Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ನಿವೃತ್ತ ಡಿಜಿ ಐಜಿಪಿ ಓಂ ಪ್ರಕಾಶ್ ಪುತ್ರಿ ಗಲಾಟೆ ಮಾಡಿದ್ದಾರೆ. ಓಂ ಪ್ರಕಾಶ್ ಪತ್ರಿ ಕೃತಿ ಗಲಾಟೆ ಮಾಡಿದ್ದಾರೆ. ನಂದಿನಿ ಬೂತ್ ಬಳಿ, ಗಲಾಟೆ ಮಾಡಿ ರಂಪಾಟ ಮಾಡಿದ್ದಾರೆ. ಬೂತ್ ನಲ್ಲಿರುವ ಎಲ್ಲಾ ಬಾಟಲ್ ಗಳನ್ನು ಹೊಡೆದು ಹಾಕಿದ್ದಾರೆ. ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಸಮೀಪದ ನಂದಿನಿ ಬೂತ್ ಬಳಿ ಕೃತಿ ಗಲಾಟೆ ಮಾಡಿದ್ದಾರೆ. ಜೂನ್ 30ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕೃತಿ ವರ್ತನೆಗೆ ಬೇಸತ್ತು ಕೂಡಲೇ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೃತಿಯನ್ನು ಕರೆದೊಯ್ದಿದ್ದಾರೆ. ಗುರು ನೀಡಿದರು ಕೂಡ ಪೊಲೀಸರು ಯಾವುದೇ ದೂರು ಸ್ವೀಕರಿಸಿಲ್ಲ ಎಂದು ನಂದಿನಿ ಬೂತ್ ಅಂಗಡಿ ಮಾಲೀಕ ತಿಳಿಸಿದ್ದಾರೆ. ಮನೆಯಲ್ಲಿನ ಕೆಲ ಪರಿಸ್ಥಿತಿಗೆ ಕೃತಿ ಈ ರೀತಿ ಮಾಡುತ್ತಿದ್ದಾಳೆ. ಕೃತಿ ವರ್ತನೆಗೆ ಬೇಸತ್ತು ಅಂಗಡಿ ಮಾಲೀಕ ರೋಸಿ ಹೋಗಿದ್ದಾನೆ. ಕೊಲೆ ಕೇಸ್ನಲ್ಲಿ ಓಂ ಪ್ರಕಾಶ್ ಪತ್ನಿ ಜೈಲು ಪಾಲಾಗಿದ್ದಾರೆ. ಓಂ ಪ್ರಕಾಶ್ ಕೊಲೆಯ ಬಳಿಕ…
ಕಲಬುರ್ಗಿ : ಕಳೆದ ಒಂದುವರೆ ತಿಂಗಳಿನಿಂದ ಹಾಸನ ಜಿಲ್ಲೆ ಒಂದರಲ್ಲಿ ಹೃದಯಘಾತಕ್ಕೆ 27 ಜನರು ಸಾವನ್ನಪ್ಪಿದ್ದಾರೆ ಕ್ರಮೇಣ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾಸನ ಜಿಲ್ಲೆ ಅಷ್ಟೇ ಅಲ್ಲದೆ ಕಲ್ಬುರ್ಗಿ ಮತ್ತು ಯಾದಗಿರಿಯಲ್ಲೂ ಇಬ್ಬರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹೌದು ಕಲ್ಬುರ್ಗಿ ಜಿಲ್ಲೆಯಲ್ಲಿ ಹೃದಯಘಾತಕ್ಕೆ ರೈತರೊಬ್ಬರು ಬಲಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತದಿಂದ ರೈತ ಸಾವನಪ್ಪಿದ್ದಾರೆ. ಆಳಂದ್ ತಾಲೂಕಿನ ಲಿಂಗನವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸಂತೋಷ್ ಇಂಡಿ (35) ಸಾವನ್ನಪ್ಪಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಂತೋಷ್ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಂತೋಷ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಹೋದಾಗ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಯಾದಗಿರಿ ಜಿಲ್ಲೆಯಲ್ಲಿ ಹೃದಯಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಕೆಂಭಾವಿ ನಿವಾಸಿ ತಮ್ಮಣ್ಣ (50) ಇಂದು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹಾಸನ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಒಬ್ಬರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಹಾಸನದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ ಮುಂದುವರೆದಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಕಾರಗೋಡು (41) ಎನ್ನುವವರು ಸಾವನ್ನಪ್ಪಿದ್ದಾರೆ. ಆಲೂರು ತಾಲೂಕಿನ ಕಲ್ಲಾರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರಾತ್ರಿ ಮಲಗಿದ್ದಲ್ಲಿಯೇ ಸಂತೋಷಕ್ಕೆ ಹೃದಯಘಾತ ಸಂಭವಿಸಿದೆ. ಬೆಳಿಗ್ಗೆ ಸಂತೋಷ ನಾನು ಎಬ್ಬಿಸಲು ಹೋಗಿದ್ದಾಗ ಕುಟುಂಬಸ್ಥರಿಗೆ ಈ ಕುರಿತು ತಿಳಿದಿದೆ ಕೂಡಲೇ ಅವರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ ಅಷ್ಟರಲ್ಲೇ ಸಂತೋಷ ಸಾವನಪ್ಪಿದ್ದಾರೆ ಹಿಂದೆ ಹೃದಯಘಾತ ಉಂಟಾಗಿ ಸಂತೋಷ ಚಿಕಿತ್ಸೆ ಪಡೆದಿದ್ದರು ಎಂದು ತಿಳಿದುಬಂದಿದೆ.
ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದರಿಂದ ಮನನೊಂದು ನನ್ನ ಸಾವಿಗೆ ಆಕೆಯೇ ಕಾರಣ ಎಂದು ಲೈವ್ ವಿಡಿಯೋ ಮಾಡಿ ಹರಿಬಿಟ್ಟು, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಸಂತೋಷ್ (24) ಎಂದು ತಿಳಿದುಬಂದಿದೆ. ಸಂತೋಷ್ ಹಾಗೂ ಸಾಗಡೆ ಗ್ರಾಮದ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಆಕೆಯು ಬೇರೊಬ್ಬ ಯುವಕನಿಗೆ ಮೆಸೇಜ್ ಮಾಡಿದ್ದನ್ನು ಸಂತೋಷ್ ಪ್ರಶ್ನಿಸಿದ್ದ. ಈ ಕಾರಣಕ್ಕೆ ಯುವತಿಯು ಸಂತೋಷ್ನಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ಸಂತೋಷ್, ನನ್ನ ಸಾವಿಗೆ ಆಕೆಯೇ ಕಾರಣ. ಅವಳನ್ನು ಬಿಟ್ಟು ಇನ್ಯಾರು ಕಾರಣರಲ್ಲ ಎಂದು ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ಗೆ ತಮ್ಮಿಬ್ಬರ ಫೋಟೋ ಹಾಕಿದ್ದ. ಬಳಿಕ ಸಂತೋಷ್, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನಾ ಸಂಬಂಧ ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಹಾಸನ : ಹಾಸನದಲ್ಲಿ ಮದುವೆಯಾದ ಆರು ತಿಂಗಳಲ್ಲಿ ಗೃಹಿಣಿ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದ ವಿದ್ಯಾ (24)ಇದೀಗ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯಯವರಾದ ವಿದ್ಯಾ ಹಾಸನದ ಸೋಮಲಾಪುರದ ಶಿವು ಜೊತೆ ಮದುವೆಯಾಗಿದ್ದರು. ಬೆಂಗಳೂರಿನ ಶಂಕರಿಪುರಂನಲ್ಲಿ ಶಿವು ಪೊಲೀಸ್ ಆಗಿದ್ದರು. ಜೂನ್ 30ರಂದು ವಿದ್ಯಾ ಕಾಣೆಯಾಗಿದ್ದರು. ನಂತರ ಹಾಸನ ಜಿಲ್ಲೆಯ ಅರಸೀಕೆರೆ ರೈಲ್ವೆ ಹಳಿ ಸಮೀಪ ವಿದ್ಯಾ ಶವವಾಗಿ ಪತ್ತೆಯಾಗಿದ್ದಾರೆ. ಜೂನ್ 30 ರಂದು ಅರಸೀಕೆ ನಗರದ ರೈಲ್ವೆ ಟ್ರ್ಯಾಕ್ ಬಳಿ ವಿದ್ಯಾ ಮೃತದೇಹ ಪತ್ತೆಯಾಗಿದೆ. ಪತಿ ಕುಟುಂಬದವರಿಂದಲೇ ಮಗಳ ಕೊಲೆಯಾಗಿದೆ ಎಂದು ವಿದ್ಯಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹಾಸನ : ಕಳೆದ 40 ದಿನಗಳಲ್ಲಿ ಹಾಸನ ಜಿಲ್ಲೆ ಒಂದರಲ್ಲಿ 25 ಜನರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಈ ಒಂದು ಪ್ರಕರಣಗಳಿಂದ ಹಾಸನ ಜಿಲ್ಲೆ ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ, ಇದರ ಬಣ್ಣಲ್ಲೇ ರಾಜ್ಯ ಸರ್ಕಾರ ತನಿಖಾ ತಂಡವನ್ನು ರಚನೆ ಮಾಡಿದ್ದು ಇದೀಗ ಎಂದು ಹಾಸನ ಜಿಲ್ಲೆಗೆ ಭೇಟಿ ನೀಡಿ ತನಿಖಾ ತಂಡವು ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಲು ಆರಂಭಿಸಿದೆ. ಹೌದು ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ 25 ಜನರು ಸಾವನ್ನಪ್ಪಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ಇದೀಗ ತನಿಖೆ ಆರಂಭವಾಗಿದೆ. ನಿನ್ನೆಯಿಂದಲೂ ಮೃತರ ಮನೆಗಳಿಗೆ ತಜ್ಞರ ತಂಡ ಭೇಟಿ ನೀಡಿದೆ. ಸಾವಿಗೆ ನಿಖರವಾದ ಕಾರಣ ಪತ್ತೆಗೆ ಆರೋಗ್ಯ ಇಲಾಖೆ ತಂಡ ಮುಂದಾಗಿದ್ದು, ಹಾಸನ ತಾಲೂಕಿನ ಚಿಕ್ಕಕೊಂಡಗಳದ ಸತೀಶ್ ನಿವಾಸಕ್ಕೆ ತಜ್ಞರ ತಂಡ ಭೇಟಿ ನೀಡಿದೆ. ಸತೀಶ್ ಆರೋಗ್ಯ ಹೇಗಿತ್ತು? ಆಹಾರ ಪದ್ಧತಿ ಹೇಗಿತ್ತು? ಎಂಬಿಇತ್ಯಾದಿ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಾವಣೆಗೆ ಇದೀಗ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು ಇನ್ಮುಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲಾಗಿದೆ. ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡುವ ಕುರಿತು ಪ್ರಸ್ತಾವನೆ ಪ್ರಸ್ತಾಪಿಸಲಾಯಿತು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆಯನ್ನು ಮರುನಾಮಕರಣ ಮಾಡಿ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಅದೇ ರೀತಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರು ಕೂಡ ಬದಲಾವಣೆಗೆ ಅನುಮೋದನೆ ದೊರಕಿದೆ. ಬಾಗೇಪಲ್ಲಿಯ ಹೆಸರು ಭಾಗ್ಯನಗರ ಎಂದು ಮರುನಾಮಕರಣ ಮಾಡಲಾಗಿದ್ದು,ಬಾಗೇಪಲ್ಲಿ ಹೆಸರು ಬದಲಾಯಿಸಲು ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಬೆಂಗಳೂರು : ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ CAT ಸರ್ಕಾರಕ್ಕೆ ಚಾಟಿ ಬೀಸಿ IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರಾದ್ದುಪಡಿಸಿದೆ. ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ ಅಮಾನತು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು. ಇಂದು ಬೆನ್ನಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ನಾವು ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು. ಧಾರವಾಡ ಎಸಿಪಿ ನಾರಾಯಣ ಬರಮಣ್ಣಿ ವಿಆರ್ಎಸ್ ವಿಚಾರವಾಗಿ ಮಾತನಾಡಿ, ಅವರು ಹಾಗೇನೂ ಮಾಡಲ್ಲ, ಆ ರೀತಿ ಏನೂ ಇಲ್ಲ. ಸಚಿವ ಹೆಚ್.ಕೆ. ಪಾಟೀಲ್ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಪೋಸ್ಟಿಂಗ್ ಕೊಡ್ತೇವೆ. ಮುಖ್ಯಮಂತ್ರಿಗಳು ಉದ್ದೇಶಪೂರ್ವಕವಾಗಿ ಆ ರೀತಿ ಮಾಡಲಿಲ್ಲ. ಆ ಸಂದರ್ಭದಲ್ಲಿ ಸಿಎಂ ಹಾಗೆ ನಡೆದುಕೊಂಡರು ಅಷ್ಟೇ ಎಂದರು.
ಹಾವೇರಿ : ಹಾವೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ಬೆಳಕಿಗೆ ಬಂದಿದ್ದು, ಅಪರಾಪ್ತ ಹೆಣ್ಣು ಮಕ್ಕಳನ್ನು ಕರೆತಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಆಕ್ಟಿವ್ ಆಗಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ ಮಕ್ಕಳ ಮಾರಾಟ ಮಾಡುತ್ತಿದ್ದ ಮಹಿಳೆಗೆ ಗ್ರಾಮಸ್ಥರು ಇದೀಗ ಧರ್ಮದೇಟು ನೀಡಿದ್ದಾರೆ. ಹೌದು ಹಾವೇರಿಯಲ್ಲಿ ಮಕ್ಕಳ ಕಳ್ಳ ಸಾಗಣೆ ಗ್ಯಾಂಗ್ ಆಕ್ಟಿವ್ ಆಗಿದ್ದು, ಚಿಕ್ಕ ಚಿಕ್ಕ ಹೆಣ್ಣು ಮಕ್ಕಳನ್ನು ಮಾರಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಲಕ್ಕವ ಎಂಬ ಮಹಿಳೆಗೆ ಗ್ರಾಮಸ್ಥರು ಈಗ ಧರ್ಮದೇಟು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮೊನ್ನೆ ರಾತ್ರಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈಕೆ ಅಪ್ರಾಪ್ತ ಬಾಲಕಿಯರನ್ನು ಪುಸಲಾಯಿಸಿ ತಂದು ಲಕ್ಷಾಂತರ ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದಳು ಎನ್ನಲಾಗಿದೆ. ತಾನು ಕರೆತಂದ ಹೆಣ್ಣು ಮಕ್ಕಳನ್ನು ಈಕೆ ತನ್ನ ಮನೆಯ ಮಂಚದ ಕೆಳಗೆ ಅಡಗಿಸಿ ಇಟ್ಟಿದ್ದಳು.…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಸದಾಗಿ ಎರಡು ಅಕ್ರಮಗಳನ್ನು ಸಿಬಿಐ ಅಧಿಕಾರಿಗಳು ಇದೀಗ ಮತ್ತೆರಡು ಹೊಸ ಅಕ್ರಮ ಪತ್ತೆ ಹಚ್ಚಿದ್ದಾರೆ. ರಾಜ್ಯ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ನಿಂದ 95 ಲಕ್ಷ ಹಾಗು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ 2.17 ಕೋಟಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಸಿಬಿಐ ಇದೀಗ ಮತ್ತೆರಡು ಹೊಸ ಅಕ್ರಮಗಳನ್ನು ಪತ್ತೆಹಚ್ಚಿದ್ದಾರೆ. ರಾಜ್ಯ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ನಿಂದ 95 ಲಕ್ಷ ಹಾಗು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ 2.17 ಕೋಟಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ವಾಲ್ಮೀಕಿ ನಿಗಮದ ಮೂಲಕ ಆರೋಪಿ ನೆಕ್ಕಂಟಿ ನಾಗರಾಜ್ ಗೆ ಹಣ ವರ್ಗಾವಣೆಯಾಗಿದೆ. ಈ ಬಗ್ಗೆ ಸಿಬಿಐ ಎಸ್ಪಿಪಿ ಪ್ರಸನ್ನ ಕುಮಾರ್ ಯಥಾಸತಿ ವರದಿ ಸಲ್ಲಿಸಿದ್ದರು. ಫೋರೆನ್ಸಿಕ್ ದಾಖಲೆ ವರ್ಗಾವಣೆಗೆ ಇತರೆ…













