Author: kannadanewsnow05

ಬೆಂಗಳೂರು : ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಸರಣಿ ಹೃದಯಘಾತಕ್ಕೆ ಇದುವರೆಗೂ 35ಕ್ಕೂ ಹೆಚ್ಚು ಜನರು ಹಾಸನ ಜಿಲ್ಲೆ ಒಂದರಲ್ಲಿ ಸಾವನಪ್ಪಿದ್ದಾರೆ. ಹಾಸನ ಜಿಲ್ಲೆ ಹೊರತುಪಡಿಸಿ ಉಳಿದ ಕೆಲ ಜಿಲ್ಲೆಗಳಲ್ಲೂ ಸಹ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತಕ್ಷಣ ಎಚ್ಚೆತ್ತ ಸರ್ಕಾರ ನಿಖರ ಕಾರಣ ತಿಳಿದುಕೊಳ್ಳಲು ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಿತು ಇದೀಗ ತಜ್ಞರ ಒಂದು ವರದಿಯಲ್ಲಿ ಆತಂಕಕಾರಿ ಅಂಶಗಳು ಬಯಲಾಗಿವೆ. ರಾಜ್ಯ ಹಾಗೂ ಹಾಸನದಲ್ಲಿ ಸಂಭವಿಸಿದ ಸರಣಿ ಹೃದಯಾಘಾತ ಪ್ರಕರಣಗಳ ಅಧ್ಯಯನಕ್ಕೆ ಸರ್ಕಾರ ಎರಡು ಪ್ರತ್ಯೇಕ ತಾಂತ್ರಿಕ ಸಮಿತಿ ರಚಿಸಿದೆ.ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಘಾತಕ್ಕೆ ಕಾರಣವೇನು ಎಂಬವುದು ತಜ್ಞರು ಅಧ್ಯಯನ ನಡೆಸಿ ಸಿದ್ದಪಡಿಸಿರುವ ವರದಿಯಲ್ಲಿ ಅಡಕವಾಗಿದೆ. ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು, ಹಲವು ವಿಚಾರಗಳು ಚರ್ಚೆಯಾಗಿವೆ. ಅಲ್ಲದೆ ಕೆಲವು ಆತಂಕಕಾರಿ ಅಂಶಗಳು ಕೂಡ ಬಯಲಾಗಿವೆ. ತಜ್ಞರ ವರದಿಯಲ್ಲಿ ಏನಿದೆ? ತಾಂತ್ರಿಕ ಸಲಹಾ ಸಮಿತಿ ಅಧ್ಯಯನ ನಡೆಸಿ…

Read More

ಚಿಕ್ಕಮಗಳೂರು : ಸದ್ಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದೂ, ಈಗಾಗಲೇ ಭಾರಿ ಮಳೆಯಿಂದಾಗಿ ಚಿಕ್ಕಮಂಗಳೂರು, ಶೃಂಗೇರಿ ಉಡುಪಿ, ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಭಾರಿ ಆವಾಂತರ ಸೃಷ್ಟಿಯಾಗಿದ್ದು, ಇದೀಗ ಚಿಕ್ಕಮಂಗಳೂರಲ್ಲಿ ಮಳೆ ಅಬ್ಬರ ಮುಂದುವರೆದಿದ್ದ ಹಿನ್ನೆಲೆಯಲ್ಲಿ 6 ತಾಲೂಕಿನ ಅಂಗನವಾಡಿಗಳಿಗೆ ರಜೆ ಗೋಪಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಆರು ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಹಾಗು ಎನ್ ಆರ್ ಪುರ ತಾಲೂಕಿನಲ್ಲಿ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಆತನಿಗೆ ಅನ್ಯ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಇತ್ತು. ಅಲ್ಲದೇ ನಿತ್ಯ ಮದ್ಯಪಾನ ಮಾಡಿ ಮನೆಗೆ ಬರುತ್ತಿದ್ದ. ಇದರಿಂದ ಮನನೊಂದ ಆಕೆ ಪತಿಯನ್ನು ಹತ್ಯೆಗೈದು ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಮಹಿಳೆ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಎಸ್.ಜಿ. ಪಾಳ್ಯದ ನಿವಾಸಿ ಭಾಸ್ಕರ್ (42) ಕೊಲೆಯಾದ ವ್ಯಕ್ತಿ. ಆರೋಪಿ ಪತ್ನಿ ಶ್ರುತಿ (32) ಬಂಧಿತೆ ಎಂದು ತಿಳಿದುಬಂದಿದೆ. ವರ್ಷದ ಹಿಂದೆ ಶ್ರುತಿಯನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜೂ. 27ರಂದು ರಾತ್ರಿ ಬಾಸ್ಕರ್ ಮದ್ಯ ಸೇವಿಸಿ ಮನೆಗೆ ಬಂದಿದ್ದ. ಈ ವೇಳೆ ದಂಪತಿ ನಡುವೆ ಜಗಳವಾಗಿತ್ತು. ಕೋಪದಲ್ಲಿ ಶ್ರುತಿ ಮುದ್ದೆಕೋಲಿ ನಿಂದ ತಲೆಗೆ ಹೊಡೆದಿದ್ದು, ನಂತರ ಮಲಗಿದ್ದ ಭಾಸ್ಕರ್ ಬೆಳಗಾಗುವಷ್ಟರಲ್ಲಿ ಮೃತಪಟ್ಟಿದ್ದ. ಸುದ್ದಿ ತಿಳಿದು ಎಸ್.ಜಿ. ಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ರಾತ್ರಿ ಮನೆಗೆ ಬಂದು ಮಲಗಿದ ಪತಿ ಸಾವನ್ನಪ್ಪಿದ್ದಾರೆಂದು ಪೊಲೀಸರ ಮುಂದೆ ಶ್ರುತಿ ಹೇಳಿಕೆ ನೀಡಿದ್ದಳು. ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ…

Read More

ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ತಮಿಳು ಖ್ಯಾತ ನಟ ಕಮಲ್ ಹಾಸನ ಈ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಗುರಿಯಾಗಿದ್ದರು. ಇದೀಗ ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್‌ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾ ಲಯ ನಿರ್ಬಂಧಾಜ್ಞೆ ಹೊರಡಿಸಿದೆ. ಹೌದು ನಟ ಕಮಲ್‌ ಹಾಸನ್ ಅವರಿಗೆ ನಿರ್ಬಂಧ ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಸಲ್ಲಿಸಿರುವ ದಾವೆಯ ವಿಚಾರಣೆ ನಡೆಸಿದ ನಗರದ 31ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾ ಲಯ ಏಕಪಕ್ಷೀಯ ಆದೇಶ ಹೊರಡಿಸಿದೆ. ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆ ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದನ್ನು ನಿರ್ಬಂಧಿಸ ಲಾಗಿದೆ. ಕಮಲ್ ಹಾಸನ್ ಅಥವಾ ಅವ ಮೂಲಕ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಗಳಿಗೆ ಅನ್ವಯವಾಗುತ್ತದೆ ಎಂದಿದೆ. ಅಲ್ಲದೆ, ದಾವೆ ಸಂಬಂಧ ಕಮಲ್ ಹಾಸನ್‌ಗೆ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ…

Read More

ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲು ರಸ್ತೆಯಲ್ಲಿ ಪತ್ತೆಯಾದ ಗೋವಿನ ರುಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ನಾಯಕ ಶರಣ್‌ ಪಂಪ್‌ವೆಲ್‌ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಉಡುಪಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಹೌದು ಶರಣ್ ಪಂಪ್‌ವೆಲ್ ಗುರುವಾರ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕುಂಜಾಲಿನ ಗೋಹತ್ಯೆ ಪ್ರಕರಣದಲ್ಲಿ ಮುಸ್ಲಿಂ ಮೂಲಭೂತವಾದಿಗಳ ಕೈವಾಡ ಇದೆ ಎಂದು ಆರೋಪಿಸಿದ್ದರು. ಇದರ ವಿಡಿ ಯೋ ವಾಟ್ಸಪ್‌ನಲ್ಲಿ ಹರಿದಾಡಿತ್ತು. ಇದು ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಪ್ರಚೋದನಕಾರಿ ಹೇಳಿಕೆ, ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಭಂಗ ತರುವಂತಿದೆ. ಈ ಪ್ರಕರಣದ ಪೊಲೀಸ್‌ ತನಿಖೆ ಇನ್ನೂ ಪೂರ್ಣಗೊಂಡಿಲ್ಲ, ಅದಕ್ಕೆ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ, ಗೊಂದಲ ಉಂಟು ಮಾಡುವ ಸಾಧ್ಯತೆ ಇದೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು. ಬೆಂಬಲ ನೀಡುತ್ತೇನೆ. ಅದು ಬಿಟ್ಟರೆ ನನಗೆ ಬೇರೆ ಆಯ್ಕೆಯೇ ಇಲ್ಲ ಎಂದು ಬುಧವಾರ ಹೇಳಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನನ್ನ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಹೇಳಿದ್ದಾರೆ. ಚಾಮುಂಡಿಬೆಟ್ಟದಲ್ಲಿ ನಿನ್ನೆ ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಅವರು ಮಾತ ನಾಡಿದರು. ಈ ವೇಳೆ, ಮುಖ್ಯಮಂತ್ರಿ ರೇಸ್ ನಿಂದ ಹೊರಬಿದ್ದಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು. ಪ್ರಯತ್ನ ವಿಫಲವಾಗಬಹುದು. ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನು ಬೇಕು ಅದನ್ನು ಪ್ರಾರ್ಥನೆ ಮಾಡಿದ್ದೇನೆ. ಈಗ ಯಾವ ಚರ್ಚೆಯೂ ಬೇಡ ಎಂದು ಹೇಳಿದರು. ರಾಜಕೀಯದ ಬಗ್ಗೆ ಈಗ ಏನನ್ನೂ ಮಾತನಾಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು. ಅವರು ಬುದ್ದಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದಷ್ಟೇ ಹೇಳಿದರು. ದುಃಖವನ್ನು ದೂರ ಮಾಡುವ ದೇವಿ, ಚಾಮುಂಡಿ. ಈ ಬಾರಿ…

Read More

ಮಂಗಳೂರು : ಕಳೆದ 2022 ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್​ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು, ನಿನ್ನೆ ಕತಾರ್​ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ…

Read More

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 5ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ…

Read More

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಮತ್ತು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ಇಂದು ತಡೆ ನೀಡಿತು. ಹೌದು ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಿಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಜನವರಿ ತಿಂಗಳಲ್ಲಿ ತಡೆ ನೀಡಿತ್ತು. ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಎಂಬವರು ಸಲ್ಲಿಸಿದ್ದ ಖಾಸಗಿ…

Read More

ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಖರ ಕಾರಣ ತಿಳಿದುಕೊಳ್ಳಲು ಇತ್ತೀಚಿಗೆ ರಾಜ್ಯ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ 10 ತಜ್ಞರ ಒಳಗೊಂಡ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಇದೀಗ ವರದಿ ಸಲ್ಲಿಸಲಿದೆ. ಹೃದಯಾಘಾತದ ಸಾವು ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದ್ದು,ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೌದು ಕೋವಿಡ್ ಬಂದು ಹೋದವರಲ್ಲಿ ಕೊಂಚ ಹೃದಯ ಸಮಸ್ಯೆ ಇದೆ. ಜನರಲ್ಲಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಾಗಿಲ್ಲ. ಕೋವಿಡ್ ವೈರಸ್ ಕೊಂಚ ಪ್ರಮಾಣದಲ್ಲಿ ಸಮಸ್ಯೆ ಮಾಡಿದೆ. ವರದಿಯಲ್ಲಿ ಹಾರ್ಟ್ ಕಾರ್ಯಕ್ಷಮತೆ ಕಡಿಮೆಯ ಬಗ್ಗೆ ಉಲ್ಲೇಖ ಮಾಡಲಾಗಿದೆ ಕೋವಿಡ್ ಬಂದು ಹೋದ ಮೂರು ವರ್ಷದ ಬಳಿಕ ಸಮಸ್ಯೆ ಆಗಿದೆ. ಕೋವಿಡ್ ಬಂದು ಹೋದವರಲ್ಲಿ ಹೃದಯ ಸಮಸ್ಯೆ ಕಾಣುತ್ತಿದೆ. ನಿದ್ರಾ ಹೀನತೆ, ಸುಸ್ತು, ಉಸಿರಾಟದ ಸಮಸ್ಯೆ ಹೆಚ್ಚಾದ ಬೊಜ್ಜು, ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆ ಉಲ್ಲೇಖನಾಗಿದೆ. ಇನ್ನು 15…

Read More