Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂದಿಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ನಮ್ಮನ್ನೆಲ್ಲ ಅಗಲಿ 4 ವರ್ಷ ಕಳೆಯಿತು. ಈ ಹಿನ್ನೆಲೆ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ರಾಘವೇಂದ್ರ ರಾಜಕುಮಾರ್ ಶಿವರಾಜಕುಮಾರ್ ಸೇರಿದಂತೆ ಕುಟುಂಬ ವರ್ಗದವರು ಪುನೀತ್ ರಾಜಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ನಟ ಶಿವರಾಜ್ ಕುಮಾರ್ ಮಾತನಾಡಿ ಪುನೀತ್ ಇಲ್ಲ ಅಂತ ಅಂದುಕೊಂಡರೆ ಕಷ್ಟ ಆಗುತ್ತದೆ. ಅಪ್ಪು ನೆನಪಿನಲ್ಲಿ ಬಾಳಬೇಕು. ನಮ್ಮಲ್ಲಿ ಅವನನ್ನು ತೋರಿಸುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ. ಅಪ್ಪು ಇದ್ದಾನೆ ಅಂತ ಅಂದುಕೊಂಡು ಮಾತನಾಡುತ್ತೇನೆ. AI ಮೂಲಕ ಶಿವಣ್ಣ ಪುನೀತ್ ಸಿನಿಮಾ ಮಾಡುವ ವಿಚಾರವಾಗಿ ಐ ನಿಂದ ಸಿನಿಮಾ ಮಾಡುವುದಾದರೆ ಅಚ್ಚು ಕಟ್ಟಾಗಿ ಬರಬೇಕು ಹಾಗಿದ್ದಾಗ ಮಾಡೋಣ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು.a
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದು, ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುವ ಕುರಿತು, ಅಣ್ಣನನ್ನು ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ. ಅವರ ಹಣೆಯಲ್ಲಿ ಬರೆದಿದ್ರೆ ಸಿಎಂ ಆಗುತ್ತಾರೆ. ನವೆಂಬರ್ 15ರ ಕ್ರಾಂತಿ ಬಗ್ಗೆ ಮಾಹಿತಿ ಇಲ್ಲ ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ. ಸಿದ್ದರಾಮಯ್ಯ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆಸಿದರೆ ಒಳ್ಳೆಯದು. 98-95 ವಯಸ್ಸು ಆಗಿರುವವರು ರಾಜಕೀಯದಲ್ಲಿ ಇದ್ದಾರೆ. ರಾಜಣ್ಣ ಸಲಹೆ ಅಭಿಪ್ರಾಯಗಳನ್ನು ವರಿಷ್ಟರಿಗೆ ತಿಳಿಸ್ತಾರೆ, ಸ್ವಾಗತ ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನು ಸಂತೋಷಪಡಿಸಲು ಆಗಲ್ಲ ನಾನು ಯಾವಾಗ್ಲೂ ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ. ಹೆಚ್ಚುವರಿ ಉಪಮಂತ್ರಿಗಳ ನೇಮಕಕ್ಕೆ ಒತ್ತಾಯ ವಿಚಾರವಾಗಿ, ಎಲ್ಲರ ಸಲಹೆಗಳನ್ನು ಹೈಕಮಾಂಡ್ ಗಮನಿಸುತ್ತೆ. ದಲಿತ ಸಿಎಂ ಚರ್ಚೆ ವಿಚಾರ ಸ್ವಾಗತ, ಸಮಾವೇಶ ಒಳ್ಳೆಯದು ಎಂದು ಮಾಜಿ ಸಂಸದ…
ಚಿಕ್ಕಮಗಳೂರು : ಕೈ ಕಾರ್ಯಕರ್ತರಿಂದಲೇ ನಯನ ಮೋಟಮ್ಮ ಆಪ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು ಮನೆಗೆ ನುಗ್ಗಿ ಶಾಸಕಿ ನಯನ ಆಪ್ತ ಆದಿತ್ಯನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಯಿಲ್ ಸೇರಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಆದಿತ್ಯ ಮಹಿಳೆಯರು ಸೇರಿ ಕಾಂಗ್ರೆಸ್ ಮುಖಂಡರಿಗೆ ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದ್ದು, ವಿಡಿಯೋ ಮತ್ತು ಆಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಆರೋಪ ಕೇಳಿ ಬಂದಿದೆ. ಯುವತಿಯ ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿರುವ ಆರೋಪ ಕೇಳಿ ಬಂದಿದ್ದು ಮಹಿಳೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಪೊಲೀಸರು ತುಮಕೂರಿನಲ್ಲಿ ಆದಿತ್ಯನನ್ನು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು : ವೈಫೈ ಯೂಸರ್ ನೇಮ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ದೇಶ ವಿರೋಧಿ ಯೂಸರ್ ನೇಮ್ ಬಳಕೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳುನಲ್ಲಿ ಮೊಬೈಲ್ ವೈಫ್ ಆನ್ ಮಾಡಿದ್ರೆ ಪಾಕಿಸ್ತಾನ್ ಜಿಂದಾಬಾದ್ ಎಂದು ದೇಶದ್ರೋಹಿ ಯೂಸರ್ ನೇಮ್ ತೋರಿಸುತ್ತಿದೆ. ಗ್ರಾಮದಲ್ಲಿ ದೇಶ ವಿರೋಧಿ ಭಯೋತ್ಪಾದಕ ಶಕ್ತಿ ಇದೆ ಎಂದು ಶಂಕಿಸಲಾಗಿದ್ದು, ಜಿಗಣಿ ಪೊಲೀಸ್ ಠಾಣೆಗೆ ಭಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ. ಎನ್ ಸಿಆರ್ ದಾಖಲಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಹಣ ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಸಾಯಬೇಕಾಗುತ್ತದೆ ಎಂದು ಧಮ್ಕಿ ಹಾಕಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ನಲ್ಲಿ ನಡೆದಿದೆ. ಮಂಡ್ಯ ಮೂಲದ ಬಾಗೇಗೌಡನನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಲಾಗಿದ್ದು ಮಂಜುನಾಥ್ ಹಲಗೂರು ಮತ್ತು ಪರಮೇಶಪ್ಪ ಹಲಗೂರು ನಿಂದ ಈ ಒಂದು ಕೃತ್ಯ ನಡೆದಿದೆ. ಮಂಜುನಾಥ್ ಹಾಗೂ ಬಾಗೇಗೌಡ ಎರಡು ವರ್ಷದಿಂದ ಸ್ನೇಹಿತರು ಗ್ಲೋಬಲ್ ಲಿಮಿಟೆಡ್ ಕಂಪನಿಯಲ್ಲಿ ಇಬ್ಬರು ಹೂಡಿಕೆ ಮಾಡಿದ್ದರು. ಕೊನೆಗೆ ಕಂಪನಿ ನಷ್ಟವಾಗಿ ಆ ಪ್ರಕರಣ ಸದ್ಯ ಸಿಐಡಿ ತನಿಖೆಯಲ್ಲಿ ಇದೆ. ಬಾಗೇಗೌಡನನ್ನು ನಂಬಿ ಹಣ ಹೂಡಿಕೆ ಮಾಡಿದ್ದರಿಂದ ಮಂಜುನಾಥ್ ಬಾಗೇಗೌಡನ ಸಿಟ್ಟಾಗಿದ್ದ ಹಾಗಾಗಿ ಪ್ಲಾನ್ ಮಾಡಿ ಬಾಗೇಗೌಡನನ್ನು ಕರೆಸಿಕೊಂಡಿದ್ದ. ಸನ್ ಶೈನ್ ಹೋಟೆಲ್ ನಲ್ಲಿ ಮಂಜುನಾಥ್ ರೂಮ್ ಬುಕ್ ಮಾಡಿದ್ದ. ಬಳಿಕ ಆಚೆ ಹೋಗಿ ಬರೋಣ ಎಂದು ಗೋದಾಮಿಗೆ ಕರೆದುಕೊಂಡು ಹೋಗಿದ್ದ. ಗೋದಾಮಿನಲ್ಲಿ ಎಂಟು ಜನರ ಜೊತೆ ಮಂಜುನಾಥ್ ಹಲ್ಲೆ ಮಾಡಿದ್ದಾನೆ. ಹಣ ಕೊಡದೆ…
ಬೆಳಗಾವಿ : ಬೆಳಗಾವಿಯಲ್ಲಿ ನೂರಾರು ಮಹಿಳೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಲಾಗಿದ್ದು, ಲೂಸ್ ಅಗರಬತ್ತಿ ಪ್ಯಾಕ್ ಮಾಡಲು ಹೇಳಿ ಕೋಟ್ಯಾಂತರ ರೂಪಾಯಿ ಹಣ ವಂಚನೆ ಎಸಲಾಗಿದೆ. ಮಹಿಳ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಸಂಘದಿಂದ ಕೋಟ್ಯಾಂತರ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದ್ದು, ಮಹಾರಾಷ್ಟ್ರ ಮೂಲದ ಬಾಬಾ ಸಾಹೇಬ್ ಕೊಳೇಕರ ವಿರುದ್ಧ ಆರೋಪ ಕೇಳಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದ ಮಹಿಳೆಯರೇ ಈತನ ಟಾರ್ಗೆಟ್ ಆಗಿದ್ದರು. ಐಡಿ ಕಾರ್ಡ್ ಮಾಡಲು ಮಹಿಳೆಯರಿಂದ 2500 ರೂಪಾಯಿ ವಸೂಲಿ ಮಾಡಲಾಗಿತ್ತು. ಒಂದೊಂದು ಐಡಿ ಕಾರ್ಡಿಗೆ ರೂ.3,000 ನೀಡುತ್ತೇವೆ ಎಂದು ಆಮೀಷ ಒಡ್ಡಿದ್ದರು. 20 ದಿನಕ್ಕೆ ರೂ.3,000 ಹಣ ನೀಡುತ್ತೇವೆ ಎಂದು ನಂಬಿಸಲಾಗಿತ್ತು.ವಂಚಕನ ಮಾತು ನಂಬಿ ಮಹಿಳೆಯರು ಐಡಿ ಕಾರ್ಡ್ ಖರೀದಿಸಿದ್ದರು. ಒಬ್ಬೊಬ್ಬ ಮಹಿಳೆ ತಲಾ 20 ರಿಂದ 30 ಐಡಿ ಕಾರ್ಡ್ ಖರೀದಿ ಮಾಡಿದ್ದರು. ಸುಮಾರು 12 ಕೋಟಿ ಅಧಿಕವಾಗಿ ಹಣ ಪಡೆದು ಆರೋಪಿ ಪರಾರಿಯಾಗಿದ್ದಾನೆ. ವಂಚನೆ ಬಯಲಾಗುತ್ತಿದ್ದಂತೆ ಮಹಿಳೆಯರು ಡಿಸಿ…
ಬೆಂಗಳೂರು : ಸ್ಮಾರ್ಟ್ ಮೀಟರ್ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಧನ ಸಚಿವ ಕೆ ಜೆ ಚಾರ್ಜ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸ್ಮಾರ್ಟ್ ಮೀಟರ್ ಖರೀದಿ ಗುತ್ತಿಗೆ ನೀಡಿಕೆಯಲ್ಲಿ ಬಹುಕೋಟಿ ಅವ್ಯವಹಾರ ಆರೋಪ ಸಂಬಂಧ ವಿವರಣೆ ಕೋರಿ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಕೆಲ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ನೋಟಿಸ್ಗೆ ವಾರದಲ್ಲಿ ಉತ್ತರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ನೋಟಿಸ್ ಸ್ವೀಕರಿಸಿರುವ ಸಚಿವ ಜಾರ್ಜ್ ಅವರು, ಈ ಗುತ್ತಿಗೆ ಸಂಬಂಧ ತಾವು ಏಕಪಕ್ಷೀಯ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಡಿಸಿರುವುದಾಗಿ ತಿಳಿದು ಬಂದಿದೆ. ಸ್ಮಾರ್ಟ್ ಮೀಟರ್ ಖರೀದಿ ಗುತ್ತಿಗೆ ಅವ್ಯವಹಾರ ಆರೋಪ ಕುರಿತು ದಾಖಲೆಗಳನ್ನು ಸಂಗ್ರಹಿಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಲೋಕಾಯುಕ್ತ ಪೊಲೀಸರು, ಅಕ್ರಮದ ಬಗ್ಗೆ ವಿವರಣೆ ಕುರಿತು ಸಚಿವ ಜಾರ್ಜ್ ಹಾಗೂ ಬೆಸ್ಕಾಂ ವ್ಯವಸ್ಥಾಪಕ ಮಹಾಂತೇಶ್ ಬೀಳಗಿ ಸೇರಿದಂತೆ ಇಂಧನ ಇಲಾಖೆ ಕೆಲ ಅಧಿಕಾರಿಗಳಿಗೆ ನೋಟಿಸ್…
ಬಳ್ಳಾರಿ : ಬಳ್ಳಾರಿಯಲಿ ಪೊಲೀಸರು ಕೊಲೆ ಪ್ರಕರಣವನ್ನು ಭೇದಿಸಿದ್ದು, ವ್ಯಕ್ತಿ ಒಬ್ಬನನ್ನು ವ್ಯಕ್ತಿಯ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದವರನ್ನು ಅರೆಸ್ಟ್ ಮಾಡಿದ್ದಾರೆ ಪ್ರಕರಣದ ತನಿಖೆ ನಡೆಸಿ ಪೊಲೀಸರು 10 ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಪರಮದೇವನಹಳ್ಳಿ ಠಾಣೆ ಪೋಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ಅಕ್ಟೋಬರ್ 23 ರಂದು ರಾತ್ರಿ ಸುತ್ತಿಗೆಯಿಂದ ಹೊಡೆದು ರವಿ (30) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮದ ಬಳಿ ರವಿ ಕೊಲೆಯಾಗಿದೆ. ವಾರದ ಹಿಂದೆ ಗ್ರಾಮದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರ ಸಂತ್ರಸ್ತೆಯ ಪರವಾಗಿ ನಿಂತಿದ್ದಕ್ಕೆ ಈ ಒಂದು ಗ್ಯಾಂಗ್ ರವಿಯನ್ನು ಸುತ್ತಿಗೆನಿಂದ ಹೊಡೆದು ಕೊಲೆ ಮಾಡಿದ್ದಾರೆ. ಆರೋಪಿಗಳು ಜೈಲಿಗೆ ಹೋಗಿದ್ದಕ್ಕೆ ರವಿಯ ಮೇಲೆ ಅತ್ಯಾಚಾರ ಕೇಸ್ ನ ಆರೋಪಿ ಲಿಂಗಣ್ಣ ಸಂಬಂಧಿಕರಿಂದ ರವಿ ಹತ್ಯೆಯಾಗಿದೆ ತನ್ನ ಸಹೋದರರಿಗೆ ಹೋಗಿದ್ದಕ್ಕೆ ಸಂಚುರೂಪಿಸಿ ರವಿಯನ್ನು ಹೊನ್ನೂರಸ್ವಾಮಿ ಮತ್ತು ಗ್ಯಾಂಗ್ ಕೊಲೆ ಮಾಡಿದೆ. ರವಿ ತಲೆ ಮತ್ತು ಮುಖಕ್ಕೆ…
ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಹೌದು ರಾಜ್ಯದಲ್ಲಿ ಆರ್ಎಸ್ಎಸ್ ಸಂಘಟನೆ ಸರ್ಕಾರಿ ಶಾಲೆಗಳಲ್ಲಿ ಕಾರ್ಯ ಚಟುವಟಿಕೆ ನಿಷೇಧಿಸಲು ಇತ್ತೀಚಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ನಿರ್ಧರಿಸಿ ಆದೇಶ ಹೊರಡಿಸಿತ್ತು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಒಂದು ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ಹೈಕೋರ್ಟಿಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಪ್ರಕರಣ ಹಿನ್ನೆಲೆ? ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್ಎಸ್…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯ ಮೇಲೆ ಕಿಡಿಗೇಡಿಗಳು ಲಾರೆನ್ಸ್ ಬಿಷ್ನೋಯ್ ಎಂದು ಹೆಸರು ಬರೆದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಕಿಡಿಗೇಡಿಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ನಂದಿ ಬೆಟ್ಟದಲ್ಲಿರುವ ಟಿಪ್ಪು ಅರಮನೆಯ ಮೇಲೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ನೋಯ್ ಹೆಸರು ಬರೆದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂದಿಗಿರಿ ಧಾಮ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. PDLP, BNS ಸೆಕ್ಷನ್ 324 (2), 329 (3)ರ ಅಡಿ ದುಷ್ಕರ್ಮಿಗಳ ಮೇಲೆ ಕೇಸ್ ದಾಖಲಾಗಿದೆ. ಚಿಕ್ಕಬಳ್ಳಾಪುರ ಎಸ್ ಪಿ ಕುಶಲ್ ಚೌಕ್ಸೆ ಸೂಚನೆಯ ಮೇರೆಗೆ ಕೇಸ್ ದಾಖಲಾಗಿದೆ. ಸದ್ಯ ಗ್ಯಾಂಗ್ ಸ್ಟರ್ ಬಿಷ್ನೋಯ್ ದೆಹಲಿಯ ತಿಹಾರ್ ಜೈಲಿನಲ್ಲಿ ಇದ್ದಾನೆ. ಅಂತಾರಾಷ್ಟ್ರೀಯ ಗ್ಯಾಂಗ್ ಸ್ಟರ್ ಆಗಿರುವ ಲಾರೆನ್ಸ್ ಬಿಷ್ನೋಯ್ ಹೆಸರನ್ನ ಟಿಪ್ಪು ಬೇಸಿಗೆ ಅರಮನೆಯ ಮೇಲೆ ಕೆತ್ತಲಾಗಿತ್ತು. ದುಷ್ಕರ್ಮಿಗಳು ಒಂದು ತಿಂಗಳ…














