Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ರಾಯಚೂರು : ಆರ್ ಎಸ್ ಎಸ್ ಪ್ರಮುಖರು, ಹಾಗು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಆರೋಪಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಅಮೀರ್ ಹುಸೇನ್ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. Faisal Kst ಎಂಬ ಫೇಸ್ಬುಕ್ ಖಾತೆಯಿಂದ ಅಮೀರ್ ಹುಸೇನ್ ಆರ್ ಎಸ್ ಎಸ್ ಪ್ರಮುಖರು ಹಾಗೂ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ. ಹನುಮಂತ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಕಲ್ಪ ಪೂರೈಸಿದರು. ನೆಕ್ಸ್ಟ್ ಸಿಎಂ ಆಗಲು ಸಂಕಲ್ಪ ತೊಟ್ಟಿದ್ದಾರೆ ಎಂದು ಮಠದ ಆಚಾರ್ಯ ಒಬ್ಬರು ಮಾಧ್ಯಮಗಳಿಗೆ ಹೇಳಿದ್ದಾರೆ. ಇದರ ನಡುವೆ ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ಹಾಗಾಗಿ ವೈಚಾರಿಕವಾಗಿ ಮತ್ತು ಪ್ರಗತಿಪರವಾದ ಸಿದ್ಧಾಂತ ಇಟ್ಟುಕೊಂಡವರಿಗೆ ನಾಯಕತ್ವ ವಹಿಸಿಕೊಳ್ಳಲು ಒಬ್ಬರು ಬೇಕು. ಸತೀಶ್ ಜಾರಕಿಹೊಳಿ ಅಂತಹ ನಾಯಕರು ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದು ಅಹಿಂದ ದಾಳ ಉರುಳಿಸಿದ್ದಾರೆ. ಇದರ ಮಧ್ಯ ಇದೀಗ ನವೆಂಬರ್ ನಲ್ಲಿ ಬಹುದೊಡ್ಡ ಕ್ರಾಂತಿ ಅಗಲಿದೆ ಎಂದು ಕೆಲವು ನಾಯಕರು ಈಗಾಗಲೇ ಭವಿಷ್ಯ ನುಡಿದಿದ್ದರು. ಅದರಂತೆ ನವೆಂಬರ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 15 ರಿಂದ 20 ರ ಒಳಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದೆ. ಹೌದು ನವೆಂಬರ್ 15…

Read More

ಕಲಬುರ್ಗಿ : ಬಿಜೆಪಿಯ ಮುಖಂಡೆ ದಿವ್ಯ ಹಾಗರಗಿ ಮನೆಯ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಲ್ಬುರ್ಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯ ಹಾಗರಗಿಯ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ದಿವ್ಯ ಹಾಗರಗಿ ಮನೆಯಲ್ಲಿ ಇಸ್ಪೀಟ್ ಆಡುತ್ತಿದ್ದರು ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ. ಹೌದು ಪಿಎಸ್ಐ ನೇಮಕಾತಿ ಹಗರಣದ ಆರೋಪಿಯಾಗಿರುವ ದಿವ್ಯಾ ಹಾಗರಗಿ ಮನೆಯಲ್ಲಿ ಇಂದು ಇಸ್ಪೀಟ್ ಆಡುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿವ್ಯ ಹಾಗರಗಿ ಮನೆಯ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ 6 ಜನ ಜೂಜು ಕೋರಕೋನ್ನು ಅರೆಸ್ಟ್ ಮಾಡಿದ್ದು ಅಲ್ಲದೆ 42,000 ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾತ್ರೋರಾತ್ರಿ ಮಹಿಳೆ ಮನೆಗೆ ನುಗ್ಗಿ ಐವರು ಆರೋಪಿಗಳು ದುಷ್ಕೃತ್ಯ ಎಸಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೋಂಡನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಈ ಒಂದು ಕೃತ್ಯ ಎಸಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ.ಕೆ ಬಾಬಾ ಹೇಳಿಕೆ ನೀಡಿದ್ದಾರೆ. ಪಿಣ್ಯ ಪೊಲೀಸರ ಇನ್ಫಾರ್ಮರ್ಸ್ ಎಂದು ಆರೋಪಿಗಳು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ಗಾಂಜಾ ಮಾರಾಟ, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ದಾಳಿ ಮಾಡಿದ್ದಾರೆ. ಮನೆಗೆ ನುಗ್ಗಿ ಸಂತ್ರಸ್ತ ಮಹಿಳೆಯ 14 ವರ್ಷದ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿದ್ದ ಮಕ್ಕಳು, ಸಂತ್ರಸ್ತೆಯ ಸ್ನೇಹಿತೆಯ ಮೇಲು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಪಕ್ಕದ ಮನೆಯ ರೂಮ್ಗೆ ಎಳೆದೋಯ್ದು ರೇಪ್ ಮಾಡಿದ್ದಾರೆ. ಇಬ್ಬರು ಪುರುಷರನ್ನು ಕಟ್ಟಿಹಾಕಿ ಹಲ್ಲೆ ನಡೆಸಿ ಐವರು ಕೃತ್ಯ ಎಸೆಗಿದ್ದಾರೆ. ಮಾಹಿತಿ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಸಂತ್ರಸ್ತ ಮಹಿಳೆಯ ಮೊಬೈಲ್ ಮತ್ತು ಐವತ್ತು ಸಾವಿರ…

Read More

ತುಮಕೂರು : ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲಿ ಮುಂದಿನ ಹಲವು ದಿನಗಳ ಕಾಲ ಭಾರಿ ಮಳ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಇದೀಗ ತುಮಕೂರು ಜಿಲ್ಲೆಯ ವಿವಿಧೆಡೆ ಮಂಗಳವಾರ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇನ್ನೊಂದೆಡೆ, ಹಳ್ಳ-ಕೊಳ್ಳಗಳಲ್ಲಿ ಯಥೇಚ್ಛವಾಗಿ ನೀರು ಹರಿದು ಹೋಗುತ್ತಿರುವುದರಿಂದ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗುಬ್ಬಿ, ತಿಪಟೂರು, ತುರುವೇಕೆರೆ ಸೇರಿದಂತೆ ಇತರೆ ಭಾಗದಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಕೆರೆಗಳೆಲ್ಲ ಭರ್ತಿಯಾಗಿದ್ದು, ನೀರು ತುಂಬಿ ಹೊರ ಹೊರಹೋಗುತ್ತಿರುವ ದೃಶ್ಯ ಸರ್ವೇಸಾಮಾನ್ಯವಾಗಿದೆ. ಇನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಯರೇಕಟ್ಟೆ ಗ್ರಾಮದ ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ವೆಂಕಟೇಶ್ (43), ಇವರ ಮಗಳು ಶ್ರಾವ್ಯ (12) ಮತ್ತು ಶ್ರಾವ್ಯಳ ಸ್ನೇಹಿತೆ ಪುಣ್ಯ (11) ಎಂದು ಗುರುತಿಸಲಾಗಿದೆ. ಶ್ರಾವ್ಯ ಹಾಗೂ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಇಬ್ಬರನ್ನು ಪಾರು ಮಾಡಲು ಹೋದ ವೆಂಕಟೇಶ್ ಕೂಡ ನೀರಿನಲ್ಲಿ…

Read More

ಕೋಲಾರ : ದೀಪಾವಳಿ ವೇಳೆ ಪಟಾಕಿ ಸಿಡಿಸುವಾಗ ಅತ್ಯಂತ ಜಾಗರೂಕಾಗಿ ಇರಬೇಕು. ಮಕ್ಕಳ ಜೊತೆಗೆ ಪೋಷಕರು ಸಹ ಎಚ್ಚರದಿಂದಿರಬೇಕು. ಬೆಂಗಳೂರಿನಲ್ಲಿ ಇದುವರೆಗೂ ಪಟಾಕಿ ಸಿಡಿತ ಪ್ರಕರಣ ಸಂಖ್ಯೆ 150 ದಾಟಿದೆ. ಅಲ್ಲದೆ 8 ಜನರು ಶಾಶ್ವತವಾಗಿ ಕಣ್ಣು ಸಹ ಕಳೆದುಕೊಂಡಿದ್ದಾರೆ. ಇದೀಗ ಕೋಲಾರ ಜಿಲ್ಲೆಯಲ್ಲಿ ಪಟಾಕಿ ಹಿಡಿಸುವಾಗ 10 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ದೀಪಾವಳಿ ಸಂಭ್ರಮಾಚರಣೆಯಲ್ಲಿ ಪಟಾಕಿ ಸಿಡಿಸುವಾಗ 10 ಜನರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. 10 ಗಯಾಳುಗಳ ಪೈಕಿ ಎಂಟು ಮಕ್ಕಳ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಚಿಕಿತ್ಸೆ ಪಡೆದು ಇದೀಗ ಮನೆಗಳಿಗೆ ತೆರಳಿದ್ದಾರೆ ಎಂದು ಕೋಲಾರ ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸೆ ಜಗದೀಶ್ ಈ ಕುರಿತು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯದ 12 ನದಿಗಳ ನೀರು ಕುಡಿಯುವುದಕ್ಕೆ ಅನ್ಸೆಫ್ ಆಗಿದ್ದು, ಜೀವನದಿ ಕಾವೇರಿ ಸೇರಿದಂತೆ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಅಂತ ವರದಿ ಬಹಿರಂಗವಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ವರದಿ 12 ನದಿಗಳ ನೀರು ಕುಡಿಯೋದಕ್ಕೆ ಯೋಗ್ಯವಲ್ಲ ಎಂದು ವರದಿ ಬಹಿರಂಗಪಡಿಸಿದೆ. ಹೌದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 12 ನದಿಗಳ ನೀರನ್ನು 32 ಕಡೆ ಪರಿಶೀಲನೆ ಮಾಡಿತ್ತು. ಪರೀಕ್ಷೆಗೆ ಒಳಪಟ್ಟ ಒಂದು ನದಿಗು ಕೂಡ A ಗ್ರೇಡ್ ಸಿಕ್ಕಿಲ್ಲ. ಕಳೆದ ಸೆಪ್ಟೆಂಬರ್ ನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಈ ಒಂದು ಆಘಾತಕಾರಿ ಅಂಶ ಇದೀಗ ಬಯಲಾಗಿದೆ. 12 ನದಿಗಳ ನೀರಲ್ಲಿ ಆಮ್ಲಜನಕದ ಕೊರತೆ ಇರುವುದು ಪತ್ತೆಯಾಗಿದೆ. ಜೀವನದಿ ಕಾವೇರಿ ಸೇರಿದಂತೆ 12 ನದಿಗಳ ನೀರು ಕಲುಷಿತವಾಗಿದ್ದು ಕುಡಿಯುವುದಕ್ಕೆ ಯೋಗ್ಯವಲ್ಲ ಅಂತ ವರದಿಯಲ್ಲಿ ಬಹಿರಂಗಗೊಂಡಿದೆ.

Read More

ಬೆಳಗಾವಿ : ಅಥಣಿ ತಾಲೂಕಿನ ಜನರು ರಮೇಶ್​ ಜಾರಕಿಹೊಳಿ ಅವರನ್ನು ಬಹುದಿನಗಳಿಂದ ತಿರಸ್ಕಾರ ಮಾಡಿದ್ದಾರೆ. ಅವರಿಗೆ ಅದರ ಅರಿವು ಇನ್ನೂ ಆಗಿಲ್ಲ. ಅವರಿಗೆ ಮಾನ, ಮರ್ಯಾದೆ ಎನ್ನುವುದು ಗೊತ್ತಿದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು. ಎಂದು ಶಾಸಕ ಲಕ್ಷ್ಮಣ ಸವದಿ ಆಕ್ರೋಶ ಹೊರಹಾಕಿದರು. ತಮ್ಮ ಕುರಿತು ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನಲ್ಲೂ ಸಾಕಷ್ಟು ಶಬ್ಧಕೋಶಗಳಿವೆ, ನಿಮ್ಮ ರೀತಿ ನಾನೂ ಮಾತನಾಡಿದರೆ ಜನರು ನನಗೂ ಸಹ ಮೆಂಟಲ್ ಎಂದು ಕರೆಯುತ್ತಾರೆ. ಹಾಗೆ ಆಗಬಾರದು ಎಂದು ಸೂಕ್ಷ್ಮತೆಯಿಂದಲೇ ಕೆಲವು ಉತ್ತರ ನೀಡುತ್ತಿದ್ದೇನೆ. ನಿಮಗೆ ಮಾನ, ಮರ್ಯಾದೆ ಎನ್ನುವುದು ಗೊತ್ತಿದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು ಎಂದು ಕಿಡಿ ಕಾರಿದ್ದಾರೆ. ಜಾಣರು, ಬುದ್ಧಿಜೀವಿಗಳು ಇರುವವರಿಗೆ ಈ ಎಲ್ಲ ಸೂಕ್ಷ್ಮತೆಗಳು ಅರ್ಥವಾಗುತ್ತವೆ. ಆ ಸೂಕ್ಷ್ಮತೆ ಇಲ್ಲದ ಜನರಿಗೆ ಇವುಗಳ ಅರಿವು ಇರುವುದಿಲ್ಲ. ದಡ್ಡ ಅವನಿಗೆ ತನ್ನ ಹಾಗೂ ಇನ್ನೊಬ್ಬರ ಗೌರವದ ಅರ್ಥವೇ ಗೊತ್ತಿಲ್ಲ. ಮನುಷ್ಯನಿಗೆ ಜೀವನದಲ್ಲಿ ಸಂಸ್ಕಾರ ಗೊತ್ತಿರಬೇಕು. ಅದು ಇಲ್ಲವಾದಾಗ ಈ ರೀತಿಯ ಮಾತುಗಳು…

Read More

ರಾಯಚೂರು : ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಪತ್ನಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಡಿಕೆ ಶಿವಕುಮಾರ್ ಅವರಿಗೆ ತುಲಾಭಾರ ಕೂಡ ನಡೆಸಲಾಯಿತು. ಮಠದ ಪೀಠಾಧಿಪತಿಗಳಾದ ಶ್ರೀ ಸುಭುಧೇಂದ್ರ ತೀರ್ಥರು ಡಿಸಿಎಂ ಡಿಕೆ ಶಿವಕುಮಾರ್ ದಂಪತಿಗಳಿಗೆ ಆಶೀರ್ವದಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಗುರುತಿಸಿಲ್ವಾ ಅನ್ನುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ, ಡಿಸಿಎಂ ಆಗಿದ್ದೇನೆ ದೊಡ್ಡ ದೊಡ್ಡ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಈ ರಾಜ್ಯದಲ್ಲಿ ಇತಿಹಾಸ ಬರೆಯುತ್ತಿದ್ದೇನೆ ನೀರಾವರಿ ಇಲಾಖೆಯಲ್ಲಿ ಇತಿಹಾಸ ಬರೆಯುತ್ತಿದ್ದೇನೆ ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ರೈತರಿಗೆ ಹಣ ಕೊಡಬೇಕು ಹಣ ನೀಡುವ ತೀರ್ಮಾನ ಸಣ್ಣದಲ್ಲ ಅದೊಂದು ಐತಿಹಾಸಿಕ ನಿರ್ಧಾರವಾಗಿದೆ. ಮಹದಾಯಿ ಮೇಕೆದಾಟು ಹೋರಾಟ ಮಾಡುತ್ತಿದ್ದಾನೆ ಬೆಂಗಳೂರಿನಲ್ಲಿ ಜಿಬಿಎ ಮಾಡಿ 1.5 ಲಕ್ಷ ಕೋಟಿ ಕೆಲಸ ಮಾಡಲು ವ್ಯವಸ್ಥೆ ಮಾಡಿದ್ದೇನೆ ಇದು ಸುಲಭವಾದ ಕೆಲಸವಲ್ಲ ಇದರಲ್ಲಿ ನಿಮ್ಮ ಸಮಸ್ಯೆ ಏನಿದೆ ಎಂದು ಡಿಸಿಎಂ…

Read More

ಹಾಸನ : ಐತಿಹಾಸಿಕ ಹಾಸನಾಂಬೆ ದರ್ಶನಕ್ಕೆ ಇದೀಗ ಸಾರ್ವಜನಿಕ ದರ್ಶನಕ್ಕೆ ಅಧಿಕೃತವಾಗಿ ಇತರೆ ಬೀಳಲಿದೆ ಈಗಾಗಲೇ ಗೇಟ್ಗಳನ್ನು ಎಲ್ಲಾ ಕ್ಲೋಸ್ ಮಾಡಲಾಗಿದ್ದು ಕೊನೆಯ ಹಂತದಲ್ಲಿ ಓಡೋಡಿ ಬಂದು ಭಕ್ತರು ದರ್ಶನ ಪಡೆದುಕೊಂಡರು. ಕಳೆದ 13 ದಿನಗಳಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು ನಾಳೆ ಮಧ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ಬಂದ ಆಗಲಿದೆ. ಕೊನೆ ದಿನವಾದ ಇಂದು ಲಕ್ಷಾಂತರ ಭಕ್ತರು ಹಾಸನಾಂಬೆ ದೇವಿಯ ದರ್ಶನ ಪಡೆದುಕೊಂಡರು. ಕಳೆದ 13 ದಿನಗಳಿಂದ ಇದುವರೆಗೂ 26 ಲಕ್ಷ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ ಈ ವರ್ಷ ದಾಖಲೆ 22 ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ. ಪ್ರತಿ ವರ್ಷ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ಕೊಡುವ ಈ ಒಂದು ಹಾಸನಾಂಬೆ ದೇವಿಯ ಪ್ರಾಮುಖ್ಯತೆ ಏನೆಂದರೆ, ನಾಳೆ ದೇಗುಲ ಬಂದ್ ಮಾಡಿದರೆ ಮುಂದಿನ ವರ್ಷ ಬಾಗಿಲು ತೆಗೆಯುವವರೆಗು ಹಚ್ಚಿದ ದೀಪ ಆರದೇ ಇರುತ್ತದೆ. ಅಲ್ಲದೆ ಹೂಗಳು ಸಹ ಮುಂದಿನ ವರ್ಷ ಬಾಗಿಲು ತೆಗೆಯುವವರೆಗೂ…

Read More