Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಾಮರಾಜನಗರ : ಚುನಾವಣೆಯಲ್ಲಿ ವಿರುದ್ಧವಾಗಿ ಮತ ಹಾಕಿದ್ದಕ್ಕೆ ಬೇಸತ್ತು ಆತ್ಮಹತ್ಯೆಗೆ ಕುಟುಂಬವೊಂದು ಮುಂದಾಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಉಪಾರಶೆಟ್ಟಿ ಸಮುದಾಯದ ರವಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ವರ್ಷದ ಹಿಂದೆ ಕೇವಲ 5000 ಚೀಟಿ ಹಣ ಕೊಡುವಂತೆ ರವಿ ಕೇಳಿದ್ದಾನೆ. ರವಿ ಬದಲು ಬೇರೆ ಅವರಿಗೆ ಊರಿನ ಜಮಾನರು ಚೀಟಿ ಹಣ ನೀಡಿದ್ದರು. ಇದನ್ನು ಪ್ರಶ್ನೆಸಿ ಗ್ರಾಮದ ಯಜಮಾನರ ಜೊತೆ ರವಿ ಜಗಳವಾಡಿದ್ದ. ಘಟನೆ ನಡೆದ ಒಂದು ವಾರದಲ್ಲಿ ಸಮುದಾಯದ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಯಜಮಾನರ ವಿರೋಧಿ ಬಣ್ಣಕ್ಕೆ ರವಿ ಮತ ಹಾಕಿದ್ದಾನೆ. ಯಜಮಾನರ ವಿರೋಧಿ ಬಣಕ್ಕೆ ಮತ ಹಾಕಿದ್ದಕ್ಕೆ ರವಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಯಾರು ರವಿ ಕುಟುಂಬಸ್ಥರನ್ನು ಮಾತನಾಡಿಸಿದಂತೆ ಕಟ್ಟಾಜ್ಞೆ ಹೊರಡಿಸಲಾಗಿತ್ತು. ಯಾರಾದ್ರೂ ಮಾತನಾಡಿದಿದ್ದರೆ 10,000 ದಂಡ ವಿಧಿಸುವ ಎಚ್ಚರಿಕೆ ಸಹ ನೀಡಲಾಗಿತ್ತು . ಈ ವೇಳೆ ತಪ್ಪಾಯ್ತು ಕ್ಷಮಿಸಿ ಎಂದು ಬೇಡಿಕೊಂಡರು ಊರಿನ ಯಜಮಾನರು ಇದಕ್ಕೆ ಒಪ್ಪಲಿಲ್ಲ. ಇನ್ನು…
ಬೆಳಗಾವಿ : ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು ಜಾತಿಗಣತಿಯಲ್ಲಿ ಉಲ್ಲೇಖಿಸುವಂತೆ ಹೇಳುತ್ತಿದ್ದಾರೆ. ಆದರೆ ಎಲ್ಲಿಯವರೆಗೆ ಕೇಂದ್ರ ಸರ್ಕಾರ ವೀರಶೈವ ಲಿಂಗಾಯತ ಎಂದು ಅಧಿಕೃತವಾಗಿ ಘೋಷಣೆ ಮಾಡುವುದಿಲ್ಲವೋ ಅಲ್ಲಿಯವರೆಗೆ ಈ ರೀತಿ ನಾವು ಬರೆಸಿದರೆ ಯಾವುದೇ ಅರ್ಥವಿಲ್ಲ. ಕೆಲವು ಮೂರ್ಖರು ಲಿಂಗಾಯತ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದಕ್ಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಯತ್ನಾಳ್ ಹರಿಹಾಯ್ದರು. ಧರ್ಮ ಎಂದಲ್ಲಿ ಹಿಂದೂ ಎಂದೇ ಬರೆಸಬೇಕು, ಜಾತಿ ಕಾಲಂನಲ್ಲಿ ಲಿಂಗಾಯತ, ಪಂಚಮಸಾಲಿ ಏನಿದೆಯೋ ಅದನ್ನು ಬರೆಸಬೇಕು, ಸರ್ಕಾರದ ಮೀಸಲಾತಿಯಲ್ಲಿ ವೀರಶೈವ ಲಿಂಗಾಯತ ಎಂಬುದೇ ಇಲ್ಲ, ಆರು ಧರ್ಮಕ್ಕೆ ಮಾತ್ರ ನಮ್ಮ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಜಾತಿ ಗಣತಿ ಆರಂಭವಗಲಿದ್ದು, ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಅಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ಅನಗತ್ಯವಿರುವ ಅಂಶಗಳನ್ನು ತೆಗೆದುಹಾಕಲು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಕ್ರಿಕ್ರಿಶ್ಚಿಯನ್ ಅಡಿ ವಿವಿಧ ಜಾತಿಗಳನ್ನು ನಮೂದಿಸಿದನ್ನು ಆಯೋಗ ಈಗಾಗಲೇ ತೆಗೆದು ಹಾಕಿದೆ ಎಂದು ಸ್ಪಷ್ಟಪಡಿಸಿದರು. ಗದಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆಯು ಕೇವಲ ಜಾತಿ ಗಣತಿಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶ ಕಲ್ಪಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಾತಿ ಗಣತಿ ಮಧ್ಯೆಯೇ ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸುವ ಬಗ್ಗೆ ಪ್ರತಿಕ್ರಿಯಿಸಿ, ‘ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸುವ ಶಿಫಾರಸನ್ನು ಹಿಂದಿನ ಬಿಜೆಪಿ ಸರ್ಕಾರವೇ ಮಾಡಿತ್ತು. ಆದರೆ…
ಹಾಸನ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಒಂದು ಉಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘಟನೆ ನಡೆದಿದ್ದು ಗಣೇಶನ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಹೌದು ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದೆ. ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳಿಂದ ನೀಚತನ ನಡೆದಿದ್ದು, ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಗಣೇಶನ ಮೂರ್ತಿಗೆ ಹಾರ ಹಾಕಿದ್ದಾರೆ. ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಗಣಪತಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಮುಂಜಾನೆ ದೇವರ ದರ್ಶನಕ್ಕೆ ಹೋದ ಭಕ್ತರಿಗೆ ಆಘಾತ ಕಾದಿದೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಇದೀಗ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಗೋಚರಸುತ್ತಿದ್ದೂ, ಮಹಾಲಯ ಅಮಾವಾಸ್ಯೆಯ ದಿನದಂದೇ ಖಂಡಗ್ರಾಸ ಸೂರ್ಯ ಗ್ರಹಣ ಗೋಚರಿಸಲಿದೆ. ಹಾಗಾಗಿ ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ನಡೆಯಲಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಚಂದ್ರ ಗ್ರಹಣ ಗೋಚರವಾಗಿತ್ತು. 15 ದಿನಗಳ ಅಂತರದಲ್ಲಿ ಸೂರ್ಯ ಚಂದ್ರ ಗ್ರಹಣಕ್ಕೆ ಇಂದು ಖಗೋಳ ಸಾಕ್ಷಿಯಾಗುತ್ತಿದೆ ಇಂದು ರಾತ್ರಿ 11 ರಿಂದ ನಾಳೆ ಬೆಳಗಿನ ಜಾವ 3.34 ರವರೆಗೆ ಸೂರ್ಯ ಗ್ರಹಣ ಗೋಚರಿಸಲಿದೆ. ಆದರೆ ಭಾರತದಲ್ಲಿ ಸೂರ್ಯಗ್ರಹಣ ಗೋಚರವಿಲ್ಲ. ನ್ಯೂಜಿಲ್ಯಾಂಡ್, ಅಂಟಾರ್ಟಿಕಾ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸೂರ್ಯ ಗ್ರಹಣ ಗೋಚರಿಸಲಿದೆ. ಸೂರ್ಯ ಗ್ರಹಣವು ಬಹಳ ಅಪರೂಪದ ಖಗೋಳ ಘಟನೆಯಾಗಿದೆ. ಸೂರ್ಯ ಗ್ರಹಣದಲ್ಲಿ ಭೂಮಿ, ಸೂರ್ಯ ಮತ್ತು ಚಂದ್ರನು ಒಂದೇ ಸಮನಾದ ರೇಖೆಯಲ್ಲಿ ಇರುತ್ತಾರೆ. ಈ ಸಮಯದಲ್ಲಿ ಚಂದ್ರನು ಸೂರ್ಯ ಮತ್ತು ಭೂಮಿಯ ನಡುವೆ ಬಂದು, ಸೂರ್ಯನ ಬೆಳಕನ್ನು ಭೂಮಿಗೆ ತಲುಪದಂತೆ ನಿರ್ಬಂಧಿಸುವ ಘಟನೆಯೇ ಸೂರ್ಯ ಗ್ರಹಣವಾಗಿದೆ. ಈ ಸೂರ್ಯ ಗ್ರಹಣವನ್ನು ಭಾಗಶಃ ಸೂರ್ಯ ಗ್ರಹಣ ಎಂದು…
ಧಾರವಾಡ : ಕನ್ನಡದ ಜಯಪ್ರಿಯ ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾರೆ. ಈ ಪ್ರಕರಣದ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಯುವತಿಯ ತಂದೆ ತಾಯಿ, ಮುಕಳೆಪ್ಪ ನನ್ನ ಮಗಳನ್ನು ಟೂರ್ ಗೆ ಕರೆದುಕ್ಕೊಂಡು ಹೋಗುತ್ತಿದ್ದ. ನಾವು ಹಳ್ಳಿಯವರು ಎಲ್ಲೂ ಹೋಗಲ್ಲ. ನನ್ನ ಮಗಳು ದೊಡ್ಡ ಹೆಸರು ಮಾಡಬಹುದು ಅಂತಾ ಮುಕಳೆಪ್ಪನ ಜೊತೆ ವಿಡಿಯೋ ಮಾಡಲು ಹೋಗುತ್ತಿದ್ದಳು. ನಾವು ವಿಡಿಯೋ ಮಾಡಲು ಕಳುಹಿಸಿಕೊಡುತ್ತಿದ್ದೆವು. ಅವನು ಈಗ ನನ್ನ ಮಗಳು ಗಾಯತ್ರಿಗೆ ಮೋಸ ಮಾಡಿದ್ದಾನೆ. ನಮ್ಮ ಹಿಂದೂ ಮಂದಿ ಏನ್ ಶಿಕ್ಷೆ ಕೊಡುತ್ತೀರೋ ಕೊಡಿ. ನನ್ನ ಮಗಳನ್ನ ಕರೆತಂದು ನನಗೆ ಒಪ್ಪಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಮಗಳನ್ನು ಪುಸಲಾಯಿಸಿ ಮುಕುಳೆಪ್ಪ ಮದುವೆ ಆಗಿದ್ದಾನೆ. ನಮ್ಮ ಮಗಳು ದೊಡ್ಡ ಮಟ್ಟದಲ್ಲಿ ಬೆಳಿತಾಳೆ…
ವಸಾಯಿ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಬೀದರ್ ನಲ್ಲಿ ಮಲತಾಯಿ ಒಬ್ಬಳು ಮಗುವನ್ನು 3ನೇ ಮಹಡಿಯಿಂದ ತಳ್ಳಿ ಕೊಂಡಿದ್ದಳು. 3ನೇ ಮಹಡಿಯಿಂದ ಬಿದ್ದರು ಸ್ವಲ್ಪ ಕಾಲ ಮಗು ಬದುಕಿತ್ತು. ಬಳಿಕ ಸಾವನ್ನಪ್ಪಿತ್ತು. ಇದೀಗ 4ನೇ ಮಹಡಿಯಿಂದ ಬಿದ್ದು ಬದುಕಿದ್ದ 16 ತಿಂಗಳ ಮಗುವೊಂದು ಟ್ರಾಫಿಕ್ ಜಾಂನಲ್ಲಿ ಸಿಲುಕಿ ಮೃತಪಟ್ಟಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ 1.30ರ ವೇಳೆಗೆ ವಸಾಯಿಯ ಫಾತಿಮಾ ಮಂಜಿಲ್ ಎಂಬಲ್ಲಿ ಮಗುವೊಂದು 4ನೇ ಮ ಹಡಿಯಿಂದ ಕೆಳಗೆ ಬಿದ್ದಿದ್ದು, ಹೊಟ್ಟೆ ಮತ್ತು ಕಿಬ್ಬೊಟ್ಟೆಗೆ ತೀವ್ರವಾಗಿ ಪೆಟ್ಟಾಗಿತ್ತು. ತಕ್ಷಣ ಪೋಷಕರು ಕಂದನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಮಗುವಿಗೆ ಆಂತರಿಕ ರಕ್ತಸ್ರಾವವಾಗಿರುವುದನ್ನು ಕಂಡು, ದೊಡ್ಡ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆಯೆ ಪೋಷಕರು ಮಗುವಿನೊಂದಿಗೆ ಮುಂ ಬೈನ ಆಸ್ಪತ್ರೆಗೆ ಕಾರಿನಲ್ಲಿ ಹೊರಟಿದ್ದಾರೆ. ಆದರೆ ಅಹ್ಮದಾ ಬಾದ್-ಮುಂಬೈ ಹೆದ್ದಾರಿಯಲ್ಲಿದ್ದ ಭಾರೀ ಟ್ರಾಫಿಕ್ ಉಂಟಾಗಿ, ಅವರೆಲ್ಲ 4 ತಾಸು ಕಾರಿನಲ್ಲೇ ಕಳೆಯುವಂತಾಗಿದೆ. ಈ ವೇಳೆ ಮಗುವಿನ ಮೈ…
ಬೆಂಗಳೂರು : ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿ ರುವ ಅತ್ಯಾಚಾರ ಆರೋಪ ಸಂಬಂಧಿತ ಎರಡು ಪ್ರತ್ಯೇಕ ಪ್ರಕರಣಗಳನ್ನು ಮತ್ತೊಂದು ಸೆಷನ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನಗರದ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಜಡ್ಜ್ ಮುರಳೀಧರ ಪೈ ಶನಿವಾರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು. ಜಪ್ರತಿನಿಧಿಗಳ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಈಗಾಗಲೇ ತನ್ನ ವಿರುದ್ಧದ ಒಂದು ಪ್ರಕರಣದಲ್ಲಿ ನೀಡಿರುವ ತೀರ್ಪಿನಲ್ಲಿ ಪೂರ್ವಾಗ್ರಹ ಭಾವನೆ ಹೊಂದಿರುವ ಅಂಶಗಳಿವೆ. ಹೀಗಾಗಿ ತನ್ನ ವಿರುದ್ಧ ಅತ್ಯಾಚಾರದ ಎರಡು ಪ್ರತ್ಯೇಕ ಪ್ರಕರಣಗಳನ್ನು ನಗರದ ಮತ್ತೊಂದು ಸೆಷನ್ಸ್ ನ್ಯಾಯಾ ಲಯಕ್ಕೆ ವರ್ಗಾಯಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದರು. ಗೊಂಡಿರುವುದರಿಂದ ಪ್ರಜ್ವಲ್ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಇದೀಗ ಅರ್ಜಿ ವಜಾ ಅವಕಾಶವಿದೆ.
ಬೆಂಗಳೂರು : ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ಇದರ ಮಧ್ಯ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್. ಹೀಗೆ 46 ಹಿಂದೂ ಜಾತಿಗಳ ಹೆಸರನ್ನು ಕ್ರಿಶ್ಚಿಯನ್ ಜತೆ ತಳಕುಹಾಕಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆನ್ಲೈನ್ ಸಮೀಕ್ಷಾ ನಮೂನೆಯಿಂದ 33 ಜಾತಿಗಳ ಹೆಸರು ಕೈ ಬಿಡಲು ಹಿಂದುಳಿದ ವರ್ಗಗಳ ಆಯೋಗ ನಿರ್ಧರಿಸಿದೆ. ಕ್ರಿಶ್ಚಿಯನ್ ಹೆಸರಿನ ಹಿಂದೂ ಜಾತಿಗಳ ಬಗ್ಗೆ ವಿವಿಧ ಜಾತಿಗಳು ಹಾಗೂ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ರಾಜ್ಯಪಾಲರು ಸಹ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಹೀಗಾಗಿ ಮುಖ್ಯಮಂತ್ರಿಗಳು ನೀಡಿರುವ ಸೂಚನೆ ಅನ್ವಯ ಆಯೋಗ ಕೆಲ ಪರಿಷ್ಕರಣೆ ಮಾಡಿದೆ. ಆದರೆ ಕ್ರಿಶ್ಚಿಯನ್ ಜಾತಿಗಳೊಂದಿಗಿನ 46 ಹೆಸರುಗಳಲ್ಲಿ 33 ಜಾತಿಗಳ ಹೆಸರನ್ನಷ್ಟೇ…
ಬೆಂಗಳೂರು : ನಗರದಲ್ಲಿ ರಸ್ತೆ ಗುಂಡಿಗಳು ಹೆಚ್ಚಾಗಿರುವ ಕಾರಣ, ಒಂದು ತಿಂಗಳಲ್ಲಿ ಮುಚ್ಚಬೇಕು. ಒಂದು ವೇಳೆ ಮುಚ್ಚದೇ ಇದ್ದರೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಚೀಫ್ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚೋ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಗರಂ ಆದ ಘಟನೆಯೂ ನಡೆಯಿತು. ಇಂಜಿನಿಯರ್ ಗಳ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ ಎಂಬುದಾಗಿ ಗರಂ ಆದರು. ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ? ನಾಚಿಕೆ ಆಗುವುದಿಲ್ಲವೇ ನಿಮಗೆ? ಮುಚ್ಚಿರುವ ಗುಂಡಿಗಳು ನೆಟ್ಟಗಿಲ್ಲ ಜನರ ಕಷ್ಟ ಗೊತ್ತಾಗಲ್ವಾ?ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು ನಿಮ್ಮನ್ನು ಸಸ್ಪೆಂಡ್ ಮಾಡಿ ಮನೆಗೆ ಕಳುಹಿಸಬೇಕಾಗುತ್ತದೆ. ಗುಂಡಿ ಮುಚ್ಚದಿದ್ದರೆ ಎಲ್ಲಾ ಚೀಫ್ ಇಂಜಿನಿಯರ್ಗಳನ್ನ್ ಸಸ್ಪೆಂಡ್ ಮಾಡುತ್ತೇನೆ. ಪ್ರತಿ ಸಲ ಮಳೆ ಬಂದಾಗಲೂ ಇದೆ ಸಮಸ್ಯೆ…










