Author: kannadanewsnow05

ಬೆಂಗಳೂರು : ‘ಮನ್ ರೇಗಾ’ ಹೆಸರು ಬದ್ಲಾವಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಸಚಿವರು ಆಗಮಿಸಿದ್ದಾರೆ. ಪ್ರತಿಭಟನಾ ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಬರುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಕಾರ್ಯಕರ್ತರು ಡಿಕೆ ಎಂದು ಘೋಷಣೆ ಕೂಗಿದಕ್ಕೆ ಗರಂ ಆದರು. ಕಾರ್ಯಕರ್ತರನ್ನು ಕುಳಿತುಕೊಳ್ಳಿ ಎಂದು ಗದರಿದರು ಸುಮ್ಮನೆ ಕುಳಿತುಕೊಳ್ಳುವಂತೆ ಇದೆ ವೇಳೆ ಚಂದ್ರಶೇಖರ್ ಅವರು ಸಹ ತಾಕಿದು ಮಾಡಿದರು. ಡಿಕೆ ಶಿವಕುಮಾರ್ ಭಾಷಣ ಕೆ ತೆರಳುವ ವೇಳೆ ಅವರ ತಲೆಗೆ ಸುತ್ತಿಕೊಂಡಿದ್ದ ಟವಲ್ ಸರಿಯಾಗಿ ಕಟ್ಟಿರಲಿಲ್ಲ. ಈ ವೇಳೆ ಸುರ್ಜಿವಾಲ ಡಿಕೆ ತಲೆಗೆ ತಾನೇ ಟವೆಲ್ ಕಟ್ಟಿದ ಪ್ರಸಂಗ ನಡೆಯಿತು. ಸಿಎಂ ತಲೆಗೆ ಸುತ್ತುವುದಕ್ಕೆ…

Read More

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್ ಗೆ ಸಬಂಧಪಟ್ಟಂತೆ ರಾಜೀವ್ ಗೌಡ ಮಂಗಳೂರಿನಿಂದ ಕೇರಳಕ್ಕೆ ಹೋಗುತ್ತಿದ್ದ. ಕೇರಳಕ್ಕೆ ತೆರಳುತ್ತಿದ್ದ ಕಾರನ್ನು ನಾವು ಚೇಸ್ ಮಾಡಿದೆವು ಕಾರಣ ಟ್ರ್ಯಾಕ್ ಮಾಡಿದಾಗ ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ರಾಜೀವ್ ಗೌಡ ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಆದರೆ ರಾಜೇಗೌಡ ಪತ್ನಿ ತನಿಖೆಗೆ ಸಹಕರಿಸಿರಲಿಲ್ಲ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಹೇಳಿದ್ದಾರೆ. ರಾಜೀವ ಗೌಡ ಜೊತೆಗೆ ಇದ್ದ ಮೈಕಲ್ಲನ್ನು ಸಹ ರೆಸ್ಟ್ ಮಾಡಲಾಗಿದೆ ಆರೋಪಿ ಬಂಧನಕ್ಕೆ ಮೂರು ಪೊಲೀಸರ ತಂಡವನ್ನು ರಚಿಸಲಾಗಿತ್ತು. ವಿವಿಧ ಜಿಲ್ಲೆಗಳ ಪೊಲೀಸರ ಸಹಕಾರದೊಂದಿಗೆ ತನಿಖೆ ನಡೆಸಲಾಗಿತ್ತು ಮಂಗಳೂರುನಿಂದ ಕೆರಳಕ್ಕೆ ಹೋಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿತ್ತು. KA03 MAX 9108 ನಂಬರ್ ಕಾರಿನಲ್ಲಿ ರಾಜಿವ್ ಗೌಡ ಪರಾರಿಯಾಗಿದ್ದ. ರಾಜೀವ್ ಗೌಡ ಕಾರನ್ನು ಫಾಲೋ ಮಾಡಿ ಇಬ್ಬರನ್ನು ಬಂಧಿಸಲಾಗಿದೆ ಪೊಲೀಸರಿಂದ ಯಾವುದೇ ವಿಷಯಗಳು ಮಾಹಿತಿ ಸೋರಿಕೆ ಆಗಿಲ್ಲ. ನಮ್ಮ ಪೊಲೀಸರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಪೊಲೀಸರಿಂದ ಯಾವುದೇ ನಿರ್ಲಕ್ಷ ಆಗಿಲ್ಲ…

Read More

ಬೆಳಗಾವಿ : ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಹಾರಾಷ್ಟ್ರ ಪೊಲೀಸರು ಫಾರ್ಚುನರ್ ಕಾರು ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಎಸ್ಐಟಿ ಅಧಿಕಾರಿಗಳು ಫಾರ್ಚುನರ್ ಕಾರು ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಆರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. 400 ಕೋಟಿ ಹಣ ರಾಬರಿ ಪ್ರಕರಣದಲ್ಲಿ ಬಂದಿತ ಆರೋಪಿಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಪಾರು ಚಾಲಕನನ್ನು ಬಂಧಿಸಿ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ದೂರುದಾರ ಸಂದೀಪ್ ಪಾಟೀಲ್ ಅಪಹರಿಸಿದ್ದ ಕಾರು ಚಾಲಕ.ಇಂದು ಸಂಜೆ ಬೆಳಿಗ್ಗೆ ಇಬ್ಬರು ಬಂಧನದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಪರಾರಿ ಆದಂತಹ ಕಿಶೋರ್ ಮತ್ತು ಅಜರಿಗಾಗಿ ಪೊಲೀಸ್ ಅಧಿಕಾರಿಗಳು ಹುಡುಕಾಟ ಮುಂದುವರೆಸಿದ್ದಾರೆ.

Read More

ರಾಯಚೂರು : ರಾಯಚೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು, ಹಣ ನೀಡದಿದ್ದಕ್ಕೆ ಪಾಪಿ ಮಗನೊಬ್ಬ ಕಲ್ಲಿನಿಂದ ಜಜ್ಜಿ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಜಕ್ಕೇರುಮಡು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಮಗ ತನ್ನ ತಾಯಿಯನ್ನೇ ಬರ್ಬರವಾಗಿ ಕೊಲೆಗೈದಿದ್ದಾನೆ. ಕಲ್ಲಿನಿಂದ ತಲೆಗೆ ಹೊಡೆದು ತಾಯಿ ಚಂದವ್ವನನ್ನ ಮಗ ಕುಮಾರ್ ಕೊಲೆ ಮಾಡಿದ್ದಾನೆ. ದುಡಿದು ತಿನ್ನೋ ಬದಲು ತಾಯಿಯ ಬಳಿ 2 ಲಕ್ಷ ಹಣ ಕೇಳಿದ್ದ ತಮ್ಮನ ಮದುವೆಗೆ ಹಣವಿಲ್ಲ ಎಲ್ಲಿಂದ ಕೊಡಲಿ ಅಂತ ತಾಯಿ ಚಂದ ಹೇಳಿದ್ದಾಳೆ. ಆರೋಪಿ ಕುಮಾರ್ ಬೆಂಗಳೂರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಿಂದ ಊರಿಗೆ ಬಂದಾಗ ಪ್ರತಿ ಬಾರಿ ಹಣ ಕೇಳುತ್ತಿದ್ದ ಪ್ರತಿ ಬಾರಿ ಹಣಕ್ಕಾಗಿ ಕುಮಾರ್ ತಾಯಿಯನ್ನ ಹಣಕ್ಕಾಗಿ ಪೀಡಿಸುತ್ತಿದ್ದ. ಎರಡು ಲಕ್ಷ ಹಣ ನೀಡುವಂತೆ ನಿನ್ನ ತಾಯಿಗೆ ಡೆಡ್ ಲೈನ್ ನೀಡಿದ್ದ. ತಾಯಿ ಹಣ ನೀಡದಿದ್ದಾಗ ಕುಮಾರ್ ಕೊಲೆ ಮಾಡಿದ್ದಾನೆ ಮುದಗಲ್ ಠಾಣೆ ಪೊಲೀಸರ ತನಿಖೆ ವೇಳೆ ಕೊಲೆ ರಹಸ್ಯ ಬಯಲಾಗಿದೆ. ತಾಯಿ…

Read More

ಬೆಂಗಳೂರು : ಸಿಎಂಎಸ್ ಸೆಕ್ಯುರಿಟೀಸ್ ಕಂಪನಿ ಕಸ್ಟೋಡಿಯನ್ ವಾಹನ ಅಡ್ಡಗಟ್ಟಿ ರಾಬರಿ ಮಾಡಿದ್ದ ಪ್ರಕರಣ ಮಾಸುವ ಮುನ್ನ ಮತ್ತೆರಡು ಅಂಥದ್ದೇ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಟಿಎಂಗೆ ತುಂಬಿಸಲು ನೀಡಲಾಗಿದ್ದ 1 ಕೋಟಿಗೂ ಅಧಿಕ ಹಣ ವಂಚಿಸಲಾಗಿದ್ದು, ಕೋರಮಂಗಲ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಪೇಮೆಂಟ್ ಸರ್ವಿಸ್ ಕಂಪನಿಯೊಂದು ಕೆಲವು ಬ್ಯಾಂಕ್‌ಗಳ ಎಟಿಎಂ ಯಂತ್ರಗಳಿಗೆ ಹಣ ತುಂಬಿಸುವ ಪರವಾನಗಿ ಪಡೆದಿತ್ತು. ಆದರೆ ಈ‌ ಕೆಲಸ ಮಾಡುತ್ತಿದ್ದ ಪ್ರವೀಣ್, ಧನಶೇಖರ್, ರಾಮಕ್ಕ ಹಾಗೂ ಹರೀಶ್ ಕುಮಾರ್ ಎಂಬ ಆರೋಪಿಗಳು 57 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಕಂಪನಿಯಲ್ಲಿದ್ದ ಹರೀಶ್ ಕುಮಾರ್, ಪ್ರವೀಣ್ ಕುಮಾರ್ ಹಾಗೂ ವರುಣ್ ಎಂಬ ಆರೋಪಿಗಳ ಮತ್ತೊಂದು ತಂಡ 80 ಲಕ್ಷ ರೂಪಾಯಿ ವಂಚಿಸಿದೆ ಎಂದು ಆರೋಪಿಸಲಾಗಿದೆ. ಕಂಪನಿಯ ಪ್ರತಿನಿಧಿಗಳು ನೀಡಿರುವ ದೂರಿನನ್ವಯ ಕೋರಮಂಗಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್‌ಗಳು ದಾಖಲಾಗಿವೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Read More

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ್ ಇದರಲ್ಲಿ ನನ್ನದು ಏನೂ ತಪ್ಪು ಇಲ್ಲ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ ಎನ್ನುವ ವಿಚಾರವಾಗಿ ಸದನದಲ್ಲಿ ವಿರೋಧ ಪಕ್ಷಗಳು ಈ ವಿಚಾರವನ್ನು ಪ್ರಸ್ತಾಪ ಮಾಡಲಿ. ನಾನು ಅಲ್ಲಿ ಉತ್ತರ ಕೊಡುತ್ತೇನೆ ಅದಕ್ಕೆ ಸಮರ್ಥನೆ ಕೊಡುತ್ತೇನೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಚಿವ ಆರ್ ಬಿ ತಿಮ್ಮಾಪುರ್ ತಿಳಿಸಿದರು.

Read More

ಬೆಂಗಳೂರು : ಬೆಂಗಳೂರು ಹೊರಯದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು ಸಿನಿಮಾ ಶೈಲಿಯಲ್ಲಿ ಯುವಕನನ್ನು ಕಿಡ್ನ್ಯಾಪ್ಗೆ ಯತ್ನಿಸಿದ್ದಾರೆ. ಹಾಡ ಹಗಲೇ ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿ ಕಿಡ್ನ್ಯಾಪ್ಗೆ ದುಷ್ಕರ್ಮಿಗಳ ಗ್ಯಾಂಗ್ ಯತ್ನಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದೆ. ಮೂರು ಬೈಕ್ ಒಂದು ಕಾರ್ ನಲ್ಲಿ ಗ್ಯಾಂಗ್ ಬಂದಿದ್ದು ಸುಮಾರು ಎಂಟು ಜನರಿದ್ದ ಗ್ಯಾಂಗ್ ಯುವಕನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾರೆ. ಯುವಕ ಕ್ಷಮೆ ಕೇಳಿದರೂ ಗ್ಯಾಂಗ್ ಹಲ್ಲೆ ಮಾಡಿದೆ. ಕಾರ್ ಒಳಗೆ ಯುವಕನನ್ನು ಕೂರಿಸಲು ಯತ್ನಿಸುತ್ತಾರೆ ಆಪರೇಷನ್ ಆಗಿದೆ ಸರ್ ಬಿಟ್ಟುಬಿಡು ಎಂದು ಕೇಳಿದರು ಗ್ಯಾಂಗ್ ಬಿಟ್ಟಿಲ್ಲ. ಕಿರುಚಾಡಿ ಕೇಳಿಕೊಂಡರು, ಪುಡಿ ರೌಡಿಗಳ ಗ್ಯಾಂಗ್ ಬಿಡುವುದಿಲ್ಲ. ಯಾವಾಗ ಸಾರ್ವಜನಿಕರು ಪುಂಡರಿಗೆ ಪ್ರಶ್ನೆ ಮಾಡುತ್ತಾರೋ ಆಗ ಅಲ್ಲಿಂದ ಪರಾರಿಯಾಗಿದ್ದಾರೆ.

Read More

ಗದಗ : ಲಕ್ಕುಂಡಿಯಲ್ಲಿ ಉತ್ಖನ ಕಾರ್ಯ ಮುಂದುವರೆದಿದ್ದು ಇದೀಗ ಉತ್ಖನನ ಸ್ಥಳವಾದ A-1 ನಲ್ಲಿ ಬೃಹದ್ದಾಕಾರದ ಬಿರುಕು ಕಾಣಿಸಿಕೊಂಡಿದ್ದು ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆ ಸ್ಥಳಕ್ಕೆ ರಾಜ್ಯ ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು B-1 ಬ್ಲಾಕ್ ನಲ್ಲಿ ಬೃಹತ್ ಆಕಾರದ ಕಲ್ಲು ಪತ್ತೆಯಾಗಿದ್ದು ಬೃಹದಾಕರ ಕಲ್ಲು ಬೀಳುವ ಆತಂಕ ಎದುರಾಗಿದೆ ಈ ಹಿನ್ನೆಲೆಯಲ್ಲಿ ಮಣ್ಣು ಬಿರಿದುಕೊಂಡಿದ್ದು ಆತಂಕದಲ್ಲಿಯೇ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾರೆ. ಕಾರ್ಮಿಕರು ಅಪಾಯದ ಕೆಲಸದಲ್ಲಿ ಆತಂಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಯಾವ ಕ್ಷಣದಲ್ಲಿ ಆದರೂ ಮಣ್ಣು ಕುಸಿಯುವ ಸಾಧ್ಯತೆಯಿದ್ದು ಸ್ಥಳದಲ್ಲಿ ಆತಂಕ ಮನೆ ಮಾಡಿದೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಮದುವೆಯಾದ 45 ದಿನದಲ್ಲೇ ನವವಿವಾಹಿತ ಹರೀಶ ಪತ್ನಿ ಬೇರೆ ಯುವಕನ ಜೊತೆ ಓಡಿ ಹೋಗಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ದಾವಣಗೆರೆಯ ಗುಮ್ಮನೂರಿನಲ್ಲಿ ಈ ಒಂದು ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದುವೆ ಮಾಡಿಸಿದ ಯುವತಿಯ ಸೋದರ ಮಾವ ಕೂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್ ಆತ್ಮಹತ್ಯೆ ಬೆನ್ನಲ್ಲೇ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹರೀಶ್ ಮತ್ತು ಸರಸ್ವತಿ ಮದುವೆಯನ್ನು ರುದ್ರೇಶ್ ಮುಂದೆ ನಿಂತು ಮದುವೆ ಮಾಡಿಸಿದ್ದರು. ಆದರೆ ಯುವತಿ ಸರಸ್ವತಿ ಬೇರೆ ಯುವಕನ ಜೊತೆಗೆ ಓಡಿ ಹೋಗಿದ್ದಾಳೆ. ಇದರಿಂದ ಅವಮಾನ ತಾಳದೆ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೂ ಮುನ್ನ ಹರೀಶ್ (30) ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಪತ್ನಿ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಬೇರೆ ಯುವಕನ ಜೊತೆ ಓಡಿ ಹೋಗಿ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ.…

Read More

ಧಾರವಾಡ : ಧಾರವಾಡದಲ್ಲಿ ಗೂಡ ಘಟನೆ ಒಂದು ನಡೆದಿದ್ದು ಹುಚ್ಚುನಾಯಿ ದಾಳಿಯಿಂದ 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಮಿಶ್ರಿಕೋಟೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ರಸ್ತೆಯಲ್ಲಿ ತಿರುಗಾಡುತ್ತಿದ್ದವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಹುಚ್ಚು ನಾಯಿ ದಾಳಿಯಿಂದ ಹಲವರ ಕೈ, ಕಾಲು ಮತ್ತು ಮುಖಕ್ಕೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಇನ್ನೂ ಕೆಲವರಿಗೆ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿ ಮಾಡಿದ ಹುಚ್ಚು ನಾಯಿಯನ್ನು ಗ್ರಾಮಸ್ಥರು ಹಿಡಿದುಕೊಂಡಿದ್ದಾರೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More