Author: kannadanewsnow05

ಬೆಂಗಳೂರು : ಕಳೆದ 40 ದಿನಗಳಲ್ಲಿ ಹಾಸನ ಜಿಲ್ಲೆಯ ಒಂದರಲ್ಲಿ ಸುಮಾರು 25ಕ್ಕೂ ಹೆಚ್ಚು ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ ಅಲ್ಲದೆ ವಿವಿಧ ಜಿಲ್ಲೆಗಳಲ್ಲಿ ಕೂಡ ಹಲವರು ಹಾರ್ಟ್ ಅಟ್ಯಾಕ್ಕೆ ಬಲಿಯಾಗಿದ್ದಾರೆ. ಆದರೆ ಕರಿಯಾಗತಕ್ಕೆ ಕೋವಿಡ್ ಲಸಿಕೆಯೇ ಕಾರಣ ಎಂದು ಹೇಳಲಾಗುತ್ತಿದ್ದು ಇದೀಗ ಐಸಿಎಂಆರ್ ಹಾಗೂ ಏಮ್ಸ್ ಸಂಶೋಧನಾ ಅಧ್ಯಯನದಲ್ಲಿ ಕೋವಿಡ್ ಲಸಿಕೆಗೂ ಹೃದಯಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವರದಿ ಬಂದಿದೆ. ಹೌದು ಕೋವಿಡ್ ಲಸಿಕೆಗೂ ಹೃದಯಘಾತಕ್ಕೂ ಯಾವುದೇ ಸಂಬಂಧವಿಲ್ಲ. ಕೋವಿಡ್ ವ್ಯಾಕ್ಸಿನಿಂದ ಹಾರ್ಟ್ ಅಟ್ಯಾಕ್ ಆಗುವುದಿಲ್ಲ ICMR, AIIMS ಕೋವಿಡ್ ಲಸಿಕೆಯಿಂದ ಹೃದಯಘಾತ ಅನ್ನುವುದು ಸುಳ್ಳು. ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿಲ್ಲ ಎಂಬುದಾಗಿ ತಿಳಿದುಬಂದಿದೆ. ಮೊದಲೇ ಆರೋಗ್ಯದಲ್ಲಿ ತೊಂದರೆ ಇದ್ದರೆ ಮಾತ್ರ ಹೃದಯಘಾತ ಸಂಭವಿಸುತ್ತದೆ. ಕೋರೊನಾ ಲಸಿಕೆಯಿಂದ ಹೃದಯಾಘಾತ ಆಗುವುದಿಲ್ಲ ಎಂದು ರಾಷ್ಟ್ರೀಯ ಆರೋಗ್ಯ ಇಲಾಖೆಯಿಂದ ಸಂಶೋಧನಾ ವರದಿಯಲ್ಲಿ ತಿಳಿದು ಬಂದಿದೆ.

Read More

ರಾಮನಗರ : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಎಂಬುವವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರೋದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆಯನ್ನ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ ಕ್ಷಮೆ ಕೇಳದೇ ಉದ್ಧಟತನ ತೋರಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಕನಕಪುರದ 2ನೇ ಅಪರ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ನಾಗಾರ್ಜುನ ಗೌಡ ಪರ ವಕೀಲ ವಿನೋದ್ ಎಂಬುವವರು ಕೋರ್ಟ್ನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಪ್ರಕರಣವನ್ನ ಜುಲೈ 5ಕ್ಕೆ ವಿಚಾರಣೆಗೆ ಮುಂದೂಡಿ ಕೋರ್ಟ್ ಆದೇಶಿಸಿದೆ.

Read More

ಚಾಮರಾಜನಗರ : ಇತ್ತೀಚಿಗೆ ಅಷ್ಟೇ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳಿಗೆ ವಿಷ ಉಣಿಸಿ ಕೊಂದಿರುವ ಪ್ರಕರಣ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದ್ದು, ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಸಮೀಪ ಕೋತಿಗಳ ಮಾರಣಹೋಮ ನಡೆಸಿದ ಘಟನೆ ನಡೆದಿದೆ. ಹೌದು ಕಂದೇಗಾಲ – ಕೊಡಸೋಗೆ ರಸ್ತೆಯಲ್ಲಿ ಎರಡು ಚೀಲಗಳಲ್ಲಿ ಕೋತಿಗಳ ಮೃತದೇಹಗಳನ್ನು ಕಟ್ಟಿಟ್ಟು ಬಿಸಾಡಿ ಹೋಗಿದ್ದಾರೆ‌. ದಾರಿಹೋಕರು ಚೀಲವನ್ನು ಬಿಚ್ಚಿ ನೋಡಿದ ವೇಳೆ 20ಕ್ಕೂ ಅಧಿಕ ಕೋತಿಗಳ ಕಳೇಬರಗಳು ಪತ್ತೆಯಾಗಿವೆ.ಮೇಲ್ನೋಟಕ್ಕೆ ವಿಷಪ್ರಾಶನ, ಇಲ್ಲವೇ ಹೊಡೆದು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳ ಮೃತದೇಹಗಳು ಸಿಕ್ಕ ಪ್ರದೇಶವು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತದೆ. ಮಾಹಿತಿ ತಿಳಿದು ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವರದಿ ಬಂದ ನಂತರವಷ್ಟೇ ಕೋತಿಗಳ ಸಾವಿಗೆ ಏನು ಕಾರಣ ಎನ್ನುವುದು ತಿಳಿದುಬರಲಿದೆ.

Read More

ಬೆಂಗಳೂರು : ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಮುಖ್ಯಮಂತ್ರಿ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದು, ಬೃಹತ್ ಕೈಗಾರಿಕೆ ಸಚಿವ MB ಪಾಟೀಲರಿಗೆ ಮುಖ್ಯಮಂತ್ರಿ ಆಗೋ ಯೋಗ ಇದೆ ಎಂದು ಹೇಳಿಕೆ ಭಾರಿ ಸುದ್ದಿಯಾಗಿದೆ. ಈ ಕುರಿತು ವಿಜಯಪುರ‌ ಜಿಲ್ಲೆಯ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂದರ್ಭದಲ್ಲಿ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದರು. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬೆನ್ನಲ್ಲೇ ಈ ಹೇಳಿಕೆ ವೈರಲ್‌ ಆಗಿದೆ. ಎಂಬಿ ಪಾಟೀಲ್‌ ಅವರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ. ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ. ಈಗಾಗಲೇ ಸಿಎಂ ರೇಸ್‌ನಲ್ಲಿ ಡಿಕೆ ಶಿವಕುಮಾರ್‌, ಜಿ.ಪರಮೇಶ್ವರ್‌, ಎಂಬಿ ಪಾಟೀಲ್‌, ಸತೀಶ್‌ ಜಾರಕಿಹೊಳಿ ಸೇರಿದಂತೆ ಹಲವು ನಾಯಕರಿದ್ದು, ಈ ಪೈಕಿ MB ಪಾಟೀಲಲ್ ಗೆ ಮುಖ್ಯಮಂತ್ರಿ ಪಟ್ಟ…

Read More

ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಅನೇಕರು ಸಾವನ್ನಪ್ಪಿದ್ದಾರೆ. ಇದೀಗ ಎದೆ ನೋವು ಎಂದು ಆಸ್ಪತ್ರೆ ಬಂದವನಿಗೆ ಹೃದಯಸ್ತಂಭನವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಆಸ್ಪತ್ರೆಯ ಬೆಡ್ ಮೇಲೆ ಹೃದಯಸ್ತಂಭನದಿಂದ ಬ್ರೈನ್ ಡೆಡ್ ಆಗಿ ವ್ಯಕ್ತಿ ಸಾವನಪ್ಪಿದ್ದಾರೆ. ಮೃತರನ್ನು ಹೊಸಕೋಟೆಯ ಕೋನಪ್ಪ (52) ಎಂದು ತಿಳಿದುಬಂದಿದೆ. ಬ್ರೈನ್ ಡೆಡ್ ಆಗಿ ಸಾವನ್ನಪ್ಪಿರುವ ವ್ಯಕ್ತಿಯನ್ನು ತಿಳಿದು ಬಂದಿದೆ ಆಸ್ಪತ್ರೆಗೆ ಕೊನಪ್ಪ ಎದೆ ನೋವು ಎಂದು ಬಂದಿದ್ದರು ಚಿಕಿತ್ಸೆಗಂದು ಅದೇನೋ ಅಂತ ನಡೆದುಕೊಂಡೆ ಕೊನಪ್ಪ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ಈ ವೇಳೆ ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಂತೆ, ಅವರಿಗೆ ಹೃದಯ ಸ್ತಂಭನವಾಗಿದೆ. ತಕ್ಷಣ ಚಿಕಿತ್ಸೆಗೆಂದು ಬೇರೆ ಆಸ್ಪತ್ರೆಗೆ ರವಾನಿಸುವಾಗ ಬ್ರೈನ್ ಆಗಿ ಕೊನಪ್ಪ ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದ್ದು ದುಬಾರಿ ದುನಿಯಾದಲ್ಲಿ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಸದ್ಯದಲ್ಲೇ ಆಟೋ ಮೀಟರ್ ದರ ಏರಿಕೆ ಆಗೋದು ಫಿಕ್ಸ್ ಎಂದು ತಿಳಿದು ಬಂದಿದು, ಆಟೋ ದರ ಏರಿಕೆ ಮಾಡಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೇ ಸಿಎಂ ಮತ್ತು ಸಾರಿಗೆ ಸಚಿವರ ಒಪ್ಪಿಗೆಗೆ ಆರ್‌ಟಿಎ ಕಾಯುತ್ತಿದೆ. ಆದೇಶಕ್ಕಾಗಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಾಯುತ್ತಿದೆ ಎಂದು ತಿಳಿದುಬಂದಿದೆ. ಹೌದು ಆಟೋ ಮೀಟರ್ ಮಿನಿಮಮ್ ದರ 36 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ 36. ಮಿನಿಮಮ್ ಚಾರ್ಜ್ ಮೂವತ್ತರಿಂದ ಮೂವತ್ತಾರು ರೂಪಾಯಿ ಏರಿಕೆ ಫಿಕ್ಸ್ ಎಂದು ತಿಳಿದು ಬಂದಿದೆ 18 ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ 15 ರೂಪಾಯಿ ಇದ್ದ ಚಾರ್ಜ್ 18 ರೂಪಾಯಿಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಸಲು ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಆಟೋ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರಿಗೆ ಹಣದಾಸೆ ತೋರಿಸಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಸೈಬರ್ ವಂಚನೆ ಜಾಲಕ್ಕೆ ಪೂರೈಸುತ್ತಿದ್ದ ನಾಲ್ವರು ಕಿಡಿಗೇಡಿಗಳನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧುತ ಆರೋಪಿಗಳಿಂದ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಛತ್ರದ ಹೊಸಹಳ್ಳಿ ಗ್ರಾಮದ ಎನ್‌.ಲಕ್ಷ್ಮೀಶ್ ಅಲಿಯಾಸ್ ರಾಜೇಶ್‌, ಕನಕಪುರ ರಸ್ತೆಯ ತಾತಗುಣಿಯ ಅಗರದ ನಿವಾಸಿ ಪ್ರಕಾಶ್, ಜೆ.ಪಿ.ನಗರ 7ನೇ ಹಂತದ ಸಂತೃಪ್ತಿ ನಗರದ ಸುನೀಲ್ ಕುಮಾರ್‌ ಹಾಗೂ ರಾಮನಗರದ ಅರ್ಚಕರಹಳ್ಳಿಯ ಪುಟ್ಟಸ್ವಾಮಯ್ಯ ಎಂದು ತಿಳಿದುಬಂದಿದೆ.ಆರೋಪಿಗಳಿಂದ 1 ಲ್ಯಾಪ್‌ಟಾಪ್, 4 ವಿವಿಧ ಕಂಪನಿಯ ಮೊಬೈಲ್‌ಗಳು ಹಾಗೂ ವಿವಿಧ ಬ್ಯಾಂಕ್‌ನ ಚೆಕ್ ಪುಸ್ತಕಗಳನ್ನು ಜಪ್ತಿ ಮಾಡಲಾಗಿದೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೇಗೂರಿನ ಅಪಾರ್ಟ್​​ಮೆಂಟ್​​ ಒಂದರಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವಾಗ ಅಸ್ಥಿಪಂಜರ ಪತ್ತೆಯಾಗಿದೆ. ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್‌ಮೆಂಟ್ಸ್‌ನ ಬಳಿ ಮೂಳೆಗಳು ಮತ್ತು ತಲೆಬುರುಡೆ ಸಿಕ್ಕಿವೆ. ಇದೀಗ ಈ ಒಂದು ಅಸ್ತಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಪುರುಷನ ಅಸ್ತಿ ಪಂಜರವಾಗಿದೆ ಎಂದು ತಿಳಿದುಬಂದಿದೆ. ಹೌದು ಜೂನ್ 20 ರಂದು ಕಾರ್ಮಿಕರು ಶೌಚಗುಂಡಿ ಸ್ವಚ್ಛ ಮಾಡುವಾಗ ಮೂಳೆಗಳು ಮತ್ತು ತಲೆಬುರುಡೆ ಸಿಕ್ಕಿವೆ. ಇದು ಮನುಷ್ಯನ ಅಸ್ಥಿಪಂಜರವೋ ಅಥವಾ ಪ್ರಾಣಿಯದೋ ಎಂದು ತಿಳಿಯಲು ಪೊಲೀಸರು ಎಫ್‌ಎಸ್‌ಎಲ್ ಲ್ಯಾಬ್‌ಗೆ ಕಳುಹಿಸಿದ್ದರು. ಇದೀಗ ಇಂಗು ಗುಂಡಿಯಲ್ಲಿ ಪತ್ತೆಯಾಗಿರುವುದು ಪುರುಷನ ಅಸ್ತಿಪಂಜರ ಎಂದು ತಿಳಿದುಬಂದಿದೆ. ಸುಮಾರು 153 ಸೆಂಟಿಮೀಟರ್ ಉದ್ದವುಳ್ಳ 30 ರಿಂದ 35 ವರ್ಷದ ವ್ಯಕ್ತಿ ಅಸ್ತಿ ಪಂಜರ ಪತ್ತೆಯಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಕೊಲೆ ಶಂಕೆ ಇಲ್ಲ ಎಂದು ವರದಿ ಬಂದಿದೆ. ಅಷ್ಟೇ ಅಲ್ಲದೇ ಪಂಜರದ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ವ್ಯಕ್ತಿ ಆಯತಪ್ಪಿ ಇಂಗು ಗುಂಡಿಗೆ ಬಿದ್ದು…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಘಾತದಿಂದ ಸಾವನ್ನುಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಇಂದು ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಹಾಸನದಲ್ಲಿ ಇಬ್ಬರು, ಬಳಿಕ ಶಿವಮೊಗ್ಗ, ದಕ್ಷಿಣ ಕನ್ನಡ, ತುಮಕೂರು, ಹಾಗು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಆರು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮದುವೆಯಾದ ಎರಡೇ ತಿಂಗಳಿಗೆ ಯುವಕ ಸಾವು! ಹಾಸನ ಜಿಲ್ಲೆಯ ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು.ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಬೇರೆ ಆಸ್ಪತ್ರೆಗೆ ಹೋಗುವಾಗ ಮೃತಪಟ್ಟಿದ್ದಾರೆ. ಸಂಜಯ್ ಕಳೆದ ಎರಡು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿತ್ತು ಇದೀಗ ಇವರ ಸಾವಿನಿಂದ ಸಂಜೆ ಕುಟುಂಬಸ್ಥರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಒಂದುವರೆ ತಿಂಗಳ ಬಾಣಂತಿ ಬಲಿ! ಇನ್ನು ಇದೆ ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಒಂದೂವರೆ ತಿಂಗಳ ಬಾಣಂತಿ ಸಾವನನಪ್ಪಿದ್ದಾರೆ. ಬಾಣಂತನಕ್ಕೆ ಆಯನೂರು…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಆಗುತ್ತಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾ. ಈ ಪ್ರಕರಣ ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಹಾಸನದಲ್ಲಿ ಕಳೆದ 40 ದಿನಗಳಲ್ಲಿ ಇವತ್ತಿನವರೆಗೂ ಒಟ್ಟು 25 ಜನರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಗಾಗಿ ಇದಕ್ಕೆ ನಿಖರ ಕಾರಣ ಪತ್ತೆ ಹಚ್ಚಲು ಈಗಾಗಲೇ ತಜ್ಞರ ಸಮಿತಿ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಸಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ…

Read More