Author: kannadanewsnow05

ಹಾಸನ : ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವಿಧ ಕಾರ್ಯಕ್ರಮಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಭಾಗಿಯಾಗಿದ್ದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡಿದ್ದು ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಬೆಂಬಲಿಗರು ಘೋಷಣೆ ಕೂಗಿದ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಕೋಡಿಮಠದ ಬಳಿ ನಡೆದಿದೆ. ಕೋಡಿ ಮಠದ ಸ್ವಾಮೀಜಿ ಜೊತೆ ಚರ್ಚಿಸಿ ಹೊರ ಬಂದಾಗ ಘೋಷಣೆ ಕೂಗಲಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿಕೆ ಶಿವಕುಮಾರ್ ತಾಳೆಗರಿ ಭವಿಷ್ಯ ಕೇಳಿದ್ದಾರೆ. ಸ್ವಾಮೀಜಿ ಭೇಟಿಯಾಗಿ ಡಿಕೆ ಶಿವಕುಮಾರ್ ಹೊರ ಬಂದಾಗ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದರು.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಮತ್ತೆ ಜಾಬ್ ಸದ್ದು ಮಾಡುತ್ತಿದ್ದು, ಪ್ರಾಧ್ಯಾಪಕನೊಬ್ಬ ಟ್ರಿಪ್ ಗೆ ಎಂದು ಕರೆದೋಯ್ದು ಹಿಜಾಬ್ ಧರಿಸುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯಿಸಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಸಹ ಪ್ರಧ್ಯಾಪಕ ಅಬ್ದುಲ್ ಮಜೀದ್ ವಿರುದ್ಧ ವಿದ್ಯಾರ್ಥಿಗಳು ಈ ಒಂದು ಆರೋಪ ಮಾಡಿದ್ದು, ಕೇಂದ್ರೀಯ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಅಬ್ದುಲ್ ಮಜಿದ್ ಕಲ್ಬುರ್ಗಿ ಮತ್ತು ಬೀದರ್ ಜಿಲ್ಲೆಯ ಹಲವು ವಿದ್ಯಾರ್ಥಿನಿಯರನ್ನು ಕರೆದೋಯ್ದಿದ್ದ. ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ಸ್ಥಳಗಳಿಗೆ ಹೆಚ್ಚು ಪ್ರವಾಸ ಮಾಡಿದ್ದಾರೆ ಎಂದು ಆರೋಪ ಸಹ ಕೇಳಿ ಬಂದಿದೆ. ಈ ಕುರಿತು ವಿದ್ಯಾರ್ಥಿನಿಯರು ವಿವಿಯ ವಿಸಿ ಪ್ರೊ. ಭಟ್ಟು ನಾರಾಯಣ್ ಅವರಿಗೆ ದೂರು ಸಲ್ಲಿಸಿದ್ದಾರೆ.

Read More

ಹುಬ್ಬಳ್ಳಿ : ರಾಜ್ಯದ ಬಿಪಿಎಲ್ ಪಡಿತರಿಗೆ ಈಗಾಗಲೇ ಸರ್ಕಾರ 10 ಕೆಜಿ ಅಕ್ಕಿ ವಿತರಿಸುತ್ತಿದೆ. ಅದರ ಜೊತೆಗೆ ಇನ್ನು ಮುಂದೆ ಬೇಳೆ ಎಣ್ಣೆ ಸಹ ಕೊಡುವ ಚಿಂತನೆ ನಡೆಯುತ್ತಿದೆ ಎಂದು ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ಗಳನ್ನು ಪರಿಷ್ಕಣೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರ ಲಿಮಿಟ್ ಹೇರಿದೆ. ರಾಜ್ಯದಲ್ಲಿ 17 ಲಕ್ಷ ಹೆಚ್ಚುವರಿ ಕಾರ್ಡಿಗೆ ಪಡಿತರ ನೀಡಲಾಗುತ್ತಿದೆ. ಅದನ್ನು ಹೆಚ್ಚು ಮಾಡಬೇಕು ಎಂದು ಮನವಿ ಮಾಡಿದ್ದೇವೆ. ಜೋಳ ಖರೀದಿಸಿ ಮೂರು ತಿಂಗಳು ಬಿಟ್ಟರೆ ಹುಳಾ ಆಗುತ್ತಿವೆ. ಹೀಗಾಗಿ ಖರೀದಿಸಿದ ತಕ್ಷಣ ಹಂಚಿಕೆ ಮಾಡಲು ಹೇಳಿದ್ದೇನೆ ಎಂದರು. ಪಡಿತರರಿಗೆ ಇನ್ನುಮುಂದೆ ಅಕ್ಕಿ ಜೊತೆಗೆ ಬೇಳೆ, ಎಣ್ಣೆ ಕೊಡುವ ಬಗ್ಗೆಯೂ ಚಿಂತನೆ ನಡೆದಿದೆ. ಕಾಳಸಂತೆಯಲ್ಲಿ ಪಡಿತರ ವಿಚಾರವಾಗಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಸಚಿವ ಕೆ.ಎನ್ ರಾಜಣ್ಣ ಸೆಪ್ಟೆಂಬರ್ ನಲ್ಲಿ ರಾಜ್ಯದಲ್ಲಿ ಕ್ರಾಂತಿ ಅಗಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಯಾವುದೇ…

Read More

ಮಗ ಮಾತ್ರ ಮಾತು ಕೇಳುವುದಿಲ್ಲವೇ? ಮಾತು ಕೇಳದ ಹೆಣ್ಣು ಮಕ್ಕಳೂ ಇದ್ದಾರೆ. ಏನ್ ಮಾಡೋದು. ಈಗಿನ ಕಾಲದಲ್ಲಿ ಮಕ್ಕಳಿರುವವರ ವಿರುದ್ಧ ಮಾತನಾಡುವುದು ಫ್ಯಾಶನ್ ಆಗಿಬಿಟ್ಟಿದೆ. ನಿಮ್ಮ ಮನೆಯಲ್ಲಿ ನಿಮ್ಮ ಮಗ ಅಥವಾ ಮಗಳು ಯಾರೇ ಇರಲಿ, ನೀವು ಈ ಪರಿಹಾರವನ್ನು ಮಾಡಬಹುದು. ನೀವು ಈ ದೇವಾಲಯಕ್ಕೆ ಭೇಟಿ ನೀಡಬಹುದು. ಇದೇ ವೇಳೆ ನನ್ನ ಮಗು ದಾರಿ ತಪ್ಪುತ್ತದೆ. ಅಡ್ಮಿಷನ್ ಚೆನ್ನಾಗಿಲ್ಲ, ಅಭ್ಯಾಸ ಚೆನ್ನಾಗಿಲ್ಲ, ಓದುವುದರಲ್ಲಿ ಆಸಕ್ತಿ ಇಲ್ಲ, ಅಪ್ಪ-ಅಮ್ಮ ಹೇಳುವ ಒಳ್ಳೆ ಮಾತು ಕೇಳೋಕೆ ಮನಸ್ಸಿಲ್ಲ, ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಲು ಇಲ್ಲಿದೆ ಸರಳ ಆಧ್ಯಾತ್ಮಿಕ ಉಪಾಸನೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಚಿಕ್ಕಮಗಳೂರು : ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ 103 ಚಾರಣಿಗ ರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ 103 ಜನರ ವಿರುದ್ಧ FIR ದಾಖಲಾಗಿದೆ. ಹೌದು ವಿಶೇಷದಲ್ಲಿ ಬೆಂಗಳೂರು ಮೂಲದ 103 ಜನರು ಟ್ರಕ್ಕಿಂಗ್ ಗೆ ತೆರಳಿದ್ದರು. ಇದೀಗ ಪೊಲೀಸರು 103 ದಿನದ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ. ಕರ್ನಾಟಕ ಪೊಲೀಸ್ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿದ್ದಾರೆ. ಅರಣ್ಯ ಪ್ರದೇಶಕ್ಕೆ ಪ್ರವಾಸಿಗರು ಟ್ರೇಕ್ಕಿಂಗ್ ಗೆ ತೆರಳಿದ್ದರು. ಸ್ಥಳೀಯರ 6ಪಿಕಪ್ ವಾಹನಗಳ ಮೇಲು ಕೂಡ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿ ದಂಡ ಹಾಕಿ ಪ್ರವಾಸಿಗರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮುಡಿಗೇರಿ ತಾಲೂಕಿನ ಬಿದರಿತಳ ಗ್ರಾಮದಲ್ಲಿ ಬೆಂಗಳೂರು ಮೂಲದ 103 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಪ್ರದೇಶಕ್ಕೆ ಪ್ರವಾಸಿಗರನ್ನು ಟ್ರಕ್ಕಿಂಗ್ ಗೆ ಕರೆದೊಯ್ದಿದ್ದರು. ಎರಡು ಬಸ್…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿ ಈ ಒಂದು ಘಟನೆ ನಡೆದಿದೆ. ಕೃಷಿ ಹೊಂಡದ ನೀರಿನಲ್ಲಿ ಮುಳುಗುತ್ತಿದ್ದವನ ರಕ್ಷಣೆಗೆ ಹೋಗಿ ಮತ್ತೊಬ್ಬ ಸಹ ಸಾವನಪ್ಪಿದ್ದಾನೆ. ಓರ್ವ ಬಾಲಕನ ಶವವನ್ನು ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೆಗೆದಿದ್ದು ಮತ್ತೊಬ್ಬ ಬಾಲಕನ ಶವಕ್ಕಾಗಿ ಅಗ್ನಿಶಾಮಕದಳ ಶೋಧ ಕಾರ್ಯ ನಡೆಸುತ್ತಿದೆ.ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಪ್ಪಳ : ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದಲ್ಲಿರುವ ಬಲ್ಡೊಟಾ ಕಂಪನಿ ವಿರುದ್ಧ ಹೋರಾಟ ಮತ್ತೊಂದು ಹಂತ ತಲುಪಿದ್ದು, ಬಲ್ಡೊಟಾ ಕಾರ್ಖಾನೆ ಒಳಗಿರುವ ಕೆರೆಯ ಮುಂದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರಣ ಏನೆಂದರೆ ಬಲ್ಡೊಟಾ ಕಾರ್ಖಾನೆಯಲ್ಲಿರುವ ಕೆರೆಯ ಬಳಿ ಜಾನುವಾರುಗಳನ್ನು ಬಿಡದಂತೆ ಭದ್ರತಾ ಸಿಬ್ಬಂದಿಗಳು ತಡೆದಿದ್ದಾರೆ. ಕೆರೆಯಲ್ಲಿ ನೀರು ಕುಡಿಯಲು ಬರುವ ಜಾನುವಾರುಗಳನ್ನು ಸಿಬ್ಬಂದಿಗಳು ತಡೆದಿದ್ದರು. ವಿರೋಧ ವ್ಯಕ್ತಪಡಿಸಿದ್ದ ರೈತರ ಮೇಲೆ ಭದ್ರತಾ ಸಿಬ್ಬಂದಿಗಳು ಹಲ್ಲೆ ನಡೆಸಿದ್ದರು. ನಿನ್ನೆ ಕುರಿಗಾಹಿ ಮೇಲೆ ಬಲ್ಡೋಟ ಕಾರ್ಖಾನೆಯ ಸಿಬ್ಬಂದಿ ಹಲ್ಲೆ ನಡೆಸಿದ್ದರು. ರೊಚ್ಚಿಗೆದ್ದ ರೈತರು ಮತ್ತು ಸ್ಥಳೀಯರು ಭದ್ರತಾ ಸಿಬ್ಬಂದಿಗೆ ಥಳಿಸಿದರು. ಈ ಕುರಿತು ಕೊಪ್ಪಳ ಗ್ರಾಮಾಂತರ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಕೊಪ್ಪಳ ಗ್ರಾಮದ ರ ಠಾಣೆಯಲ್ಲಿ 50 ಜನರ ವಿರುದ್ಧ ಕೇಸ್ ದಾಖಲಾಗಿದೆ. ಕಾರ್ಖಾನೆ ಸಿಬ್ಬಂದಿ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಜಿಲ್ಲಾ ಆಂದೋಲನ ರೈತರ ಹೋರಾಟಕ್ಕೆ ಸಮಿತಿ ಸಹ ಬೆಂಬಲ ನೀಡಿದೆ.

Read More

ಬಿಹಾರ್ : ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕೊಲ್ಕತ್ತಾದಲ್ಲಿ ಯುವತಿ ಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು. ಇದೀಗ ಬಿಹಾರದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಗೃಹ ರಕ್ಷಕ ದಳ ನೇಮಕಾತಿಯಲ್ಲಿ ಪ್ರಜ್ಞೆ ತಪ್ಪಿದ ಮಹಿಳೆಯ ಮೇಲೆ ಆಂಬುಲೆನ್ಸ್ ನಲ್ಲಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಹೌದು ಬಿಹಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಗಯಾದಲ್ಲಿ ಹೋಮ್ ಗಾರ್ಡ್ ನೇಮಕಾತಿ ಪರೀಕ್ಷೆಯ ಸಮಯದಲ್ಲಿ ಮೂರ್ಛೆ ಹೋದ ನಂತರ ಆ ಮಹಿಳೆಯನ್ನು ಆ್ಯಂಬುಲೆನ್ಸ್​​ನಲ್ಲಿ ಕರೆದುಕೊಂಡು ಹೋಗಲಾಯಿತು. ಆ್ಯಂಬುಲೆನ್ಸ್ ಒಳಗೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಾಕಿಂಗ್ ಘಟನೆ ನಡೆದಿದೆ. ಪ್ರಜ್ಞೆ ತಪ್ಪಿದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಚಾಲಕ ಮತ್ತು ತಂತ್ರಜ್ಞನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಆ್ಯಂಬುಲೆನ್ಸ್ ಚಲಾಯಿಸುತ್ತಿದ್ದ ಗಯಾದ ಉಟ್ರೆನ್ ಗ್ರಾಮದ ವಿನಯ್ ಕುಮಾರ್ ಮತ್ತು…

Read More

ಬೆಂಗಳೂರು : ಯಾವಾಗಲೂ ಯಾವುದಾದರೂ ಒಂದು ವಿಷಯದ ಕುರಿತು ಹೇಳಿಕೆ ನೀಡಿ ಸುದ್ದಿಯಲ್ಲಿರುವ ನಟ ಪ್ರಥಮ್ ಗೆ ಇದೀಗ ಜೀವ ಬೆದರಿಕೆ ಬಂದಿದೆ. ದೇವಸ್ಥಾನಕ್ಕೆ ಹೋದಾಗ ಕಿಡಿಗೇಡಿಗಳು ಅವರನ್ನು ಕರೆದೊಯ್ದು ರಾಡ್ ನಿಂದ ಹಲ್ಲೆಗೆ ಯತ್ನಿಸಿ, ಜೀವ ಬಿದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ. ಸಿನಿ ಚಿತ್ರೀಕರಣವೊಂದಕ್ಕೆ ತೆರಳೋದಕ್ಕೂ ಮುನ್ನ ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿದ್ದಾರೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್‌ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದಾರೆ. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದಿದ್ದಾರೆ. ಈ ವೇಳೆ ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಛವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡ ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದಾರೆ.…

Read More

ಬೆಂಗಳೂರು : ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಅಂಗನವಾಡಿಗೆ ತೆರಳಿದ್ದ ಸ್ವಂತ ಅಣ್ಣನ ಮಗನನ್ನೇ ಪಾಪಿಯೊಬ್ಬ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿತ್ತು. ಇದೀಗ ಬೆಂಗಳೂರಲ್ಲಿ ಅಂತದ್ದೇ ಘಟನೆ ನಡೆದಿದ್ದು, ಪಾಪಿಯೊಬ್ಬ ರಾಡ್ ನಿಂದ ಹೊಡೆದು ಅಣ್ಣನ ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ಕಮ್ಮಸಂದ್ರ ದಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ಇಶಾಕ್ (9) ಹಾಗೂ ಜುನೈದ್ (7) ಸ್ಥಳದಲ್ಲೇ ಸಾವನಪ್ಪಿದ್ದಾರೆ ಬಾಲಕ ಮಹಮ್ಮದ್ ರೋಹನ್ (5) ಸ್ಥಿತಿ ಗಂಭೀರವಾಗಿದೆ. ಸ್ವಂತ ಅಣ್ಣನ ಮಕ್ಕಳನ್ನೇ ದುರುಳ ಖಾಸಿಂ ರಾಡ್ ನಿಂದ ಮತ್ತು ಕಲ್ಲಿನಿಂದ ಹೊಡೆದು ಹತ್ಯೆ ಗೈದಿದ್ದಾನೆ. ಪೋಷಕರು ಕೆಲಸಕ್ಕೆ ಹೋಗಿದ್ದಾಗ ಖಾಸಿಂ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ಇಬ್ಬರೂ ಸ್ಥಳದಲ್ಲಿ ಸಾವನ್ನಪ್ಪಿದ್ದು ಮತ್ತೊಬ್ಬ ಸ್ಥಿತಿ ಚಿಂತಾಜನಕವಾಗಿದೆ.ಅಜ್ಜಿ ತರಕಾರಿ ತರಲು ಮಾರ್ಕೆಟ್ ಗೆ ತೆರಳಿದ್ದಾಗ ಖಾಸಿಂ ಅಣ್ಣನ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ.

Read More