Author: kannadanewsnow05

ಹುಬ್ಬಳ್ಳಿ : ಎಲ್ಲಿಯವರೆಗೆ ರಾಜ್ಯದಲ್ಲಿ ಬಿಜೆಪಿ ಕುಟುಂಬ ಮುಕ್ತ ಆಗುವುದಿಲ್ಲವೋ, ಅಲ್ಲಿಯವರೆಗೆ ನಾನು ಬಿಜೆಪಿಗೆ ಮರು ಸೇರ್ಪಡೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಾಗ್ದಾಳಿ ಮುಂದುವರೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪೂಜ್ಯರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನಮ್ಮದಲ್ಲ. ಪೂಜ್ಯರನ್ನು ಯಾರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಗೊತ್ತಿದೆ. ಮಠಮಾನ್ಯಗಳಿಗೆ ಹಣ ನೀಡಿದ್ದು ನಾವೇ ಎಂದು ಬಹಳ ಮಾತನಾಡುತ್ತಾರೆ ಎಲ್ಲಿಯವರೆಗೆ ಒಂದು ಕುಟುಂಬದಿಂದ ಬಿಜೆಪಿ ಮುಕ್ತ ಆಗುವುದಿಲ್ಲವೋ, ಅಲ್ಲಿಯವರೆಗೆ ನಾನು ಬಿಜೆಪಿಗೆ ಮರು ಸೇರ್ಪಡೆ ಆಗಲ್ಲ ಎಂದರು. ಆ ಕುಟುಂಬ ಉತ್ತರ ಕರ್ನಾಟಕದವರ ಜೊತೆ ಹೇಗೆ ನಡೆದುಕೊಂಡಿದ್ದಾರೆ. ನೀರಾವರಿ ವಿಚಾರದಲ್ಲಿ ಬಹಳ ದೊಡ್ಡ ದ್ರೋಹವಾಗಿದೆ. ಭಾರತೀಯ ಜನತಾ ಪಕ್ಷದಲ್ಲಿ ಎಷ್ಟೋ ಜನ ಮುಖ್ಯಮಂತ್ರಿ ಆಗಿದ್ದಾರೋ ಅವರೆಲ್ಲರೂ ಉತ್ತರ ಕರ್ನಾಟಕದವರ ಆಶೀರ್ವಾದದಿಂದ ಆಗಿದ್ದು. ಬೆಂಗಳೂರಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುತ್ತಾರೆ ಅಂತೆ.…

Read More

ಹುಬ್ಬಳ್ಳಿ : ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉದ್ಘಾಟನೆಯಾಗಿದ್ದಾರೆ. ಆದರೂ ಸಹ ಶಾಸಕ ಯತ್ನಾಳ್ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದು, ಇದೀಗ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ಕೊಡುತ್ತೇನೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ನೀನು ರಾಜೀನಾಮೆ ಕೊಟ್ಟು ಚುನಾವಣೆಗೆ ಬಾ ಎಂದು ಬಿ.ವೈ ವಿಜಯೇಂದ್ರಗೆ ಶಾಸಕ ಯತ್ನಾಳ್ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ರಾಜೀನಾಮೆ ಕೊಡುತ್ತೇನೆ, ನೀನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಾ ಚುನಾವಣೆ ಎದುರಿಸೋಣ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದರು. ನಾನು ಕೇವಲ ಭಗವಾ ಧ್ವಜದ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಶಾಸಕ…

Read More

ಚಾಮರಾಜನಗರ : ಸಾಮಾನ್ಯವಾಗಿ ಮನೆಯಲ್ಲಿ ಕರೆಂಟ್ ಹೋದ ಸಂದರ್ಭದಲ್ಲಿ ಮೇಣದಬತ್ತಿ ಹಚ್ಚುವುದು ಹಿಂದಿನಿಂದಲೂ ಬಂದಂತಹ ಒಂದು ವಾಡಿಕೆ. ಆದರೆ ಚಾಮರಾಜನಗರದಲ್ಲಿ ಈ ಒಂದು ಮೇಣದಬತ್ತಿಯಿಂದ ಘೋರವಾದ ದುರಂತ ಒಂದು ಸಂಭವಿಸಿದ್ದು ವ್ಯಕ್ತಿಯೊಬ್ಬರು ಬೆಂಕಿಯಲ್ಲಿ ಸಜೀವವಾಗಿ ದಹನಗೊಂಡಿದ್ದಾರೆ. ಈ ಒಂದು ಘಟನೆ ಚಾಮರಾಜನಗರದ ಮೂಡಗೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಸಿದ್ದೇಶ್ (41) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಿದ್ದೇಶ್ ವಿದ್ಯುತ್ ಇಲ್ಲದೆ ಮನೆಯಲ್ಲಿ ಮೇಣದ ಬತ್ತಿಯನ್ನು ಹಚ್ಚಿಟ್ಟಿದ್ದ. ರಾತ್ರಿ ಮಲಗಿದ್ದಾಗ ಮೇಣದಬತ್ತಿ ಹಾಸಿಗೆ ಮೇಲೆ ಬಿದ್ದಿತ್ತು. ಈ ವೇಳೆ ಹಾಸಿಗೆ ಸಮೇತ ಬೆಂಕಿಯಲ್ಲಿ ಬಿದ್ದು ಸಿದ್ದೇಶ್ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

Read More

ತುಮಕೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಿತ್ತು. ಆದರೆ ಈ ಒಂದು ಕಾನೂನಿಗೆ ಕ್ಯಾರೆ ಎನ್ನದ ಮೈಕ್ರೋ ಫೈನಾನ್ಸ್ ಗಳು ಇದೀಗ ಕಿರುಕುಳವನ್ನು ಮುಂದುವರಿಸಿದ್ದು, ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಣ್ಣಿನ ವ್ಯಾಪಾರಿ ವಿಡಿಯೋ ಮಾಡಿ ಲೈವ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹೌದು ತುಮಕೂರಿನಲ್ಲಿ ವಿಷ ಕುಡಿದ ಹಣ್ಣಿನ ವ್ಯಾಪಾರಿ ಕಿರುಕುಳಕ್ಕೆ ತಾಳದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಲಾಗಿದೆ. ಮಂಡ್ಯ ಮೂಲದ ಮುಜೀಬ್ ಎಂಬ ಹಣ್ಣಿನ ವ್ಯಾಪಾರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೀಟರ್ ಬಡ್ಡಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದರು. ಬಡ್ಡಿ ಕಿರುಕುಳ ತಾಳದೆ ಮುಜೀಬ್ ಮಂಡ್ಯದಿಂದ ತುಮಕೂರಿಗೆ ಬಂದಿದ್ದ. ಈ ವೇಳೆ ಲೈವ್ ವಿಡಿಯೋ ದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ…

Read More

ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯ ಕಣೆಕಲ್ ರಸ್ತೆಯ ರಾಣಿತೋಟದಲ್ಲಿ ವೆಂಕಟೇಶ್ ಎನ್ನುವ ವ್ಯಕ್ತಿಯ ಭೀಕರ ಕೊಲೆಯಾಗಿತ್ತು. ಈ ಒಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಕೊಲೆಯಾದ 24 ಗಂಟೆಯೊಳಗೆ 11 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಆದರೆ ಈ ಒಂದು ಕೊಲೆಯ ಹಿಂದಿನ ರಹಸ್ಯ ಬೇಧಿಸಿದ ಪೊಲೀಸರು ಸ್ವತಃ ಬೆಚ್ಚಿಬಿದ್ದಿದ್ದಾರೆ. ಹೌದು ಕೊಲೆ ಸಂಬಂಧ 24 ಗಂಟೆಯಲ್ಲೇ 11 ಆರೋಪಿಗಳ ಬಂಧನವಾಗಿದೆ. ನಿನ್ನೆ ಕಣೆಕಲ್ ರಸ್ತೆಯ ರಾಣಿ ತೋಟದಲ್ಲಿ ವೆಂಕಟೇಶ್ ಕೊಲೆ ಆಗಿತ್ತು. ಶುಕ್ರವಾರ ಬೆಳಗಿನ ಜಾವ ವೆಂಕಟೇಶ್ ಕೊಲೆಯಾಗಿತ್ತು. ಆದರೆ ಈ ಕೊಲೆಯ ಹಿಂದೆ ಪತ್ನಿಯ ಕೈವಾಡ ಇರುವುದು ಪತ್ತೆಯಾಗಿದೆ. ಪತಿಯ ಕೊಲೆಗೆ ಪತ್ನಿ ನೀಲವೇಣಿ ಸುಪಾರಿ ಕೊಟ್ಟಿದ್ದಳು ಎನ್ನಲಾಗಿದೆ. ಹೌದು ಆನಂದ್ ಜೊತೆಗೆ ಪತ್ನಿ ನೀಲವಣಿಗೆ ವ್ಯವಹಾರದ ಸಂಬಂಧ ಸಲುಗೆ ಇತ್ತು. ಸಲುಗೆ ಅಕ್ರಮ ಸಂಬಂಧಕ್ಕೆ ತಿರುಗಿತ್ತು. ನೀಲವೇಣಿ ನಡತೆಯ ಬಗ್ಗೆ ಪತಿ ವೆಂಕಟೇಶ್ ಸಂಶಯ ಪಟ್ಟಿದ್ದ. ಇದೇ ಕಾರಣಕ್ಕೆ ಪದೇ ಪದೇ ವೆಂಕಟೇಶ್ ಮತ್ತು ಪತ್ನಿ ನೀಲವೇಣಿ ಮಧ್ಯೆ ಗಲಾಟೆ…

Read More

ಬೆಂಗಳೂರು : ಸಾಲದ ಹಣದ ಕಂತು ಪಡೆಯಲು ಹೋದ ಬ್ಯಾಂಕ್​ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪ ಪ್ರಕರಣ ನಗರದಲ್ಲಿ ನಡೆದಿದೆ. ನಾಗರಭಾವಿಯ 2ನೇ ಹಂತದಲ್ಲಿರುವ ಬಿಡಿಎ ಕಾಂಪ್ಲೆಕ್ಸ್​ನಲ್ಲಿ ಏಪ್ರಿಲ್ 1ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಂಕ್​ ಸಿಬ್ಬಂದಿ ಚಂದನ್​ ಬಿ. ಎಂ. ಎಂಬಾತನ ಮೇಲೆ ಕಲ್ಲುಗಳಿಂದ ಮಾರಣಾಂತಿಕವಾಗಿ ಹಲ್ಲೆಗೈದು, ಜೀವಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ಚಂದನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ನೀಡಿರುವ ದೂರಿನನ್ವಯ ಏಪ್ರಿಲ್​ 4ರಂದು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದ್ವಿಚಕ್ರ ವಾಹನ ಖರೀದಿಸಲು ಖಾಸಗಿ ಬ್ಯಾಂಕ್‌ನ ಮೂಲಕ ಸಾಲ ಪಡೆದಿದ್ದ ರಮೇಶ್, ಎರಡು ತಿಂಗಳುಗಳಿಂದ ಇಎಂಐ ಪಾವತಿಸಿರಲಿಲ್ಲ. ಇಎಂಐ ಹಣ ವಸೂಲಿ ಮಾಡಲು ಬ್ಯಾಂಕ್‌ನ ಸಿಬ್ಬಂದಿ ಚಂದನ್ ರಮೇಶ್ ಮನೆ ಬಳಿ ತೆರಳಿದ್ದರು.ಈ ವೇಳೆ ‘ಹಣ ಪಾವತಿ ಮಾಡಲ್ಲ’ ಎಂದು ರಮೇಶ್ ಹೇಳಿದಾಗ, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅದೇ ಸಂದರ್ಭದಲ್ಲಿ ಕೈ ಮತ್ತು ಕಲ್ಲುಗಳಿಂದ ತನ್ನ…

Read More

ಬೆಂಗಳೂರು : ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸಹಕಾರ ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಪ್ರಕರಣಕ್ಕೆ ಸಬಂಧಿಸಿದಂತೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಸಿಐಡಿಯ ಡಿಜಿಪಿ ಡಾ.ಎಂ.ಎ.ಸಲೀಂ ಮೌಖಿಕವಾಗಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಶುಕ್ರವಾರ ಭೇಟಿಯಾಗಿ ಈವರೆಗೆ ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ನಡೆದಿರುವ ವಿಚಾರಣೆ ಕುರಿತು ಡಿಜಿಪಿ ವಿವರಣೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ವಿಚಾರಣೆಯಲ್ಲಿ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಪೂರಕವಾದ ಯಾವುದೇ ಪೂರಾವೆಗಳು ಲಭ್ಯವಾಗಿಲ್ಲ ಎನ್ನಲಾಗಿದೆ. ಪ್ರಕರಣ ಸಂಬಂಧ ಸಚಿವ ರಾಜಣ್ಣ ಅವರ ಆಪ್ತ ಸಹಾಯಕ, ವಿಶೇಷಾಧಿಕಾರಿ ಹಾಗೂ ಗನ್ ಮ್ಯಾನ್‌ಗಳನ್ನು ಕೂಡ ವಿಚಾರಣೆ ನಡೆಸಲಾಗಿದೆ. ಆದರೆ ಕೃತ್ಯದ ಬಗ್ಗೆ ತಮಗೇನು ಗೊತ್ತಿಲ್ಲವೆಂದು ಅವರು ಹೇಳಿಕೆ ನೀಡಿದ್ದಾರೆ. ಹೀಗಾಗಿ ಸಚಿವ ರಾಜಣ್ಣ ಅವರ ವಿಚಾರಣೆ ನಡೆಸಬೇಕಿದ್ದು, ಸಚಿವರ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಘೋರವಾದ ಘಟನೆ ನಡೆದಿದ್ದು 14 ವರ್ಷದ ಬಾಲಕನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರಿನ ಅರಗ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಸುಭಾಷ್ ಎಂದು ತಿಳಿದುಬಂದಿದೆ.ಮೃತ ಸುಭಾಷ್ ಮರಿಯಾಲ ಗ್ರಾಮದ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.ಇಂದು ಮಧ್ಯಾಹ್ನದ ವೇಳೆ ತಮ್ಮ ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತಂತೆ ಸುಭಾಶ್ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈತ ತನ್ನ ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.

Read More

ಬೆಂಗಳೂರು : ಕೋವಿಡ್ 19 ಅವಧಿಯಲ್ಲಿ ನಡೆದ ಅಕ್ರಮದ ವರದಿಯನ್ನು ಇಂದು ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ಅಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಯಿತು. ಕಾವೇರಿ ನಿವಾಸದಲ್ಲಿ ಕೋವಿಡ್ ಅಕ್ರಮದ ವರದಿಯನ್ನು ನಿವೃತ್ತ ನ್ಯಾ. ಜಾನ್ ಮೈಕಲ್ ಕುನ್ಹಾ ಆಯೋಗ ವರದಿ ಸಲ್ಲಿಸಿತು. ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುಮಾರು 7 ಸಂಪುಟವುಳ್ಳ ವರದಿ ಸಲ್ಲಿಕೆ ಮಾಡಲಾಯಿತು. ಒಟ್ಟು 7 ವಾಲ್ಯೂಮ್ ನ 1,808 ಪುಟಗಳು ಇರುವ ವರದಿಯನ್ನು ಸಲ್ಲಿಕೆ ಮಾಡಿತು. ಆಯೋಗವು 1,808 ಪುಟಗಳಿರುವ ವರದಿಯನ್ನು ಸಲ್ಲಿಕೆ ಮಾಡಿತು. ಕೊರೋನಾ ಸಂದರ್ಭದಲ್ಲಿ ನಡೆದ ಹಗರಣಗಳ ಕುರಿತಂತೆ ತನಿಖೆ ನಡೆಸಲು, 2023ರ ಅಗಸ್ಟ್ 25 ರಂದು ಆಯೋಗ ರಚಿಸಲಾಗಿತ್ತು. 2024 ಅಕ್ಟೋಬರ್ 31 ರಂದು ಮೊದಲ ಮಧ್ಯಂತರ ಅವಧಿ ಸಲ್ಲಿಕೆ ಮಾಡಲಾಗಿತ್ತು. 11 ಸಂಪುಟಗಳಲ್ಲಿದ್ದ ಮೊದಲ ತನಿಖೆಯ ವರದಿ ಸಲ್ಲಿಸಲಾಗಿತ್ತು. ಇದೀಗ ಎರಡನೇ ಮಧ್ಯಂತರ ವರದಿಯನ್ನು ಆಯೋಗ ಸಲ್ಲಿಸಿದೆ.

Read More

ಉತ್ತರಕನ್ನಡ : ಕೆರೆಯಲ್ಲಿ ಈಜಲು ತೆರಳಿದ್ದ 13 ವರ್ಷದ ಬಾಲಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ತಿಮ್ಮಾಪುರ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು, ಕೆರೆಯಲ್ಲಿ ಮುಳುಗಿ ನವಾಜ್ ಖಾಜಾ (13} ಎನ್ನುವ ಬಾಲಕ ಸಾವನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ತಿಮ್ಮಾಪುರ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ

Read More