Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಚಿವ ಈಶ್ವರ್ ಖಂಡ್ರೆ ಪುತ್ರ ಹಾಗು ಕಾಂಗ್ರೆಸ್ ಸಂಸದ ಸಾಗರ್ ಖಂಡ್ರೆ ಅವರ ಬೆಂಗಳೂರಿನ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಕೃಷ್ಣ ಅಪಾರ್ಟಮೆಂಟ್ನ ಮ್ಯಾನೇಜರ್ ಚಂದ್ರಕುಮಾರ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮನೆ ನವೀಕರಣ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹೌದು ಶ್ರೀ ಕೃಷ್ಣ ಅರ್ಪಾಟಮೆಂಟ್ ನಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಪುತ್ರ ಹಾಗೂ ಸಂಸದ ಸಾಗರ ಖಂಡ್ರೆ ವಾಸವಾಗಿದ್ದಾರೆ. ಪ್ರಸ್ತುತ ಈ ಮನೆಯನ್ನು ಕೃಷ್ಣ ಅರ್ಪಾಟಮೆಂಟ್ಸೊ ಸೈಟಿಯಿಂದ ಪೂರ್ವಾನುಮತಿಯನ್ನು ಪಡೆದುಕೊಂಡು ನವೀಕರಣಮಾಡಲಾಗುತ್ತಿದೆ. ನವೀಕರಣದ ವೇಳೆ ಮೆಟ್ಟಿಲುಗಳಿಗೆ ಬೆಳಕಿನ ವ್ಯವಸ್ಥೆ ಮಾಡಲು ವೈರ್ನ್ನು ಎಳೆಯಲಾಗಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಏಪ್ರಿಲ್ 2 ರಂದು ಮಧ್ಯಾಹ್ನ ಸುಮಾರು 04:30 ಗಂಟೆ ಸಮಯದಲ್ಲಿ ಅಪಾರ್ಟಮೆಂಟ್ನ ಮ್ಯಾನೇಜರ್ ಚಂದ್ರಕುಮಾರ ಎಂಬುವರು ನವೀಕರಣ ಕಾಮಗಾರಿ ಮಾಡುತ್ತಿರುವ ಕಾರ್ಮಿಕರನ್ನು ಅಡ್ಡಗಟ್ಟಿ, ಕಾರ್ಮಿಕರಿಗೆ ಮನಬಂದಂತೆ ಅವಾಚ್ಯ ಶಬ್ದಗಳಿಂದ ಬೈದಿದಿದ್ದಾರೆ.ಈ ಬಗ್ಗೆ ಮನೆಯ ಮಾಲೀಕ ಸಾಗರ ಖಂಡ್ರೆ ಅಥವಾ ಈಶ್ವರ ಖಂಡ್ರೆ…
ಹುಬ್ಬಳ್ಳಿ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಹುಬ್ಬಳ್ಳಿಯಲ್ಲಿ, ಹೊರವಲಯದ ನೂಲ್ವಿ ಕ್ರಾಸ್ ನಲ್ಲಿ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿ ನಾಲ್ವರು ವೃದ್ಧೆಯರು ಸಾವನಪ್ಪಿದ್ದಾರೆ. ಮೃತರನ್ನು ಸುಜಾತ ಹಿರೇಮಠ (60), ಗಾಯತ್ರಿ ಮಹಾಂತನಮಠ (67), ಶಕುಂತಲಾ ಹಿರೇಮಠ (72) ಹಾಗು ಸಂಪತಕುಮಾರಿ ಕಲ್ಮಠ (63) ಎಂದು ತಿಳಿದುಬಂದಿದೆ. ಕಾರು ವರೂರ ಗ್ರಾಮದಿಂದ ಹುಬ್ಬಳ್ಳಿಯ ತ್ತ ಬರುತ್ತಿತ್ತು. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ವೃದ್ಧೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ
ತುಮಕೂರು : ಅತ್ತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮನನೊಂದ ಸೊಸೆಯೊಬ್ಬಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ವೀರಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ. ಕ್ರಿಮಿನಾಶಕ ಸೇವಿಸಿ ಸುಮಲತಾ (37)ಎನ್ನುವ ಸೊಸೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ್ ಸುಮಲತಾಳನ್ನು ಕೆ.ಬಿ ಕ್ರಾಸ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 18 ವರ್ಷಗಳ ಹಿಂದೆ ನರಸಿಂಹಮೂರ್ತಿ ಜೊತೆಗೆ ಸುಮಲತಾ ವಿವಾಹವಾಗಿದ್ದರು. ಒಂದುವರೆ ವರ್ಷದ ಹಿಂದೆ ಅನಾರೋಗ್ಯದಿಂದ ಪತಿ ನರಸಿಂಹಮೂರ್ತಿ ಸಾವನ್ನಪ್ಪಿದ್ದಾರೆ. ಪತಿ ಮೃತಪಟ್ಟ ನಂತರ ಅತ್ತೆ ಲಕ್ಕಮ್ಮ ಸೇರಿದಂತೆ ಹಲವರು ಸುಮಲತಾಗೆ ಕಿರುಕುಳ ನೀಡುತ್ತಿದ್ದಾರೆ. ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
SHOCKING : ರಾಜ್ಯದಲ್ಲಿ ಪತ್ನಿಯ ಕಾಟಕ್ಕೆ ಮತ್ತೊಂದು ಬಲಿ : ಬೆಂಗಳೂರಲ್ಲಿ ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ಪತಿ!
ಬೆಂಗಳೂರು : ಇತ್ತೀಚಿಗೆ ಪತ್ನಿಯರ ಕಾಟಕ್ಕೆ ಬೇಸತ್ತು, ಅದೆಷ್ಟೋ ಗಂಡಂದಿರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಟೆಕ್ಕಿ ಸುಭಾಷ್ ಆತ್ಮಹತ್ಯೆ ಇಡೀ ದೇಶದಾದ್ಯಂತ ಭಾರಿ ಚರ್ಚೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯ ಕಿರುಕುಳಕ್ಕೆ ಮನನೊಂದು ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಬೆಂಗಳೂರು ನಗರದಲ್ಲಿ ಮತ್ತೊಂದು ದಾರುಣ ಘಟನೆ ಬೆಳಕಿಗೆ ಬಂದಿದೆ. ಲಿನೋವೋ ಕಂಪನಿಯ ಹಿರಿಯ ಉದ್ಯೋಗಿಯಾಗಿದ್ದ ಪ್ರಶಾಂತ್ ನಾಯರ್ (40) ಅವರು ಪತ್ನಿಯ ಕಿರುಕುಳದಿಂದ ಮನನೊಂದು ಚಿಕ್ಕಬಾಣಾವರದ ಡಿ.ಎಕ್ಸ್ ಸ್ಮಾರ್ಟ್ ನೆಸ್ಟ್ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶಾಂತ್ ಅವರು ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ತಂದೆ ಎಮ್ ಎನ್ ಕುಟ್ಟಿ ಮಗನಿಗೆ ಕರೆ ಮಾಡಿದ್ರು ಎಷ್ಟು ಬಾರಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ,ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು…
ಹುಬ್ಬಳ್ಳಿ : ಸಹಕಾರ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರಾಜ್ಯ ಸರ್ಕಾರ ಈ ಒಂದು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದೆ. ಇದರ ಬೆನ್ನಲ್ಲೇ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಹನಿಟ್ರ್ಯಾಪ್ ಸಂಬಂಧಪಟ್ಟಂತೆ ನನ್ನ ಬಳಿ ಹಲವು ದಾಖಲೆಗಳಿವೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಸ್ಸಿ/ಎಸ್ಟಿ ನಾಯಕರನ್ನು ಮುಗಿಸಿದ್ದೆ ಕಾಂಗ್ರೆಸ್ ಪಕ್ಷ. ಕೆ.ಎನ್ ರಾಜಣ್ಣ, ರಮೇಶ್ ಜಾರಕಿಹೊಳಿ ಮುಗಿಸಿದ್ದು ಯಾರು? ಹಾಗಾಗಿ ರಾಜಕಾರಣ ಹೀಗಾಗಬಾರದು. ಹನಿಟ್ರ್ಯಾಪ್ ಹಿಂದೆ ಮಹಾನ್ ನಾಯಕರ ಕೈವಾಡವಿದೆ. ಎರಡು ಪಕ್ಷದ ಮಹಾನ್ ನಾಯಕರ ಕೈವಾಡ ಇದೆ. ನನ್ನ ಬಳಿಯೂ ಕೆಲವು ದಾಖಲೆಗಳು ಇವೆ. ನನಗೆ ಹಾಯ್ ಅಂದರೆ ನಾನು ಬಾಯ್ ಎಂದು ಹೇಳುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದರು. ನನ್ನ ವಿರುದ್ಧವು ಶತ್ರು ಸಂಹಾರ ಯಾಗ ನಡೆದಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಯಾಗ ನಡೆದಿದೆ. ಹುಬ್ಬಳ್ಳಿಯಲು ಕೂಡ ಒಂದು…
ಬೆಂಗಳೂರು : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ರಣಬಿಸಿಲು ಹೆಚ್ಚುತ್ತಿದೆ. ಇಂದು ದಕ್ಷಿಣ ಒಳನಾಅಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಮಂಡ್ಯ, ಕೋಲಾರ, ತುಮಕೂರು, ಶಿವಮೊಗ್ಗ, ರಾಮನಗರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, , ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಹುಬ್ಬಳ್ಳಿ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿರಾದಂತಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಇದೀಗ ಮುಂಬರುವ ವಿಜಯದಶಮಿಯ ಬಳಿಕ ರಾಜ್ಯದಲ್ಲಿ ಹೊಸ ಪಕ್ಷ ಕಟ್ಟುವ ಪ್ಲಾನ್ ಹಾಕಿಕೊಂಡಿದ್ದಾರೆ. ಈ ಕುರಿತು ಅವರು ಮಾತನಾಡಿ ವಿಜಯದಶಮಿ ವರೆಗೂ ಕಾದು ನೋಡುತ್ತೇನೆ ಬಳಿಕ ಹೊಸ ಪಕ್ಷ ರಚನೆ ಕುರಿತಂತೆ ಪ್ಲಾನ್ ಮಾಡಿದ್ದೇನೆ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಲ್ಲ ನನ್ನ ಹೆಣ, ಚಪ್ಪಲಿನೂ ಕಾಂಗ್ರೆಸ್ ಗೆ ಹೋಗಲ್ಲ. ಹೊಸ ಪಕ್ಷದ ಬಗ್ಗೆ ಆಲೋಚನೆ ಇದೆ ಅದು ಅಷ್ಟು ಸುಲಭವಲ್ಲ. ಹಿಂದೂಗಳ ಮತ ವಿಭಜನೆ ಆಗಬಾರದು ಅನ್ನುವುದು ನನ್ನ ಪ್ಲಾನ್. ವಿಜಯದಶಮಿಯವರೆಗೂ ಕಾದು ನೋಡುತ್ತೇನೆ. ನಾನು ಪಕ್ಕಾ ಪ್ಲಾನ್ ಮಾಡಿದ್ದೇನೆ.ರಾಜಕೀಯ ಜೀವನದಲ್ಲಿ ಕೆಲವು ಬಾರಿ ಮಾತು ಮುಳುವಾಗಿದೆ. ಎಂದು ಪರೋಕ್ಷವಾಗಿ ಹೊಸ ಪಕ್ಷದ ಸುಳಿವು ನೀಡಿದ ಶಾಸಕ ಯತ್ನಾಳ್. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಮತ್ತೆ ಕರೆ ತಂದಿದ್ದೆ ನಾನು. ಈ ಹಿಂದೆ ಹೊಸ ಪಕ್ಷ ಕಟ್ಟಿದವರು…
ಬೆಂಗಳೂರು : ಇತ್ತೀಚಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವ ಘಟನೆ ಒಂದು ನಡೆದಿದ್ದು, ರಸೇಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವತಿಯರ ಮೇಲೆ ಯುವಕನೊಬ್ಬ ಹಿಂದಿನಿಂದ ಬಂದು ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದಿದ್ದು, ನಡೆದು ಹೋಗುತ್ತಿದ್ದ ಹೆಣ್ಣು ಮಕ್ಕಳ ಜೊತೆಗೆ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಭಾರತಿ ಲೇಔಟ್ ನ 1ನೇ ಕ್ರಾಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಏಪ್ರಿಲ್ 3 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸುದ್ಧಗುಂಟೆ ಪೊಲೀಸ್ ಠಾಣೆಯಿಂದ ಯುವತಿ ಮತ್ತು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹುಬ್ಬಳ್ಳಿ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿತವಾದರೂ ಕೂಡ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರ ವಾಗ್ದಾಳಿ ಮುಂದುವರಿಸಿದ್ದಾರೆ ಎಂದಿಗೂ ಸಿಎಂ ಆಗಲ್ಲ ಆದರೆ ನನ್ನ ಹಣೆಬರದಲ್ಲಿ ಸಿಎಂ ಹುದ್ದೆ ಬರೆದಿದೆ ಎಂದು ಮತ್ತೆ ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿವೈ ವಿಜಯೇಂದ್ರ ಎಂದು ಮುಖ್ಯಮಂತ್ರಿ ಆಗಲ್ಲ ನನ್ನ ಹಣೆಬರಹದಲ್ಲಿ ಸಿಎಂ ಹುದ್ದೆ ಬರದಿದೆ ಎಂದು ಶಾಸಕ ಬಸನಗೌಡ ಪಾಟೀಲ ಹೇಳಿಕೆ ನೀಡಿದರು. ಜಾರ್ಖಂಡ್ ನಲ್ಲಿ ಪಕ್ಷೇತರ ಶಾಸಕ ಸಹ ಮುಖ್ಯಮಂತ್ರಿ ಆಗಿದ್ದ. ಆದರೆ ಬಿವೈ ವಿಜಯೇಂದ್ರ ಎಂದು ಮುಖ್ಯಮಂತ್ರಿ ಆಗಲ್ಲ. ನಾನು ಬಿಜೆಪಿ ಬಿಟ್ಟು ಹೋಗಿಲ್ಲ ಪೂಜ್ಯ ತಂದೆ ಮತ್ತು ಮಗ ನನ್ನನ್ನು ಹೊರಗೆ ಹಾಕಿದ್ದಾರೆ, ಪೂಜ್ಯ ತಂದೆಯ ಹಿರಿಯ ಮಗ ಇದ್ದಾನೆ. ಅವನು ಸಂತೋಷ ಲಾಡ್ ಗೆ ಸಿಎಂ ಮಾಡಲು ಹೊರಟಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ಯಾದಗಿರಿ : ಸಾಮಾನ್ಯವಾಗಿ ಪುರುಷರು ಆಗಿರಬಹುದು ಅಥವಾ ಮಹಿಳೆಯರು ಆಗಿರಬಹುದು, ಮದುವೆಯಾಗಿ ಸ್ವಲ್ಪ ದಿನ ಸಾಂಸಾರಿಕ ಜೀವನ ನಡೆಸಿದ ಬಳಿಕ ಆಮೇಲೆ ಸನ್ಯಾಸತ್ವ ಸ್ವೀಕರಿಸೋದನ್ನು ನೋಡಿದ್ದೇವೆ. ಅಲ್ಲದೆ ಕೆಲವರು ಬಾಲ ಬ್ರಹ್ಮಚಾರಿಯಾಗಿಯು ಇದ್ದಿದನ್ನು ನೋಡಿದ್ದೇವೆ. ಆದರೆ ಯಾದಗಿರಿಯಲ್ಲಿ ಕೋಟ್ಯಾಧೀಶ್ವರನ ಪುತ್ರಿಯಾದ ಯುವತಿಯೋರ್ವಳು ಇದೀಗ ಜೈನ ಧರ್ಮ ಸ್ವೀಕರಿಸುವ ಮೂಲಕ 26ನೇ ವಯಸ್ಸಿನಲ್ಲಿಯೇ ಸನ್ಯಾಸತ್ವ ಸ್ವೀಕರಿಸಿದ್ದಾಳೆ. ಹೌದು ಸನ್ಯಾಸಿ ಜೀವನದ ಕಡೆ ಪಯಣ ಬೆಳೆಸಿದ ಕೋಟ್ಯಾಧಿಶ್ವರನ ಪುತ್ರಿ. ಯುವತಿ 26ನೇ ವಯಸ್ಸಿಗೆ ಆಡಂಬರದ ಜೀವನ ಸಾಕಾಗಿ ಇದೀಗ ಸನ್ಯಾಸತ್ವಕ್ಕೆ ಮೊರೆ ಹೋಗಿದ್ದಾಳೆ. ಯಾದಗಿರಿಯ ಜಿಲ್ಲೆಯ ಜೈನ ಬಡಾವಣೆಯ ನಿವಾಸಿ ನಿಖಿತಾ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಯಾದಗಿರಿಯ ಜೈನ ಬಡಾವಣೆಯ ನಿವಾಸಿ ನಿಖಿತಾ ನರೇಂದ್ರ ಗಾಂಧಿ ಮತ್ತು ಸಂಗೀತ ಗಾಂಧಿ ಪುತ್ರಿ ಎಂದು ತಿಳಿದುಬಂದಿದೆ. ನಿಖಿತ ಇದೀಗ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಕಠಿಣ ನಿಯಮ ಪಾಲನೆ ಕಡ್ಡಾಯ 1) ಸನ್ಯಾಸತ್ವ ಸ್ವೀಕರಿಸಿದ ಮೇಲೆ ಸರಳವಾಗಿ ಜೀವನ ಸಾಗಿಸಬೇಕು. 2) ಒಂದೇ ಜಾಗದಲ್ಲಿ ಎರಡು ದಿನಕ್ಕಿಂತ ಹೆಚ್ಚು ನಿಲುವಂತಿಲ್ಲ.…