Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಸ್ತೆಯಲ್ಲಿ ಮೊಬೈಲ್ ನೋಡಿಕೊಂಡು ಹೋಗುವವರೇ ಈ ಸುದ್ದಿಯನ್ನು ಒಮ್ಮೆ ಓದಲೇಬೇಕು. ಹೌದು ರಸ್ತೆಯಲ್ಲಿ ತೆರಳುವಾಗ ಖದೀಮರು ಮೈ ಮರೆತರೆ ಹೊಂಚು ಹಾಕಿ, ಮೊಬೈಲ್ ಕಳ್ಳತನ ಮಾಡುತ್ತಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಇದೀಗ ಮೊಬೈಲ್ ಕಳವು ಆಗಿದೆ. ರಸ್ತೆಯಲ್ಲಿ ಬರುತ್ತಿದ್ದವನಿಂದ ಮೊಬೈಲ್ ಕದ್ದು ಖದೀಮರು ಪರಾರಿಯಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಖದೀಮರು ರಸ್ತೆಯಲ್ಲಿ ಯುವಕನು ಮೊಬೈಲ್ ನೋಡಿಕೊಂಡು ಹೋಗುತ್ತಿದ್ದ. ಈ ವೇಳೆ ಆತನ ಕೈಯಿಂದ ಮೊಬೈಲ್ ಕಸಿದು ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 17ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯಕ್ಕೆ ಪೊಲೀಸರು ಮೊಬೈಲ್ ಕದ್ದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

Read More

ಮೈಸೂರು : ನಿನ್ನೆ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿ ಖ್ಯಾತ ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ನಿನ್ನೆ ಆಹಾರ ಮಳಿಗೆ ಸೇರಿದಂತೆ ಕುಸ್ತಿ ಪಂದ್ಯಾಟಗಳಿಗೆ ಚಾಲನೆ ನೀಡಿದರು. ಇದೀಗ ಇಂದು ಯುವ ದಸರಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಹೌದು ಮೈಸೂರು ದಸರಾದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಬೆಳಗ್ಗೆ 7:30ಕ್ಕೆ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆ ಕಾರ್ಯಕ್ರಮ, ಬೆಳಗ್ಗೆ 10.30 ಕ್ಕೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪಂಚಕಾವ್ಯದ ಕವಿಗೋಷ್ಠಿ, ಮೈಸೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನಪೀಠದಲ್ಲಿ ಈ ಒಂದು ಕವಿಗೋಷ್ಠಿ ನಡೆಯಲಿದೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಜೆಕೆ ಮೈದಾನದಲ್ಲಿ ಮಹಿಳಾ ದಸರಾಗೆ ಚಾಲನೆ ನೀಡಲಾಗುತ್ತದೆ. ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ಮಕ್ಕಳ ದಸರಾಕ್ಕೆ ಚಾಲನೆ ನೀಡಲಾಗುತ್ತಿದೆ ಮಕ್ಕಳ ದಸರಾದಲ್ಲಿ ಸಚಿವ ಮಧು ಬಂಗಾರಪ್ಪ ಸಹ ಭಾಗಿಯಾಗಲಿದ್ದಾರೆ. ಸಂಜೆ…

Read More

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಮಳೆ ಆಗುತ್ತಿದೆ. ಇದೀಗ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಮತ್ತೆ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು ರಾಜ್ಯದ ಈ 7 ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರ ಬಳಿಕ ಭಾರಿ ಮಳೆಯಾಗಲಿದೆ.

Read More

ಮೈಸೂರು : ನಿನ್ನೆಯಿಂದ ಇಡೀ ದೇಶದಾದ್ಯಂತ ಜಿಎಸ್​ಟಿ ದರ ಕಡಿತಗೊಳಿಸಿ ಹೊಸ ದರ ಜಾರಿಗೆ ಆಗಿರುವ ಹಿನ್ನೆಲೆಯಲ್ಲಿ, ಗ್ರಾಹಕರ ದಿನಬಳಕೆ ವಸ್ತುಗಳು ಸೇರಿದಂತೆ ವಾಹನ ಬೈಕ್ ಹಲವು ವಸ್ತುಗಳ ಮೇಲಿನ ಬೆಲೆ ಇಳಿಕೆಯಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಜಿಎಸ್‌ಟಿ ಜಾರಿ ಮಾಡಿದ್ದು ಅವರೇ, ಜಿಎಸ್‌ಟಿ ದರ ಹೆಚ್ಚಳ ಮಾಡಿದ್ದು, ಅವರೇ ಈಗ ಜಿಎಸ್‌ಟಿ ದರ ಕಡಿತಗೊಳಿಸಿ ತಮಗೆ ತಾವೇ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಈ ಕುರಿತು ಟ್ವೀಟ್ ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮಹಾನ್ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಅವರೇ, ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಅವರೇ, ಈಗ ಕಡಿಮೆ ಮಾಡಿ ಬೆನ್ನು ತಟ್ಟಿಕೊಳ್ತಾ ಇರೋದೂ ಅವರೇ. ಹಾಗಾದರೆ ಇಷ್ಟು ವರ್ಷ ಹೆಚ್ಚು ಜಿಎಸ್‌ಟಿ ಹಾಕಿ ಜನರನ್ನು ಸುಲಿಗೆ ಮಾಡುವಾಗ ನಿಮ್ಮ ಈ ಕಾಳಜಿ ಎಲ್ಲಿಹೋಗಿತ್ತು? ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ…

Read More

ಮೈಸೂರು : ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು. ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು. ವಿನೇಶ್ ಫೋಗಟ್ ಅವರು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ…

Read More

ನವದೆಹಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ಸೋಮವಾರ ತಿಳಿಸಿದೆ. ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇಂದು ಇವುಗಳ ವಿಚಾರಣೆ ನಡೆಸಿತು. ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್​ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ತಿಳಿಸಿತು. ಈ ವೇಳೆ ಡಿ.ಕೆ.ಶಿವಕುಮಾರ್​ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ…

Read More

ಬೆಂಗಳೂರು : ಕರ್ತವ್ಯದ ಲೋಪದ ಆರೋಪದ ಮೇರೆಗೆ ನಗರದ ಮತ್ತಿಬ್ಬರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ಡಿಸಿಪಿ ಅವರ ಆದೇಶ ಆಧರಿಸಿ ಆಯುಕ್ತ ಸೀಮಂತ್‌ ಕುಮಾರ್‌ಸಿಂಗ್ ಶಿಸ್ತು ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ. ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಭಂಜತ್ರಿ ಹಾಗೂ ಕೋರಮಂಗಲ ಠಾಣೆಯ ಪಿಐ ಎಸ್.ಎಲ್.ಆರ್.ರೆಡ್ಡಿ ಅಮಾನತುಗೊಂಡಿವರು. ಕೆಲ ದಿನಗಳ ಹಿಂದಷ್ಟೇ ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸ್ನೇಹ ಹೊಂದಿದ್ದ ಆರೋಪದ ಮೇರೆಗೆ 11 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿತ್ತು. ಕಾನೂನು ಸುವ್ಯವಸ್ಥೆ ಅಸಮರ್ಪಕ ನಿರ್ವಹಣೆ ಹಾಗೂ ಅಪರಾಧ ಪ್ರಕರಣಗಳ ಪತ್ತೆದಾರಿಕೆಯಲ್ಲಿ ದೋಷ ಮಾಡಿದ್ದರು ಎಂದು ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಮೇಲೆ ಆರೋಪ ಬಂದಿತ್ತು. ಹಾಗೆ ತಮ್ಮ ಠಾಣಾ ಸರಹದ್ದಿನಲ್ಲಿ ಪಬ್‌ಗಳು ಅವಧಿ ಮೀರಿ ವಹಿವಾಟು ನಡೆಸಿದ ಹಾಗೂ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮಾಡಿದರು ನಿಯಂತ್ರಿಸದೆ ನಿರ್ಲಕ್ಷ್ಯ ತೋರಿದರು ಎಂಬ ಆಪಾದನೆಗೆ ಕೋರಮಂಗಲ ಠಾಣೆ ಪಿಐ ರೆಡ್ಡಿ ತುತ್ತಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಆಯುಕ್ತರಿಗೆ ಭಜಂತ್ರಿ ವಿರುದ್ಧ…

Read More

ಬೆಂಗಳೂರು : ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದೆ. ಈ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ನಿನ್ನೆ ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ್ ನಾದವಗಿ ವಾದ ಮಂಡಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿ, ಜನಗಣತಿಗಿಂತ ಈ ಸರ್ವೆ ಯಾವ ರೀತಿಯಲ್ಲೂ ಕಡಿಮೆಯಲ್ಲ. ಜನಗಣತಿಯನ್ನು ಕೇಂದ್ರ ಸರ್ಕಾರವಷ್ಟೇ ಮಾಡಬೇಕೆಂದು ವಾದಿಸಿದರು. ರಾಜ್ಯದೆಲ್ಲೆಡೆ ಸರ್ಕಾರ ಜಾತಿ ಗಣತಿಗೆ ಆದೇಶಿಸಿದೆ. ಸಂವಿಧಾನದ ಆರ್ಟಿಕಲ್ 342ಎ(3)ಗೆ ವಿರುದ್ಧವಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ವರದಿ ಪರಿಗಣಿಸದೇ ಹೊಸ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು. ಜಾತಿಗಣತಿಯ ಅಂಕಿ ಅಂಶಗಳನ್ನು ಆಧಾರ್ ಗೆ ಲಿಂಕ್ ಮಾಡ್ತಿದ್ದಾರೆ.…

Read More

ಬೆಂಗಳೂರು : ಇಡಿ ಭಾರತವೇ ಎದುರು ನೋಡುತ್ತೀರುವ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟಟ್-1 ಸಿನೆಮಾ ಟ್ರೈಲರ್ ನಿನ್ನೆ ರಿಲೀಸ್ ಆಗಿದೆ. ಪ್ರೇಕ್ಷಕರಿಂದ ಇದಕ್ಕೆ ಭರ್ಜರಿ ರೆಸ್ಪೋನ್ಸ್ ಸಹ ಸಿಕ್ಕಿದೆ. ಟ್ರೈಲರ್‌ ರಿಲೀಸ್‌ ಬಳಿಕ ಪ್ರೆಸ್‌ಮೀಟ್‌ನಲ್ಲಿ ಮಾತನಾಡಿರುವ ನಟ ರಿಷಬ್ ಶೆಟ್ಟಿ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಕಾಂತಾರ ಸಿನಿಮಾ 5 ವರ್ಷದ ದೊಡ್ಡ ಜರ್ನಿ. ಈ ಸಿನಿಮಾ ಕಂಪ್ಲೀಟ್‌ ಮಾಡೋಕೆ ಆಗ್ತಿರಲಿಲ್ಲ, ಅಷ್ಟು ಅಡೆತಡೆಗಳು ಎದುರಿಸಿದ್ದೀನಿ. ನನ್ನ ಹೆಂಡ್ತಿ ಅದೆಷ್ಟು ಹರಕೆ ಹೊತ್ತಿದ್ದಾಳೋ. ನಾನು ಶೂಟಿಂಗ್ ಹೋಗ್ತಿದ್ರೆ ದೇವರ ಮುಂದೆ ಪ್ರಾರ್ಥನೆ ಮಾಡ್ತಿದ್ಲು. ಇನ್ನೊಂದು ಸಲ ಹೇಗಿದ್ದೀರ ಅಂತ ಕೇಳಿದ್ರೆ ಅತ್ತೆ ಬಿಡ್ತೀನಿ, ಅಷ್ಟೊಂದು ಎಮೋಷನಲ್ ಜರ್ನಿ ಇದು ಅಂತ ಹೇಳಿಕೊಂಡ್ರು. ನನ್ನ ಮಕ್ಕಳು ಸ್ಕೂಲ್‌ಗೆ ಹೋಗೋದನ್ನ ನೋಡೋಕು ಟೈಮ್ ಸಿಗ್ತಿರ್ಲಿಲ್ಲ. ಫಾರೆಸ್ಟ್ ಮಿನಿಸ್ಟರ್ ಇಂದ ಎಲ್ರು ನನಗೆ ಈ ಚಿತ್ರಕ್ಕೆ ಸಹಕಾರ ನೀಡಿದ್ದಾರೆ. ಅಲ್ಲದೇ ಸರಿಯಾಗಿ ಮಲಗಿ ಮೂರು ತಿಂಗಳಾಯ್ತು. ಕೇವಲ 2 ಗಂಟೆ ಅಷ್ಟೇ ಮಲಗ್ತಿದ್ದೆ. ಲೆಕ್ಕ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಕೇಂದ್ರ ಸರ್ಕಾರ GST ದರ ಕಡಿತಗೋಳಿಸಿತ್ತು. GST ದರ ಕಡಿತ ವಿಚಾರವಾಗಿ GST ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾ ಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಎಸ್‌ಟಿ ಕೇಂದ್ರ ಸರ್ಕಾರದವರು ಜಿಎಸ್‌ಟಿ ದರ ಕಡಿತವನ್ನು ರಾಜ್ಯಗಳಿಗೆ ಬಹಳ ಅನ್ಯಾಯವಾಗುವ ರೀತಿಯಲ್ಲಿ ಮಾಡಿದ್ದಾರೆ. ಇದರಿಂದ ರಾಜ್ಯಗಳು ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟ ಅನುಭವಿಸಲಿವೆ. ಕರ್ನಾಟಕಕ್ಕೆ ರು.ನಷ್ಟು 15ರಿಂದ 16 ಸಾವಿರ ಕೋಟಿ ಆದಾಯ ಆಗುವ ವರಮಾನ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸದೆ ಹೋದರೆ ರಾಜ್ಯಗಳು ಮುಂದೆ ಸರ್ಕಾರ ಯನ್ನು ಕೇಂದ್ರವೇ ಎಂದು ನಷ್ಟವಾಗಲಿದೆ. ರಾಜ್ಯಗಳಿಗೆ ನಡೆಸುವುದೇ ಕಷ್ಟವಾಗಲಿದೆ. ಇದರ ಹೊಣೆ…

Read More