Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ನನ್ನ ಮಗ ಉಳಿಯಲಿಲ್ಲ… ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು… ನನಗೆ ಬಹಳ ನೋವಾಗಿದೆ ಈ ರೀತಿ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ವಾಟ್ಸಪ್ ಗ್ರೂಪ್ನಲ್ಲಿ ಸಂದೇಶ ಹಂಚಿಕೊಂಡಿರುವ ಘಟನೆ ನಡೆದಿದೆ. ಹೌದು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿಗಳ ವಾಟ್ಸಪ್ ಗ್ರೂಪ್ನಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಎ.ಎಸ್ ಬಂಡುಗೊಳ ಈ ಒಂದು ಮನಕಲಕುವ ಸಂದೇಶವನ್ನು ಕಳುಹಿಸಿದ್ದಾರೆ.ಕಾನ್ಸಸ್ಟೇಬಲ್ ಎಎಸ್ ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಮಗು ನಿಧನ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಬಂಡುಗೊಳ ಅವರು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿಗಳಿರುವ ಗ್ರೂಪ್ಗೆ ಮೆಸೇಜ್ ಹಾಕಿದ್ದಾರೆ. ಅದರಲ್ಲಿ ನನಗೆ ರಜೆ ಸಿಗಲಿಲ್ಲ. ಅದರಿಂದ ಮಗನಿಗೆ ಸರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಲಾಗಿದೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, AS ಬಂಡುಗೋಳ ಯಾವುದೇ…
ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ದೇವಗಿರಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಉಲ್ಲಾಸ್ ಎಂದು ಗುರುತಿಸಲಾಗಿದೆ. ಇಂಜಿನಿಯರಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಮೃತ ಉಲ್ಲಾಸ್, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾ ಆಫೀಸ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 90 ಲಕ್ಷಕ್ಕೂ ಅಧಿಕ ವಂಚನೆ ಎಸಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಹಣ ಪಡೆದು ನಕಲಿ ನೇಮಕಾತಿ ಮಾಡುತ್ತಿದ್ದ ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವೇಣುಗೋಪಾಲ್ ಹಾಗೂ ಅರವಿಂದ್ ಆರೋಪಿಗಳು ಎಂದು ತಿಳಿದು ಬಂದಿದೆ. ಆರೋಪಿಗಳು ಯಲಹಂಕದ ಸುಪ್ರೀಂ ಲೇಔಟ್ ನಲ್ಲಿ ಕಚೇರಿ ಕೂಡ ತೆರೆದಿದ್ದರು. ಅಲ್ಲದೇ ರಾ ಆಫೀಸ್ ಎಂದು ವೇಣುಗೋಪಾಲ ಹಾಗೂ ಅರವಿಂದ್ ಕಚೇರಿಯನ್ನು ಮಾಡಿಕೊಟ್ಟಿದ್ದರು. ಐಡಿ ಕಾರ್ಡ್ ಪ್ರಿಂಟರ್, ಕಲರ್ ಪ್ರಿಂಟರ್ ಹಾಗೂ ನಕಲಿ ಎಸ್ ಆರ್ ಪತ್ತೆಯಾಗಿದ್ದು ಬಂಧಿತರ ಆರೋಪಿಗಳ ಬಳಿ 3 ನಕಲಿ ನೇಮಕಾತಿ ಪತ್ರ ಪತ್ತೆಯಾಗಿದೆ. ಕೆಲಸ ಕೊಡಿಸೋದಾಗಿ ಇದುವರೆಗೂ 40ಕ್ಕೂ ಹೆಚ್ಚು ಜನರಿಗೆ ವಂಚನೆ ಎಸಗಿರುವುದು ಬೆಳಗೆಗೆ ಬಂದಿದೆ. ಸರಕಾರಿ ಕೆಲಸ ಹುಡುಕುವವರನ್ನು ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಆರೋಪಿಗಳು 90 ಲಕ್ಷಕ್ಕೂ ಹೆಚ್ಚು ಹಣ ಪಡೆದಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಪರಿಚಯಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಇದೀಗ ಸಿಸಿಬಿ ಪೋಲಿಸರು ಅರೆಸ್ಟ್ ಮಾಡಿದ್ದಾರೆ. MDMA ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನವಾಗಿದೆ. ಹೌದು ಬೆಂಗಳೂರಿನಲ್ಲಿ ಸಿಸಿಬಿ ಮಾದಕ ದ್ರವ್ಯ ದಳ ಜಂಟಿ ಕಾರ್ಯಚರಣೆ ನಡೆಸಿದ್ದು, ಬಂಧಿತರನ್ನು ನೈಜೀರಿಯಾದ ಎಸ್ಸೋ ಜರ್ಮನ್ ಹಾಗೂ ಜಾನ್ ಚುಕುವಾ ಎಂದು ತಿಳಿದುಬಂದಿದೆ. ಬಂಧಿತರಿಂದ ಸುಮಾರು 17 ಲಕ್ಷ ಮೌಲ್ಯದ 108 ಗ್ರಾಂ MDMA ಹಾಗೂ ಎರಡು ಮೊಬೈಲ್ ಗಳನ್ನು ಆರೋಪಿಗಳಿಂದ ಪೊಲೀಸರು ಸೀಜ್ ಮಾಡಿದ್ದಾರೆ. ಮುಂಬೈನಿಂದ ತಂದು ಪರಿಚಯಸ್ತರು ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಟೂರಿಸ್ಟ್ ವಿಸಾದಡಿ ಈ ಆರೋಪಿಗಳು ಭಾರತಕ್ಕೆ ಬಂದು ನೆಲೆಸಿದ್ದರು. ಈ ಹಿಂದೆಯೂ ಡ್ರಗ್ಸ್ ಕೇಸ್ ನಾಲ್ಜ್ ಬಂಧನಕ್ಕೆ ಒಳಗಾಗಿದ್ದರು. ಜೈಲಿಂದ ರಿಲೀಸ್ ಆಗಿ ಕೆಆರ್ ಪುರಂ ಎಲಿಮೆಂಟ್ಸ್ ನಲ್ಲಿ ಮತ್ತೆ ಡ್ರಗ್ಸ್ ಮಾರಾಟ ಆರಂಭಿಸಿದ್ದಾರೆ.ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು : ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ 2 ಕೇಸ್ ದಾಖಲಾಗಿತ್ತು. ಈ ಕೇಸ್ ಗಳನ್ನು ರದ್ದು ಕೋರಿ ಸಚಿವ ಚೆಲುವರಾಯಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಪೀಠವು ಭೂ ಕಬಳಿಕೆ ನಿಷೇಧ ಕೋರ್ಟ್ ನ 2 ಕೇಸ್ ಗಳನ್ನು ರದ್ದುಗೊಳಿಸಿ ಆದೇಶ ನೀಡಿದೆ. ಈ ಹಿನ್ನೆಲೆ ಸಚಿವ ಚೆಲುವರಾಯ ಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಬೆಂಗಳೂರಿನ ದಾಸನಪುರ ಹೋಬಳಿ ಮಾಕಳಿಯ 3 ಎಕರೆ 13 ಗುಂಟೆ ಜಮೀನು ಕಬಳಿಕೆ ಸಂಬಂಧ ಎರಡು ಕೇಸ್ ದಾಖಲಾಗಿತ್ತು. ಈ ಕೇಸ್ ಗಳನ್ನು ರದ್ದು ಮಾಡುವಂತೆ ಚೆಲುವರಾಯಸ್ವಾಮಿ ಅರ್ಜಿ ಸಲ್ಲಿಸಿದ್ದರು ಜಮೀನಿಗೆ ಸಂಬಂಧಿಸಿದಂತೆ 1923 ರಿಂದಲೇ ಕ್ರಯಪತ್ರವಾಗಿದ್ದು, ಶತಮಾನದ ಹಳೆಯ ದಾಖಲೆ ಇರುವ ಜಮೀನು ಎಂದು ಇದೀಗ 2 ಕೇಸ್ ರದ್ದುಗೊಳಿಸಲಾಗಿದೆ. ನ್ಯಾ ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೀ ಬಸವರಾಜ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಕನ್ನಡದ ಹಲವು ಕಲಾವಿದರು ಭಾಗಿಯಾಗದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನಗೊಂಡಿದ್ದು, ನಮಗೆ ನಿಮ್ಮ ನಟ್ಟು ಬೋಲ್ಟ್ ಎಲ್ಲಿ ಹೇಗೆ ಸರಿ ಮಾಡಬೇಕೆನ್ನುವುದು ಗೊತ್ತಿದೆ ಎಂದು ಹೇಳಿಕೆ ನೀಡಿದರು. ಇದೀಗ ಈ ಒಂದು ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಟೀಕೆ ಮಾಡಲಿ ಅಂತಾನೆ ನಾನು ಆ ಹೇಳಿಕೆ ನೀಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟೀಕೆ ಮಾಡಲಿ ಎಂದೆ ನಾನು ಆ ಹೇಳಿಕೆ ನೀಡಿದ್ದು, ಚಿತ್ರರಂಗದವರಿಗೆ ಎಷ್ಟು ಸಹಾಯ ಮಾಡಿದ್ದೇನೆ ಎಂದು ನನಗೂ ಮತ್ತು ಅವರಿಗೂ ಗೊತ್ತಿದೆ. ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರಬೇಕು. ಅವರು ಬೆಳೆಯಲಿ ಅಂತ ಫಿಲಂ ಫೆಸ್ಟಿವಲ್ ಮಾಡುತ್ತಿರುವುದು. ಅವರೇ ಪ್ರಚಾರ ಮಾಡಬೇಕು ನಾವು ಮಾಡುವುದಕ್ಕೆ ಆಗುತ್ತಾ? ಎಂದು ಪ್ರಶ್ನಿಸಿದರು. ಟಿ.ಎಸ್ ನಾಗಭರಣ ಅವರಿಗೆ ಅಹ್ವಾನ ಕೊಡದೆ ಇರಬಹುದು. ಯಾವ ಇಲಾಖೆಯದ್ದು…
ಕಲಬುರ್ಗಿ : ಇಂದು ಬೆಳ್ಳಂ ಬೆಳಗ್ಗೆ ಕಲ್ಬುರ್ಗಿ ನಗರದ ಕಾಕಡೆ ಚೌಕ್ ಬಳಿ ರೌಡಿಶೀಟರ್ ಅನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಈ ಒಂದು ಘಟನೆ ನಡೆದ ಬಳಿಕ ಕಲ್ಬುರ್ಗಿಯಲ್ಲಿ ಮತ್ತೊಂದು ಭೀಕರವಾದ ಕೊಲೆ ಆಗಿರುವ ಘಟನೆ ವರದಿಯಾಗಿದೆ. ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಾಂತಿ ನಗರದ ನಿವಾಸಿ ಅಹಮದ್ ಫಜಲ್ ಅಲಿಯಾಸ್ ಬಬ್ಲೂ (30) ಎಂದು ತಿಳಿದುಬಂದಿದ್ದು, ಈತನನ್ನು ಕೊಲೆ ಮಾಡಿರುವ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಇದೀಗ ಅಶೋಕ್ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ ಪತ್ನಿ ನಿರ್ಮಲಾ ಅವರು 6 ವರ್ಷಗಳ ಹಿಂದೆ ಫಜಲ್ಗೆ ಪರಿಚಯವಾಗಿದ್ದರು. ಆಗಾಗ ಅವರ ಮನೆಗೆ ಹೋಗಿ ಬರುವುದು ಮಾಡುತ್ತಿದ್ದನು. ಮಾರ್ಚ್ 2ರ ಸಂಜೆ 4ರ ಸುಮಾರಿಗೆ ಶಾಂತಿ ನಗರದಲ್ಲಿರುವ ಚಂದ್ರಶೇಖರ ಮನೆಗೆ ಫಜಲ್ ಹೋಗಿದ್ದರು. ಪತ್ನಿಯೊಂದಿಗಿನ ಸಂಬಂಧದಿಂದ ರೋಸಿ ಹೋಗಿದ್ದ ಚಂದ್ರಶೇಖರ ಫಜಲ್ ಜೊತೆ ಗಲಾಟೆ ಮಾಡಿ ಫಜಲ್…
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಇದೆ ಮಾರ್ಚ್ 22ರಂದು ಕನ್ನಡ ಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಈ ಒಂದು ಕರ್ನಾಟಕ ಬಂದ್ ನಡೆಯುತ್ತೆ. ಇದೀಗ ಇದೆ ವಿಚಾರವಾಗಿ ಸಚಿವ ರಾಮಲಿಂಗ ರೆಡ್ಡಿ ಅವರು ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆದು 8-10 ದಿನಗಳಾಗಿವೆ. ನಮ್ಮ ಬಸ್ ಗಳಿಗೆ ಹಾಗೂ ಸಿಬ್ಬಂದಿಗೆ ಮಹಾರಾಷ್ಟ್ರದವರು ಮಸಿ ಬಳಿದರು. ಈಗ ಕರ್ನಾಟಕ ಬಂದ ಅವಶ್ಯಕತೆ ಇಲ್ಲ. ಹೋರಾಟಗಾರರ ಕನ್ನಡದ ಮೇಲಿನ ಅಭಿಮಾನವನ್ನು ಸ್ವಾಗತಿಸುತ್ತೇವೆ. ಮಾರ್ಚ್ 22 ರಂದು ಬಂದ ಅವಶ್ಯಕತೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಟಿ ರನ್ಯ ರಾವ್ ಅವರನ್ನು ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹೌದು ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ನಲ್ಲಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್ಪೋರ್ಟ್ ನಲ್ಲಿ ವಿದೇಶದಿಂದ ಬಂದ ನಟಿ ರನ್ಯಾ ರಾವ್ ವಶಕ್ಕೆ ಪಡೆದ ಡಿ.ಆರ್.ಐ ತಂಡ. ಏರ್ಪೋರ್ಟ್ ಕಸ್ಟಮ್ಸ್ ಡಿ ಆರ್ ಐ ಅಧಿಕಾರಿಗಳಿಂದ ಸದ್ಯ ರನ್ಯಾ ರಾವ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.ಕಳೆದ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅಧಿಕಾರಿಗಳು ರನ್ಯಾ ಅವರನ್ನು ವಶಕ್ಕೆ ಪಡೆದಿದ್ದಾರೆ. ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿರುವ ನಟಿ ರನ್ಯರಾವ್ ಖಚಿತ ಮಾಹಿತಿಯ ಮೇರೆಗೆ ಡಿ ಆರ್ ಐ ತಂಡ ಏರ್ಪೋರ್ಟ್ಗೆ ಬಂದಿತ್ತು. ನಟಿ ರನ್ಯಾ ಏರ್ಪೋರ್ಟಿಗೆ ಬರುತ್ತಿದ್ದಂತೆ ಅಧಿಕಾರಿಗಳು ಅವರನ್ನು ವಶಕ್ಕೆ…
ಬೆಂಗಳೂರು : ಇಡ್ಲಿ, ಬಟಾಣಿ ಕಲ್ಲಂಗಡಿ ಬಳಿಕ ಇದೀಗ ಬೆಲ್ಲದ ಸರದಿ. ಸಿಹಿಪ್ರಿಯರ ಇಷ್ಟದ ಬೆಲ್ಲದಲ್ಲೂ ಇದೀಗ ವಿಷಕಾರಿ ಅಂಶ ಇದೀಗ ಪತ್ತೆಯಾಗಿದೆ. ಹೌದು ಆಹಾರ ಇಲಾಖೆಯು ಬೆಳೆದ ಸ್ಯಾಂಪಲ್ಸ್ ಗಳನ್ನು ಲ್ಯಾಬ್ ಗೆ ಕಳುಹಿಸಿ ಪ್ರಯೋಗಗಾಲಯದಲ್ಲಿ ಟೆಸ್ಟ್ ಮಾಡಿಸಿದಾಗ, ವರದಿಯಲ್ಲಿ ಬೆಲ್ಲ ಅಸುರಕ್ಷಿತ ಅನ್ನೋದು ಬಯಲಾಗಿದೆ. ಫೆಬ್ರುವರಿಯಲ್ಲಿ ಲ್ಯಾಬ್ ಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಒಟ್ಟು 600ಕ್ಕೂ ಹೆಚ್ಚು ಸ್ಯಾಂಪಲ್ಸ್ ಗಳನ್ನು ಈ ವೇಳೆ ಪರೀಕ್ಷಿಸಲಾಗಿತ್ತು. ಈ ವೇಳೆ 200ಕ್ಕೂ ಹೆಚ್ಚು ಬೆಲ್ಲ ಅಸುರಕ್ಷಿತ ಎಂದು ವರದಿಯಲ್ಲಿ ದೃಢವಾಗಿದೆ. ಬೆಲ್ಲದಲ್ಲಿ ಸಲ್ಫೈರ್ ಡೈಆಕ್ಸೈಡ್ ರಾಸಾಯನಿಕ ಬಳಕೆ ಮಾಡುತ್ತಿರುವ ಪತ್ತೆಯಾಗಿದೆ. ಇಂತಹ ಬೆಲ್ಲ ಸೇವನೆಯಿಂದ ಮೂಳೆ, ನಗರಗಳಲ್ಲಿ ಶಕ್ತಿ ಕಡಿಮೆ ಆಗುತ್ತದೆ. ಸಲ್ಫೈರ್ ಡೈಆಕ್ಸೈಡ್ ನಿಂದ ಮನುಷ್ಯನಲ್ಲಿ ನಿಶಕ್ತಿ ಕಾಣಿಸಿಕೊಳ್ಳುತ್ತದೆ. ಮಂಡಿ ನೋವು, ಸೊಂಟ ಮತ್ತು ಬೆನ್ನು ನೋವು ಹೆಚ್ಚಾಗುತ್ತದೆ. ಅಲ್ಲದೇ ಮನುಷನ ದೇಹದಲ್ಲಿ ವಿವಿಧ ಆರೋಗ್ಯದ ಸಮಸ್ಯೆ ಕಂಡು ಬರುತ್ತದೆ. ಈ ಬೆಲ್ಲ ತಿಂದರೆ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ.…