Author: kannadanewsnow05

ಬೆಂಗಳೂರು : ಬೆಂಗಳೂರು ದರೋಡೆ ಪ್ರಕರಣದಲ್ಲಿ ತನಿಖೆಯಲ್ಲಿ ಭಾಗಿಯಾದ ಸಿಬ್ಬಂದಿಗಳಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಿ ಅಭಿನಂದಿಸಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ ಕುಮಾರ್ ಸಿಂಗ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೋಮವಾರ ಅವರನ್ನು ಅಭಿನಂದಿಸುತ್ತೇವೆ. ಈ ಒಂದು ಪ್ರಕರಣಭೇದಿಸಿದ ಎಲ್ಲಾ ಸಿಬ್ಬಂದಿಗಳಿಗೆ 5 ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಘೋಷಿಸಿದರು. ಘಟನೆ ನಡೆದ ದಿನ ಹಣ ತೆಗೆದುಕೊಂಡು ಹೋದ ವಾಹನ ಹಿಡಿಯಲಿಕ್ಕೆ ಆಗ್ಲಿಲ್ಲ. ಅನೇಕ ವಾಹನ ಬಳಸಿದ್ದಾರೆ. ವಾಹನಗಳ ನಂಬರ್ ಪದೇ ಪದೇ ಬದಲಿಸಿದ್ದಾರೆ.ಸಿಸಿಟಿವಿ ಇಲ್ಲದ ಕಡೆಯಲ್ಲಿ ಆರೋಪಿಗಳು ಓಡಾಡಿದ್ದಾರೆ. ವಾಹನವನ್ನು ಸಿಸಿಟಿವಿ ಇಲ್ಲದ ಜಾಗದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾದಲ್ಲಿ ಆರೋಪಿಗಳನ್ನು ಹುಡುಕಾಟ ನಡೆಸಿದ್ದಾರೆ. ಇನ್ನೂ ಹಣ ರಿಕವರಿ ಆಗಬೇಕು. 200 ಸ್ಟಾಪ್ ಬಳಕೆ ಮಾಡಲಾಗಿದೆ. 30 ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆ ಮಾಡಲಾಗಿದೆ. ಮೂವರು ಬಂಧಿಸಲಾಗಿದೆ ಎಂದು ವಿವರಿಸಿದ್ದಾರೆ. ಸಿಸಿಟಿವಿ ಇಲ್ಲದ ಕಡೆಯಲ್ಲಿ ಆರೋಪಿಗಳು ಓಡಾಡಿದ್ದಾರೆ. ವಾಹನವನ್ನು ಸಿಸಿಟಿವಿ…

Read More

ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ ಪ್ರಕರಣವನ್ನು ಬೆಂಗಳೂರು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಪ್ರಕರಣದಲ್ಲಿ 5.76 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸ್ಪಷ್ಟನೆ ನೀಡಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು, ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಈಗ ಸದ್ಯ 3 ಆರೋಪಗಳನ್ನು ಬಂಧಿಸಲಾಗಿದೆ. 5.76 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಈಗ ಸದ್ಯ 3 ಆರೋಪಿಗಳನ್ನು ಬಂಧನ ಮಾಡಲಾಗಿದೆ. 30 ತಾಸು ತಡವಾಗಿ ಮಾಹಿತಿ ಬಂದಿದೆ. ಮೊದಲು ಡಿಜೆ ಹಳ್ಳಿಯಲ್ಲಿ ಆಗಿದೆ ಅಂತ ಮಾಹಿತಿ ಬಂದಿತ್ತು. ಘಟನೆ ನಡೆದ ಒಂದೂವರೆ ಗಂಟೆಯ ಬಳಿಕ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎಲ್ಲಾ ಭಾಗಗಳಲ್ಲಿ ನಾಕಾಬಂಧಿ ಹಾಕಲಾಗಿತ್ತು. ದರೋಡೆಕೋರರು…

Read More

ಬೆಂಗಳೂರು : ಬೆಂಗಳೂರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ ಬಳಿಯಿಂದ ಪೊಲೀಸರು 6,700 ತ್ಯಾಪೆನ್ಡನಾಲ್ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ಈತ ಕಾಲೇಜು ವಿದ್ಯಾರ್ಥಿಗಳಿಗೆ ಇನ್ನೂರರಿಂದ ಐನೂರು ರೂ.ಗೆ ಒಂದು ಮಾತ್ರೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಮಾತ್ರೆಗಳಿಂದ ಸೈಕೋಟ್ರಾಫಿಕ್ ಎಫೆಕ್ಟ್ ಆಗಿ ಮತ್ತು ಬರುತ್ತದೆ ಎಂದು ತಿಳಿದು ಬಂದಿದೆ. ಬೇರೆ ರಾಜ್ಯದಿಂದ ಆರೋಪಿ ಮಾತ್ರೆಗಳನ್ನು ತರಿಸಿ, ಮಾರಾಟ ಮಾಡುತ್ತಿದ್ದ. ಆರೋಪಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಯೋಗೇಶ್ವರ್‌ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್‌ ಖುಲಾಸೆ ಮಾಡಿದೆ. ಹೌದು ಮೆಗಾ ಸಿಟಿ ಪ್ರಾಜೆಕ್ಟ್‌ ವಂಚನೆ ಆರೋಪದಲ್ಲಿ 9 ಕೇಸ್‌ಗಳಿದ್ದವು. ಈ ಹಿಂದೆ 3 ಕೇಸ್‌ಗಳಲ್ಲಿ ಯೋಗೇಶ್ವರ್‌ ಖುಲಾಸೆ ಆಗಿದ್ದರು. ಇದೀಗ ಮತ್ತೆ ಎರಡು ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾರೆ. ಇನ್ನೂ 4 ಪ್ರಕರಣಗಳು ಕೋರ್ಟ್‌ನಲ್ಲಿ ಬಾಕಿಯಿವೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ ವಿಚಾರಣೆ ನಡೆಸಿತು. ನ್ಯಾ. ಕೆ.ಎನ್.ಶಿವಕುಮಾರ್ ಅವರು ತೀರ್ಪು ಪ್ರಕಟಿಸಿದ್ದಾರೆ.

Read More

ಬೆಂಗಳೂರು : ವಿಕ್ರಾಂತ ಭಾರತ ಪತ್ರಿಕೆ ಸಂಪಾದಕರು, ವೈಚಾರಿಕತೆ ಚಿಂತಕರಾಗಿದ್ದ ಬಾಗಲಕೋಟ ಜಿಲ್ಲೆ ಜಮಖಂಡಿಯ ಎಂ.ಸಿ.ಗೊಂದಿ(94) ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ)ಸಂತಾಪ ವ್ಯಕ್ತಪಡಿಸಿದೆ. ಬಾಗಕೋಟ ಭಾಗದಲ್ಲಿ ಕಾನಿಪ ಕಟ್ಟಿ ಬೆಳೆಸುವಲ್ಲಿ ಗೋಂದಿ ಅವರ ಸೇವೆ ಅನನ್ಯವಾಗಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಜಮಖಂಡಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರನ್ನು ಗೌರವಿಸಲಾಗಿತ್ತು ಎಂದು ನೆನಪಿಸಿಕೊಂಡಿರುವ ತಗಡೂರು, ಗೋಂದಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ

Read More

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸ್ಥಾನಕ್ಕೆ ಕಿತ್ತಾಟ ನಡೆಯುತ್ತಿದೆ. ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಅಂತ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಾರೆ ಮತ್ತೊಂದೆಡೆ ಸಿದ್ದರಾಮಯ್ಯ ಅವರನ್ನು ತೆಗಿರಿ ಅಂತ ಡಿಕೆ ಶಿವಕುಮಾರ್ ದೆಹಲಿಗೆ ಹೋಗುತ್ತಾರೆ ಸಿಎಂ ಸ್ಥಾನ ನನಗೆ ಬೇಕು ಅಂತ ಡಿಕೆ ಶಿವಕುಮಾರ್ ಹೇಳುತ್ತಿದ್ದಾರೆ ಆದರೆ ಸಿಎಂ ಸ್ಥಾನ ಬಿಡಲು ಸಿದ್ಧರಾಮಯ್ಯ ತಯಾರಿಲ್ಲ ಅದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಮಗೆ ಆಡಳಿತ ನಡೆಸಲು ಆಗದಿದ್ದರೆ ಬಿಟ್ಟು ಮನೆಗೆ ಹೋಗಿ. ಸರ್ಕಾರ ಬಿದ್ದು ಹೋಗಲಿ ಅನ್ನೋದು ನಮ್ಮ ಉದ್ದೇಶ ಅಲ್ಲ. ರಾಜ್ಯದಲ್ಲಿ ಈಗ ಶಾಸಕರ ಖರೀದಿ ಜೋರಾಗಿದೆ. ರಾಜ್ಯದಲ್ಲಿ ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟುವುದಿಲ್ಲ. ಯಾವುದೇ ಕಾರಣಕ್ಕೂ ಈ ಸರ್ಕಾರ ಬೀಳಲಿ ಅಂತ ಬಯಸುವುದಿಲ್ಲ. ರಾಜ್ಯದ ಜನ ಬಹುಮತ ನೀಡಿದ್ದು ಐದು ವರ್ಷ ಸರ್ಕಾರ ನಡೆಸಲಿ ಅಂತ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಹಲಾದ ಜೋಶಿ ಹೇಳಿಕೆ ನೀಡಿದರು. ಇನ್ನು…

Read More

ಚಾಮರಾಜನಗರ : ಬೆಂಗಳೂರಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಇದೀಗ ವ್ಯಾಪಾರಿಯ ಕಾರು ಅಡ್ಡಗಟ್ಟಿ ಕೋಟ್ಯಾಂತರ ಮೌಲ್ಯದ ನಾಣ್ಯ ದರೋಡೆ ಮಾಡಲಾಗಿದ. ಹೌದು ಕೇರಳದ ದರೋಡೆ ಗ್ಯಾಂಗ್ ಒಂದು ತಡರಾತ್ರಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಬಂಡಿಪುರ ಅರಣ್ಯದಲ್ಲಿ ಚಿನ್ನದ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಮೂಲೆಹೊಳೆ ಮೂಲಕ ಕೇರಳಕ್ಕೆ ಚಿನ್ನದ ವ್ಯಾಪಾರಿ ತೆರಳಿದ್ದ. ವ್ಯಾಪಾರವನ್ನು ಹಿಂಬಾಲಿಸಿ ಕೆರಳ ಗ್ಯಾಂಗ್ ದರೋಡೆ ಮಾಡಿದೆ. ಕಳೆದ 3-4 ವರ್ಷಗಳಿಂದ ಈ ಒಂದು ಕೇರಳ ಗ್ಯಾಂಗ್ ಸಕ್ರಿಯವಾಗಿದೆ ದೂರು ನೀಡಲು ಚಿನ್ನದ ವ್ಯಾಪಾರಿ ಮೀನಾ ಮೇಷ ಎಣಿಸುತ್ತಿದ್ದು, ಪ್ರಕರಣದ ಮಾಹಿತಿ ಸೋರಿಕೆ ಆಗದಂತೆ ವ್ಯಾಪಾರಿ ನೋಡಿ ಅಂತ ಹೇಳಿದ್ದ. ಪೊಲೀಸರು ಗದರಿದ ನಂತರ ವ್ಯಾಪಾರಿ ಗುಂಡ್ಲುಪೇಟೆ ಠಾಣೆಗೆ ಬಂದಿದ್ದಾನೆ ದೂರು ನೀಡಲು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ವ್ಯಾಪಾರಿ ಬಂದಿದ್ದಾನೆ. ಸದ್ಯ ಪೊಲೀಸರಿಂದ ಚೆಕ್ಪೋಸ್ಟ್ ಬಳಿಯ ಸಿಸಿ ಕ್ಯಾಮೆರಾ…

Read More

ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಕುರ್ಚಿಗಾಗಿ ಜಟಾಪಟಿ ನಡೆಯುತ್ತಿದ್ದರೆ, ಇನ್ನೊಂದು ಕಡೆ ಕೆಲವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಇದರ ಮಧ್ಯ ಮಾಗಡಿ ಶಾಸಕ ಹೆಚ್ಚಿಸಿ ಬಾಲಕೃಷ್ಣ ಅವರಿಗೆ ನಾಗಾಸಾದಿಗಳು ನೀನು ಮಂತ್ರಿ ಆಗುತ್ತಿಯಾ ಅಂತ ಆಶೀರ್ವಾದ ಮಾಡಿದ್ದಾರೆ. ಹೌದು ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ನಿವಾಸಕ್ಕೆ ಇಂದು ನಾಗಾಸಾಧುಗಳು ಇಂದು ಭೇಟಿ ನೀಡಿದ್ದರು. ಉತ್ತರ ಪ್ರದೇಶದ ನಾಗ ಸಾಧುಗಳಿಂದ ಶಾಸಕ ಹೆಚ್. ಸಿ ಬಾಲಕೃಷ್ಣಗೆ ಆಶೀರ್ವಾದ ನೀಡಿದ್ದು ನೀನು ಮಂತ್ರಿ ಆಗುತ್ತೀಯ. ಮಂತ್ರಿ ಆಗುವ ಯೋಗ ನಿನಗೆ ಬಂದಿದೆ ಎಂದು ನಾಗಸಾಧುಗಳು ಆಶೀರ್ವದಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಶಾಸಕರ ನಿಯೋಗ ದೆಹಲಿಗೆ ಭೇಟಿ ನೀಡಿದ ವಿಚಾರವಾಗಿ ನನ್ನ ನೇತೃತ್ವದಲ್ಲಿ ಹೋಗಿಲ್ಲ. ಇಲ್ಲಿ ಯಾರ ನೇತೃತ್ವದ ಅವಶ್ಯಕತೆ ಇಲ್ಲ. ಡಿಕೆ ಶಿವಕುಮಾರ್ ಸಿಎಂ ಆಗಲು ಅವರದೇ ಆದ ಶಕ್ತಿ ಇದೆ. ಯಾರೋ ಹೋಗಿ ಸಿಎಂ ಮಾಡುತ್ತೇವೆ ಅಂತ ಅಥವಾ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ಇದೀಗ ನಾಯಕತ್ವ ಪಟ್ಟಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಬಹುದೊಡ್ಡ ಜಟಾಪಟಿ ನಡೆಯುತ್ತಿದ್ದು ಒಂದು ಕಡೆ ನಾನೇ ಐದು ವರ್ಷ ಸಿಎಂ ಆಗಿರುತ್ತೇನೆ, ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಕೆಲವು ಸಚಿವರು ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ಅವರನ್ನು ಭೇಟಿಯಾಗಿದ್ದಾರೆ. ಇದರ ಮಧ್ಯ ನೆನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೆಡಿಎಸ್ ಎಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಏಕೆಂದರೆ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರಣಿ ಹಾಗೂ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಶಾಸಕ ವೀರೇಂದ್ರ ಪಪ್ಪಿ ಪರಪ್ಪನ ಅಗ್ರಹಾರ ಜೈಲಲ್ಲಿ ಇದ್ದಾರೆ. ಅವರನ್ನು ಭೇಟಿಯಾಗಿ ನಮಗೆ ಬೆಂಬಲ ನೀಡುವಂತೆ ಶಾಸಕರ ಸಹಿ ಸಂಗ್ರಹ ಮಾಡುವುದಕ್ಕೆ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟಿದ್ದರು ಎಂದು…

Read More

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ 11 ಲಕ್ಷ್ಮ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಎಲ್ಲ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು CMS ನಿಂದ 7 ಕೋಟಿ ದೋಚಿ ಪರಾರಿಯಾಗಿದ್ದ ಬಹುತೇಕ ಎಲ್ಲ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ದಕ್ಷಿಣ ವಿಭಾಗದ ಪೊಲೀಸರು ಇಂದು ಮತ್ತೋರ್ವ ಸಿಎಂಎಸ್ ಸಿಬ್ಬಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ಇದುವರೆಗೂ 6 ಕೋಟಿ 70 ಲಕ್ಷಕ್ಕೂ ಅಧಿಕ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಮತ್ತೋರ್ವ ಸಿಎಂಎಸ್ ಸಿಬ್ಬಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸ್ರು ಸಿಎಂಎಸ್ ಸಿಬ್ಬಂದಿ ಗೋಪಿಯ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಎಂಎಸ್ ವಾಹನದ ಚಲನೆಯನ್ನು ಗೋಪಿ ನೋಡಿಕೊಳ್ಳುತ್ತಿದ್ದ. ಹಣ ತುಂಬಿದ ವ್ಯಾನ್ ಚಲನೆಯ ಒಲನೆ ಕುರಿತು ಗೋಪಿ ಮಾಹಿತಿ ನೀಡಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Read More