Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಮಲ್ಟಿಪ್ಲೆಕ್ಸ್ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿತ್ತು. ಇದೀಗ ರಾಜ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಹೊಂಬಾಳೆ ಫಿಲಂನ ವಿಜಯ್ ಕಿರಗಂದೂರು, ಪಿವಿಆರ್ ಐನಾಕ್ಸ್ ಲಿಮಿಟೆಡ್, ವಿಕೆ ಫಿಲಂಸ್, ಕೀ ಸ್ಟೋನ್ ಎಂಟರ್ಟೇನ್ಮೆಂಟ್ ಪ್ರವೈಟ್ ಲಿಮಿಟೆಡ್ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
ಬೆಳಗಾವಿ : ಐನಾಪುರ ಮಾರ್ಗವಾಗಿ ಹೈದರಾಬಾದ್ ಕಡೆಗೆ ನಾಲ್ಕು ಬೃಹತ್ ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳ ಕಾರ್ಯಕರ್ತರು ವಾಹನಗಳನ್ನು ತಡೆದು ಒಂದು ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿರುವ ಘಟನೆ ತಡರಾತ್ರಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಕೆಲವು ಸಂಘಟನೆಗಳ ಕಾರ್ಯಕರ್ತರು ಜೊತೆಯಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬೃಹತ್ ಲಾರಿಗಳನ್ನು ತಡೆದು ಅವುಗಳನ್ನು ಪರಿಶೀಲನೆ ಮಾಡಿ ಲಾರಿಯಲ್ಲಿರುವ ಚಾಲಕ ಮತ್ತು ನಿರ್ವಾಹಕನನ್ನು ತೀವ್ರ ತರಾಟೆ ತೆಗೆದುಕೊಂಡು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಕುಡಚಿ ಪಟ್ಟಣದಿಂದ ಗೋಮಾಂಸ ತುಂಬಿಕೊಂಡು 4 ಲಾರಿಗಳು ಐನಾಪುರ ಮಾರ್ಗವಾಗಿ ಹೈದರಾಬಾದ್ ಕಡೆಗೆ ತೆರಳುತ್ತಿದ್ದವು. ಈ ನಾಲ್ಕು ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಆಧರಿಸಿ ಕಾರ್ಯಕರ್ತರು ಒಂದು ಲಾರಿಯನ್ನು ತಡೆದು ಪರಿಶೀಲಿಸಿದಾಗ ಗೋಮಾಂಸ ಸಾಗಾಟ ಬಯಲಾಗಿದೆ. KA 71 2045 ಸಂಖ್ಯೆಯ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಇದನ್ನು…
ಬೆಂಗಳೂರು : ರಾಜ್ಯದಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದ್ದು ಬೆಂಗಳೂರಲ್ಲಿ ದಂಪತಿಗಳ ನಿರ್ಲಕ್ಷಕ್ಕೆ ಮೂರು ನವಜಾತ ಶಿಶುಗಳು ಬಲಿಯಾಗಿವೆ. ಹೌದು ಬನ್ನೇರುಘಟ್ಟ ಗೊಲ್ಲಹಳ್ಳಿಯಲ್ಲಿ ಈ ಒಂದು ಮನಕಲಕುವ ಘಟನೆ ನಡೆದಿದೆ. ಸೂಕ್ತ ಸಪಾಸಣೆ ಮತ್ತು ಪೋಷಣೆ ಇಲ್ಲದೆ ಮೂವರು ನವಜಾತ ಶಿಶುಗಳು ಇದೀಗ ಸಾವನ್ನಪ್ಪಿವೆ. ಮಂಜುಳಾ ಮತ್ತು ಆನಂದ ದಂಪತಿಗಳ ಮೂವರು ನವಜಾತಶಿಗಳು ಇದೀಗ ಬಲಿಯಾಗಿವೆ. ಮೊದಲು ಹೊಟ್ಟೆ ನೋವು ಕಾಣಿಸಿಕೊಂಡಾಗ ಇವರು ಜಿಗಣಿ ಆಸ್ಪತ್ರೆಗೆ ದಾಖಲಾಗಿದ್ದರು. ಅದಾದ ನಂತರ ಜಿಗಣಿ ಬಳಿಕ ಆನೇಕಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯಲ್ಲಿ ಎರಡು ಶಿಶುಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಎರಡು ಶಿಶುಗಳನ್ನು ಹೊರ ತೆಗೆದು ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡಿದ್ದಾರೆ. ಸದ್ಯ ತಾಯಿ ಮಂಜುಳಾ ಆರೋಗ್ಯವಾಗಿದ್ದಾರೆ. ಆನಂದ್ ಮತ್ತು ಮಂಜುಳಾ ದಂಪತಿ ಪ್ರೀತಿಸಿ ಮದುವೆಯಾಗಿದ್ದರು. ಏಪ್ರಿಲ್ ತಿಂಗಳಿನಲ್ಲಿ ದಂಪತಿಗಳು ತಾಯಿ ಕಾರ್ಡ್ ಮಾಡಿಸಿದ್ದಾರೆ. ಅಣ್ಣನ ಜೊತೆ ಗಲಾಟೆ ಮಾಡಿದ ಬಳಿಕ ಆನಂದ್ ದಂಪತಿ ಮನೆ ಬಿಟ್ಟಿದ್ದಾರೆ. ಇತ್ತ ಮಂಜುಳಾ ಪೋಷಕರಿಂದಲೂ ಕೂಡ ಇವರಿಬ್ಬರೂ ನಿರ್ಲಕ್ಷಕ್ಕೆ…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಚ್ಚಿ ಬೆಳಿಸುವ ಘಟನೆ ಯೊಂದು ನಡೆದಿದ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸೋದರ ಮಾವನ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿ ಮರಡಿ ಎಂಬ ಗ್ರಾಮದಲ್ಲಿ ತಡರಾತ್ರಿ ಒಂದು ಘಟನೆ ನಡೆದಿದೆ. ನಿತ್ಯ ಮದ್ಯ ಸೇವಿಸಿ ಬಂದು ಈರಪ್ಪ ನಡುವಿನಮನಿ ಜಗಳವಾಡುತ್ತಿದ್ದ ಅಷ್ಟೇ ಅಲ್ಲದೆ ಮಹಿಳೆಯರಿಗೆ ಈರಪ್ಪ ಶಬ್ದಗಳಿಂದ ನಿಂದಿಸುತ್ತಿದ್ದ ಸೋದರ ಮಾವ ಈರಪ್ಪನ ಕಾಟ ಸಹಿಸದೆ ಬೆಂಕಿ ಹಚ್ಚಿಸಲಾಗಿದೆ ಅಳಿಯಂದಿರಾದ ಸುನಿಲ್ ನಡುವಿನಮನಿ ಹಾಗೂ ಮರಿಯಪ್ಪನಿಂದ ಈ ಒಂದು ಕೃತ್ಯ ಎಸೆಗಲಾಗಿದ್ದು ವೀರಪ್ಪನ ಕೈಕಾಲು ಮತ್ತು ಮುಖದ ಬಹುತೇಕ ಭಾಗಗಳು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮನೆಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳದ ಸೋಲಿಲ್ಲ ಮತ್ತು ಮರೆಪ್ಪನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಗೆ ಮಾತೃಯೋಗವಾಗಿದ್ದು, ಇಂದು ಬೆಳಿಗ್ಗೆ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಶಾಸಕ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ನಿಧನರಾದರು. ಕಳೆದ ಹಲವು ದಿನಗಳಿಂದ ಸುಶೀಲಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಕುರಿತು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು ಎಂದು ಬರೆದಿದ್ದಾರೆ. ಶಿಕ್ಷಕಿಯಾಗಿದ್ದ ಸುಶೀಲಮ್ಮ ಅವರು ನಿವೃತ್ತಿ ಬಳಿಕ ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ನ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಒಟ್ಟು 8 ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. https://twitter.com/nimmasuresh/status/1970313881756278853?t=abOa-KMb5MgEwelI8DJRtQ&s=19
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯಕ್ಕೆ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಇದ್ದಾರೆ. ನಟ ದರ್ಶನ್ ಗೆ ಜೈಲಿನಲ್ಲಿ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಅರ್ಜಿ ಸಲ್ಲಿಸಿದ್ದು, ಈ ಕುರಿತು ಇಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ. ಇಂದು ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಪರ ವಕೀಲರಿಂದ ಕೋರ್ಟ್ ಆದೇಶ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡದೆ, ಜೈಲಾಧಿಕಾರಿಗಳು ಕೋಟ್ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ದರ್ಶನ್ ಪರ ವಕೀಲರು ಈ ಹಿಂದಿನ ವಿಚಾರಣೆಯಲ್ಲಿ ವಾದಿಸಿದ್ದರು. ಇದೀಗ ದರ್ಶನ್ ಭವಿಷ್ಯ ಇಂದು ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ಒದಗಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್ ಲೈನ್ ವಿಚಾರವಾಗಿ ಪ್ರತಿನಿತ್ಯ ಜಿಬಿಎ ನವರು ದಿನಕ್ಕೆ 1000 ಗುಂಡಿಗಳನ್ನು ಮುಚ್ಚುತ್ತಿದ್ದಾರೆ. ಮಳೆಗಾಲ ಹಿನ್ನೆಲೆಯಲ್ಲಿ ಗುಂಡಿ ಮುಚ್ಚುವ ಕಾರ್ಯವಿಧಾನ ಆಗುತ್ತಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಯವರು ಗುಂಡಿ ಮುಚ್ಚುತ್ತಿದ್ದಾರೆ. ಕೇವಲ ಬೆಂಗಳೂರಿನಲ್ಲಿ ಮಾತ್ರ ರಸ್ತೆಗಳು ಗುಂಡಿಗಳಿವೆಯ? ಎಲ್ಲಾ ರಾಜ್ಯಗಳಲ್ಲೂ ರಸ್ತೆಗಳಲ್ಲಿ ಗುಂಡಿಗಳ ಸಮಸ್ಯೆ ಇದೆ. ದೆಹಲಿಯಲ್ಲಿ ಪ್ರಧಾನ ಮಂತ್ರಿ ನಿವಾಸದ ರಸ್ತೆ ನೋಡಿದ್ದೀರಾ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಸರಿಯಾಗಿ ರಸ್ತೆ ಮಾಡಿದ್ರಾ? ಚುನಾವಣೆ ಬರುತ್ತಿದೆ ಅಂತ ಹೇಗೆ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು
ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 441 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬೆಳಗಾವಿಯ ಸೈಬರ್ ಮತ್ತು ರಾಯಭಾಗ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 22 ಲಕ್ಷ ಮೌಲ್ಯದ 441 ಕೆಜಿ ಗಾಂಚಾ ಜತ್ತಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸಿಂಗಾಡಿ ಹಿರೇಕೋಡಿ (45) ಎಂದು ತಿಳಿದುಬಂದಿದೆ. ನಿಡುಗುಂದಿ ಗ್ರಾಮದ ಬಳಿ ಜಮೀನಿನಲ್ಲಿ ಆರೋಪಿ ಗಾಂಜಾ ಬೆಳೆದಿದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದ ಯುವಕರೇ ಈತನ ಟಾರ್ಗೆಟ್ ಆಗಿದ್ದಾರೆ. ಒಂದು ಎಕರೆ ಕಬ್ಬಿನ ಗದ್ದೆಯಲ್ಲಿ ಸಿಂಗಾಡಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ. ಅಂದಾಜು 22 ಲಕ್ಷ ರೂಪಾಯಿ ಮೌಲ್ಯದ ಸುಮಾರು 441 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿ ಸಿಂಗಾಡಿ ಹಿರೇಕೋಡಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ. ಜಂಟಿ ಕಾರ್ಯಾಚರಣೆಗೆ ಬೆಳಗಾವಿ ಎಸ್ಪಿ ಡಾ.ಭೀಮಶಂಕರ್ ಗುಳೇದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ : ಕರ್ತವ್ಯದಲ್ಲಿ ನಿರ್ಲಕ್ಷ, ಲಂಚಕ್ಕೆ ಬೇಡಿಕೆ ಆರೋಪ ಹಿನ್ನೆಲೆಯಲ್ಲಿ, ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ಈ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆ ನಡೆಸಿದೆ. ಇನ್ನು ದಾಳಿಯ ವೇಳೆ ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ವಿವರ, ಬಾಕಿ ಇರುವ ಕಡತಗಳು, ಸುದೀರ್ಘ ಕಾಲದಿಂದ ಬಾಕಿ ಉಳಿಸಿಕೊಂಡಿರುವುದಕ್ಕೆ ಕಾರಣ, ಹಕ್ಕು ಬದಲಾವಣೆ, ಭೂ ಮಂಜೂರಾತಿ, ಭೂಮಿ, ಬಗರ್ಹುಕುಂ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳ ಪರಿಶೀಲನೆ ನಡೆಸಿದರು.
ಹಾಸನ : ಹಾಸನದಲ್ಲಿ ಜಿಲ್ಲಾ ಆಸ್ಪತ್ರೆ ವೈದ್ಯರ ಮಹಾ ಎಡವಟ್ಟು ಮಾಡಿದ್ದು, ಎಡಗಾಲು ಬದಲು ಬಲಗಾಲಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಬಲಗಾಲು ಕೊಯ್ದಿರುವ ಜಿಲ್ಲಾಸ್ಪತ್ರೆಯ ವೈದ್ಯ ಸಂತೋಷ, ಜ್ಯೋತಿ ಅನ್ನುವವರ ಬಲಗಾಲು ಕುಯ್ದಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಜ್ಯೋತಿ ಅವರ ಎಡಗಾಲಿಗೆ ರಾಡ್ ಅಳವಡಿಕೆ ಮಾಡಿದ್ದಾರೆ. ಎರಡುವರೆ ವರ್ಷದ ಹಿಂದೆ ಎಡಗಾಲಿಗೆ ರಾಡ್ ಅಳವಡಿಕೆ ಮಾಡಿದ್ದರು ಮತ್ತೆ ಕಾಲು ನೋವು ಹಿನ್ನೆಲೆ ಆಸ್ಪತ್ರೆಗೆ ಜ್ಯೋತಿ ಬಂದಿದ್ದರು. ಆದರೆ ಬಲಗಾಲಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು ಎಡಗಾಲನ್ನು ಕೊಯ್ದು ರಾಡು ಅಳವಡಿಸಿದ್ದರು. ಬಳಿಕ ತಮ್ಮ ತಪ್ಪಿನ ಅರಿವಾದ ನಂತರ ಎಡಗಾಲಿನ ರಾಡ್ ತೆಗೆದು ಮತ್ತೆ ಇದೀಗ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ವೈದ್ಯರ ಎಡವಟ್ಟಿಗೆ ಮಹಿಳೆ ಜ್ಯೋತಿ ಆಘಾತಕ್ಕೆ ಒಳಗಾಗಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಬೂಚನಹಳ್ಳಿಯ ಕಾವಲು ಗ್ರಾಮದ ನಿವಾಸಿಯಾಗಿದ್ದಾರೆ. ಎರಡುವರೆ ವರ್ಷದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದರು. ತೀವ್ರ ಪೇಟ್ಟಾಗಿದ್ದರಿಂದ ವೈದ್ಯರು ಎಡಗಾಲಿಗೆ ಅಳವಡಿಸಿದ್ದರು.ಇತ್ತೀಚಿಗೆ ಕಾಲಿಗೆ ಅಳವಡಿಸಿದ್ದ ರಾಡ್ ನಿಂದ ಜ್ಯೋತಿಗೆ ನೋವು ಕಾಣಿಸಿಕೊಂಡಿತ್ತು. ಹಿಮ್ಸ್ ಆಸ್ಪತ್ರೆಯ…









