Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ನಮ್ಮ ತಂದೆ ರಾಜಕೀಯದ ಕೊನೆಯ ಹಂತದಲ್ಲಿ ಇದ್ದಾರೆ. ಹಾಗಾಗಿ ಒಳ್ಳೆಯ ಮಾರ್ಗದರ್ಶನ ಹಾಗೂ ರಾಜಕೀಯ ಸೈದಾಂತಿಕದಿಂದ ಸಚಿವ ಸತೀಶ್ ಜಾರಕಿಹೊಳಿ ನಮ್ಮನ್ನೆಲ್ಲಾ ಮುನ್ನಡೆಸಲಿದ್ದಾರೆ ಎಂದು ಪರೋಕ್ಷವಾಗಿ ಮುಂದಿನ ಸಿಎಂ ಸಚಿವ ಸತೀಶ್ ಜಾರಕಿಹೊಳಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಇನ್ನೊಂದು ಕಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದರ ಮಧ್ಯ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಹಿಂದು ನಾಯಕತ್ವದ ದಾಳ ಉರುಳಿಸಿದ್ದಾರೆ ಈ ಮೂಲಕ ನವೆಂಬರ್ ನಲ್ಲಿ ಭಾರಿ ದೊಡ್ಡ ಕ್ರಾಂತಿ ಅಗಲಿದೆ ಎನ್ನುವುದರ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ. ಇದರ ಮಧ್ಯ ಅಹಿಂದ ನಾಯಕತ್ವದ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಸಚಿವ ಪ್ರಿಯಾಂಕ ಖರ್ಗೆ ಅಭಿಮಾನಿಗಳು ಸಿಎಂ ಸಿದ್ದರಾಮಯ್ಯ ಬಳಿಕ ಮುಂದಿನ ಮುಖ್ಯಮಂತ್ರಿ ಪ್ರಿಯಾಂಕ ಖರ್ಗೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಂತರ ಅಹಿಂದ ನಾಯಕರು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಈ ಒಂದು ಅತ್ಯಾಚಾರ ಘಟನೆ ನಡೆದಿತ್ತು. ಸದ್ಯ ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಇನ್ನೊಬ್ಬನ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

Read More

ಬೆಳಗಾವಿ : ನಮ್ಮ ತಂದೆ ಸದ್ಯ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಒಂದು ಹೇಳಿಕೆ ನೀಡಿದ್ದು, ಪ್ರಗತಿಪರ ಸಿದ್ಧಾಂತ ಇರುವ ನಾಯಕರು ರಾಜ್ಯಕ್ಕೆ ಬೇಕು. ಮಾರ್ಗದರ್ಶನ ಮಾಡಿ ನೇತೃತ್ವ ವಹಿಸಲು ಬೇಕು ಸತೀಶ್ ಜಾರಕಿಹೊಳಿ, ಆ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಪರೋಕ್ಷವಾಗಿ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಪಲಗುದಿ ಗ್ರಾಮದಲ್ಲಿ ಕನಕದಾಸರಮೂರ್ತಿ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ ನಮ್ಮ ಹೈಕಮಾಂಡ್ ಸಹ ಸಿಎಂ ಬದಲಾವಣೆ ಇಲ್ಲ ಅಂತ ಹೇಳಿದೆ ಈ ಬಗ್ಗೆ ನಾನು ಸಹ ಬಹಳ ಬಾರಿ ಉತ್ತರ ಕೊಟ್ಟಿದ್ದೇನೆ. ಪ್ರತಿ ಚುನಾವಣೆ ಬಂದಾಗಲೂ ಬಿಜೆಪಿಯವರು ಇದನ್ನೇ ಹೇಳುತ್ತಾರೆ ಆದರೆ ನಮ್ಮ ಪಕ್ಷದ ಪರಿಸ್ಥಿತಿ ನಮಗೆ ಗೊತ್ತಿದೆ. ನಮ್ಮ ತಂದೆ ಸದ್ಯ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ…

Read More

ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಬೆನ್ನೆಲುಬು ರಾಜ್ಯ ಸರ್ಕಾರ ಆರ್ ಎಸ್ ಎಸ್ ಸೇರಿದಂತೆ ಯಾವುದೇ ಸಂಘಟನೆ ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಅನುಮತಿ ಪಡೆಯುವುದು ಕಡ್ಡಾಯ ಎಂದು ಇತ್ತೀಚಿಗೆ ಆದೇಶ ಹೊರಡಿಸಿತು ಇದೀಗ ಆರ್ ಎಸ್ ಎಸ್ ಪುರದ ಮತ್ತೆ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ ಆರ್ ಎಸ್ ಎಸ್ ರಿಜಿಸ್ಟರ್ ಆಗಿರುವ ದಾಖಲೆ ಇದ್ದರೆ ನನ್ನ ಮುಖದ ಮೇಲೆ ಎಸೆದು ಬಿಡಿ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ RSS ಅಧಿಕೃತವಾಗಿ ನೋಂದಣಿ ಮಾಡಿಕೊಂಡಿರುವ ಬಗ್ಗೆ ದಾಖಲೆ ತೋರಿಸಲಿ. ಅನಧಿಕೃತ ಸಂಘಟನೆಯಾಗಿರುವ ಆರ್​ಎಸ್​ಎಸ್​ಗೆ ಎಲ್ಲಿಂದ ಹಣ ಬರುತ್ತಿದೆ? ಬಟ್ಟೆಗಳ ಖರೀದಿ ಹಾಗೂ ಕಟ್ಟಡಗಳ ನಿರ್ಮಾಣಕ್ಕೆ ಯಾರು ಹಣ ಕೊಡುತ್ತಿದ್ಧಾರೆ ಎಂಬುದನ್ನು ಬಹಿರಂಗಪಡಿಸಿ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ಧಾರೆ. ಆರ್​ಎಸ್​ಎಸ್​​ ಸಂಘಟನೆ ನೋಂದಣಿ ಮಾಡಿಸಿಕೊಂಡಿರುವ ಕುರಿತು ದಾಖಲೆ ನೀಡಿದರೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಒಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು ಮತ್ತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು, ಇನ್ನೂ ಗಾಯಗೊಂಡ ಮತ್ತಿಬ್ಬರನ್ನು ಹೊಸಕೋಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆಯಿಂದ ಕೆಎಸ್ಆರ್ಟಿಸಿ ಬಸ್ ಬಂದು ಚಿಂತಾಮಣಿಗೆ ತೆರಳುತ್ತಿತ್ತು. ಈ ವೇಳೆ ಈ ಒಂದು ಅಪಘಾತ ಸಂಭವಿಸಿದ್ದು ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು ಒಂದು ವಾರದೊಳಗೆ ಬೆಂಗಳೂರಿನಲ್ಲಿರುವ ಎಲ್ಲಾ ಗುಂಡಿಗಳನ್ನು ಪುಟ್ಟಿ ಎಂದು ಜಿಬಿಎ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಗಳೂರು ರಸ್ತೆಗಳ ಗುಂಡಿ ಮುಚ್ಚಲು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಒಂದು ವಾರದ ಗಡುವು ನೀಡಿದ್ದಾರೆ. ಒಂದು ವಾರದೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರಿಗೆ ಸೂಚನೆ ನೀಡಿದ್ದಾರೆ. ರಸ್ತೆಗಳ ಸ್ಥಿತಿಯನ್ನು ಸುಧಾರಿಸಲು ಹೊಸ ಟಾರ್ ಹಾಕುವಂತೆಯೂ ಅವರು ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗಾಗಿ ಸರ್ಕಾರ ಇಂದಿಗೂ ಹೊಡಿಕೆ ಮಾಡುತ್ತಿದೆ. ಮುಂದೆಯೂ ಮಾಡುತ್ತದೆ. ವಿಶೇಷವಾಗಿ ಬೆಂಗಳೂರಿನ ಜನಸಂಖ್ಯೆಯು ವೇಗವಾಗಿ ಬೆಳೆಯುತ್ತಿರುವುದರಿಂದ ಉತ್ತಮ ಮೂಲಸೌಕರ್ಯಗಳ ಅಗತ್ಯ ಇದೆ ಎಂದು ಹೇಳಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ತೆರಿಗೆ ಮತ್ತು ಹಣಕಾಸು ನಿರ್ವಹಣೆ ಬಗ್ಗೆಯೂ ಟೀಕಿಸಿದ್ದಾರೆ. ಬೆಂಗಳೂರು ಮೆಟ್ರೋಗೆ ಶೇ. 87…

Read More

ಬೆಳಗಾವಿ : ನಮ್ಮ ತಂದೆ ಸದ್ಯ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಒಂದು ಹೇಳಿಕೆ ನೀಡಿದ್ದು, ಪ್ರಗತಿಪರ ಸಿದ್ಧಾಂತ ಇರುವ ನಾಯಕರು ರಾಜ್ಯಕ್ಕೆ ಬೇಕು. ಮಾರ್ಗದರ್ಶನ ಮಾಡಿ ನೇತೃತ್ವ ವಹಿಸಲು ಬೇಕು ಸತೀಶ್ ಜಾರಕಿಹೊಳಿ ಆ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಪರೋಕ್ಷವಾಗಿ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಹೇಳಿಕೆ ನೀಡಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ನಮ್ಮ ತಂದೆ ರಾಜಕೀಯ ಕೊನೆಕಾಲದಲ್ಲಿ ಇದ್ದಾರೆ ಹಾಗಾಗಿ ಮಾರ್ಗದರ್ಶನ ಮಾಡಿ ಪ್ರಗತಿಪರ ಸಿದ್ಧಾಂತ ಇರುವ ನಾಯಕರು ಬೇಕು. ಸಚಿವ ಸತೀಶ್ ಜಾರಕಿಹೊಳಿ ಆ ಒಂದು ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಒಂದು ಹೇಳಿಕೆಯ ಮೂಲಕ ನವೆಂಬರ್ ಕ್ರಾಂತಿ ಸುಳಿವು ಕೊಟ್ರ? ಅಂತ ಗುಸು ಗುಸು ಶುರುವಾಗಿದೆ ಸಿದ್ದರಾಮಯ್ಯ…

Read More

ಬೆಳಗಾವಿ : ನಮ್ಮ ತಂದೆ ಸದ್ಯ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಒಂದು ಹೇಳಿಕೆ ನೀಡಿದ್ದು, ಪ್ರಗತಿಪರ ಸಿದ್ಧಾಂತ ಇರುವ ನಾಯಕರು ರಾಜ್ಯಕ್ಕೆ ಬೇಕು. ಮಾರ್ಗದರ್ಶನ ಮಾಡಿ ನೇತೃತ್ವ ವಹಿಸಲು ಬೇಕು ಸತೀಶ್ ಜಾರಕಿಹೊಳಿ, ಆ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಪರೋಕ್ಷವಾಗಿ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಹೇಳಿಕೆ ನೀಡಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ನಮ್ಮ ತಂದೆ ರಾಜಕೀಯ ಕೊನೆಕಾಲದಲ್ಲಿ ಇದ್ದಾರೆ ಹಾಗಾಗಿ ಮಾರ್ಗದರ್ಶನ ಮಾಡಿ ಪ್ರಗತಿಪರ ಸಿದ್ಧಾಂತ ಇರುವ ನಾಯಕರು ಬೇಕು. ಸಚಿವ ಸತೀಶ್ ಜಾರಕಿಹೊಳಿ ಆ ಒಂದು ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಒಂದು ಹೇಳಿಕೆಯ ಮೂಲಕ ನವೆಂಬರ್ ಕ್ರಾಂತಿ ಸುಳಿವು ಕೊಟ್ರ? ಅಂತ ಗುಸು ಗುಸು ಶುರುವಾಗಿದೆ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ…

Read More

ಕಲಬುರ್ಗಿ : ಕಲಬುರ್ಗಿಯಲ್ಲಿ ಎಲ್‍ಪಿಜಿ ಸಿಲಿಂಡರ್ ಸ್ಫೋಟದಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಚಿಂಚೋಳಿ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಕಂಠಪ್ಪಾ ಪೂಜಾರಿ ಎಂಬವರ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪರದಾರ ಮೂವತ್ತಕ್ಕೆ ಬಳ್ಳಿ ಗ್ರಾಮದಲ್ಲಿ 1 ಲಕ್ಷ ನಗದು, ಚಿನ್ನಾಭರಣ, ಬಟ್ಟೆ, ದವಸ, ಧಾನ್ಯ ಸೇರಿದಂತೆ ಎಲ್ಲ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ದೀಪಾವಳಿ ಹಬ್ಬದ ಸಂಭ್ರಮ ಸಂಭ್ರಮದಲ್ಲಿದ್ದ ನಾಗಮ್ಮ ಕುಟುಂಬಕ್ಕೆ ಶಾಕ್ ಆಗಿದೆ. ಘಟನೆ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಒಬ್ಬಳು ತನ್ನ 3 ವರ್ಷದ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಚನ್ನಮ್ಮದೇವಿ ದೇವಸ್ಥಾನದ ಬಳಿ ಈ ಒಂದು ಘಟನೆ ಸಂಭವಿಸಿದೆ. ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಪುತ್ರ ಅಬ್ದುಲ್ (3) ಜೊತೆಗೆ ತಾಯಿ ಫಾತಿಮಾ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತಿ ಕಟ್ಟಿಯ ಫಾತಿಮಾ ವಾಲಿಕರ್ ಮತ್ತು ಅಬ್ದುಲ್ ರಹಮಾನ್ ಮೃತರು ಎಂದು ತಿಳಿದುಬಂದಿದ್ದು, ಪತಿ ಮಸ್ತಾನ್ ಸಾಬ್ ಕಿರುಕುಳದಿಂದ ಬೆಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. 8 ವರ್ಷದ ಹಿಂದೆ ಆತ ಮೊದಲನೇ ಮದುವೆಯಾಗಿದ್ದು, ನಂತರ ಫಾತೀಮಾಳನ್ನು ಮಸ್ತಾನ್ ಸಾಬ್ ಪ್ರೀತಿಸಿ ಮದುವೆಯಾಗಿದ್ದಾನೆ. ಐದು ತಿಂಗಳ ಗರ್ಭಿಣಿಯಾಗಿದ್ದ ಫಾತಿಮಾಳನ್ನು ಮದುವೆಯಾಗಿದ್ದ. ಗ್ರಾಮಸ್ಥರ ಸಮ್ಮುಖದಲ್ಲಿ ಮಸ್ತಾನ್ ಫಾತಿಮಾಳನ್ನು ಮದುವೆಯಾಗಿದ್ದಾನೆ ಇತ್ತೀಚಿಗೆ ಫಾತಿಮಾಳಿಗೆ ಹೆಚ್ಚು ಕಿರುಕುಳ ನೀಡುತ್ತಿದ್ದ, ಮಗಳು ಫಾತಿಮಾ ಸಾವಿಗೆ ಪತಿ ಕಿರುಕುಳವೇ ಕಾರಣ ಎಂದು…

Read More