Author: kannadanewsnow05

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ AI ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಈಗ ಇಂಟರ್ನೆಟ್​ನಲ್ಲಿ ಘಿಬ್ಲಿ ಸ್ಟೈಲ್ ಇಮೇಜ್ ಧೂಳೆಬ್ಬಿಸುತ್ತಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ಟುಡಿಯೋ ಘಿಬ್ಲಿ ಶೈಲಿಯ ಫೋಟೋಗಳು ಚರ್ಚೆಯ ವಿಷಯವಾಗಿದೆ.ಎಲ್ಲರೂ ಘಿಬ್ಲಿ ಶೈಲಿಯ ಚಿತ್ರವನ್ನು ರಚಿಸುತ್ತಿದ್ದಾರೆ. ಸದ್ಯಕ್ಕೆ ಘಿಬ್ಲಿ ಇದೀಗ ಟ್ರೆಂಡಿಂಗ್ ನಲ್ಲಿದೆ. ಹೌದು ಇನ್ಸ್ಟಾಗ್ರಾಮ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಈ ಒಂದು ಘಿಬ್ಲಿ ಸಖತ್ ವೈರಲ್ ಆಗುತ್ತಿದ್ದು, ಈ ಒಂದು ಆಪ್ ನಮ್ಮ ಮೆಟ್ರೋಕ್ಕೂ ಕಾಲಿಟ್ಟಿದ್ದು, ಮೆಟ್ರೋ ನಿಲ್ದಾಣದ ಹಲವು ಘಿಬ್ಲಿ ಚಿತ್ರಗಳನ್ನು BMRCL ಹಂಚಿಕೊಂಡಿದೆ. ಬಿಎಂಆರ್‌ಸಿಎಲ್ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಒಟ್ಟು 7 ಚಿತ್ರಗಳನ್ನು ಹಂಚಿಕೊಂಡಿದ್ದು, ಮೊದಲನೇ ಚಿತ್ರದಲ್ಲಿ ನಾಗಸಂದ್ರ ಮೆಟ್ರೋ ನಿಲ್ದಾಣದ ಫೋಟೋ ಹಂಚಿಕೊಂಡಿದೆ. ಬಳಿಕ 2ನೇ ಚಿತ್ರದಲ್ಲಿ ಮೆಟ್ರೋ ಅಧಿಕಾರಿಯ ಚಿತ್ರ ಇದ್ದು, 3ನೇ ಚಿತ್ರದಲ್ಲಿ ಟಿಕೆಟ್ ಕೌಂಟರ್ ಫೋಟೋ ಇದೆ. ಅದೇ ರೀತಿಯಾಗಿ ಪೊಲೀಸ್ ಸಿಬ್ಬಂದಿ ನಿಂತಿರುವ, ಪ್ರವೇಶದ್ವಾರ ಹಾಗೂ ನಿಲ್ದಾಣದ ಹೊರಗಡೆಯಿಂದ ಸೇರಿ ಒಟ್ಟು 7 ಚಿತ್ರಗಳನ್ನು…

Read More

ರಾಯಚೂರು : ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಪರೀಕ್ಷಾ ಮೇಲ್ವಿಚಾರಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ತಾಲೂಕಿನ ಸಿಂಗನೋಡಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆ ವೇಳೆ ಅಭ್ಯರ್ಥಿಗಳ ಬದಲಿಗೆ ಬೇರೆಯವರಿಂದ ಪರೀಕ್ಷೆ ಬರೆಯಿಸಿರುವ ಆರೋಪ ಕೇಳಿ ಬಂದಿದೆ. ಇಬ್ಬರು ವಿದ್ಯಾರ್ಥಿಗಳ ಜಾಗದಲ್ಲಿ ಬೇರೆ ಇಬ್ಬರಿಂದ ಪರೀಕ್ಷೆ ಬರೆದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಿಂದಿ ಪರೀಕ್ಷೆ ವೇಳೆ ಈ ಅಕ್ರಮ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಪರೀಕ್ಷಾ ಮೇಲ್ವಿಚಾರಕ ಹಾಗೂ ನಾಲ್ಕು ವಿದ್ಯಾರ್ಥಿಗಳ ವಿರುದ್ದ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೀಗೊಂದು ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲಿಸಿದಾಗ, ಬೇರೆ ಅಭ್ಯರ್ಥಿ ಪರೀಕ್ಷೆಗೆ ಕುಳಿತಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಚಿಕ್ಕಬಳ್ಳಾಪುರ : ಗುತ್ತಿಗೆದಾರನ ಬಳಿ 3 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ ಒಬ್ಬರು, 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಕೃಷಿ ಅಧಿಕಾರಿಯ ಶಂಕರಯ್ಯ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೃಷಿ ಅಧಿಕಾರಿ ಶಂಕರಯ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ಕೃಷಿ ಅಧಿಕಾರಿ ಶಂಕರಯ್ಯ ಗುತ್ತಿಗೆದಾರ ಮಂಜುನಾಥ ಬಳಿ 3 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ವೇಳೆ ಶಂಕರಯ್ಯ ಬ್ಯಾಗ್ ಚೆಕ್ ಮಾಡಿದಾಗ ಬ್ಯಾಗ್ ನಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಈ ವೇಳೆ ಅಧಿಕಾರಿಗಳು ಹಣ ಎಣಿಸಲು ಮಿಷನ್ ತರಿಸಿಕೊಂಡಿದ್ದಾರೆ. 1 ಲಕ್ಷ ಲಂಚ ಮುಂಗಡವಾಗಿ ಶಂಕರಯ್ಯ…

Read More

ಉಡುಪಿ : ಉಡುಪಿಯಲ್ಲಿ ಘೋರವಾಸ ದುರಂತ ಸಂಭವಿಸಿದ್ದು, ಗದ್ದೆಯಲ್ಲಿ ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ರೈತರೊಬ್ಬರು ಅದೇ ಬೆಂಕಿಗೆ ಬಿದ್ದು ಸಜೀವ ದಹನವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ ಎಂದು ಗುರುತಿಸಲಾಗಿದೆ. ಮಹಾಲಿಂಗ ಇಂದು ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ  ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಗೆ ಸುತ್ತಲೂ ಆವರಿಸಿದ್ದು, ಸಮೀಪದ ನಾಗಬನಕ್ಕೂ ಬೆಂಕಿ ಹಬ್ಬುತ್ತಿತ್ತೆನ್ನಲಾಗಿದೆ. ಇದರಿಂದ ಕೂಡಲೇ ಎಚ್ಚೆತ್ತ ಬೇಬಿ ಅಲ್ಲಿಗೆ ತೆರಳಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದರು. ಆದರೆ ಈ ವೇಳೆ ಇಲ್ಲಿ ಮಹಾಲಿಂಗ ದೇವಾಡಿಗ ಬೆಂಕಿಯ ಮಧ್ಯೆ ಸಿಲುಕಿ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ. ಕೂಡಲೇ ಅಗ್ನಿಶಾಮಕದಳ ದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಕಾರ್ಯಾಚರಣೆಗೆ ತೊಡಕಾಗಿತ್ತು. ಇದರಿಂದ ರೈತ ಸಜೀವ ದಹನವಾಗಿದ್ದಾರೆ.ಈ…

Read More

ರಾಮನಗರ : ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ರಾಮನಗರ ತಾಲೂಕಿನ ಲಕ್ಷ್ಮಿಪುರದಲ್ಲಿ ಕಾಂಗ್ರೆಸ್ ಶಾಸಕ HC ಬಾಲಕೃಷ್ಣ ಹೇಳಿಕೆ ನೀಡಿದರು. ರಾಮನಗರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಕ್ಕೆ ನಮ್ಮ ನಾಯಕರು ಒಪ್ಪಿಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೂಕ್ತ ವ್ಯಕ್ತಿಯನ್ನು ಗುರುತಿಸಿದರೆ ಸ್ವಾಗತ ಮಾಡುತ್ತೇವೆ. ಯಾವುದೇ ಕಂಡೀಶನ್ ಹಾಕಿ ಅಧ್ಯಕ್ಷ ಸ್ಥಾನ ಬಿಡುತ್ತಾರೆ ಅನ್ನೋದು ಸುಳ್ಳು. ಹೈಕಮಾಂಡ್ ಅವರು ಹೇಳಿದರೆ ಬಿಟ್ಟು ಕೊಡೋಕೆ ಡಿಸಿಎಂ ಡಿಕೆ ಶಿವಕುಮಾರ್ ಸಿದ್ದರಿದ್ದಾರೆ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಶಾಸಕ ಎಚ್ ಸಿ ಬಾಲಕೃಷ್ಣ ಸುಳಿವು ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಕ್ರಮಗಳು, ದರೋಡೆ ಕೆಲಸ ನಡೆಯುತ್ತಿವೆ. ಘೋರಿ ಮೊಹ್ಮದ್, ಘಜನಿ ಮೊಹ್ಮದ್ ಹಾಗೂ ಮಲ್ಲಿಕ್ ಖಫೂರ್ ಇಂತಹವರು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ಎಚ್‍ಡಿ ಕುಮಾರಸ್ವಾಮಿಗೆಲ್ಲ ಹೆದರುವ ಮಗನೇ ಅಲ್ಲ ಎಂದು ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹೆಚ್​ ಡಿ ಕುಮಾರಸ್ವಾಮಿಗೆ ಹೆದರುವ ಮಗನಲ್ಲ. ನೋಡಪ್ಪ, ಕುಮಾರಸ್ವಾಮಿಗೆ ನಾನು ಹೇಳುತ್ತೇನೆ. ಎಷ್ಟು ವ್ಯವಹಾರ ಇದೆ. ಅದನ್ನು ಬಿಡುಗಡೆ ಮಾಡಲಿ. ನನಗೂ ಗೊತ್ತಿದೆ. ನಾನು ಏನಾದ್ರೂ ತಪ್ಪು ಮಾಡಿದ್ರೆ ಯಾವ ಶಿಕ್ಷೆ ಬೇಕಾದ್ರೂ ಕೊಡಲಿ. ನನ್ನ ಆಸ್ತಿ, ಮಕ್ಕಳ ಮತ್ತು ಕುಟುಂಬದ ಆಸ್ತಿ ಎಷ್ಟಿದೆ?, ಅದನ್ನೆಲ್ಲಾ ತೆಗೆಸಿದ್ದಾರೆ. ಕುಮಾರಸ್ವಾಮಿಗೆಲ್ಲಾ ಹೆದರುವಂತಹ ಮಗ ಅಲ್ಲ ಎಂದಿದ್ದಾರೆ. ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ.‌ ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ…

Read More

ಬೀದರ್ : ನಿನ್ನೆ ನಗರದ ಅಲಿಯಾಬಾದ ರಿಂಗ್ ರಸ್ತೆಯಲ್ಲಿರುವ ದಾಬಾವೊಂದರಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ರಿಯಲ್ ಎಸ್ಟೇಟ್ BREAKING : ಬೀದರ್ ನಲ್ಲಿ ಉದ್ಯಮಿಯನ್ನು ಮಚ್ಚಿನಿಂದ ಹತ್ಯೆಗೈದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್ಉದ್ಯಮಿಯೊಬ್ಬನ ಭೀಕರ ಹತ್ಯೆಯಾಗಿದೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ವೈಜ್ಯನಾಥನನ್ನು ಕೊಲೆ ಮಾಡಿದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಾವದಗಿರಿ ಗ್ರಾಮದ ಜಾನ್ ಬೆಂಡಿ ಮತ್ತು ಸ್ನೇಹಿತ ಉಮೇಶ್ ನ ಬಂಧನವಾಗಿದೆ. ಬೀದರ್ ನ ಅಲಿಯಾಬಾದ್ ರಿಂಗ್ ರೋಡ್ ಬಳಿ ಈ ಒಂದು ಕೊಲೆ ನಡೆದಿತ್ತು. ನಿನ್ನೆ ವೈಜ್ಯನಾಥ್ ದತ್ತಾತ್ರಿ (49) ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಬೀದರ್ ತಾಲ್ಲೂಕಿನ ಹೊನ್ನೀಕೇರಿ ನಿವಾಸಿ ಆಗಿರುವ ಜಾನ್ ಬೆಂಡಿ ಮತ್ತು ಉಮೇಶ್ ಮಚ್ಚಿನಿಂದ ಕೊಚ್ಚಿ ಪರಾರಿ ಆಗಿದ್ದು, ಇದೀಗ ಅರೆಸ್ಟ್ ಆಗಿದ್ದಾರೆ. ಡಾಬಾದಲ್ಲಿ ಕುಳಿತುಕೊಂಡಿದ್ದ ವೈದ್ಯನಾಥ್ ಮೇಲೆ ಅಟ್ಯಾಕ್ ಮಾಡಿದ್ದರು ಅಟ್ಟಾಡಿಸಿ ಮಚ್ಚಿನಿಂದ ಕೊಚ್ಚಿ ಜಾನ್ ಬೆಂಡಿ ಮತ್ತು ಉಮೇಶ್…

Read More

ಬೆಂಗಳೂರು : ಚಲಿಸುತ್ತಿದ್ದ ವಿಮಾನದಲ್ಲಿ ಗಗನಸಖಿಯಿಂದಲೇ ಮಗುವಿನ ಚಿನ್ನ ಕಳ್ಳತನ ಆರೋಪ ಕೇಳಿ ಬಂದಿದ್ದು, ಈ ಕುರಿತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮಹಿಳೆಯೊಬ್ಬರು ದೂರು ನೀಡಿದ್ದು, ಇದೀಗ ಇಂಡಿಗೋ ವಿಮಾನದ ಸಿಬ್ಬಂದಿ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೌದು ಇಂಡಿಗೋ ವಿಮಾನದ ಮಹಿಳಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕೆಂಪೇಗೌಡ ಏರ್ಪೋರ್ಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಮಗುವಿನ ತಾಯಿಯ ದೂರಿನ ಮೇರೆಗೆ ಫ್ಲೈಟ್ ಸಿಬ್ಬಂದಿಯ ವಿರುದ್ಧ ಮೊಕದ್ದಮೆ ದಾಖಲಾಗಿದೆ. ಏಪ್ರಿಲ್ 1ರಂದು ತಿರುವನಂತಪುರಂ ನಿಂದ ದೂರುದಾರೆ ಮಹಿಳೆ ಪ್ರಿಯಾಂಕಾ ಮುಖರ್ಜಿ ಬೆಂಗಳೂರಿಗೆ ಬಂದಿದ್ದರು. ಇಬ್ಬರು ಚಿಕ್ಕ ಮಕ್ಕಳ ಜೊತೆಗೆ ಮಹಿಳೆ ಪ್ರಿಯಾಂಕ ಮುಖರ್ಜಿ ಪ್ರಯಾಣ ಮಾಡಿದ್ದರು. ಮಗು ಅಳುತ್ತಿದ್ದ ಅಂತ 5 ವರ್ಷದ ಮಗುವನ್ನು ಗಗನಸಖಿ ಎತ್ತಿಕೊಂಡಿದ್ದರು. ಮಗುವನ್ನು ವಾಷ್ ರೂಮ್ ಕಡೆ ಎತ್ತಿಕೊಂಡು ಹೋಗಿ ಸರ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿಲಾಗಿದ್ದು, ಇಂಡಿಗೋ ವಿಮಾನದ ಸಿಬ್ಬಂದಿ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು ಬ್ಯಾಡ್ಮಿಂಟನ್ ಕೋಚಿಂಗ್ ಸೆಂಟರ್ ಗೆ ತೆರಳುತ್ತಿದ್ದ 16 ವರ್ಷದ ಬಾಲಕಿಯ ಮೇಲೆ ಕೋಚ್ ಒಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 16 ವರ್ಷದ ಬಾಲಕಿಯ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ ಎಸಗಿದ್ದಾನೆ. 2 ವರ್ಷಗಳಿಂದ ಬ್ಯಾಡ್ಮಿಂಟನ್ ಕೋಚಿಂಗ್ ಪಡೆಯುತ್ತಿದ್ದ ಬಾಲಕಿ. ತರಬೇತಿ ನೀಡುವ ನೆಪದಲ್ಲಿ ಬಾಲಕಿಯ ಮೇಲೆ ಕೋಚ್ ಅತ್ಯಾಚಾರ ಎಸಗಿದ್ದಾನೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ (26) ಎನ್ನುವ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆಗಾಗ ಬಾಲಕಿಯನ್ನು ಕೋಚ್ ಸುರೇಶ್ ತನ್ನ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ಬಾಲಕಿಯ ಮೇಲೆ ಕೋಚ್ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಕುರಿತು ಯಾರಿಗಾದರೂ ಹೇಳಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದನಂತೆ . ಬಳಿಕ ಬಾಲಕಿ ರಜೆಗೆ ಎಂದು ಅಜ್ಜಿ ಮೆನೆಗೆ ತೆರಳಿದ್ದಾಳೆ. ಈ ವೇಳೆ ಬಾಲಕಿ ಅಜ್ಜಿಯ ಮೊಬೈಲಿಂದ ಬಾಲಕಿ ನಗ್ನ ಫೋಟೋಗೆ…

Read More

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಸರ್ಕಾರ ಹಾಲಿನ ದರ, ವಿದ್ಯುತ್ ದರವನ್ನು ಏರಿಕೆ ಮಾಡಿತ್ತು. ಬಳಿಕ ಡೀಸೆಲ್ ದರ ಕೂಡ 2 ರೂಪಾಯಿ ಏರಿಕೆ ಮಾಡಿತ್ತು. ಹಾಗಾಗಿ ಇದೀಗ ಏಪ್ರಿಲ್ 14ರಂದು ಡೀಸೆಲ್ ದರ ಏರಿಕೆ ಖಂಡಿಸಿ ಲಾರಿ ಮಾಲೀಕರ ಸಂಘವು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಹೌದು ಬೆಂಗಳೂರಿನಲ್ಲಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿಕೆ ನೀಡಿದ್ದು, ಎಬ್ರಿಲ್ 14ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತೇವೆ. 6 ತಿಂಗಳ ಅಂತರದಲ್ಲಿ ಐದು ರೂಪಾಯಿ ಏರಿಕೆಯಾಗಿದೆ. ಸರ್ಕಾರವನ್ನು ಕರೆದು ಮಾತನಾಡುವ ಕೆಲಸ ಮಾಡಿಲ್ಲ. ರಾಜ್ಯ ಹೆದ್ದಾರಿಯಲ್ಲಿ ಕೂಡ ಶುಲ್ಕ ಸಂಗ್ರಹ ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು. ಲಾರಿ ಮುಷ್ಕರಕ್ಕೆ ಏರ್ಪೋರ್ಟ್ ಟ್ಯಾಕ್ಸಿಗಳು ಸಹ ಬೆಂಬಲ ನೀಡಿದ್ದು, ಡೀಸೆಲ್ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಲಾರಿ ಮಾಲೀಕರ ಸಂಘ ಆಕ್ರೋಶ ಹೊರಹಾಕಿದೆ. ಡೀಸೆಲ್ ದರ ಏರಿಕೆ ನಿರ್ಧಾರ ವಾಪಾಸ್ ಪಡೆಯಲು ಆಗ್ರಹಿಸಿದ್ದರು ಲಾರಿ ಮಾಲೀಕರ ಸಂಘದ ಒತ್ತಾಯಕ್ಕೆ ರಾಜ್ಯ ಸರ್ಕಾರ…

Read More