Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣ ಈಗಾಗಲೇ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಇದರಬಿನಲ್ಲೇ ಇದೀಗ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಬಿಜೆಪಿ ಗಂಭೀರವಾದ ಆರೋಪ ಮಾಡಿದ್ದು ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಕೋಟ್ಯಂತರ ರೂಪಾಯಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಕೆ ಎಸ್ ನವೀನ್ ಬಿಜೆಪಿ ನಾಯಕ ಕೆ.ಎಸ್. ನವೀನ್ ಅವರು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದಂತಹ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಕೋಟಿ ಕೋಟಿಗಟ್ಟಲೇ ಹಣ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಗೋಲ್ಮಾಲ್ನಲ್ಲಿ ಸಚಿವ…
ಬೆಂಗಳೂರು : ಪ್ರಮುಖ ರಾಜ್ಯಗಳ ಲೋಕಸಭಾ ಚುನಾವಣೆಯಲ್ಲಿ ನಕಲಿ ಮತದಾನ ಅಥವಾ ವೋಟ್ ಚೋರಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದೀಗ ರಾಹುಲ್ ಗಾಂಧಿ ಆರೋಪದ ವಿಚಾರವಾಗಿ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರವಾಗಿ ರಾಹುಲ್ ಗಾಂಧಿ ಆರೋಪವನ್ನು ನಾನು ಗಮನಿಸಿದ್ದೇನೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಮಾಹಿತಿ ನೀಡಿದ್ದು ರಾಹುಲ್ ಗಾಂಧಿ ಆರೋಪದ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡುವುದಿಲ್ಲ. ಲಿಖಿತ ರೂಪದಲ್ಲಿ ಮಾಹಿತಿ ನೀಡುತ್ತೇನೆ ಎಂದು ವಿ.ಅನ್ಬುಕುಮಾರ್ ಕುಮಾರ್ ತಿಳಿಸಿದರು. ಆಗಸ್ಟ್ 7, ಮಧ್ಯಾಹ್ನ 2.30 ಕ್ಕೆ ಈ ವರದಿಯನ್ನು ಸಲ್ಲಿಸಿದಾಗ ಚುನಾವಣಾ ಆಯೋಗ ಮತ್ತು ಬಿಜೆಪಿ ಇನ್ನೂ…
ರಾಯಚೂರು : ರಾಯಚೂರಲ್ಲಿ ಇಂದು ಘೋರವಾದ ಘಟನೆ ಒಂದು ನಡೆದಿದ್ದು, ಜಿಲ್ಲೆಯ ಅರಕೇರಾ ತಾಲೂಕಿನ ಆಲ್ದರ್ತಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಅಂಗನವಾಡಿ ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂಗನವಾಡಿ ಶಿಕ್ಷಕಿ ಮೇಲೆಯೇ ಕಟ್ಟಡದ ಸೀಲಿಂಗ್ ಕುಸಿದು ಬಿದ್ದಿದ್ದು, ಅಂಗನವಾಡಿ ಶಿಕ್ಷಕಿ ಮಹಾದೇವಮ್ಮಗೆ ಗಂಭೀರ ಗಾಯಗಳಾಗಿವೆ. ತಲೆ, ಕೈ, ಬೆನ್ನಿಗೆ ತೀವ್ರ ಪೆಟ್ಟುಗಳಾಗಿ ಶಿಕ್ಷಕಿ ಕುಸಿದು ಬಿದ್ದಿದ್ದಾರೆ. ಛಾವಣಿ ಮೇಲ್ಪದರ ಬಿದ್ದ ರಭಸಕ್ಕೆ ಶಿಕ್ಷಕಿ ಕುಳಿತಿದ್ದ ಕುರ್ಚಿ ಮುರಿದುಹೋಗಿದೆ. ಕೂಡಲೇ ಸಹಾಯಕ್ಕೆ ಬಂದ ಗ್ರಾಮಸ್ಥರು ಗಾಯಗೊಂಡ ಶಿಕ್ಷಕಿಯನ್ನ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಂಗನವಾಡಿ ಶಾಲೆಯಲ್ಲಿದ್ದ 20ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್ ಪಾರಾಗಿದ್ದಾರೆ. ಶಿಕ್ಷಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ನವದೆಹಲಿ : ಪ್ರಮುಖ ರಾಜ್ಯಗಳ ಲೋಕಸಭಾ ಚುನಾವಣೆಯಲ್ಲಿ ನಕಲಿ ಮತದಾನ ಅಥವಾ ವೋಟ್ ಚೋರಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಆಗಸ್ಟ್ 7, ಮಧ್ಯಾಹ್ನ 2.30 ಕ್ಕೆ ಈ ವರದಿಯನ್ನು ಸಲ್ಲಿಸಿದಾಗ ಚುನಾವಣಾ ಆಯೋಗ ಮತ್ತು ಬಿಜೆಪಿ ಇನ್ನೂ ಪ್ರತಿಕ್ರಿಯಿಸಿಲ್ಲ. ದೊಡ್ಡ ಪ್ರಮಾಣದ ಕಳ್ಳತನ ಅಥವಾ “ಮತ ಚೋರಿ” ಎಂಬ ತಮ್ಮ ಹೇಳಿಕೆಯನ್ನು ಬೆಂಬಲಿಸುವ ವಿವರವಾದ ಪ್ರಸ್ತುತಿಯ ಭಾಗವಾಗಿ, ಕರ್ನಾಟಕದಲ್ಲಿ ಕಾಂಗ್ರೆಸ್ 28 ಸ್ಥಾನಗಳಲ್ಲಿ 16 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು, ಆದರೆ ಕೇವಲ ಒಂಬತ್ತು ಸ್ಥಾನಗಳನ್ನು ಮಾತ್ರ ಗೆದ್ದಿದೆ ಎಂದು ಅವರು ಹೇಳಿದರು. ಬೆಂಗಳೂರು ಸೆಂಟ್ರಲ್ನಲ್ಲಿನ ಸೋಲು ಅನುಮಾನವನ್ನು ಹುಟ್ಟುಹಾಕಿತು, ವಿಶೇಷವಾಗಿ ಎಂದು ಅವರು…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನಿನ್ನೆ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಂಗಳ ಬಳಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 25-30 ಜನರ ವಿರುದ್ಧ ಕೇಸ್ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇದೀಗ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 30 ಜನರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೇ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕುಡಿತದ ಚಟ ಬಿಡಿಸಲು ನೀಡಿದ್ದ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ನಡೆದಿತ್ತು. ಇದೀಗ ನಾಟಿ ಔಷಧಿ ಸೇವಿಸಿ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಮನೋಹರ್ (30) ಎಂದು ತಿಳಿದುಬಂದಿದೆ. ನೀನೆಯು ಸಹ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿದ್ದರು. ಮೃತರನ್ನು ಸೇಡಂ ತಾಲ್ಲೂಕಿನ ಬುರಗಪಳ್ಳಿ ಗ್ರಾಮದ ಲಕ್ಷ್ಮೀ ನರಸಿಂಹಲು(45) ಹಾಗೂ ಶಹಬಾದ್ ಪಟ್ಟಣದ ನಿವಾಸಿ ಗಣೇಶ್ ರಾಠೋಡ್(30) ಮದಕಲ್ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಮೃತರು. ಇದೇ ಔಷಧಿ ಸೇವಿಸಿದ ಲಕ್ಷ್ಮೀ ನರಸಿಂಹಲು ಅವರ ಪುತ್ರ ನಿಂಗಪ್ಪನರಸಿಂಹಲು ಅವರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಹಾಗೇ ಕುಡಿತದ ಚಟ ಬಿಡಿಸುತ್ತೇನೆ ಎಂಬುದಾಗಿ ಸಾಯಪ್ಪ ಮುತ್ಯಾ ಮದ್ಯ ವ್ಯಸನಿಗಳ ಮೂಗಿನಲ್ಲಿ ಔಷಧಿ ಹಾಕಿದ್ದರು. ಸಾಯಪ್ಪ ಮುತ್ಯಾ ನೀಡಿದಂತ ಔಷಧಿಯಿಂದ ಲಕ್ಷ್ಮೀ ಹಾಗೂ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆ ಮಳೆಯಾಗಿದ್ದು, ಇವತ್ತು ತಡರಾತ್ರಿ ಅಥವಾ ನಾಳೆ ಮುಂಜಾನೆ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ದಾವಣಗೆರೆ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ…
ತುಮಕೂರು : ತುಮಕೂರು ಜಿಲ್ಲೆಯಲ್ಲಿ ಅಪರಿಚಿತ ಶವದ ತುಂಡುಗಳು ಆತಂಕ ಸೃಷ್ಟಿಸಿವೆ. ರಸ್ತೆ ಯುದ್ಧಕ್ಕೂ ಕವರ್ ಗಳಲ್ಲಿ ಶವದ ತುಂಡುಗಳು ಪತ್ತೆಯಾಗಿವೆ. ಕೊಳ್ಳಾಲದ ಮುತ್ಕಾಲಮ್ಮ ದೇವಾಲಯದ ಬಳಿಯಲ್ಲಿ ರಸ್ತೆಯಲ್ಲಿ ಶವದ ತುಂಡುಗಳು ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಲಾರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು 3 ಕಿ.ಮೀ ಅಂತರದಲ್ಲಿ ಐದು ಕಡೆ ಶವದ ತುಂಡುಗಳು ಪತ್ತೆಯಾಗಿವೆ. ಇದೀಗ ಶವದ ತುಂಡುಗಳನ್ನು ಕಂಡು ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಬೆಂಗಳೂರು, (ಆಗಸ್ಟ್ 7) : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್ಐಟಿ ಮಾಡಲು ಒತ್ತಾಯಿಸಿದ್ದರು. ಬಹಳ ಎಚ್ಚರಿಕೆಯಿಂದ ಪರಿಶೀಲನೆ ಮಾಡಿ ಎಸ್ಐಟಿ ರಚಿಸಿದ್ದೇವೆ. ಅನಾಮಿಕ ವ್ಯಕ್ತಿ ಇಲ್ಲಿ ಕೊಲೆಯಾಗಿದೆ, ನಾನೇ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ. ಆ ವ್ಯಕ್ತಿ, ಮ್ಯಾಜಿಸ್ಟ್ರೇಟರ್ ಮುಂದೆ 164 ಹೇಳಿಕೆ ನೀಡಿದ್ದ. ಆತನ ಹೇಳಿಕೆ ಆಧರಿಸಿ ತನಿಖೆ ಮಾಡಬೇಕು ಎಂದು ಮ್ಯಾಜಿಸ್ಟ್ರೀಯಲ್ ಸೂಚನೆಯೂ ಇತ್ತು. ನಾವು ಕೂಡ ಸಾರ್ವಜನಿಕವಾಗಿ ಗಂಭೀರವಾಗಿ ಪರಿಗಣಿಸಿ ಎಸ್ಐಟಿ ಮಾಡಿದ್ದೇವೆ ಎಂದು ತಿಳಿಸಿದರು. ಧರ್ಮಸ್ಥಳದಲ್ಲಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ಇತ್ತು. ಅದರ ಪ್ರಕಾರ 13 ಸ್ಥಳಗಳನ್ನು ತೆಗೆದಿದ್ದಾರೆ. 6ನೇ ಸ್ಥಳದಲ್ಲಿ ಗಂಡಸಿನ ಅಸ್ಥಿಪಂಜರ…
ವಿಜಯಪುರ : ವಿಜಯಪುರದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ವಾಚ್ ವಿಚಾರವಾಗಿ ಗಲಾಟೆ ನಡೆದು 5ನೇ ತರಗತಿ ಬಾಲಕನ ಮೇಲೆ ಹಲ್ಲೆ ನಡೆದಿದೆ. ಆದರೆ ಹಲ್ಲೆಗೊಳಗಾದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ, ವಿಜಯಪುರ ನಗರದ ಹೊರಭಾಗದ ಯೋಗಾಪುರದಲ್ಲಿ ನಡೆದಿದೆ. ಹೌದು ಬಿಹಾರ ಮೂಲದ ಸುನೀಲ್ ಹಾಗೂ ಶೃತಿ ದಂಪತಿ. ಸುನೀಲ್ ಅವರು ನಗರದಲ್ಲಿ ಪಾನಿಪುರಿ ಮಾರಾಟ ಮಾಡಿ ಜೀವನ ಮಾಡುತ್ತಿದ್ದರು. ಇತ್ತ ತನ್ನ ಮಗಾ ಅನ್ಸ್ ನನ್ನು ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗೆ ಸೇರಿಸಿದ್ದರು. ಕಳೆದ 5 ದಿನಗಳ ಹಿಂದೆ ಅನ್ಸ್ ಹಾಕಿಕೊಂಡಿದ್ದ ಅದೊಂದು ವಾಚ್ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಆಗಿತ್ತಂತೆ. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ ಮೇಲೆ ಹಲ್ಲೆ ಮಾಡಿ ವಾಚ್ ಕಿತ್ತುಕೊಂಡಿದ್ದರಂತೆ. ಆ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ಗೆ ಹೊಡೆದ ಕಾರಣ ಆತ ಅಸ್ವಸ್ಥನಾಗಿದ್ದ. ಪೋಷಕರು ಮಗ ಅನ್ಸ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ…