Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ಇದೀಗ ಬಿಜೆಪಿ ದೂರು ನೀಡಿದೆ. ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದೆ. ಜಯನಗರ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದಲ್ಲಿ ದೂರು ಸಲ್ಲಿಕೆಯಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಪ್ರಚಾರದಲ್ಲಿ ಬಿಜೆಪಿ ಕುರಿತು ಪ್ರದೀಪ್ ಈಶ್ವರ್ ನೀಡಿದ್ದ ಹೇಳಿಕೆ ವಿರುದ್ಧ ದೂರು ನೀಡಲಾಗಿದೆ. ಪ್ರಚಾರದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚಂದ್ರಶೇಖರ ಭಾಗಿಯಾಗಿದ್ದ.
ಬೀದರ್ : ಆಡುಗಳನ್ನು ಕಟ್ಟಿದ್ದ ಕೊಟ್ಟಿಗೆಗೆ ಬೆಂಕಿ ತಗುಲಿದ ಪರಿಣಾಮವಾಗಿ ಕೊಟ್ಟಿಗೆಯಲ್ಲಿದ್ದ 45 ಆಡು ಹಾಗೂ ಓರ್ವ ವ್ಯಕ್ತಿ ಸಜೀವ ದಹನವಾದ ಹೃದಯವಿದ್ರಾವಕ ಘಟನೆ ತಾಲೂಕಿನ ಬೋರಾಳ್ ಗ್ರಾಮದಲ್ಲಿ ಮಂಗಳವಾರ ಸಾಯಂಕಾಲ ನಡೆದಿದೆ. ಬೋರಾಳ್ ಗ್ರಾಮದ ನಿವಾಸಿ ಶಂಕರ್ ಮೇತ್ರೆ (62) ಮೃತ ವ್ಯಕ್ತಿ. ಶಂಕರ್ ಮೇತ್ರೆ ಅವರು ಗ್ರಾಮದ ಹೊರ ವಲಯದಲ್ಲಿರುವ ಜಮೀನಿನಲ್ಲಿ ಶೆಡ್ ಹಾಕಿಕೊಂಡು ಆಡುಗಳ ಸಾಕಾಣಿಕೆ ಮಾಡುತ್ತಿದ್ದರು. ಎಂದಿನಂತೆ ಆಡುಗಳನ್ನು ಮೇಯಿಸಿಕೊಂಡು ಬಂದು ಕೊಟ್ಟಿಗೆ ಒಳಗಡೆ ಹಾಕಿ ತಾವು ಕೂಡ ಅಲ್ಲೇ ಮಲಗಿದ್ದರು. ಮಂಗಳವಾರ ಸಾಯಂಕಾಲ ಸುಮಾರು 7 ಗಂಟೆಗೆ ಮೇಕೆ ಶೆಡ್ಗೆ ಆಕಸ್ಮಿಕ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್ನಲ್ಲಿ ಅಣ್ಣನ ಬರುವಿಕೆಗೆ ಕುಟುಂಬದೊಂದಿಗೆ ಆರ್ಯನ್ ಕೂಡ ಕಾಯುತ್ತಿದ್ದ. ಈ ವೇಳೆ ಏಕಾಏಕಿ ರಸ್ತೆಯತ್ತ ಓಡಿದ ಮಗುವನ್ನು ಬಸ್ ಚಾಲಕ ಗಮನಿಸದ ಕಾರಣ ಮಗು ಬಸ್ ಚಕ್ರಕ್ಕೆ ಸಿಲುಕಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ಪರಿಶೀಲಿಸಿದಾಗ ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ತಿಳಿದ ಕೂಡಲೇ ಪಶ್ಚಿಮ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಲಕನ ನಿರ್ಲಕ್ಷ್ಯವೇ ಕಾರಣವೇ ಎಂಬುದರ…
ನವದೆಹಲಿ : ಜಾಗತಿಕ ಮಟ್ಟದಲ್ಲಿ ಯುದ್ಧದ ಭೀತಿ ಮತ್ತು ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳ ನಡುವೆಯೂ ಭಾರತದ ಜನತೆಗೆ ಸಮಾಧಾನಕರ ಸುದ್ದಿಯೊಂದು ಲಭಿಸಿದೆ. ದೇಶದ ಪ್ರಮುಖ ತೈಲ ಕಂಪನಿಗಳು ಇಂದು ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹೌದು ಇರಾನ್ ಇಸ್ರೇಲ್ ಯುದ್ಧದ ನಡುವೆ ಇದೀಗ ದೇಶದ ಜನತೆಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಾಮಾನ್ಯ ಪೆಟ್ರೋಲ್ ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 94.77 ಹಾಗು ಡಿಸೇಲ್ 87.67 ಜಾಗತಿಕ ತೈಲ ಮಾರುಕಟ್ಟೆ ಬೆಲೆ 100% ಹೆಚ್ಚಾದರೂ ದೇಶದಲ್ಲಿ ದರ ಸ್ಥಿರವಾಗಿದೆ.ಅಂತಾರಾಷ್ಟ್ರೀಯ ದರ ಏರಿಕೆಯಿಂದ ಜನರನ್ನು ರಕ್ಷಿಸಲು ಪ್ರಧಾನಿ ಬದ್ಧತೆ. ಕೇವಲ ಪ್ರಿಮಿಯಂ ಪೆಟ್ರೋಲ್ ಬೆಲೆಯಲ್ಲಿ ಮಾತ್ರ ಲೀಟರ್ 2 ಹೆಚ್ಚಳ ಆಗಿದೆ. ಇಂಧನ ಮಾರಾಟದಲ್ಲಿ ಪ್ರಿಮಿಯಂ ಪೆಟ್ರೋಲ್ ಪಾಲು 2% ರಿಂದ 5% ಮಾತ್ರ ಹೆಚ್ಚಿದೆ. ಪ್ರಿಮಿಯಂ ಇಂಧನ ಬಳಸುವ ಗ್ರಾಹಕರಿಗೆ ಮಾತ್ರ ದರ ಪರಿಷ್ಕರಣೆ ಅನ್ವಯ ಆಗಲಿದೆ. ಇತರೆ…
ದಾವಣಗೆರೆ : ನೀತಿ ಸಂಹಿತೆ ಮುಗಿದ ತಕ್ಷಣ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಆಗಲಿದೆ.ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, 56 ಸಾವಿರ ಹುದ್ದೆಗಳ ಭರ್ತಿಗೆ ಒಳ ಮೀಸಲಾತಿ ಅನ್ವಯ ಆಗುತ್ತೆ. ಈಗ ಬೇಕಾಗಿರೋದು ರೋಸ್ಟರ್ ಪದ್ಧತಿ 101 ಉಪಜಾತಿಗಳಲ್ಲಿ ಎಬಿಸಿ ಮಾಡಿ ರೋಸ್ಟರ್ ಜಾರಿಗೆ ತರಬೇಕು ಎಂದು ಅವರು ತಿಳಿಸಿದರು. ಇನ್ನು ಇರಾನ್, ಇಸ್ರೇಲ್ ಯುದ್ಧದ ಪರಿಣಾಮದಿಂದಾಗಿ ಇದೀಗ ದೇಶದಲ್ಲಿ ಹಾಗು ರಾಜ್ಯದಲ್ಲಿ ಸಿಲಿಂಡರ್ ಅಭಾವ ಇದೇ. ಹಾಗಾಗಿ ಜನರು ಗ್ಯಾಸ್ ತೆಗೆದುಕೊಳ್ಳಲು ಎಜೇನ್ಸಿ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ‘LPG’ ಅಭಾವ ಇಲ್ಲ, ಜನರು ಆತಂಕಕ್ಕೆ ಒಳಗಗಬಾರದು ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಗ್ರಾಹಕರು ಅನಗತ್ಯವಾಗಿ ಕ್ಯೂ ನಿಲ್ಲುತ್ತಿದ್ದಾರೆ. ನಮಗೆ ಬೇಕಾದಷ್ಟು LPG ಸಿಲಿಂಡರ್ ಗಳು ಲಭ್ಯವದೆ. ಈ ರೀತಿ ಗೊಂದಲಕ್ಕೆ ಕಾರಣ ಖಾಸಗಿಯವರ ಬಳಿ ಹೋಗುತ್ತಿದ್ದಾರೆ. ಹಾಗಾಗಿ ಕಂಪನಿಗಳ ಜೋತೆ ನಾನು ಮಾತಾಡಿದ್ದೇನೆ. ಸದ್ಯಕ್ಕೆ…
ದಾವಣಗೆರೆ : ಇರಾನ್, ಇಸ್ರೇಲ್ ಯುದ್ಧದ ಪರಿಣಾಮದಿಂದಾಗಿ ಇದೀಗ ದೇಶದಲ್ಲಿ ಹಾಗು ರಾಜ್ಯದಲ್ಲಿ ಸಿಲಿಂಡರ್ ಅಭಾವ ಇದೇ. ಹಾಗಾಗಿ ಜನರು ಗ್ಯಾಸ್ ತೆಗೆದುಕೊಳ್ಳಲು ಎಜೇನ್ಸಿ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ‘LPG’ ಅಭಾವ ಇಲ್ಲ, ಜನರು ಆತಂಕಕ್ಕೆ ಒಳಗಗಬಾರದು ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಗ್ರಾಹಕರು ಅನಗತ್ಯವಾಗಿ ಕ್ಯೂ ನಿಲ್ಲುತ್ತಿದ್ದಾರೆ. ನಮಗೆ ಬೇಕಾದಷ್ಟು LPG ಸಿಲಿಂಡರ್ ಗಳು ಲಭ್ಯವದೆ. ಈ ರೀತಿ ಗೊಂದಲಕ್ಕೆ ಕಾರಣ ಖಾಸಗಿಯವರ ಬಳಿ ಹೋಗುತ್ತಿದ್ದಾರೆ. ಹಾಗಾಗಿ ಕಂಪನಿಗಳ ಜೋತೆ ನಾನು ಮಾತಾಡಿದ್ದೇನೆ. ಸದ್ಯಕ್ಕೆ ಸಮಸ್ಯೆ ಇಲ್ಲ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
ಬೆಂಗಳೂರು : ರಾಜ್ಯದಲ್ಲಿ ಬರೋಬ್ಬರಿ 7.76 ಲಕ್ಷ ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಜತೆಗೆ ರಾಜ್ಯದ ‘ಕುಟುಂಬ’ ತಂತ್ರಾಂಶದಡಿ 13.87 ಲಕ್ಷ ಶಂಕಾಸ್ಪದ ಫಲಾನುಭವಿಗಳು ಕಂಡು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಒಟ್ಟಾರೆ ‘ಅನ್ನಭಾಗ್ಯ’ ಯೋಜನೆಯ 4.54 ಕೋಟಿ ಫಲಾನುಭವಿಗಳ ಪೈಕಿ 21.63 ಲಕ್ಷ ಫಲಾನುಭವಿಗಳು ಹೊರಗುಳಿಯುವ ಸಾಧ್ಯತೆಗಳಿವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೂ ಮಾಸಿಕ 25 ಕೋಟಿ ರೂ. ಉಳಿತಾಯ ಆಗುವ ಅಂದಾಜಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕೇಂದ್ರ ಸರ್ಕಾರ ಗುರುತಿಸಿದ್ದ 7.76 ಲಕ್ಷ ಸಂಶಯಾಸ್ಪದ ಅನರ್ಹ ಫಲಾನುಭವಿಗಳ ಪೈಕಿ 4.72 ಲಕ್ಷ ಫಲಾನುಭವಿಗಳ ಕಾರ್ಡ್ಗಳನ್ನು ಅಮಾನತು ಅಥವಾ ರದ್ದು ಮಾಡಲಾಗಿದೆ. ಇನ್ನುಳಿದ 3.03 ಲಕ್ಷ ಫಲಾನುಭವಿಗಳ ವಿಚಾರದಲ್ಲಿ ಪರಿಶೀಲನಾ ಕ್ರಮ ಚಾಲ್ತಿಯಲ್ಲಿದೆ. ಇಷ್ಟು 4.72 ಲಕ್ಷ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯಿಂದ ಹೊರಗುಳಿದಿರುವುದರಿಂದ 8 ಕೋಟಿ ರೂ. ಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಆದಂತಾಗಿದೆ. ರಾಜ್ಯದಲ್ಲಿ ಒಟ್ಟು 4.54 ಕೋಟಿ ‘ಅನ್ನಭಾಗ್ಯ’ ಫಲಾನುಭವಿಗಳಿದ್ದು ಈ ಪೈಕಿ…
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಅಡುಗೆ ಅನಿಲ ಸಿಲಿಂಡರ್ ಫೋಟೋ ಆಗಿದೆ ಬೆಂಗಳೂರಿನ ಲಗ್ಗೆರೆಯ ರಾಜೀವ್ ನಗರದ ಮನೆ ಒಂದರಲ್ಲಿ ಈ ಒಂದು ಸಿಲಿಂಡರ್ ಸ್ಪೋಟ ಪ್ರಕರಣ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ. ಘಟನೇ ಕುರಿತಂತೆ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಲಿಂಡರ್ ಸ್ಫೋಟದಲ್ಲಿ ಏನಾದರೂ ಸಾವು ನೋವು ಸಂಭವಿಸಿದೆಯಾ ಎನ್ನುವುದರ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು : ಗಲ್ಫ್ ಯುದ್ಧದ ಪರಿಣಾಮ ಸಿಲಿಂಡರ್, ಪೆಟ್ರೋಲ್, ಡಿಸೇಲ್ ಅಭಾವ ಇದ್ದು ಇದರ ಮಧ್ಯ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು ಆರ್ಥಿಕ ಸಂಕಷ್ಟದಿಂದ ಹೊರಬರುವ ಉದ್ದೇಶದೊಂದಿಗೆ ಜಲಮಂಡಳಿಯು ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ನೀರು ಬಳಕೆ ಶುಲ್ಕವನ್ನು ಶೇ.3ರಷ್ಟು ಹೆಚ್ಚಿಸಲಿದೆ. ಲಮಂಡಳಿ ಪ್ರತಿ ವರ್ಷದಂತೆ ಆರ್ಥಿಕ ಸಮತೋಲನವನ್ನ ಸರಿದೂಗಿಸಲು ಶೇ.3 ರಷ್ಟು ನೀರಿನ ಶುಲ್ಕ ಹೆಚ್ಚಿಸಿದೆ. ಈ ತಿಂಗಳ ಬಿಲ್ನಿಂದಲೇ ದರ ಅನ್ವಯವಾಗಲಿದೆ. ಪರಿಣಾಮ ಏಪ್ರಿಲ್ ತಿಂಗಳಿನಿಂದ ಗೃಹ ಬಳಕೆದಾರರಿಗೆ ಮಾಸಿಕ ಸರಾಸರಿ 20 ರಿಂದ 30 ರೂ. ಹೆಚ್ಚುವರಿ ನೀರಿನ ಬಿಲ್ ಬರುವ ಸಾಧ್ಯತೆಗಳಿವೆ. ಪರಿಷ್ಕೃತ ದರ ಹಿನ್ನೆಲೆ ಗೃಹ ಬಳಕೆದಾರರಿಗೆ ಸ್ಲ್ಯಾಬ್ ಗಳ ಆಧಾರದಡಿ ಸುಮಾರು ಪ್ರತಿ ಲೀಟರ್ ಗೆ 0.15 ಪೈಸೆಯಿಂದ 1 ಪೈಸೆವರೆಗೆ ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಲೀಟರ್ಗೆ 1.90 ಪೈಸೆ ಏರಿಕೆ ಆಗಲಿದೆ. ದರ ಏರಿಕೆಯ ಮುಖ್ಯಾಂಶಗಳು: ವಾರ್ಷಿಕ ಏರಿಕೆ: ಇನ್ಮುಂದೆ ಪ್ರತಿ ವರ್ಷ ಏಪ್ರಿಲ್ 1ರಂದು ನೀರಿನ ದರವು…
ಬೆಂಗಳೂರು : ರಾಜ್ಯದ ಪ್ರಮುಖ ಹೆದ್ದಾರಿಯಾದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಚರಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೊಡ್ಡ ಶಾಕ್ ನೀಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಟೋಲ್ ದರವನ್ನು ಪರಿಷ್ಕರಿಸಲಾಗಿದ್ದು, ಏಪ್ರಿಲ್ 1, 2026 ರಿಂದ ಹೊಸ ದರಗಳು ಜಾರಿಗೆ ಬಂದಿವೆ. ರಾಷ್ಟ್ರೀಯ ಹೆದ್ದಾರಿಗಳ ಸುಂಕ ನಿಯಮಗಳ ಪ್ರಕಾರ, ಪ್ರತಿ ವರ್ಷ ಹಣದುಬ್ಬರ ಮತ್ತು ಇತರ ಮಾನದಂಡಗಳ ಆಧಾರದ ಮೇಲೆ ಟೋಲ್ ದರಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿನ ಸಂಚಾರ ಸುಂಕವನ್ನು ಸುಮಾರು ಶೇ. 3 ರಿಂದ ಶೇ. 5 ರಷ್ಟು ಹೆಚ್ಚಳ ಮಾಡಲಾಗಿದೆ. ಮೊದಲು ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದ್ದರೇ 345 ರೂಪಾಯಿ ಟೋಲ್ ಕಟ್ಟಾಗುತ್ತಿತ್ತು, ಇಂದಿನಿಂದ 355 ರೂಪಾಯಿ ಟೋಲ್ ಕಟ್ಟಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ಹೊರೆ ಬಿದ್ದಂತೆ ಆಗಿದೆ. ಮೊದಲೇ ಟೋಲ್ ದರ ಹೆಚ್ಚಿತ್ತು, ಈಗ ಮತ್ತಷ್ಟು ಏರಿಕೆ ಮಾಡಿದರೆ ನಾವು ಹೇಗೆ ಕಾರು ಓಡಿಸೋದು ಎಂದು ಒಂದಷ್ಟು ಚಾಲಕರು ಪ್ರಶ್ನೆ…














