Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಕೂಡ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ನಾಯಕತ್ವ ಬದಲಾವಣೆ ವಿಚಾರವಾಗಿ ಕೆಣಕಿದ್ದರು ಅವರಿಗೆ ಈಗಲೂ ನಾನೇ ಸಿಎಂ ಮುಂದೆಯೂ ನಾನೇ ಸಿಎಂ ಆಗಿರುತ್ತೇನೆ ಅಂತ ಖಡಕ್ ತಿರುಗೇಟು ನೀಡಿದ್ದರು. ಇದೀಗ ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಯಾರೊಬ್ಬ ನಾಯಕನಿಂದ ಬೆಳೆದಿಲ್ಲ ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರು ಹೇಳಬಾರದು ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ ಅಂದಮೇಲೆ ಎಲ್ಲರ ಪಾತ್ರವೂ ಕೂಡ ಇರುತ್ತದೆ ಯಾರು ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಹೈಕಮಾಂಡ್ ಯಾವ ಗೊಂದಲವು ಮಾಡುತ್ತಿಲ್ಲ ಆದರೆ ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಖಡಕ್ ಸಂದೇಶ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಯಾವಾಗಲೂ ಕೂಡ ಯಾರೇ ಲೀಡರ್ ಬಂದರು, ಕಾಂಗ್ರೆಸ್ ಕಾರ್ಯಕರ್ತರು ಸಪೋರ್ಟ್ ಮಾಡುತ್ತಾರೆ. ಅದಕ್ಕೆ ಯಾರು ನನ್ನಿಂದ ಆಗಿದೆ ನಾನು ಪಕ್ಷ…
ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ : 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆಸಿದ ಕಂಟೇನರ್ ಚಾಲಕ : ನಾಲ್ವರಿಗೆ ಗಾಯ!
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿ ಸರಣಿ ಅಪಘಾತ ಸಂಭವಿಸಿದ್ದು ಕಂಟೇನರ್ ಚಾಲಕನೊಬ್ಬ ಸಿಕ್ಕಸಿಕ್ಕ ವಾಹನೆಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾಗಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಬೆಸ್ತಮಾನ ಹಳ್ಳಿಯಿಂದ ಚಂದಾಪುರದವರಿಗೆ ಈ ಒಂದು ಸರಣಿ ಅಪಘಾತ ಸಂಭವಿಸಿದ್ದು ಪೊಲೀಸರು 14 ಕಿಲೋಮೀಟರ್ ಹಿಂಬಾಲಿಸಿದರು ಕೂಡ ಚಾಲಕ ಕಂಟೆನರ್ ನಿಲ್ಲಿಸಿರಲಿಲ್ಲ. ಬಳಿಕ ಚಂದಾಪುರದಲ್ಲಿ ಸಾರ್ವಜನಿಕರು ಕಲ್ಲು ತೂರಿದಾಗ ಚಾಲಕ ಕಂಟೆನರ್ ನೆಲೆಸಿದ್ದಾನೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವದಂಪತಿಗಳು ಬೈಕ್ನಲ್ಲಿ ಚಲಿಸುತ್ತಿದ್ದರು. ಈ ವೇಳೆ ಕೆಟ್ಟು ನಿಂತ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರಲ್ಲಿ ನಡೆದಿದೆ. ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ನವವಿವಾಹಿತ ದಂಪತಿ ತೆರಳುತ್ತಿದ್ದ ದ್ವಿಚಕ್ರವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ, ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ನವವಿವಾಹಿತೆ ವರ್ಷಿಣಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು, ಸವಾರ ಸುರೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವರ್ಷಿಣಿ ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದವರು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸುರೇಂದ್ರ ಅವರ ಜೊತೆಗೆ ಮದುವೆಯಾಗಿದ್ದರು.ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಂದ್ರರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದ್ದು ಸಿಐಡಿ ಅಧಿಕಾರಿಗಳು ಇದೀಗ ಬೈರತಿ ಬಸವರಾಜ್ ಅವರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇದರ ಮಧ್ಯ ಭೈರತಿ ಬಸವರಾಜ್ ಅವರು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿದಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ಮಧ್ಯಂತರ ಜಾಮೀನು ಅರ್ಜಿ ಬಗ್ಗೆ ಅದೇಶಿಸಲು ಇದೀಗ ಕೋರ್ಟ್ ನಿರಾಕರಿಸಿದೆ. ಅಲ್ಲದೇ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಸೂಚಿಸಿದೆ. ಈ ವೇಳೆ ವಿಚಾರಣೆ ಸೋಮವಾರಕ್ಕೆ ಮುಂದೂಡಿ ಕೋರ್ಟ್ ಆದೇಶಸಿದೆ. ಈ ಒಂದು ಪ್ರಕರಣದಲ್ಲಿ ಭೈರತಿ ಬಸವರಾಜ ಪತ್ತೆಗಾಗಿ ಅಧಿಕಾರಿಗಳು ಮೂರು ತಂಡಗಳನ್ನು ರಚಿಸಿದ್ದಾರೆ. ಗೋವಾ ಮಹಾರಾಷ್ಟ್ರದಲ್ಲಿ ಎರಡು ತಂಡಗಳಿಂದ ಈಗಾಗಲೇ ಹುಡುಕಾಟ ನಡೆಸಲಾಗುತ್ತಿದ್ದು ಇನ್ನೂ ನಿನ್ನೆ ಬೆಳಗಾವಿ ಅಧಿವೇಶನ ಮುಗಿದ ಬಳಿಕ ಭೈರತಿ ಬಸವರಾಜ್ ಯಾವ ರಸ್ತೆಯ ಮೂಲಕ ತೆರಳಿದ್ದಾರೆ ಎನ್ನುವುದರ ಕುರಿತು ಸಿಐಡಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ವಿಶೇಷ ಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕನೊಬ್ಬ ಕ್ರೌರ್ಯ ಮೆರೆದಿದ್ದಾನೆ. ಮಕ್ಕಳ ಕಾಲಿನ ಮೇಲೆ ಕಾಲಿಟ್ಟು ಶಿಕ್ಷಕ ಬೆಲ್ಟ್ ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಶಿಕ್ಷಕ ದಂಪತಿಗಳು ಸೇರಿದಂತೆ ಒಟ್ಟು ನಾಲ್ವರನ್ನು ನವನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬಾಗಲಕೋಟೆ ನವನಗರದ 45ನೇ ಸೆಕ್ಟರ್ ನಲ್ಲಿ ಇರುವಂತಹ ವಿಶೇಷ ಚೇತನ ಮತ್ತು ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಮಕ್ಕಳ ಕಾಲ ಮೇಲೆ ಕಾಲಿಟ್ಟು ಬೆಲ್ಟ್ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ ಅಕ್ಷಯ್ ಇಂಗಳ್ಕರ್ ಎಂಬ ನೀಚ ಶಿಕ್ಷಕ ಹಲ್ಲೆ ಮಾಡಿದ್ದಾನೆ. ಇನ್ನು ಈ ಒಂದು ಹಲ್ಲೆ ಮಾಡುತ್ತಿರುವ ವಿಡಿಯೋ ಚಿತ್ರೀಕರಣ ಮಾಡಿದ್ದ ಅಮೀದ ಎಂಬ ಮಹಿಳೆಯನ್ನು ಕೂಡ ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಕಾರಣ ಇಷ್ಟೇ ಕೆಲಸ ಮಾಡದೆ ಇದ್ದದ್ದಕ್ಕೆ ಕೋಪಗೊಂಡು…
ಬೆಂಗಳೂರು : ಕೇಂದ್ರ ಗೃಹ ಸಚಿವರ ಬಗ್ಗೆ ಅಹ ಸಂಸದೀಯ ಪದ ಬಳಕೆ ವಿಚಾರವಾಗಿ ಪ್ರಿಯಾಂಕ ಖರ್ಗೆ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದು, ಪ್ರಿಯಾಂಕ್ ಖರ್ಗೆ ನಾಲಿಗೆ ಹರಿಬಿಡುವುದನ್ನು ಕಡಿಮೆ ಮಾಡಬೇಕು ಪ್ರಿಯಾಂಕ ಹೆಸರಿನ ಪಕ್ಕದಲ್ಲಿ ಖರ್ಗೆ ಎಂಬುದು ಇಲ್ಲದಿದ್ದರೆ ಮಂಡಲ್ ಪಂಚಾಯತಿ ಸದಸ್ಯ ಕೂಡ ಆಗುತ್ತಿರಲಿಲ್ಲ ಎಂದು ಬೆಂಗಳೂರಿನಲ್ಲಿ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ಎಂಬುದೇ ವಂಶ ಪಾರಂಪರ್ಯದ ಸಂತತಿ. ಕಾಂಗ್ರೆಸ್ ಪಕ್ಷದ ನೀತಿಗಳು ದೇಶವನ್ನು ಹಾಳು ಮಾಡುತ್ತಿವೆ. ಸದನದಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದೆ ಪ್ರಿಯಾಂಕ್ ಪರಾರಿ ಆಗುತ್ತಿದ್ದಾರೆ. ಯಾಕೆಂದರೆ ಪ್ರಿಯಾಂಕ ಖರ್ಗೆ ಅವರ ಸಾಧನೆ ಶೂನ್ಯ. ಬೇರೆಯವರ ಉತ್ತರ ಸಂಧರ್ಭದಲ್ಲಿ ಬಂದು ಟೀಕೆ ಮಾಡುತ್ತಾರೆ ಎಂದು ಕಿಡಿ ಕಾರಿದರು. ತಂದೆ ಹೆಸರಿನಲ್ಲಿ ಬದುಕುತ್ತಿರುವ ಪ್ರಿಯಾಂಕ ಖರ್ಗೆ ಜನಾನೂರೋಗಿ.ಮಲ್ಲಿಕಾರ್ಜುನ ಖರ್ಗೆ ಅವರೇ ಮಗನಿಗೆ ಬುದ್ಧಿ ಹೇಳಿ ಮಗ ತಂದೆಯ ಹೆಸರು ಹಾಳುಮಾಡುವ ಕೆಲಸ ಮಾಡಬಾರದು.ಸದನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಅರಿವು ಕೂಡ…
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೆಳಗಾವಿ ಅಧಿವೇಶನದಲ್ಲೂ ಭಾರಿ ಚರ್ಚೆ ಆಯಿತು. ಇದೀಗ ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಅಂದರೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದೆಹಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂಬ ಪ್ರಶ್ನೆಗೆ, ‘ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ಶೀಟ್ ಕೋರ್ಟ್ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದರು. ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ಅಲ್ಲಿನ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ,…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ವಿಶೇಷ ಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕನೊಬ್ಬ ಕ್ರೌರ್ಯ ಮೆರೆದಿದ್ದಾನೆ. ಮಕ್ಕಳ ಕಾಲಿನ ಮೇಲೆ ಕಾಲಿಟ್ಟು ಶಿಕ್ಷಕ ಬೆಲ್ಟ್ ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಬಾಗಲಕೋಟೆ ನವನಗರದ 45ನೇ ಸೆಕ್ಟರ್ ನಲ್ಲಿ ಇರುವಂತಹ ವಿಶೇಷ ಚೇತನ ಮತ್ತು ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಮಕ್ಕಳ ಕಾಲ ಮೇಲೆ ಕಾಲಿಟ್ಟು ಬೆಲ್ಟ್ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ ಅಕ್ಷಯ್ ಇಂಗಳ್ಕರ್ ಎಂಬ ನೀಚ ಶಿಕ್ಷಕ ಹಲ್ಲೆ ಮಾಡಿದ್ದಾನೆ. ಕಾರಣ ಇಷ್ಟೇ ಕೆಲಸ ಮಾಡದೆ ಇದ್ದದ್ದಕ್ಕೆ ಕೋಪಗೊಂಡು ಮಕ್ಕಳ ಮೇಲೆ ಈ ರೀತಿ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಅಲ್ಲದೇ ವಿಡಿಯೋ ಮಾಡುತ್ತಿರುವ ಕೆಲವು ಹೆಣ್ಣು ಮಕ್ಕಳು ಕೂಡ ಮಕ್ಕಳ ಮೇಲೆ ಹಲ್ಲೆ ಮಾಡುತ್ತಿರುವುದನ್ನು ನೋಡಿ ನಗುತ್ತಿದ್ದಾರೆ. ಇದೀಗ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಆಗಲೇಬೇಕು ಎಂದು ಪೋಷಕರು ಆಗ್ರಹಿಸುತ್ತಿದ್ದಾರೆ.
ಗದಗ : ಕಾನೂನು ಸಚಿವ ಹೆಚ್ ಕೆ ಪಾಟೀಲ್ ಗೆ ಫೇಸ್ಬುಕ್ ನಲ್ಲಿ ವ್ಯಕ್ತಿ ಒಬ್ಬ AK-47 ಗನ್ ನಿಂದ ಗುಂಡಿನ ಮಳೆಗರೆಯಬೇಕು ಅಂತ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿ ವೀರಣ್ಣ ಬೀಳಗಿ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಸಚಿವ ಎಚ್ ಕೆ ಪಾಟೀಲ್ ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ. ಫೇಸ್ಬುಕ್ನಲ್ಲಿ ಜೀವ ಬೆದರಿಕೆ ಹಾಕಿದ್ದ ವೀರಣ್ಣ ಬೀಳಗಿಯನ್ನ ಇದೀಗ ಅರೆಸ್ಟ್ ಮಾಡಲಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಸೂಡಿ ಗ್ರಾಮದ ವೀರಣ್ಣ ಬೀಳಗಿ (47) ಎಂಬಾತ AK-47 ಗನ್ ನಿಂದ ಗುಂಡಿನ ಮಳೆಗರೆಯಬೇಕು ಅಂತ ಹೇಳಿದ್ದ. ಡಿಸೆಂಬರ್ 14ರಂದು ವೀರಣ್ಣ ಬೀಳಗಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ವಿರುದ್ಧ ದೂರು ನೀಡಲಾಗಿತ್ತು. ದೂರಿನ ಅನ್ವಯ ಇದೀಗ ಆರೋಪಿ ವೀರಣ್ಣ ಪೀಳಿಗೆಯನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಅಜಿತ್ ಅಲಿಯಾಸ್ ಮಲಯಾಳಿ ಅಜಿತ್ ನನ್ನ ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಸಿಐಡಿ ಪೋಲೀಸರು ಅರೆಸ್ಟ್ ಮಾಡಲು ಮುಂದಾಗಿದ್ದರು.ಆ ವೇಳೆ ನಾನು ವಕೀಲ ಅರೆಸ್ಟ್ ಮಾಡಲು ನೋಟಿಸ್ ನೀಡಬೇಕು ಅಂತ ಹೇಳಿದ್ದ. ಎಸ್ ಪಿ ಹಂತದ ಅಧಿಕಾರಿ ನೋಟಿಸ್ ನೀಡಬೇಕು ಎಂದು ಕೋರ್ಟ್ ಮೊರೆ ಹೋಗಿದ್ದ. ಈ ಹಿನ್ನೆಲೆ ಕೋರ್ಟ್ನಲ್ಲಿ ಸಿಐಡಿ ಅಧಿಕಾರಿಗಳು ವಾದ ಮಂಡಿಸಿದರು. ಅಜಿತ್ ನನ್ನು ವಶಕ್ಕೆ ಪಡೆಯಲು ನ್ಯಾಯಾಲಯ ಈ ವೇಳೆ ಅವಕಾಶ ನೀಡಿತ್ತು. ಇದೀಗ ವಕೀಲ ಅಜಿತ್ ಅಲಿಯಾಸ್ ಮಲಯಾಳಿ ಅಜಿತನನ್ನ ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.













