Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ಕಾರ್ಯಕ್ಕಾಗಿ ಬಿ ಮತ್ತು ‘ಸಿ ವೃಂದದ’ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಅರೆ ಸರ್ಕಾರಿ ಪತ್ರದಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲು ಸಮೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿರುವ ಹಿನ್ನೆಲೆಯಲ್ಲಿ, ಈ ಸಮೀಕ್ಷೆ ಕಾರ್ಯಕ್ಕಾಗಿ ‘ಬಿ’ ಮತ್ತು ‘ಸಿ’ ವೃಂದದ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳುವ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಲುವಾಗಿ ಎಲ್ಲಾ ಗ್ರೂಪ್-‘ಬಿ’ ಮತ್ತು ಗ್ರೂಪ್-‘ಸಿ’ ವೃಂದದ ಅಧಿಕಾರಿ/ಸಿಬ್ಬಂದಿಗಳ ವಿವರಗಳನ್ನು ಪಡೆಯಲಾಗಿದ್ದು, ನೇಮಕಾತಿ ಆದೇಶ ಹೊರಡಿಸಿ, ಜಾರಿ ಮಾಡಲು ಕ್ರಮ ಜರುಗಿಸಲಾಗುವುದರಿಂದ, ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಇವರು ಈ ಕೆಳಕಂಡ ಅಂಶಗಳಿಗೆ ಅನುಮೋದನೆ ಕೋರಿರುತ್ತಾರೆ:- 1. ಮೇಲೆ ಓದಲಾದ ಪತ್ರದ ಅನುಬಂಧದಲ್ಲಿ ನಮೂದಿಸಿರುವ ಇಲಾಖೆಗಳಲ್ಲಿನ ಅಧಿಕಾರಿ/ನೌಕರರುಗಳನ್ನು ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿಕೊಳ್ಳಲು ಅನುಮೋದನೆ. 2. ಸಮೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ…
ದಕ್ಷಿಣಕನ್ನಡ : ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಮಹೇಶ್ ತಿಮರೊಡಿಗೆ ಸಂಕಷ್ಟ ಎದುರಾಗಿದೆ. ಬಂಧನದ ಭೀತಿಯಲ್ಲಿ ಮಹೇಶ್ ಶೆಟ್ಟಿ ತಿಮ್ಮ ರೌಡಿ ಇದೀಗ ಇದ್ದಿದ್ದು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಗೆ ತಿಮರೋಡಿ ಈಗಾಗಲೇ ತಯಾರು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೊಡಿ ಮನೆಯಲ್ಲಿ ಶೋಧ ನಡೆಸಿದರು. ಈ ವೇಳೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ ಆರೋಪದ ಅಡಿ ಅವರಿಗೆ ಇದೀಗ ಬಂಧನದ ಭೀತಿ ಎದುರಾಗಿದೆ. ಅಕ್ರಮಶಸ್ತ್ರ ಆಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈಗಾಗಲೇ ವಿತರಣೆ ಹಾಜರಾಗಿ ಎಂದು ಎರಡು ಬಾರಿ ನೋಟಿಸ್ ನೀಡಿದ್ದರು ವಿಚಾರಣೆಗೆ ತಿಮ್ಮರೋಡಿ ಹಾಜರಾಗಿರಲಿಲ್ಲ. ಹಾಗಾಗಿ ಮಹೇಶ್ ಶೆಟ್ಟಿ ಮರೋಡಿ ಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ಮಹೇಶೆಟ್ಟಿ ತಿಮರೋಡಿ ಹಾಗೂ ಮಾಸ್ಕ್ ಮ್ಯಾನ್ ಚಿನ್ನಯ ಸೌಜನ್ಯ ಪ್ರಕರಣದ ಕುರಿತು ಮಾತನಾಡಿರುವ ವಿಡಿಯೋ ಸಹ 12ನೇ ವಿಡಿಯೋ ವೈರಲ್ ಆಗಿದೆ.ಸೌಜನ್ಯಳನ್ನು…
ಬೆಂಗಳೂರು : ಇತ್ತೀಚಿಗೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಎಸ್ ಬಿ ಐ ಬ್ಯಾಂಕ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿಗಳನ್ನು ರೂಂನಲ್ಲಿ ಕೂಡಿಹಾಕಿ ಕೋಟ್ಯಾಂತರ ರೂಪಾಯಿ ನಗದು, 20 ಕೆಜಿ ಚಿನ್ನ ದರೋಡೆ ಪ್ರಕರಣ ಭಾರಿ ಸದ್ದು ಮಾಡಿತ್ತು. ಇದೀಗ ಬೆಂಗಳೂರಿನಲ್ಲಿ ಸಹ ಮನೆಯೊಂದರಲ್ಲಿ ಇದ್ದಂತಹ ಒಂದೂವರೆ ಕೋಟಿ ರೂಪಾಯಿಯನ್ನು ದರೋಡೆ ಮಾಡಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನಲ್ಲಿ ಒಂದೂವರೆ ಕೋಟಿ ರೂಪಾಯಿ ದರೋಡೆ ಮಾಡಲಾಗಿದ್ದು ಯಲಹಂಕದಲ್ಲಿ ಮನೆಗೆ ನುಗ್ಗಿ ಒಂದೂವರೆ ಕೋಟಿ ಲೂಟಿ ಮಾಡಿದ್ದಾರೆ. ಗಿರಿರಾಜು ಎಂಬುವವರ ಮನೆಗೆ ಬಂದ ನಾಲ್ವರು ಖದೀಮರು ಇನ್ನೋವಾ ಕಾರಿನಲ್ಲಿ ಬಂದು ಒಂದುವರೆ ಕೋಟಿ ರೂಪಾಯಿ ಕದ್ದು ಪರಾರಿಯಾಗಿದ್ದಾರೆ. ಸರ್ಕಾರಿ ಅಧಿಕಾರಿಗಳು ಎಂದು ಹೇಳಿ ಒಂದುವರೆ ಕೋಟಿ ರೂಪಾಯಿ ರಾಬರಿ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಕುರಿತು ದೂರು ನೀಡಿದ್ದಾರೆ. ಜಮೀನು ಖರೀದಿಗೆ ಗಿರಿರಾಜು ಹಣ ತಂದುಕೊಂಡು ಇಟ್ಟಿದ್ದರು. ನಾಲ್ವರು ಮನೆಗೆ ಬರುತ್ತಿದ್ದ ಮನೆಯವರಿಗೆ ಪ್ರಶ್ನೆ ಮಾಡಿದ್ದಾರೆ ನಿಮ್ಮ ಮನೆಯಲ್ಲಿ ಹಣ ಎಲ್ಲಿದೆ ಎಂದು…
ನವದೆಹಲಿ : ನವೆಂಬರ್ ನಲ್ಲಿ ಶೇಕಡ 50ರಷ್ಟು ಸಚಿವರ ಬದಲಾವಣೆಯ ಸಾಧ್ಯತೆ ಇದೆ. ನವೆಂಬರ್ ನಲ್ಲಿ ಸಂಪುಟ ಪುನರ್ ರಚನೆ ಆಗಲಿದೆ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ದೆಹಲಿಯಲ್ಲಿ ಎಂಎಲ್ಸಿ ಸಲೀಂ ಅಹಮದ್ ಹೊಸ ಬಾಂಬ್ ಸಿಡಿಸಿದ್ದಾರೆ. ನವೆಂಬರ್ ನಲ್ಲಿ ನಮ್ಮ ಸರ್ಕಾರ ಆಡಳಿತಕ್ಕೆ ಬಂದು ಎರಡೂವರೆ ವರ್ಷ ಆಗುತ್ತದೆ. ಹಾಗಾಗಿ ಸಂಪುಟ ಬದಲಾವಣೆ ಆಗಲಿದೆ ಸುಮಾರು ಶೇ.50 ರಷ್ಟು ಹೊಸಬರಿಗೆ ಸ್ಥಾನ ನೀಡಲಾಗುತ್ತದೆ. ಅದರ ಜೊತೆಗೆ ಪಕ್ಷ ಸಂಘಟನೆ ಮಾಡಲಾಗುತ್ತದೆ ಮುಂದಿನ 2028 ರಲ್ಲಿ ಕೂಡ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಹಾಗಾಗಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಅಂತ ಹೇಳಿದ್ದೇವೆ. ಸಂಪುಟ ಬದಲಾವಣೆ ಸಾಧ್ಯತೆ ಇದೆ ಎಂದು ಸ್ಪೋಟಕ ಹೇಳಿಕೆ ನೀಡಿದರು.
ಬೆಳಗಾವಿ : ಬೆಳಗಾವಿಯಲ್ಲಿ ಹಾಸ್ಟೆಲ್ ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಓರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಸದಾಶಿವನಗರದ ವಸತಿ ನಿಲಯದಲ್ಲಿ ಈ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳಿಗ್ಗೆ ಕೊಡಡಿಯಲ್ಲಿ ಸುಮಿತ್ರಾ ಗೋಕಾಕ್ (19) ನೇಣಿಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಸಹಪಾಠಿ ಬಂದು ಬಾಗಿಲು ಬಡಿದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ತುಮಕೂರು : ಬೆಂಗಳೂರಲ್ಲಿ ಇಂದು ಬೆಳಿಗ್ಗೆ 35 ವರ್ಷದ ಮಹಿಳೆಗೆ ಲೋಕೇಶ್ ಅಲಿಯಾಸ್ ಲೋಹಿತಾಶ್ವ ಎಂಬ ಆರೋಪಿ 11 ಬಾರಿ ಚಾಕು ಇರಿದು ಕೊಲೆಗೆ ಯತ್ನಿಸಿದ್ದ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಇದೀಗ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ರೇಖಾ (35) ಸಾವನಪ್ಪಿದ್ದಾರೆ. ಬೆಂಗಳೂರಿನ ಸುಂಕದಕಟ್ಟೆ ಬಳಿ ಲೋಕೇಶ್ ಎಂಬಾತ ರೇಖಾಗೆ ಚಾಕು ಇರಿದಿದ್ದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿವಾಸಿ ಆಗಿರುವ ರೇಖಾಗೆ ಲೋಕೇಶ್ 11 ಬಾರಿ ಚಾಕು ಇರಿದಿದ್ದ. ಗಾಯಗೊಂಡ ರೇಖಾಳನ್ನು ಪೊಲೀಸರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಮರೆಸಿಕೊಂಡ ಆರೋಪಿ ಲೋಕೇಶ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಇಂದು ವಿಶ್ವಖ್ಯಾತ ನಾಡ ಹಬ್ಬದ ದಸರಾವನ್ನು ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಈ ಹಿಂದೆ ಹೈದರಾಲಿ ಹಾಗೂ ಟಿಪ್ಪು ಸುಲ್ತಾನ್ ಸಹ ದಸರಾ ಹಬ್ಬವನ್ನು ಆಚರಿಸುತ್ತಿದ್ದರು ಇತಿಹಾಸ ತಿರುಚಬೇಡಿ ಎಂದು ತಿಳಿಸಿದರು. ವಿಜಯನಗರ ಕಾಲದಲ್ಲಿ ದಸರಾ ಆಚರಣೆ ಮಾಡುತ್ತಿದ್ದರು. ಬಳಿಕ ವಿಜಯನಗರ ಸಾಮ್ರಾಜ್ಯ ಪತನವಾದ ಸಂದರ್ಭದಲ್ಲಿ ಮೈಸೂರು ಅರಸರು ಆಚರಣೆ ಮಾಡಿದರು. ನಂತರ ಶ್ರೀರಂಗಪಟ್ಟಣದಲ್ಲಿ ಹೈದರಾಲಿ ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಣೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಎಲ್ಲರೂ ಇತಿಹಾಸವನ್ನ ತಿಳಿದುಕೊಳ್ಳಬೇಕು. ಆ ಕಾರಣಕ್ಕಾಗಿಯೇ ಸಂವಿಧಾನದ ಪೀಠಿಕೆಯನ್ನು ಪ್ರತಿಯೊಂದು ಶಾಲೆಯಲ್ಲೂ ಓದಬೇಕೆಂದು ಮಾಡಿದ್ದೇವೆ. ಇತಿಹಾಸವನ್ನ ತಿರುಚಿ ರಾಜಕೀಯಕ್ಕೋಸ್ಕರ ಮಾಡಬಾರದು. ರಾಜಕೀಯ ಮಾಡೋಣ ಅಂದ್ರೆ ಬಹಳಷ್ಟು ಇದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡೋಣ. ಇಲ್ಲ ಸಲ್ಲದ ದ್ವೇಷಕ್ಕೋಸ್ಕರ ರಾಜಕಾರಣ ಮಾಡಬಾರದು ಎಂದು ಹೇಳಿದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಉಚ್ಚಾಟನೆ ಮಾಡಿದ ಹಿನ್ನೆಲೆಯಲ್ಲಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಳಿ ಇದೀಗ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಗ್ರಾಮದಲ್ಲಿ 1 DAR,ತುಕಡಿ, 20ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಇದೀಗ ಟ್ರಸ್ಟ್ ಸಿಬ್ಬಂದಿಗಳು ಬೀಗ ಹಾಕಿದ್ದಾರೆ. ಸದ್ಯ ಪಂಚಮಸಾಲಿ ಪೀಠದ ಆವರಣ ಜನರಿಲ್ಲದೆ ಬೀಕೋ ಎನ್ನುತ್ತಿದೆ.ಪೀಠದ ಕಡೆಗೆ ಯಾರೂ ಹೋಗದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಬಸವ ಜಯ ಮೃತ್ಯುಂಜಯ ಶ್ರೀಗಳು ಕೂಡಲಸಂಗಮಕ್ಕೆ ಬರುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಲಾದಾಗಿದೆ. ಕೂಡಲಸಂಗಮದಲ್ಲಿ ಭಕ್ತರ ಜೊತೆಗೆ ಸ್ವಾಮೀಜಿ ಚರ್ಚಿಸುವ ಸಾಧ್ಯತೆ ಇದೆ. ಪೀಠದ ಆವರಣ ಬಿಟ್ಟು ಬೇರೆ ಸ್ಥಳದಲ್ಲಿ ಭಕ್ತರ ಜೊತೆಗೆ ಶ್ರೀಗಳು ಚರ್ಚಿಸಿ ಏನು ಹೇಳುತ್ತಾರೆ ಎಂದು ಕಾದು ನೋಡಬೇಕಾಗಿದೆ.
ಮೈಸೂರು ಸೆ 22: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು. ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ…
ಮೈಸೂರು : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು. ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು. ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ.…









