Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಒಂದು ಕೊಡಿ ಹಾಸನದಲ್ಲಿ ಸರಣಿ ಹೃದಯಾಘಾತಕ್ಕೆ ಪ್ರತಿದಿನ ಜನ ಬಲಿಯಾಗುತ್ತಿದ್ದಾರೆ. ಇದೀಗ ದಕ್ಷಿಣ ಕನ್ನಡದಲ್ಲಿ ಯಲ್ಲಿ ಹೃದಯಘಾತಕ್ಕೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗಂಪದಕೋಡಿಯ ವಜ್ರಾಕ್ಷ ಪೂಜಾರಿ (53) ಎನ್ನುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಪದಕೋಡಿ ಗ್ರಾಮದ ನಿವಾಸಿಯಾಗಿದ್ದಾರೆ. ನಿನ್ನೆ ರಾತ್ರಿ ವಜ್ರಾಕ್ಷ ಪೂಜಾರಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಉಜಿರೆಯ ಖಾಸಗಿ ಆಸ್ಪತ್ರೆಗೆ ವಜ್ರಾಕ್ಷ ಪೂಜಾರಿ ದಾಖಲಾಗಿದ್ದರು ಆಸ್ಪತ್ರೆಯಲ್ಲಿ ವಜ್ರಾಕ್ಷಾ ಪೂಜಾರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, 18ನೇ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಬಳಿಕ ರಾಜ್ಯ ಸರ್ಕಾರ ಬೆಂಗಳೂರು ಕಮಿಷನರ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶ ಹೊರಡಿಸಿದೆ. ನ್ಯಾ.ಬಿ ಕೆ ಶ್ರೀನಿವಾತ್ಸವ ಹಾಗು ನ್ಯಾ. ಸಂತೋಷ ಮೆಹ್ರಾ ಅವರಿದ್ದ ಪೀಠ ಈ ಕುರಿತು ಆದೇಶ ಹೊರಡಿಸಿದೆ. ಹಿಂದಿನ ಎಲ್ಲಾ ಭತ್ಯೆ ಮತ್ತು ಸೌಲಭ್ಯ ಒದಗಿಸಲು ಆದೇಶ ಹೊರಡಿಸಲಾಗಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದಿಸಿದ್ದರು. ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇದೀಗ ಆದೇಶ ಹೊರಡಿಸಿದೆ.
ಹಾಸನ : ಹಾಸನದಲ್ಲಿ ದಿನೇ ದಿನೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ತಾನೆ ಹೃದಯಾಘಾಟಕ್ಕೆ ಹಾಸನ ಜಿಲ್ಲೆಯ ಒಂದರಲ್ಲಿ ಐವರು ಸಾವನಪ್ಪಿದ್ದರು. ಇದೀಗ ಹಾಸನ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ತಾನೇ ಯುವಕನೊಬ್ಬ ಸಾವನಪ್ಪಿದ್ದು, ಇದೀಗ ಒಂದುವರೆ ತಿಂಗಳ ಬಾಣಂತಿ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಒಂದೂವರೆ ತಿಂಗಳ ಬಾಣಂತಿ ಸಾವನನಪ್ಪಿದ್ದಾರೆ. ಬಾಣಂತನಕ್ಕೆ ಆಯನೂರು ಗ್ರಾಮದ ತವರು ಮನೆಯಲ್ಲಿದ್ದ ಹರ್ಷಿತಾ (22) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಕೊಮ್ಮೆನಹಳ್ಳಿಯ ಒಂದುವರೆ ತಿಂಗಳ ಬಾಣಂತಿ ಹರ್ಷಿತಾ ಇದೀಗ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಐನೂರು ಗ್ರಾಮದಲ್ಲಿ ಹರ್ಷಿತಾ ಸಾವನ್ನಪ್ಪಿದ್ದಾರೆ. ಬಾಣಂತಕ್ಕೆ ಹರ್ಷಿತಾ ಅವರು ಶಿವಮೊಗ್ಗ ಜಿಲ್ಲೆಯ ಆಯನೂರು ಗ್ರಾಮದ ತವರು ಮನೆಯಲ್ಲಿ ಇದ್ದರು. ಇವರು ಹಾಸನದ ಕೊಮ್ಮೇನಹಳ್ಳಿಯ ನಿವಾಸಿಯಾಗಿದ್ದು, ಹೆರಿಗೆ ಬಳಿಕ ತವರಿಗೆ ತೆರಳಿದ್ದರು. ಮೊನ್ನೆ ರಾತ್ರಿ ಹರ್ಷಿತಾಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೊಮ್ಮೇನಹಳ್ಳಿ ಗ್ರಾಮದಿಂದ ಹರ್ಷಿತಾ ತಮ್ಮ ಪತಿಯನ್ನು ಕರೆಸಿಕೊಂಡಿದ್ದಾರೆ. ಆದರೆ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ…
ಬೆಂಗಳೂರು : ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾದಾವರ ಬಳಿ 4.8 ಕೋಟಿ ರೂಪಾಯಿ ನಗದು ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಡಾ. ಕೆ.ಸುಧಾಕರ್ ಅವರ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಹೌದು ಸಂಸದ ಡಾ.ಕೆ.ಸುಧಾಕರ್ ವಿರುದ್ಧದ 4.8 ಕೋಟಿ ರೂ.ಗಳ ಚುನಾವಣಾ ಅಕ್ರಮದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಾಲಯವು ಪ್ರಕರಣ ರದ್ದು ಕೋರಿ ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ, ಮಾದನಾಯಕನಹಳ್ಳಿ ಪೊಲೀಸರು ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ರದ್ದು ಕೋರಿ ಡಾ.ಕೆ. ಸುಧಾಕರ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿತು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬೇರೊಬ್ಬರ ಮನೆಯಲ್ಲಿ ನಗದು ಪತ್ತೆಯಾಗಿತ್ತು. ಅದಕ್ಕೆ ಡಾ.ಕೆ. ಸುಧಾಕರ್ ವಿರುದ್ಧ ಐಪಿಸಿ ಸೆಕ್ಷನ್…
ಬೆಂಗಳೂರು : ಬೆಂಗಳೂರಿನಲ್ಲಿ ಸೈಕೋ ಪತಿಯ ವಿರುದ್ಧ ಪತ್ನಿ ಠಾಣೆಯ ಮೆಟ್ಟಿಲು ಏರಿದ್ದು, ಪತಿಯ ವರ್ತನೆಗೆ ಬೇಸತ್ತು ಇದೀಗ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ಪತಿಯ ವಿರುದ್ಧ ಪತ್ನಿ ಬನಶಂಕರಿ ಠಾಣೆಗೆ ದೂರು ನೀಡಿದ್ದಾರೆ. ಯೂನಿಸ್ ಪಾಷಾ ಪತ್ನಿ ಹಲೀಮಾ ಸಾದಿ ದೂರು ನೀಡಿದ್ದಾರೆ. ರಾಜಕಾರಣಿಗಳು ಸಹಚರರೊಂದಿಗೆ ಮಲಗುವಂತೆಯೇ ಈತ ಪತ್ನಿಗೆ ಒತ್ತಾಯಿಸಿದ್ದಾನೆ. ಅದಕ್ಕೆ ಪತ್ನಿ ಒಪ್ಪದಿದ್ದಕ್ಕೆ ಹಿಂಸೆ ಕೊಟ್ಟು ಆರು ಬಾರಿ ತಲಾಕ್ ನೀಡಿರುವ ಆರೋಪ ಕೇಳಿ ಬಂದಿದೆ. ಅಲ್ಲದೆ ಅತ್ತೆ, ಮಾವನ ವಿರುದ್ಧವು ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ಪತಿ ಅತ್ತೆ ಮಾವನ ವಿರುದ್ಧ ಮಹಿಳೆ ಸಾಲು ಸಾಲು ಆರೋಪ ಮಾಡಿದ್ದಾರೆ. ನ್ಯಾಯ ಕೊಡಿಸಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಬನಶಂಕರಿ ಠಾಣೆಯಲ್ಲಿ ಯುನಿಸ್ ಮತ್ತು ತಂದೆ-ತಾಯಿ ವಿರುದ್ಧ FIR ದಾಖಲಾಗಿದೆ. ತಲೆಗೆ ಗನ್ ಇಟ್ಟು ಬೆದರಿಸಿರುವ ಯೂನಿಸ್ ಪಾಷ ಪತ್ನಿ ಮನೆಯವರಿಗೆಲ್ಲ ಮಚ್ಚು ತೋರಿಸಿ ಬೆದರಿಸುತ್ತಾನೆ. ಪತಿ ಮಾತ್ರವಲ್ಲ ಅತ್ತೆ ಮಾವನಿಂದಲೂ ನಿರಂತರವಾಗಿ…
ಬೆಂಗಳೂರು : ನಿನ್ನೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಜೊತೆಗೆ 7ನೇ ತರಗತಿ ವಿದ್ಯಾರ್ಥಿ ಒಬ್ಬ ಫೋಟೋ ತೆಗೆಸಿಕೊಂಡ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಗೊರಗುಂಟೆಪಾಳ್ಯ ನಿವಾಸಿ ಡಿಮನ್ ರಾಜ್ ಎಂದು ತಿಳಿದುಬಂದಿದೆ. ಏಳನೇ ತರಗತಿ ಓದುತ್ತಿದ್ದ ಡಿಮನ್ ರಾಜ್ ಎಂದಿನಂತೆ ಬೆಳಗ್ಗೆ ಮನೆಯಿಂದ ಟ್ಯೂಷನ್ಗೆ ಹೋಗಿದ್ದ. ಆದರೆ ಟ್ಯೂಷನ್ಗೆ ಹೋಗದೇ ಕಂಠೀರವ ಸ್ಟೇಡಿಯಂಗೆ ಬಂದಿದ್ದ. ಕಂಠೀರವ ಸ್ಟೇಡಿಯಂನಲ್ಲಿ ಜಾವೆಲಿನ್ ಥ್ರೋ ಪ್ರಾಕ್ಟಿಸ್ ನೋಡಲು ಬಂದಿದ್ದ ಡಿಮನ್ ರಾಜ್ ಸ್ಟೇಡಿಯಂನಲ್ಲಿ ನೀರಜ್ ಚೋಪ್ರಾ ಜೊತೆ ಪೋಟೋ ತೆಗೆಸಿಕೊಂಡಿದ್ದ. ಬಳಿಕ ಅಲ್ಲಿದ್ದ ವ್ಯಕ್ತಿಯೊಬ್ಬರ ಮೂಲಕ ಪೋಟೋವನ್ನ ತನ್ನ ತಾಯಿಗೆ ಕಳುಹಿಸಿದ್ದ. ಅನಂತರ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದಾನೆ.ವಿದ್ಯಾರ್ಥಿ ನಾಪತ್ತೆ ಬಗ್ಗೆ ನಂದಿನಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಪೋಷಕರು ರಾತ್ರಿಯಿಡೀ ಹುಡುಕಾಟ ನಡೆಸಿದ್ದಾರೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಕಂಠೀರವ ಸ್ಟೇಡಿಯಂ, ಮಾರ್ಕೆಟ್ ಸೇರಿದಂತೆ ಹಲವೆಡೆ ಹುಡುಕಾಟ ನಡೆಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪೋಷಕರು ಹುಡುಕಾಟ…
ಚಿಕ್ಕಮಗಳೂರು : ರಾಜ್ಯದ ಹಾಸನ ಜಿಲ್ಲೆ ಒಂದರಲ್ಲಿ ಕಳೆದ 40 ದಿನಗಳಲ್ಲಿ ಒಟ್ಟು ಇದುವರೆಗೂ 25 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಇದೀಗ ರಾಜ್ಯದಲ್ಲಿ ಹೃದಯಾಘಾತ ಸರಣಿ ಮುಂದುವರೆದಿದ್ದು ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೆಡಿಕಲ್ ಶಾಪ್ ನಲ್ಲಿ ಮಾತ್ರೆ ತೆಗೆದುಕೊಳ್ಳುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಿಕ್ಕಮಂಗಳೂರಿನಲ್ಲೂ ಕೂಡ ಹೃದಯಾಘಾತ ಆತಂಕ ಸೃಷ್ಟಿಸಿದ್ದು, ಮೆಡಿಕಲ್ ನಲ್ಲಿ ಮಾತ್ರೆ ಖರೀದಿಸುವಾಗಲೇ ವ್ಯಕ್ತಿಯೊಬ್ಬರಿಗೆ ಹೃದಯಘಾತವಾಗಿದೆ. ಮಾತ್ರೆ ಸೇವಿಸಲು ನೀರು ಬೇಡುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಮೃತರು ಕೋಟೆ ಬಡಾವಣೆಯ ವಿಶ್ವನಾಥ್ (50) ಸಾವನಪ್ಪಿದ್ದಾರೆ. ವಿಶ್ವನಾಥ್ ಅವರು ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ಜೂನ್ 26ರಂದು ದೀಪ ನರಸಿಂಗ್ ಹೋಂ ಬಳಿ ಈ ಒಂದು ಘಟನೆ ನಡೆದಿತ್ತು. ಹೃದಯಾಘಾರದಿಂದ ಸಾವನ್ನಪ್ಪಿದ್ದಾರೆ ಎಂದು ವೈದರು ಕೂಡ ದೃಢಪಡಿಸಿದ್ದಾರೆ. ಚಿಕ್ಕಮಗಳೂರಲ್ಲಿ ಎರಡು ತಿಂಗಳಲ್ಲಿ ಒಟ್ಟು 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿ ಒಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ವಿಶಾಲಕ್ಷ್ಮೀ ಹಿರೇಮಠ (32) ಎಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಲ್ಲಿ ನೇಣಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೋಣನಕುಂಟೆಯಲ್ಲಿ ವಾಸವಾಗಿರುವ ವಿಶಾಲಕ್ಷ್ಮೀ 14 ವರ್ಷಗಳ ಹಿಂದೆ ಶಂಭುಲಿಂಗಯ್ಯ ಎಂಬುವರೊಂದಿಗೆ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಮೃತರ ಪತಿ ಖಾಸಗಿ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೃತ ಮಹಿಳೆ ಮೂಲತಃ ಹಾವೇರಿ ಮೂಲದ ಗೃಹಿಣಿಯಾಗಿದ್ದು, ಈಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಾರಣ ಎಂದು ವರದಿಯಾಗಿದೆ.
ಬೆಂಗಳೂರು : ಕಳೆದ 40 ದಿನಗಳಲ್ಲಿ ಇವತ್ತಿನವರೆಗೆ ಹಾಸನದಲ್ಲಿ ಒಟ್ಟು 22 ಜನರು ವರದಿಯಾಗೋದಕ್ಕೆ ಬಲಿಯಾಗಿದ್ದಾರೆ ಇದರ ಬೆನ್ನಲ್ಲೇ ರಾಜ್ಯದಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದ್ದು, ಇದೀಗ ಬೆಂಗಳೂರಿನಲ್ಲಿ ವಿದ್ಯಾರ್ಥಿ ಒಬ್ಬ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. BVVS ಮೆಡಿಕಲ್ ಕಾಲೇಜ್ ವಿದ್ಯಾರ್ಥಿ ವೈಭವ್ ಹಾರ್ಟ್ ಅಟ್ಯಾಕ್ ನಿಂದ ಇದೀಗ ಸಾವನಪ್ಪಿದ್ದಾನೆ. ಹೌದು ಹೃದಯಘಾತದಿಂದ ವೈಭವ್ ಕುಲಕರ್ಣಿ (26) ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದಾಗ ವೈಭವ್ ಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ವೈಭವ್ ಕುಲಕರಣಿ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ. ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ವೈಭವ್ ಸಾವನಪ್ಪಿದ್ದಾನೆ. ಮೂಲತಃ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುಮಸಗಿ ಗ್ರಾಮದವನಾಗಿದ್ದು, ಇದೀಗ ಮೃತದೇಹವನ್ನು ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗಿದೆ.
ಹಾಸನ : ಇತ್ತೀಚಿಗೆ ಹೃದಯಘಾತ ಪ್ರಕರಣಗಳು ಸಾಮಾನ್ಯವಾಗಿ ಬಿಟ್ಟಿವೆ. ಆದರೆ ಹಾಸನದಲ್ಲಿ ಮಾತ್ರ ಈ ಒಂದು ಹೃದಯಾಘಾತದಿಂದ ಸಾವನಪುತ್ತಿರುವವರ ಪ್ರಕರಣಗಳು ಜನರಲ್ಲಿ ಆತಂಕ ಹೆಚ್ಚಿಸಿದೆ. ಏಕೆಂದರೆ ಕಳೆದ 40 ದಿನಗಳಲ್ಲಿ ಇಂದಿನವರೆಗೆ ಒಟ್ಟು 22 ಜನರು ಈ ಒಂದು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಅಲ್ಲದೆ ಇಂದು ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಮನೆಯಲ್ಲೇ ಕುಸಿದು ಬಿದ್ದು ಮಹಿಳೆ ಸಾವು! ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 21 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 21ಜನ…












