Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ಆರ್ಎಸ್ಎಸ್ ಸಂಚಲನಕ್ಕೆ ನಿರಾಕರಣೆ ಹಿನ್ನೆಲೆಯಲ್ಲಿ, ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿತು. ಈ ವೇಳೆ ಕಲ್ಬುರ್ಗಿ ಹೈಕೋರ್ಟ್ ಅರ್ಜಿದಾರರಿಗೆ ಮತ್ತೊಂದು ಅರ್ಜಿ ಸಲ್ಲಿಸಲು ಸೂಚನೆ ನೀಡಿತ್ತು. ನವೆಂಬರ್ 2 ರಂದು ಕಲ್ಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ಪಥಸಂಚಲನ ವಿಚಾರವಾಗಿ ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠದ ಸೂಚನೆಯಂತೆ ಮುಖಂಡರು ಕಲ್ಬುರ್ಗಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಹೌದು ನಿನ್ನೆ ಹೊಸ ಅರ್ಜಿ ಸಲ್ಲಿಕೆಗೆ ಆರ್ ಎಸ್ ಎಸ್ ಮುಖಂಡರು ಮುಂದಾಗಿದ್ದರು.ನಿನ್ನೆ ಡಿಸಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾಗ ಮನವಿ ಪತ್ರ ಖುದ್ದಾಗಿ ನೀಡಲು ಜಿಲ್ಲಾಧಿಕಾರಿ ಕಚೇರಿ ಮತ್ತು ನಿವಾಸಕ್ಕೆ ತೆರಳಿದ್ದರು ಡಿಸಿ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನಿವಾಸದ ಸಿಬ್ಬಂದಿಗಳಿಂದ ಫೋನ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಆಪ್ತ ಸಹಾಯಕರಿಗೆ ಫೋನ್ ಮಾಡಿಸಿದ್ದಾರೆ. ಆಪ್ತ ಸಹಾಯಕರು ಕೂಡ ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರ ಅಧಿಕೃತ ಎರಡು ಇ-ಮೇಲ್ ಗೆ ಪತ್ರ ರವಾನಿಸಿದ್ದಾರೆ. ಪಥ ಸಂಚಲನಕ್ಕೆ ಅನುಮತಿ ನೀಡುವಂತೆ…

Read More

ಕಲಬುರ್ಗಿ : ನಾಡಿನಾದ್ಯಂತ ಇಂದು ಎಲ್ಲರು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಇದ್ದರೆ, ಕಲ್ಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದಲ್ಲಿ ಭೂಮಿ ಕಂಪಿಸಿದೆ. ಬೆಳಗ್ಗೆ 8:00 ಸುಮಾರಿಗೆ ಈ ಒಂದು ಭೂಮಿ ಕಂಪಿಸಿದ ಅನುಭವ ಆಗಿದೆ ಈ ವೇಳೆ ತಕ್ಷಣ ಜನರು ಭಯದಿಂದ ಮನೆಯಿಂದ ಹೊರಗಡೆ ಹೊಡಿ ಬಂದಿದ್ದಾರೆ. ಅಲ್ಲದೆ ಆತಂಕದಿಂದ ಗ್ರಾಮಸ್ಥರು ಬಯಲು ಪ್ರದೇಶದಲ್ಲಿ ಕೆಲವು ಹೊತ್ತು ಕಾಲ ಕಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಆಗಿರುವ ಕುರಿತು ಮಾಹಿತಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, 3 ಕೆ ಎಸ್ ಆರ್ ಟಿ ಸಿ ಬಸ್ಗಳ ನಡುವೆ ಡಿಕ್ಕಿಯಾಗಿ ಸುಮಾರು 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮಳವಳ್ಳಿ ಮತ್ತು ಕೊಳ್ಳೇಗಾಲ ಹೆದ್ದಾರಿಯಲ್ಲಿ ಮೂರು ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಈ ಒಂದು ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿಯಾಗಿತ್ತು. ಮೊದಲು ಎರಡು ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿಯಾಗಿತ್ತು. ಅಪಘಾತಕ್ಕೆ ಈಡಾಗಿದ್ದ ಬಸ್ಗೆ ಮತ್ತೊಂದು ಕೆ ಎಸ್ ಆರ್ ಟಿ ಸಿ ಬಸ್ ಬಂದು ಡಿಕ್ಕಿ ಹೊಡೆದಿದೆ. ಮೂರು ಬಸ್ಗಳಲ್ಲಿದ್ದ 30ಕ್ಕೂ ಹೆಚ್ಚು ಜನರಿಗೆ ಗಯಗಳಾಗಿದ್ದು 10 ಜನರ ಸ್ಥಿತಿ ಗಂಭೀರವಾಗಿದೆ ಗಯಾಳುಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ…

Read More

ಶಿವಮೊಗ್ಗ : ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಸಚಿವರು ಬಿಹಾರದ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳಿಂದ ಲೂಟಿ ಮಾಡುತ್ತಿದ್ದಾರೆ ಎಂದರು. ಸಚಿವರ ವಸೂಲಿಗೆ ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಎದುರಿಗೆ ಹೇಳುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಅಂತ ಎಲ್ಲಾ ಇಲಾಖೆಯ ಮಂತ್ರಿಗಳು ವಸೂಲಿ ಮಾಡಿ ಬಿಹಾರ್ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ. ಈಗ ದಂಧೆ ಆಗಿದೆ. ಅದು ಬಿಹಾರಕ್ಕೆ ತಲುಪಲ್ಲ, ಅದು ಎಲ್ಲಿ ತಲುಪಬೇಕೋ ಅಲ್ಲಿಗೆ ತಲುಪುತ್ತದೆ. ಬಿಹಾರದ ಚುನಾವಣೆ ಇಟ್ಟುಕೊಂಡು ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಕೊಲೆ ಆರೋಪಿ ನಟ ದರ್ಶನ್ ಕನಿಷ್ಠ ಸೌಲಭ್ಯ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಕಾನೂನು ಪ್ರಾಧಿಕಾರ ಜೈಲಲ್ಲಿ ಕನಿಷ್ಠ ಸೌಲಭ್ಯ ನೀಡಲಾಗುತ್ತದೆಯೋ ಇಲ್ಲವೋ ಎಂದು ಪರಿಶೀಲಿಸಿ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟಿಗೆ ವರದಿಯನ್ನು ಸಲ್ಲಿಸಿದರು. ವರದಿ ಸಲ್ಲಿಸಿದ ಬಳಿಕ ನಟ ದರ್ಶನ್ ಜೈಲಿನಲ್ಲಿ ತನ್ನ ಸಹಚರರೊಂದಿಗೆ ಕೂಗಾಡಿದ್ದಾರೆ. ಜೈಲಿನ ನಿಯಮದ ಪ್ರಕಾರ ಸೌಲಭ್ಯ ನೀಡಿದರು, ದರ್ಶನ್ ಆರೋಪಿಸಿದ್ದಾರೆ. ಖುದ್ದು ನ್ಯಾಯಾಧೀಶರ ಭೇಟಿಗೂ ಆರೋಪಿ ದರ್ಶನ್ ಅರ್ಜಿ ಹಾಕಿದ್ದರು. ಕಾನೂನು ಸೇವೆಗಳ ಪ್ರಾಧಿಕಾರ ವರದಿ ವಿಚಾರ ಕೇಳಿ ದರ್ಶನಗೆ ಶಾಕ್ ಆಗಿದೆ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ವರದರಾಜ್ ವರದಿಯನ್ನು ನಿನ್ನೆ ಕೋರ್ಟಿಗೆ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವೇಳೆ ಬ್ಯಾರಕ್ ನಲ್ಲಿ ನಟ ದರ್ಶನ್ ವರದಿ ನನ್ನ ವಿರುದ್ಧ ಇದೆ ಎಂದು ಕೂಗಾಡಿದ್ದಾರೆ. ಸಹ ಕೈದಿಗಳ ಜೊತೆಗೆ ಕೊಲೆ ಆರೋಪಿ ದರ್ಶನ್ ಕೂಗಾಡಿದ್ದಾರೆ.…

Read More

ಬಾಗಲಕೋಟೆ : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಈಗಾಗಲೇ ಹಲವು ಚರ್ಚೆಗಳು ಆರಂಭವಾಗಿದ್ದು, ಇದರ ಬೆನ್ನಲ್ಲೇ ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನೋಡಿದಿದ್ದಾರೆ. ಹೌದು ಮುಧೋಳದಲ್ಲಿ ಜಡಗಣ್ಣ- ಬಾಲಣ್ಣ ಕಂಚಿನ ಮೂರ್ತಿ ಅನಾವರಣ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವೇಳೆ ಮಾತನಾಡಿದ ಆರ್‌ಬಿ ತಿಮ್ಮಾಪೂರ, ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಸ್ವಾಗತ ಭಾಷಣ ಮಾಡುತ್ತಾ ಆರ್‌ಬಿ ತಿಮ್ಮಾಪೂರ, ವೇದಿಕೆಯಲ್ಲಿರುವ ನನ್ನ ನಾಯಕ, ಮುಂದಿನ ಎಲ್ಲರ ನಿರೀಕ್ಷೆಯಲ್ಲಿರುವ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಯಾರದೋ ಕೃಪೆಯಿಂದ ಮುಖ್ಯಮಂತ್ರಿ ಆಗುವುದಲ್ಲ, ಅವರ ಸ್ವಂತ ಶಕ್ತಿಯಿಂದ ಮುಖ್ಯಮಂತ್ರಿ ಆಗುತ್ತಾರೆ. ಅಭಿವೃದ್ಧಿ ಕಾರ್ಯಗಳ ಮೂಲಕ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ. ಸತೀಶ್ ಜಾರಕಿಹೊಳಿ ಒಂದಲ್ಲ ಒಂದು ದಿನ…

Read More

ಬೆಂಗಳೂರು : ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಎಲ್ಲ ಸಂಘಟನೆಗಳು ಅನುಮತಿ ಪಡೆಯಬೇಕು. ಎಲ್ಲ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಕಳೆದ ಸಚಿವ ಸಂಪುಟದಲ್ಲಿ‌ ತೀರ್ಮಾನವಾಗಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ, ಸಂಸ್ಥೆಗಳು ಕಾರ್ಯಕ್ರಮ ನಡೆಸಲು ಅವಕಾಶ ಇಲ್ಲ. ಈ ಬಗ್ಗೆ ನಿನ್ನೆ ಸಂಜೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಇದೇ ಕಾರಣಕ್ಕೆ ಕಲಬುರಗಿಯಲ್ಲಿ ಪಥ ಸಂಚಲನಕ್ಕೆ ಅನುಮತಿ ನೀಡಿಲ್ಲ. ಆದೇಶವಾದ ಮೇಲೆ ಅವಕಾಶ ಕೊಟ್ಟರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಆರ್​ಎಸ್​ಎಸ್​ ಹೊಸದೇನಲ್ಲ, ನೂರು ವರ್ಷವಾಗಿದೆ. ಆರ್​ಎಸ್​ಎಸ್​ ವಿಚಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದಾಣಿಕೆ‌ ಆಗುವುದಿಲ್ಲ. ಅದರ ಬಗ್ಗೆ ಆಗಿಂದಾಗ್ಗೆ ಚರ್ಚೆಗಳು ನಡೆಯುತ್ತಿವೆ. ಹಾಗಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. 2013ರಲ್ಲಿ ಜಗದೀಶ್ ಶೆಟ್ಟರ್ ಅವರು ಆದೇಶ ಮಾಡಿದ್ದರು. ನಾವು ಆದೇಶ ಮಾಡಿದರೆ ಮಾತ್ರ ಪ್ರಶ್ನೆ ಮಾಡುತ್ತಾರೆ. ಅವರು ಮಾಡಿದರೆ ಗೊಂದಲ ಆಯ್ತು ಅಂತಾರೆ. ಪ್ರಚೋದನೆ ಆಗಬಾರದೆಂದು ಇದು…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಮನೆ ಮುಂದೆ ಹಚ್ಚಿದ ದೀಪದಿಂದ ಘೋರ ದುರಂತವೊಂದು ಸಂಭವಿಸಿದ್ದು, ಗ್ಯಾಸ್​​​​​​ ಸಿಲಿಂಡರ್​​​​​​ ಸ್ಫೋಟಗೊಂಡು ಎಂಟು ಜನ ಗಾಯಗೊಂಡು, ಏಳು ಬೈಕ್​​ಗಳು​ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್​ ಬಳಿ ಜರುಗಿದೆ. ಇಂದು ಮುಂಜಾನೆ ಸುಮಾರು 2.30ರ ಸುಮಾರಿಗೆ ಸಿಲಿಂಡರ್​​ ಸ್ಫೊಟಗೊಂಡಿದೆ. ಘಟನೆಯಲ್ಲಿ ಒಟ್ಟು 8 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಕಲ್ಮೇಶ್ ದರಿಯಪ್ಪ ಲೋಕಣ್ಣಬಾರ (30 ವರ್ಷ), ಸಚಿನ್ ಪ್ರಕಾಶ್ ಮೇರಿ (28), ಗಣೇಶ್ (26), ದಾಪು ದೇವಿ (28), ಡಿಂಪಲ್ ಪಟೇಲ್ (1 ವರ್ಷ), ಸ್ನೇಹಾ (22), ಐಶ್ವರ್ಯಾ (13) ಹಾಗೂ ಶ್ರುತಿ (23) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ, ಏಳು ಬೈಕ್​ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಲ್ಲದೆ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಮತ್ತು ಮೂವರು ಪುರುಷರು ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಹಾಸನ : ಹಾಸನಾಂಬೆ ದರ್ಶನದ ವೇಳೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಅವಮಾನ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ದೇಗುಲದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಶಾಸಕ ಸ್ವರೂಪ್ ಪ್ರಕಾಶ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ದೇವಸ್ಥಾನದ ಎರಡು ಬದಿಯ ರಸ್ತೆ ಬಂದ್ ಮಾಡಿ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ದೇವಾಲಯದ ಒಳ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಈ ವೇಳೆ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದು, ಶಿಷ್ಟಾಚಾರ ವಾಹನದಲ್ಲಿ ಬಂದು ಗಣ್ಯರು ಸಿಲುಕಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರೋಕೆ ಹೇಳಿ ಎಂದು ಎಸಿಗೆ ತಾಕಿತ್ತು ಮಾಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೆಡ್ ಗಳನ್ನು ಹೆಚ್ಚಿಸಿದ್ದಾರೆ. ಹಾಸನ ಮಹಾನಗರ ಪಾಲಿಕೆಯ ಮುಂದೆ ಈ ಒಂದು ಪ್ರತಿಭಟನೆ ನಡೆಯುತ್ತಿದೆ ಸ್ಥಳಕ್ಕೆ ಜಿಲ್ಲಾಧಿಕಾರಿ ಬರಬೇಕೆಂದು ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ ಸ್ಥಳಕ್ಕೆ ಎಸಿ ಮಾರುತಿ ಬಂದು ಪ್ರತಿಭಟನಾಕಾರರನ್ನು ಮನವೊಲಿಸುತ್ತಿದ್ದಾರೆ.

Read More

ಚಾಮರಾಜನಗರ : ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಆರೋಪ ವಿಚಾರವಾಗಿ ಇದೀಗ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವೀರನಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ನಿಷೇಧ ಹಿನ್ನೆಲೆಯಲ್ಲಿ ಶಾಂತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರೀ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ ಎಂದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದ. ಶಿವಕುಮಾರ್ ಗೆ ಜಾತಿನಿಂದನೆ ಮಾಡಿ ಕೊಲೆ ಮಾಡೋದಾಗಿ ಧಮ್ಕಿ ಹಾಕಿದ್ದಾರೆ ಈ ಹಿನ್ನೆಲೆ ಶಿವಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಶಿವಕುಮಾರ್ ನೀಡಿದ ದೂರಿನ ಮೇರೆಗೆ ಇದೀಗ ಎಫ್ಐಆರ್ ದಾಖಲಾಗಿದೆ. 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಕೆಸ್ ದಾಖಲಾಗಿದೆ. ಅಟ್ರಾಸಿಟಿ ಕೇಸ್ ದಾಖಲಾಗಿದ್ದಕ್ಕೆ ವೀರನಪುರ ಗ್ರಾಮಸ್ಥರು ರೊಚ್ಚಿಗೆ ಎದ್ದಿದ್ದಾರೆ.…

Read More