Author: kannadanewsnow05

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ಮಾಡುವುದಾಗಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದರು. ಇವರ ಹೇಳಿಕೆಗೆ ಬಿಜೆಪಿ ನಾಯಕರು ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು ಇದೀಗ ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಯಾವೊಬ್ಬ ಬಿಜೆಪಿ ನಾಯಕರ ಮಕ್ಕಳೂ ಶಾಖೆಗೆ ಹೋಗಿ ‘RSS’ ಚಡ್ಡಿ ಹಾಕಿಕೊಂಡು ಕೋಲಾಟ ಆಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ಸುದೀರ್ಘವಾಗಿ ವಾಗ್ದಾಳಿ ನಡೆಸಿರುವ ಅವರು, RSS ನಿಷೇಧದ ನನ್ನ ಹೇಳಿಕೆಯ ಕುರಿತಾಗಿ ವಿಜಯೇಂದ್ರ ಅವರು ಹಾಗು ಸುನಿಲ್ ಕುಮಾರ್ ಅವರು ಸೇರಿದಂತೆ ಬಿಜೆಪಿಯ ನಾಯಕರು ಬಗೆಬಗೆಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು, ರಾಜಕೀಯ ಭವಿಷ್ಯ ಕಂಡುಕೊಳ್ಳಲು RSS ರಕ್ಷಣೆಗೆ ನಿಲ್ಲುವುದು ಬಿಜೆಪಿಯವರಿಗೆ ಅತ್ಯಂತ ಅನಿವಾರ್ಯ, ಏಕೆಂದರೆ ಇವರೆಲ್ಲರ ಜುಟ್ಟು ನಾಗಪುರದ ಹಿಡಿತದಲ್ಲಿದೆ. ಇಷ್ಟವಿಲ್ಲದಿದ್ದರೂ ಬಿಜೆಪಿಯವರು RSS ಸಮರ್ಥನೆ ಮಾಡಿಕೊಳ್ಳಲೇಬೇಕು. RSS ಬಗೆಗೆ ಬಿಜೆಪಿಯವರ ಪ್ರೀತಿ ಗಂಟಲು ಮೇಲಿನದ್ದೇ ಹೊರತು ಹೃದಯದಾಳದ್ದಲ್ಲ,…

Read More

ಬೆಂಗಳೂರು : ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ವಿಶೇಷ ಸಂಪುಟ ಸಭೆ ನಡೆಯುತ್ತಿದ್ದು, ಹಾಗಾಗಿ ಸಿಎಂ ಸಿದ್ದರಾಮಯ್ಯ ಇಂದು ನಂದಿ ಗ್ರಾಮದ ಬೋಗಿ ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳಿಗೆ ಉತ್ತರಿಸಿದ ಅವರು 5 ವರ್ಷಗಳ ಕಾಲ ನಾನೆ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದರು. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಸಿದ್ದರಾಮಯ್ಯ ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ನನ್ನ ಬಳಿ ಬೇರೆ ಯಾವ ಆಯ್ಕೆ ಇದೆ? ಹೈಕಮಾಂಡ್ ಏನು ಹೇಳುತ್ತದೆ ಅದೇ ಫೈನಲ್ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಐದು ವರ್ಷ ಸಿಎಂ ಅಂತ ಒಪ್ಪಿಕೊಂಡ್ರಾ ಎಂಬ ಪ್ರಶ್ನೆ ಉದ್ಭವಿಸಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಆ ಕುರಿತು ಅಪಸ್ವರ ಬೇಡ ಅಪಸ್ವರ ತೆಗೆಯುವುದು ಸರಿಯಲ್ಲ. ನನ್ನಂಥ ಸಾವಿರಾರು ಜನರು ಲಕ್ಷಾಂತರ ಕಾರ್ಯಕರ್ತರು ಪಕ್ಷ ಕಟ್ಟಲು ಕಷ್ಟಪಟ್ಟಿದ್ದಾರೆ. ಅವರ ಶ್ರಮ ಇದೆ…

Read More

ಚಾಮರಾಜನಗರ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ, ಚಾಮರಾಜನಗರ ಜಿಲ್ಲೆಯ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳಿಗೆ ವಿಷ ಹಾಕಿ ಕೊಂದಿದ್ದ ಘಟನೆ ಮಾಸುವ ಮುನ್ನವೇ ಇದೀಗ ಗುಂಡ್ಲುಪೇಟೆ ತಾಲೂಕಿನಲ್ಲಿ 18 ಕೋತಿಗಳು ಸಾವನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋತಿಗಳಿಗೆ ವಿಷ ಹಾಕಿರುವುದು ದೃಢವಾಗಿದೆ ಎಂದು ಪಶು ವೈದ್ಯ ಡಾ.ಮಹದೇಶ ಸ್ಪಷ್ಟಪಡಿಸಿದರು. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಕೊಡಸೋಗಿ ರಸ್ತೆಯಲ್ಲಿ ಕೋತಿಗಳ ಶವ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಷ ಹಾಕಿ ಕೋತಿಗಳನ್ನು ಕೊಂದಿರುವುದು ವೈದ್ಯರು ದೃಢಪಡಿಸಿದ್ದಾರೆ. 18 ಕೋತಿಗಳು ಮೃತಪಟ್ಟಿದ್ದು, ಎರಡು ಕೋತಿಗಳು ಜೀವಂತವಾಗಿವೆ. ಚಿಕಿತ್ಸೆ ಬಳಿಕ ನಿತ್ರಾಣಗೊಂಡಿದ್ದ ಎರಡು ಕೋತಿಗಳು ಇದೀಗ ಚೇತರಿಸಿಕೊಂಡಿವೆ ಎಂದು ಪಶು ವೈದ್ಯ ಡಾಕ್ಟರ್ ಮಹಾದೇಶ್ ತಿಳಿಸಿದರು. ಇನ್ನು ಮೂರು ಕೋತಿಗಳಿಗೆ ಪ್ರಜ್ಞೆದು ಅಲ್ಲಿಂದ ಓಡಿ ಹೋಗಿವೆ. ಕೋತಿಗಳಿಗೆ ವಿಷ ಹಾಕಿ ಬಳಿಕ ಗೋಣಿ ಚೀಲದಲ್ಲಿ ತಂದು ಇಲ್ಲಿ ಎಸೆಯಲಾಗಿದೆ. ಮೃತಪಟ್ಟ ಕೋತಿಗಳ ಮೃತ ದೇಹಗಳು ನೀಲಿ ಬಣ್ಣಕ್ಕೆ ತಿರುಗಿವೆ. ಮೃತಪಟ್ಟ ಕೋತಿಗಳು ಮರಣೋತ್ತರ…

Read More

ಮಂಗಳೂರು : ಇಂದು ಮಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಖಾಸಗಿ ಬಸ್ ಗಳ ಮಧ್ಯ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಬಸ್ ನಲ್ಲಿದ್ದ 14 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರು ನಗರ ವಲಯದ ಚೇಳ್ಯಾರು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಅತಿ ವೇಗ ಚಾಲನೆ ಹಾಗೂ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗುತ್ತಿದೆ. ಬಸ್ ನಲ್ಲಿದ್ದ ಕಾಲೇಜಿನ 7 ವಿದ್ಯಾರ್ಥಿಗಳು ಸೇರಿ 14 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ತಕ್ಷಣ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಕೆ.ರವಿಶಂಕರ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಂಪುಟ ಸಭೆ ನಡೆಯುತ್ತಿದ್ದು ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ಭೋಗ ನಂದೀಶ್ವರ ದೇಗುಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಬಿಜೆಪಿ ಅವರು ಹಗಲು ಕನಸು ಕಾಣುತ್ತಿದ್ದಾರೆ 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದರು. ನೀವು 5 ವರ್ಷ ಸಿಎಂ ಆಗಿ ಇರಲ್ಲ ಎಂದು ಪಕ್ಷಗಳು ಹೇಳಿಕೆ ನೀಡುತ್ತಿವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅವರೇನು ಹೈಕಮಾಂಡ? 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ನಮ್ಮ ಸರ್ಕಾರ ಬಂಡೆಯ ರೀತಿ 5…

Read More

ಬೆಂಗಳೂರು : ಸಾಮಾಜಿಕ ಜಾಲತಾಣಗಾಲಲ್ಲಿ ಸುಳ್ಳು ಸುದ್ದಿಗಳ ಹರಡುವಿಕೆ, ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಮಾರಾಕವಾಗಿದೆ. ಅಂಥವುಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ಕಾಯ್ದೆಯನ್ನು ರೂಪಿಸಲಿದೆ ಎಂದು ನಿನ್ನೆ ಬೆಂಗಳೂರಿನ ವಾರ್ತಾ ಇಲಾಖೆಯಲ್ಲಿ ನಡೆದ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಮಾಡಿ ಪ್ರಶ್ನೆ ಮಾಡುವವನಲ್ಲ. ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ, ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ?…

Read More

ಬೆಂಗಳೂರು : ಜಾತಿ ಗಣತಿ ಸಮೀಕ್ಷೆ ವೇಳೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿಗಳು ಕಳ್ಳಾಟ ನಡೆಸಿರುವುದು ಇದೀಗ ಬೆಳಕೆಗೆ ಬಂದಿದೆ. ಬೆಂಗಳೂರಿನಲ್ಲಿ ಕೆಲವು ಮನೆಗಳ ಮನೆಯ ಸದಸ್ಯರ ಮಾಹಿತಿ ಪಡೆಯದೆ ಹಾಗೂ ಖಾಲಿ ಇರುವ ಮನೆಗಳಿಗೂ ಕೂಡ ಬಿಬಿಎಂಪಿ ಸಿಬ್ಬಂದಿಗಳು ಕೇವಲ ಸ್ಟಿಕರ್ ಆಂಟಿಸಿ ಕಳ್ಳಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಹೌದು ಮನೆಯ ಸದಸ್ಯರ ಮಾಹಿತಿ ಪಡೆಯದೇ ಬಿಬಿಎಂಪಿ ಸಿಬ್ಬಂದಿಗಳು ಸ್ಟಿಕರ್ ಆಂಟಿಸಿ ಕಳ್ಳಾಟ ನಡೆಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ಎಡವಟ್ಟಿನ ವಿರುದ್ಧ ಸಾರ್ವಜನಿಕರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ನಮ್ಮನ್ನು ಮಾತಾಡಿಸಿಲ್ಲ ಬರಿ ಸ್ಟಿಕರ್ ಹಾಕಿ ಹೋಗಿದ್ದಾರೆ ಎಂದು ಜನರು ಆರೋಪಿಸಿದ್ದಾರೆ. ಅಲ್ಲದೇ ಕೆಲವು ಖಾಲಿ ಇರುವ ಮನೆಗಳಿಗೂ ಕೂಡ ಬಿಬಿಎಂಪಿ ಸಿಬ್ಬಂದಿಗಳು ಸ್ಟಿಕರ್ ಆಂಟಿಸಿದ್ದಾರೆ. ಮಾಹಿತಿ ಪಡೆಯದೆ ಹೀಗೆ ಮಾಡುವುದು ಸರಿಯಲ್ಲ ಅಂತ ಕಿಡಿ ಕಾರಿದ್ದಾರೆ. ಹಿತ ಸಾಮಾಜಿಕ ಜಾಲತಾಣದಲ್ಲೂ ಕೂಡ ಸ್ಟಿಕರ್ ಕಳ್ಳಾಟಕ್ಕೆ ಆಕ್ರೋಶ ವ್ಯಕ್ತವಾಗಿದೆ.

Read More

ಧಾರವಾಡ : ಇತ್ತೀಚಿಗೆ ಬೆಳಗಾವಿಯಲ್ಲಿ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ವೇದಿಕೆ ಮುಂಭಾಗ ನುಗ್ಗಿ ಗಲಾಟೆ ಮಾಡಿದ್ದರು. ಈ ವೇಳೆ ವೇದಿಕೆ ಮೇಲೆ ಇದಂತಹ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಎಸ್ ಪಿ ನಾರಾಯಣ ಭರಮನಿಯವರನ್ನು ವೇದಿಕೆಗೆ ಕರೆದು ಕೈ ಮೇಲೆತ್ತಿ ಬೆದರಿಸಿದ್ದರು. ಈ ಒಂದು ಪ್ರಕರಣದಿಂದ ಇದೀಗ ಧಾರವಾಡ ಜಿಲ್ಲೆ ಹೆಚ್ಚುವರಿ ಎಸ್ಪಿ ಆಗಿರುವ ಬರಮಣಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಹೌದು ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಈ ಒಂದು ಘಟನೆಯಿಂದ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಭರಮನಿ ಅವಮಾನಕ್ಕೆ ಒಳಗಾಗಿದ್ದರು. ಬೆಳಗಾವಿಯಲ್ಲಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡುವ ವೇಳೆ ಕಾರ್ಯಕ್ರಮಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ನುಗ್ಗಿದ್ದರು. ಈ ವೇಳೆ ಹೆಚ್ಚು ಸಿದ್ದರಾಮಯ್ಯ ಕೈ ಮೇಲೆತ್ತಿ ಹೊಡೆಯಲು ಹೋಗಿದ್ದ ಘಟನೆ ನಡೆದಿತ್ತು. ವೇದಿಕೆಗೆ ಕರೆದು ಭರಮನಿ ಮೇಲೆ…

Read More

ಬೆಂಗಳೂರು : ಸಪ್ಟೆಂಬರ್ ಬಳಿಕ ರಾಜ್ಯದಲ್ಲಿ ಬಹುದೊಡ್ಡ ಕ್ರಾಂತಿ ಆಗಲಿದ್ದು, ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದರು. ಆದರೆ ಇದೀಗ ಸಹಕಾರ ಸಚಿವ ಅಚ್ಚರಿಯ ಹೇಳಿಕೆ ನೀಡಿದದ್ದು, ನಮ್ಮ ಸರ್ಕಾರ ಬಂಡೆಯಂತೆ ಸುಭದ್ರವಾಗಿ ಐದು ವರ್ಷ ಪೂರೈಸಿ ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ. ಮತ್ತೆ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಕಾಂತಿ ಮುಂದಿನ ದಿನ ನೋಡೋಣ ಅಡಿಗೆ ಶಿವಕುಮಾರ್ ಸಿಎಂ ಅಂತ ಅವರ ಅಭಿಪ್ರಾಯ ಹೇಳಿದ್ದಾರೆ ಅದಕ್ಕೆ ಮಹತ್ವ ಯಾಕೆ ಕೊಡಬೇಕು ಅದು ಕಾರ್ಯಕರ್ತರ ಅಭಿಪ್ರಾಯ ಪಕ್ಷದ್ದು ಅಲ್ಲ. ಸರ್ಕಾರ ಬಂಡೆಯಂತೆ ಇರುತ್ತೆ ಅಂತ ಸಿಎಂ, ಡಿಸಿಎಂ ಹೇಳಿದ್ದಾರೆ. ಬದಲಾವಣೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸೀಮಿತವಲ್ಲ. ಎಲ್ಲಾ ಪಕ್ಷಗಳಲ್ಲೂ ಬದಲಾವಣೆ ಆಗುತ್ತಿರುತ್ತವೆ, ಏನೇನು ಬದಲಾವಣೆ ಆಗುತ್ತವೆ…

Read More

ಹಾಸನ : ಕಳೆದ 40 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಇದುವರೆಗೂ ಹೃದಯಾಘಾತಕ್ಕೆ ಒಟ್ಟು 25 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ನಿನ್ನೆ ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಹಾಸನದಲ್ಲಿ ಆಗುತ್ತಿರುವ ಸರಣಿ ಹೃದಯಾಘಾತ ಪ್ರಕರಣಗಳ ತನಿಖೆಗೆ ತಾಂತ್ರಿಕ ಸಮಿತಿ ರಚನೆ ಮಾಡಿದ ಸರ್ಕಾರ ತನಿಖೆಯ ಪ್ರಾಥಮಿಕ ವರದಿಯಲ್ಲಿ ಶಾಕಿಂಗ್ ಅಂಶ ಬಹಿರಂಗವಾಗಿದೆ. ಹೌದು ಹಾಸನದಲ್ಲಿ ಹೃದಯಾಘಾತ ಸರಣಿ ಸಾವು ಪ್ರಕರಣಗಳ ಬೆನ್ನಲ್ಲೇ, ರಾಜ್ಯ ಸರ್ಕಾರ ತಾಂತ್ರಿಕ ಸಮಿತಿ ರಚಿಸಿತ್ತು. ಇದೀಗ ಸಮಿತಿಯ ಪ್ರಾಥಮಿಕ ವರದಿಯಲ್ಲಿ ಶಾಕಿಂಗ್ ಅಂಶ ಬಯಲಾಗಿದ್ದು, ಅತಿಯಾದ ಬೊಜ್ಜು, ಮಾಂಸ ಸೇವನೆ ಹಾಗು ಮದ್ಯಪಾನದಿಂದ ಸಾವು ಸಂಭವಿಸಿದೆ. ರೆಡ್ ಮೀಟ್ ಸೇವನೆಯಿಂದ ಕೊಲೆಸ್ಟ್ರಾಲ್ ಹೊಂದಿರುವ ಸಾಧ್ಯತೆ ಇದ್ದು, ಅನ್ ಕಂಟ್ರೋಲ್ಡ್ ಕೊಲೆಸ್ಟ್ರಾಲ್ ಇಂದ ಹೃದಯಾಘಾತ ಆಗುವ ಸಾಧ್ಯತೆ ಇರುತ್ತೆ ಎನ್ನಲಾಗುತ್ತಿದೆ. ಒಂದು ವಾರದೊಳಗೆ ಸರ್ಕಾರಕ್ಕೆ ತಾಂತ್ರಿಕ ಸಮ್ಮತಿ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

Read More