Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಕಳೆದ 6 ತಿಂಗಳಿಂದ ಸಂಬಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಕ್ರೀಡಾ ಇಲಾಖೆ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಚೇರಿಯಲ್ಲಿ ಹೊರಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕಳೆದ ಆರು ತಿಂಗಳಿನಿಂದ ಸಂಬಳ ನೀಡದಿದ್ದಕ್ಕೆ ದೀಪಕ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಸಂಪರ್ಕಿಸಿದ್ದಾನೆ. ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ದೀಪಕ್ ನಾನು ತಡೆದು ಸಹ ಸಿಬ್ಬಂದಿಗಳು ವಾಪಸ್ ಕಳುಹಿಸಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ ಎನ್ನಲಾಗಿದೆ. ಆತ ಹೊರಗುತ್ತಿಗೆ ನೌಕರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯಲ್ಲಿನ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನಲ್ಲಿ ಸಂಬಳ ಹಾಕುತ್ತೇವೆ ಎಂದು ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಈ ಕುರಿತು ಸ್ಪಷ್ಟನೆ ನೀಡಿದರು.
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿಯಲ್ಲಿ ನಡೆದಿದೆ. ಶ್ರೀಕಾಂತ್ ಹೆಬ್ಬಾರ್ ಪುತ್ರಿ ಸಾಧ್ವಿ (2) ಗೊಬ್ಬರದ ಗುಂಡಿಗೆ ಬಿದ್ದು ಸಾವನಪ್ಪಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿ ಎಂಬ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ತಂದೆ ಜೊತೆಗೆ 2 ವರ್ಷದ ಮಗು ಸಾದ್ವಿ ದನದ ಕೊಟ್ಟಿಗೆ ಬಳಿ ತೆರಳಿದ್ದಳು. ಈ ವೇಳೆ ತಂದೆ ಶ್ರೀಕಾಂತ್ ಕೊಟ್ಟಿಗೆ ಕೆಲಸದಲ್ಲಿ ಮಗ್ನರಾಗಿದ್ದಾಗ, ಗೊಬ್ಬರದ ಗುಂಡಿಯಲ್ಲಿ ಎರಡು ವರ್ಷದ ಮಗು ಬಿದ್ದು ಸಾವನ್ನಪ್ಪಿದ್ದಾಳೆ ತಕ್ಷಣ ಸಾದ್ವಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟಿದ್ದಳು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕೋಲಾರದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹಾಡಹಗಲೇ ಖತರ್ನಾಕ್ ಕಳ್ಳರು, ಮಹಿಳೆಯನ್ನು ಅಟ್ಟಾಡಿಸಿ ಸರಗಳ್ಳತನ ಮಾಡಿದ್ದಾರೆ. ಮಹಿಳೆಯ ಹಿಂಬಾಲಿಸಿ ಕಳ್ಳರಿಂದ ಸರಗಳ್ಳತನ ಮಾಡಲಾಗಿದೆ. ಮುಳಬಾಗಿಲಿನ ಸಂಜಪ್ಪ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಸರಗಳ್ಳರು ಮಹಿಳೆಯನ್ನು ನಿಧಾನವಾಗಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಮಹಿಳೆ ತನ್ನ ಸ್ಕೂಟಿ ಪಾರ್ಕ್ ಮಾಡುತ್ತಿದ್ದಂತೆ, ಹಿಂಬಾಲಿಸಿಕೊಂಡ ಬಂದ ಕಳ್ಳನೊಬ್ಬ ಮಹಿಳೆಯನ್ನು ಓಡಾಡಿಸಿಕೊಂಡು ಮಹಿಳೆಯ ಕೊರಳಲ್ಲಿದ್ದ ನಕಲಿ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಲ್ಲಿ, ಅಡುಗೆ ಮಾಡುವ ವಿಚಾರವಾಗಿ ಸ್ನೇಹಿತರ ಮಧ್ಯೆ ಗಲಾಟೆ ಆಗಿ ಓರ್ವ ಯುವಕನ ಕೊಲೆಯಲ್ಲಿ ಅಂತ್ಯವಾಗಿತ್ತು. ಇದೀಗ ಬೆಂಗಳೂರಲ್ಲಿ ಮತ್ತೊಂದು ಕೊಲೆ ನಡೆದಿದ್ದು, ಅಡುಗೆ ಮಾಡುವ ವಿಚಾರಕ್ಕೆ ಗಲಾಟೆಯಾಗಿ ಪತಿಯಿಂದ ಪತ್ನಿಯ ಭೀಕರ ಕೊಲೆ ಆಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತುರೆಮಣೆಯಿಂದ ಹೊಡೆದು ತಿಮ್ಮಮ್ಮ (65) ಎನ್ನುವ ಪತ್ನಿಯನ್ನು ಪತಿ ರಂಗಯ್ಯ ಕೊಲೆ ಮಾಡಿದ್ದಾನೆ. ಮತ್ತಿಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ.ಕೊಲೆ ಮಾಡಿದ ನಂತರ ಆರೋಪಿ ರಂಗಯ್ಯ ತಿರುಪತಿಗೆ ಪರಾರಿ ಆಗಲು ಯತ್ನಿಸಿದ್ದಾನೆ.ಈ ವೇಳೆ ಪೊಲೀಸರು ರಾಮನಗರದಲ್ಲಿ ಆರೋಪಿ ರಂಗಯ್ಯನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳಿಕೆ ನೀಡಿದ್ದರು. ಬಳಿಕ ಆ ಒಂದು ಹೇಳಿಕೆ ನಾನು ತಮಾಷೆಯಾಗಿ ಹೇಳಿದ್ದೇನೆ ಎಂದು ಹೇಳಿಕೆಯಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಚಿವ ಪರಮೇಶ್ವರ್ ಬಳಿಕ ಇದೀಗ ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2013ರಲ್ಲಿ ಇದ್ದಂತೆ ಸಿಎಂ ಈ ಬಾರಿ ಇಲ್ಲ ಅನ್ನೋ ಹೇಳಿಕೆ ವಿಚಾರವಾಗಿ, ಏನು ಮಾಡುವುದು ಪವರ್ ಸೆಂಟರ್ಗಳು ಜಾಸ್ತಿ ಆಗಿವೆ. 2013 ರಿಂದ 18 ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಈಗ ಒಂದು ಎರಡು ಮೂರು ಲೆಕ್ಕ ಎಷ್ಟಾದರೂ ಹಾಕಿಕೊಳ್ಳಿ. 2013 ರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಒತ್ತಡ ಇರಲಿಲ್ಲ. ಪವರ್ ಸೆಂಟರ್ ಜಾಸ್ತಿಯಾಗಿದ್ದರಿಂದ ಜಂಜಾಟ ಹೆಚ್ಚಾಗಿದೆ. ಸಿಎಂ ರಾಜ್ಯಾದ್ಯಂತ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕೊಡುತ್ತಿದ್ದಾರೆ…
BIG NEWS : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಸಾಧ್ಯತೆ ವಿಚಾರ : ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಬೆಂಗಳೂರು : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ ಎಂಬ ವಿಚಾರವಾಗಿ ಅಂತಹ ಭಾರಿ ಬದಲಾವಣೆ ಏನು ಆಗಲ್ಲ ಆದರೆ ಸ್ವಲ್ಪ ಬದಲಾವಣೆ ಆದರೆ ಆಗಬಹುದು ಭಾರಿ ಬದಲಾವಣೆಯ ರೀತಿ ಆಗುತ್ತದೆ ಅಂತ ಏನು ಅನಿಸುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಇನ್ನು ಸರ್ಕಾರದ ವಿರುದ್ಧ ಶಾಸಕ ರಾಜು ಕಾಗೆ ಅಸಮಾಧಾನ ಹೊರ ಹಾಕಿರುವ ವಿಚಾರವಾಗಿ, ರಾಜು ಕಾಗೆ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕೇವಲ ಅನುದಾನ ವರ್ಗಾವಣೆಗೆ ಅಸಮಾಧಾನ ಅಂತ ಏನಿಲ್ಲ. ನೀರಾವರಿ ಯೋಜನೆಗಳ ಬಗ್ಗೆಯೂ ಬಹಳಷ್ಟು ಬಾರಿ ಹೇಳಿದ್ದಾರೆ. ನಾವು ನೀರಾವರಿ ಅನುದಾನ ವಿಚಾರವಾಗಿ ಮಾಹಿತಿ ನೀಡಿದ್ದೇವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಳಿ ಸಿಎಂ ಸಿದ್ದರಾಮಯ್ಯ ಮಾತನಾಡಬಹುದು ಎಂದರು. ನೀರಾವರಿ ಇಲಾಖೆಯಲ್ಲಿ 26,000 ಕೋಟಿ ಅನುದಾನವಿದೆ. ಎಲ್ಲವನ್ನು ಸರಿಪಡಿಸಲು ಹೈಕಮಾಂಡ್ ನಾಯಕರು ಹೇಳಿದರು. ವೈಯಕ್ತಿಕವಾಗಿ ಶಸ್ತ್ರ ತ್ಯಾಗ ಏನಿಲ್ಲ. ಯುದ್ಧ ಇದ್ದಾಗ ಶಸ್ತ್ರ ಹಿಡಿಯಬೇಕು ಸುಮ್ಮನೆ ಹಿಡಿಯಬಾರದು. ಅಸಮಾಧಾನ…
ಬೆಂಗಳೂರು : ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಮುಂಬರುವ ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಹಕಾರ ಸಚಿವರಾದಂತಹ ಕೆ.ಎನ್ ರಾಜಣ್ಣ ಅವರು ಬರುವ ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹೌದು ಅಗಸ್ಟ್ ಸೆಪ್ಟೆಂಬರ್ ನಲ್ಲಿ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದರು. ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು.
ಮೈಸೂರು : ಮೈಸೂರಲ್ಲಿ ಭಾರಿ ದುರಂತ ಒಂದು ತಪ್ಪಿದ್ದು, ಮಾದೇಗೌಡನಹುಂಡಿ ಬಳಿ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾದೇಗೌಡನಹುಂಡಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿಯ ಜಮೀನಿಗೆ ಉರುಳಿದೆ. ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. KSRTC ಬಸ್ ನಲ್ಲಿದ್ದ 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತದ ಕುರಿತಂತೆ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ನಿನ್ನೆ ತಾನೆ ಪಾಟ್ನಾದಲ್ಲಿ ಢಾಬಾ ಮಾಲಿಕಾ ಸೇರಿದಂತೆ ಮೂವರನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೆ ಇದೀಗ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನ ಹವಳಗಾ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಅಪರಿಚಿತ ವ್ಯಕ್ತಿಯೊಬ್ಬ, ಸಾರ್ವಜನಿಕರ ಎದುರೇ ವ್ಯಕ್ತಿ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡಿದ್ದಾನೆ. ಕತ್ತು ಕೊಯ್ದುಕೊಳ್ಳುವ ದೃಶ್ಯ ಸ್ಥಳೀಯರ ಮೊಬೈಲ್ಗಳಲ್ಲಿ ಸರಿಯಾಗಿದ್ದು, ಸದ್ಯ ಘಟನಾ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದಾರೆ. ಕತ್ತು ಕೊಯ್ದುಕೊಂಡ ಬಳಿಕ ವ್ಯಕ್ತಿಗೆ ತಕ್ಷಣ ಸ್ಥಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅಪರಿಚಿತ ವ್ಯಕ್ತಿಯ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿವೆ. ಇನ್ನು ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದಾದ್ಯಂತ ಮುಂಗಾರು ಅಬ್ಬರ ಜೋರಾಗಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಬೆಳಗಾವಿ, ಉತ್ತರ ಕನ್ನಡ, ದಕ್ಷಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಮಂಡ್ಯ, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹೆಚ್ಚು ಮಳೆ ಸುರಿಯುತ್ತಿರುವ ಕಾರಣ ಕುಶಾಲನಗರ ಹೊರತುಪಡಿಸಿ, ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ತಾಲೂಕುಗಳ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ…













