಸಿರ್ ಹುಸೇನ್ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಬಂಧಿತ ಆರೋಪಿ ನಾಸಿರ್ ವಂಚನೆ ಎಸಗುತ್ತಿದ್ದ ರಾಜಸ್ಥಾನದ ತಿಜೋರಿಯ ನಾಸಿರ್ ಹುಸೇನ್. ಈತ ಅಧಿಕೃತ ವೆಬ್ಸೈಟ್ ಹೋಲುವ ರೀತಿಯಲ್ಲಿ ನಕಲಿ ವೆಬ್ಸೈಟ್ ಕ್ರಿಯೇಟ್ ಮಾಡಿದ್ದ ಭಕ್ತರಿಂದ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸಿಕೊಳ್ಳಲಾಗುತ್ತಿತ್ತು. ಸ್ಕ್ಯಾನರ್ ಮೂಲಕ ಹಣವನ್ನು ಪಡೆದು ನಕಲಿ ರಶೀದಿ ವಂಚನೆ ಸಿಗುತ್ತಿದ್ದ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ದೂರು ಆಧರಿಸಿ ಇದೀಗ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಕಲಬುರ್ಗಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಕೂಡ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ನಾಯಕತ್ವ ಬದಲಾವಣೆ ವಿಚಾರವಾಗಿ ಕೆಣಕಿದ್ದರು ಅವರಿಗೆ ಈಗಲೂ ನಾನೇ ಸಿಎಂ ಮುಂದೆಯೂ ನಾನೇ ಸಿಎಂ ಆಗಿರುತ್ತೇನೆ ಅಂತ ಖಡಕ್ ತಿರುಗೇಟು ನೀಡಿದ್ದರು. ಇದೀಗ ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಯಾರೊಬ್ಬ ನಾಯಕನಿಂದ ಬೆಳೆದಿಲ್ಲ ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರು ಹೇಳಬಾರದು ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ ಅಂದಮೇಲೆ ಎಲ್ಲರ ಪಾತ್ರವೂ ಕೂಡ ಇರುತ್ತದೆ ಯಾರು ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಹೈಕಮಾಂಡ್ ಯಾವ ಗೊಂದಲವು ಮಾಡುತ್ತಿಲ್ಲ ಆದರೆ ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಖಡಕ್ ಸಂದೇಶ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಯಾವಾಗಲೂ ಕೂಡ ಯಾರೇ ಲೀಡರ್ ಬಂದರು, ಕಾಂಗ್ರೆಸ್ ಕಾರ್ಯಕರ್ತರು ಸಪೋರ್ಟ್ ಮಾಡುತ್ತಾರೆ. ಅದಕ್ಕೆ ಯಾರು ನನ್ನಿಂದ ಆಗಿದೆ ನಾನು ಪಕ್ಷ…
ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ : 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆಸಿದ ಕಂಟೇನರ್ ಚಾಲಕ : ನಾಲ್ವರಿಗೆ ಗಾಯ!
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿ ಸರಣಿ ಅಪಘಾತ ಸಂಭವಿಸಿದ್ದು ಕಂಟೇನರ್ ಚಾಲಕನೊಬ್ಬ ಸಿಕ್ಕಸಿಕ್ಕ ವಾಹನೆಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾಗಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಬೆಸ್ತಮಾನ ಹಳ್ಳಿಯಿಂದ ಚಂದಾಪುರದವರಿಗೆ ಈ ಒಂದು ಸರಣಿ ಅಪಘಾತ ಸಂಭವಿಸಿದ್ದು ಪೊಲೀಸರು 14 ಕಿಲೋಮೀಟರ್ ಹಿಂಬಾಲಿಸಿದರು ಕೂಡ ಚಾಲಕ ಕಂಟೆನರ್ ನಿಲ್ಲಿಸಿರಲಿಲ್ಲ. ಬಳಿಕ ಚಂದಾಪುರದಲ್ಲಿ ಸಾರ್ವಜನಿಕರು ಕಲ್ಲು ತೂರಿದಾಗ ಚಾಲಕ ಕಂಟೆನರ್ ನೆಲೆಸಿದ್ದಾನೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವದಂಪತಿಗಳು ಬೈಕ್ನಲ್ಲಿ ಚಲಿಸುತ್ತಿದ್ದರು. ಈ ವೇಳೆ ಕೆಟ್ಟು ನಿಂತ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರಲ್ಲಿ ನಡೆದಿದೆ. ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ನವವಿವಾಹಿತ ದಂಪತಿ ತೆರಳುತ್ತಿದ್ದ ದ್ವಿಚಕ್ರವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ, ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ನವವಿವಾಹಿತೆ ವರ್ಷಿಣಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು, ಸವಾರ ಸುರೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವರ್ಷಿಣಿ ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದವರು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸುರೇಂದ್ರ ಅವರ ಜೊತೆಗೆ ಮದುವೆಯಾಗಿದ್ದರು.ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಂದ್ರರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.














