Author: kannadanewsnow05

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಶಾಸಕರು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದಾರೆ ಅದರಲ್ಲೂ ಕಲಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್ ವಸತಿ ಯೋಜನೆಯಲ್ಲಿನ ಭ್ರಷ್ಟಾಚಾರ ಕುರಿತು ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರಹಾಕಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಬಿ ಆರ್ ಪಾಟೀಲ್ ದೂರು ನೀಡಿದ್ರಾ? ಎನ್ನುವ ಸುದ್ದಿ ಹರಿದಾಡುತ್ತಿದ್ದು ಈ ಕುರಿತು ಬಿಆರ್ ಪಾಟೀಲ್ ಮಾತನಾಡಿರುವ ಮತ್ತೊಂದು ವಿಡಿಯೋ ವೈರಲಾಗಿದೆ. ಹೌದು ಸಿದ್ದರಾಮಯ್ಯ ವಿರುದ್ಧವೇ ಶಾಸಕ ಬಿಆರ್ ಪಾಟೀಲ್ ದೂರು ನೀಡಿದ್ರಾ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಬಿ ಆರ್ ಪಾಟೀಲ್ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಕೆ.ಆರ್ ಪೇಟೆಗೆ ಬಂದಿದ್ದಾಗ ಶಾಸಕ ಬಿ.ಆರ್ ಪಾಟೀಲ್ ಅವರು l ಯಾರದ್ದೋ ಜೊತೆಗೆ ಫೋನಲ್ಲಿ ಮಾತನಾಡುವಾಗ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ. ಸಿದ್ದರಾಮಯ್ಯಗೆ ಸೋನಿಯಾ ಗಾಂಧಿಗೆ ಮೊದಲು ಭೇಟಿ ಮಾಡಿಸಿದ್ದೆ ನಾನು. ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ ಎಂದು ಹೇಳಿದ್ದಾರೆ. ಮುಂದುವರೆದು ಸಿದ್ದರಾಮಯ್ಯನ…

Read More

ಬೆಂಗಳೂರು : ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, 18ನೇ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಬಳಿಕ ರಾಜ್ಯ ಸರ್ಕಾರ ಬೆಂಗಳೂರು ಕಮಿಷನರ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶ ಹೊರಡಿಸಿದೆ. ನ್ಯಾ.ಬಿ ಕೆ ಶ್ರೀನಿವಾತ್ಸವ ಹಾಗು ನ್ಯಾ. ಸಂತೋಷ ಮೆಹ್ರಾ ಅವರಿದ್ದ ಪೀಠ ಈ ಕುರಿತು ಆದೇಶ ಹೊರಡಿಸಿದೆ. ಹಿಂದಿನ ಎಲ್ಲಾ ಭತ್ಯೆ ಮತ್ತು ಸೌಲಭ್ಯ ಒದಗಿಸಲು ಆದೇಶ ಹೊರಡಿಸಲಾಗಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದಿಸಿದ್ದರು. ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇದೀಗ ಆದೇಶ ಹೊರಡಿಸಿದೆ. 3 ರಿಂದ 5 ಲಕ್ಷ ಜನ ಸೇರಲು ಆರ್‌ಸಿಬಿಎ ಕಾರಣ. ಕಾರ್ಯಕ್ರಮಕ್ಕೆ ಪೊಲೀಸರ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಟೋದಲ್ಲೆ ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ರಾಘವೇಂದ್ರ ಜಾಧವ್ (28) ಹಾಗು ರಂಜಿತಾ (26) ಎಂದು ತಿಳಿದುಬಂದಿದೆ. ಪ್ರಿಯತಮ ತಾನು ಓಡಿಸುತ್ತಿದ್ದ ಆಟೋದಲ್ಲಿಯೇ ಪ್ರಿಯತಮೆಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಮನುವಳ್ಳಿ ಪಟ್ಟಣದ ರಾಘವೇಂದ್ರ ಮತ್ತು ರಂಜಿತ ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು ಎಂದು ತಿಳಿದುಬಂದಿದೆ. ರಾಘವೇಂದ್ರ ಮತ್ತು ರಂಜಿತಾ ಆಟೋದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಘವೇಂದ್ರ ಮತ್ತು ರಂಜಿತ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರವಾಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದು ಮದುವೆಗೆ ಮನೆಯಲ್ಲಿ ಒಪ್ಪದ ಹಿನ್ನೆಲೆ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಳದಿ ಕಳೆದ 15 ದಿನಗಳ ಹಿಂದೆ ರಂಜಿತಾಗೆ ಬೇರೊಬ್ಬನ ಜೊತೆಗೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದು ಬಂದಿದೆ ಹಾಗಾಗಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.…

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿವೃತ್ತ ಪೊಲೀಸ ಅಧಿಕಾರಿ ಕೈಯಲ್ಲಿ ಗನ್ ಹಿಡಿದು ರಂಪಾಟ ನಡೆಸಿರುವ ಘಟನೆ ನಡೆದಿದೆ. ಅದು ಅಲ್ಲದೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ನಿವಾಸದ ಪಕ್ಕದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು ಕೈಯಲ್ಲಿ ಹಿಡಿದು ರಂಪಾಟ ನಡೆಸಿದ್ದಾರೆ. ಸಚಿವರ ಮನೆಯ ಬಳಿ ನಿತೇಶ್ ಅಪಾರ್ಟ್ಮೆಂಟ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಲಾರಿಯೊಂದು ಗ್ರಾನೈಟ್ಗಳನ್ನು ಹೊತ್ತು ತಂದಿದೆ. ಈ ವೇಳೆ ಮನೆ ಮುಂದೆ ಕಾರುಗಳು ಸಾಲಾಗಿ ನಿಂತಿದ್ದಕ್ಕೆ ಲಾರಿ ನಿಧಾನವಾಗಿ ಹೊರಟಿತ್ತು. ಈ ವೇಳೆ ಏಕಾಏಕಿ ಮನೆಯಿಂದ ಹೊರಗಡೆ ಬಂದ ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು ಕೈಯಲ್ಲಿ ಗನ್ ಹಿಡಿದು ಅವಾಜ್ ಹಾಕಿದ್ದಾರೆ. ಗನ್ ತೋರಿಸಿ ಲಾರಿ ಚಾಲಕನಿಗೆ ಅವಾಜ್ ಹಾಕಿದ್ದಾರೆ. ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಇಲ್ಲಿಂದ ಹೋಗು ಎಂತ ಹೇಳಿದಾಗ, ಗ್ರಾನೆಟ್ ಅನ್ಲೋಡ್ ಮಾಡಬೇಕು ಸರ್ ಎಂದು ಕಟ್ಟಡ ಕಾರ್ಮಿಕರು ತಿಳಿಸಿದ್ದಾರೆ. ಅವರಿಗೂ ಸಹ ಜಯಪ್ರಕಾಶ್ ಗನ್ ತೋರಿಸಿ ಬೇದರಿಸಿದ್ದಾರೆ.…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಸದ್ಯಕ್ಕೆ ಎಲ್ಲವೂ ಸರಿ ಇಲ್ಲ ಎಂಬಂತಾಗಿದೆ. ಸ್ವಪಕ್ಷದ ವಿರುದ್ಧವೇ ಶಾಸಕರು ಅಸಮಾಧಾನ ಹೊರ ಹಾಕುತ್ತಿದ್ದು, ಇದೀಗ ಶಾಸಕರ ಅಹವಾಲು ಕೇಳಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ನಿನ್ನೆ ರಾಜ್ಯಕ್ಕೆ ಆಗಮಿಸಿದ್ದಾರೆ. ದಿಗ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಸುರ್ಜೆವಾಲಾ ಬಳಿ ಚರ್ಚಿಸುತ್ತೇನೆ ಎಂದು ಹೇಳಿಕೆ ನೀಡಿದರು. ರಾಮನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ಡಿಕೆ ಶಿವಕುಮಾರ್ ಪ್ರಮುಖ ಪಾತ್ರ ಇದೆ. ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವರ ಭೇಟಿಗೆ ತೆರಳುತ್ತಿದ್ದೇನೆ. ಅವರ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡುತ್ತೇನೆ. ಸುರ್ಜೆವಾಲಾ ಬಳಿ ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಚರ್ಚಿಸುತ್ತೇನೆ ಎಂದರು. ನಮ್ಮ ನಾಯಕರಿಗೆ ಒಂದು ಅವಕಾಶ ಮಾಡಿಕೊಡಿ. ರಾಜ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪಕ್ಷ ಸಂಘಟನೆ ಮತ್ತು ಹೋರಾಟ ಮಾಡಿದ್ದಾರೆ. ಅನೇಕ ರೂಪರೇಷ ಸಿದ್ಧಪಡಿಸಿದ ರಾಜ್ಯದಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ಮೇಕೆದಾಟು, ಆರೋಗ್ಯ ಹಸ್ತ…

Read More

ತುಮಕೂರು : ತುಮಕೂರಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಬಂಡೆ ಡ್ರಿಲ್ಲಿಂಗ್ ವೇಳೆ ಕೆಳಗೆ ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಬಳಿಯ ಜಲ್ಲಿ ಕ್ರಶರ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬಂಡೆ ಡ್ರಿಲ್ ಮಾಡುತ್ತಿದ್ದ ಕಾರ್ಮಿಕ ದಾಲ್ಶನ್ (26) ಸಾವನಪ್ಪಿದ್ದಾರೆ. ಘಟನೆಯಲ್ಲಿ ಅಶೋಕ್ ಮತ್ತು ಸೌಧರ್ ಸಂಗಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ತುಮಕೂರು ಜಿಲ್ಲೆಯ ಸರ್ಕಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರ್ಮಿಕರು ಮೂಲತಃ ಮಧ್ಯಪ್ರದೇಶದ ಆಲುಪುರ ಜಿಲ್ಲೆಯ ಎಂದು ತಿಳಿದು ಬಂದಿದೆ. ಇಂದು ಮೂವರು ಕಾರ್ಮಿಕರು ಕ್ರಷರ್ ನಲ್ಲಿ ಬಂಡೆ ಡ್ರಿಲ್ ಮಾಡುತ್ತಿದ್ದಾಗ ಬ್ಲಾಸ್ಟ್ ಮಾಡಲು ಬಂಡೆ ಮೇಲೆ ನಿಂತು ಡ್ರಿಲ್ಲಿಂಗ್ ಮಾಡುತ್ತಿದ್ದರು. ಈ ವೇಳೆ ಬಂಡೆ ಬಿರುಕು ಬಿಟ್ಟು ಸುಮಾರು 50 ಆಳಕ್ಕೆ ಬಿದ್ದು ದಾಲ್ಶನ್ ಸಾವನ್ನಪ್ಪಿದ್ದಾರೆ. ಗ್ಯಾಸ್ ಬಾಬು ಒಡೆತನಕ್ಕೆ ಸೇರಿದ ಜಲ್ಲಿ ಕ್ರಷರ್ ನಲ್ಲಿ ಈ ಒಂದು ಘಟನೆ ನಡೆದಿದೆ.

Read More

ತುಮಕೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಹಾಸನ ಜಿಲ್ಲೆ ಒಂದರಲ್ಲಿ ಕಳೆದ 40 ದಿನಗಳಲ್ಲಿ ಇವತ್ತಿನವರೆಗೂ ಒಟ್ಟು 25 ಜನ ಸಾವನಪ್ಪಿದ್ದಾರೆ. ಇದೀಗ ತುಮಕೂರಿನಲ್ಲಿ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ಹೃದಯಘಾತದಿಂದ ಸಾವನಪ್ಪಿದ್ದಾರೆ. ಹೌದು ತುಮಕೂರಿನಲ್ಲಿ ಬಿಜೆಪಿಯ ಯುವ ಮುಖಂಡ ನೀಲಕಂಠ ಸ್ವಾಮಿ, (36) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.ತುಮಕೂರು ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ನೀಲಕಂಠ ಸ್ವಾಮಿ ಇದು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ರಾಜ್ಯ ಸರ್ಕಾರ ಕೂಡ ಹೃದಯಾಘಾತಕ್ಕೆ ಏನು ಕಾರಣ ಎಂದು ಈಗಾಗಲೇ ಆರೋಗ್ಯ ಇಲಾಖೆ ಒಂದು ಕಮಿಟಿ ಸಹ ರಚನೆ ಮಾಡಿದೆ. ಇಂದು ಬೆಳಿಗ್ಗೆಯಿಂದ ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Read More

ಬಾಗಲಕೋಟೆ : ನಿನ್ನೆ ತಾನೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನ್ನ ಹಾಗೂ ಡಿಕೆ ಶಿವಕುಮಾರ್ ಮಧ್ಯ ಏನು ಇಲ್ಲ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಬಂಡೆಯ ರೀತಿ ಭದ್ರವಾಗಿರುತ್ತದೆ ಎಂದು ಒಗ್ಗಟ್ಟು ಪ್ರದರ್ಶಿಸಿದ್ದರು. ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಡಿಸೆಂಬರ್ 31 ರೊಳಗಾಗಿ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 31ರ ಒಳಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ.ಕಾಂಗ್ರೆಸ್ ಪಕ್ಷದಲ್ಲಿ 70-80 ಶಾಸಕರು ಅಸಮಾಧಾನಗೊಂಡಿದ್ದಾರೆ. ಸರ್ಕಾರ ಬಂದು ಎರಡು ವರ್ಷಗಳಾದರು ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಜನ ಛೀಮಾರಿ ಹಾಕುತ್ತಿದ್ದಾರೆ ಎಂದು ಶಾಸಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ಹೈಕಮಾಂಡ್ ನಾಯಕರ ಮುಂದೆ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ 52 ಶಾಸಕರು ಪತ್ರವನ್ನು ಸಹ ಬರೆದುಕೊಟ್ಟಿದ್ದಾರೆ. ಬಡವರಿಗೆ ಮನೆ ಕೂಡಲು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.ಈ ವಿಚಾರವನ್ನು ಖರ್ಗೆ ಸುರ್ಜೆವಾಲ ಮುಂದೆ ಹೇಳಿಕೊಂಡಿದ್ದಾರೆ. ಅದಕ್ಕೆ…

Read More

ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಹೃದಯಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಹಾಸನ ಜಿಲ್ಲೆಯ ಒಂದರಲ್ಲಿ 40 ದಿನದಲ್ಲಿ 25 ಜನರು ಸಾವನ್ನಪ್ಪಿದ್ದರೆ ಚಿಕ್ಕಮಂಗಳೂರಿನಲ್ಲಿ ಕಳೆದ ಎರಡು ತಿಂಗಳಲ್ಲಿ 13 ಜನ ಸಾವನ್ನಪ್ಪಿದ್ದಾರೆ ಇದೀಗ ಶಿವಮೊಗ್ಗದಲ್ಲಿ ಹೃದಯಾಘಾತದಿಂದ ಸರ್ಕಾರಿ ವೈದ್ಯರು ಒಬ್ಬರು ಸಾವನಪ್ಪಿದ್ದಾರೆ. ಹೌದು ಶಿವಮೊಗ್ಗ ಚಳಿಯಲ್ಲಿ ಹೃದಯಘಾತಕ್ಕೆ ಸರ್ಕಾರಿ ವೈದ್ಯ ಬಲಿಯಾಗಿದ್ದಾರೆ. ಹೃದಯಘಾತದಿಂದ ಸರ್ಕಾರಿ ವೈದ್ಯ ಸಂದೀಪ್ (48) ಇದೀಗ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಸಂದೀಪ್ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾಗಿ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇದೀಗ ಹೃದಯಘಾತದಿಂದ ಸಂದೀಪ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್‌ ಗುಂಪು ಸೇರಿಕೊಳ್ಳಿ 👉 https://chat.whatsapp.com/IrUCOvj6lb9BOTe0MLkeaY

Read More

ಬೆಂಗಳೂರು : ರಾಜ್ಯದಲ್ಲಿ ಇಂದು ಭೀಕರವಾದ ರಸ್ತೆ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಒಂದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಎಂಬಲ್ಲಿ ನಡೆದಿದೆ. ಹೌದು ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಮಾಕಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿಯಲ್ಲಿ ನಡೆದಿದೆ. ಬೆಳಿಗ್ಗೆ ದೇವಸ್ಥಾನಕ್ಕೆ ಎಂದು ಕಾರಿನಲ್ಲಿ ಎಂಟು ಜನರು ತೆರಳುತ್ತಿದ್ದರು. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಸಾವನ್ನುಪ್ಪಿದ್ದರೆ, ಇನ್ನುಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಮೃತ ದೇಹಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿ ಆಗಿ ಬಿದ್ದಿವೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More